Author: kannadanewsnow09

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು. ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು. ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ…

Read More

ಬೆಂಗಳೂರು: ನಿನ್ನೆಯಷ್ಟೇ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಬಸ್ಸುಗಳ ಮೇಲಿನ ತಂಪಾಕು ಉತ್ಪನ್ನಗಳನ್ನು ಉತ್ತೇಜಿಸುವಂತ ಜಾಹೀರಾತು ತೆರವಿಗೆ ಟಿಪ್ಪಣಿ ಹೊರಡಿಸಿದ್ದರು. ಈ ಬೆನ್ನಲ್ಲೇ ಸಾರಿಗೆ ಬಸ್ಸುಗಳಲ್ಲಿ ಹಾಕಿದ್ದಂತ ಜಾಹೀರಾತು ತೆರವಿಗೆ ಸರ್ಕಾರ ಡೆಡ್ ಲೈನ್ ಫಿಕ್ಸ್ ಮಾಡಿದೆ. ಮುಂದಿನ 15 ದಿನಗಳಲ್ಲಿ ಎಲ್ಲಾ ನಿಗಮದ ಸಾರಿಗೆ ಬಸ್ಸುಗಳ ಮೇಲಿನ ತಂಬಾಕು ಉತ್ಪನ್ನಗಳನ್ನು ಉತ್ತೇಜಿಸುವಂತ ಜಾಹೀರಾತು ತೆರವಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಎಲ್ಲಾ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ / ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಪ್ರಚಾರ ಮಾಡದಂತೆ ಹಾಗೂ ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು…

Read More

ವಿಜಯನಗರ: ಜಿಲ್ಲೆಯಲ್ಲಿ ತಂದೆ-ತಾಯಿ, ತಂಗಿ ಸೇರಿದಂತೆ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೂವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಆರೋಪಿ ಅಕ್ಷಯ್ ಕೊಲೆ ಮಾಡಿರೋದಾಗಿ ಬೆಳಕಿಗೆ ಬಂದಿದೆ. ಮೊದಲು ತಾಯಿ ಜಯಲಕ್ಷ್ಮೀಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದಂತ ಪಾಪಿ ಪುತ್ರ ಅಕ್ಷಯ್, ಆ ಬಳಿಕ ಮನೆಯ ಕೊಠಡಿಯಲ್ಲಿ ತಾಯಿಯ ಶವ ಹಾಕಿದ್ದಾನೆ. ಆ ನಂತ್ರ ತಂಗಿಗೆ ಕರೆ ಮಾಡಿದಂತ ಪಾಪಿ ಅಕ್ಷಯ್, ನಿನಗೆ ಗಿಫ್ಟ್ ತಂದಿದ್ದೇನೆ. ಕೊಡುತ್ತೇನೆ ಬಾ ಅಂತ ಕರೆದಿದ್ದಾನೆ. ಮನೆಗೆ ಬಂದಂತ ತಂಗಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ತಂಗಿ, ತಾಯಿಯ ಮೃತದೇಹ ಕೊಠಡಿಯಲ್ಲಿ ಇರಿಸಿ, ಮನೆಯಲ್ಲಿ ಟಿವಿ ನೋಡುತ್ತಾ ಕುಳಿತಿದ್ದಂತ ತಂದೆಯನ್ನು ಕೊಲೆಗೈದು, ಮನೆಯ ಹಾಲ್ ನಲ್ಲೇ ಮೂರು ಮೃತದೇಹಗಳನ್ನು ಹೂತು ಹಾಕಿದ್ದನು ಆರೋಪಿ ಅಕ್ಷಯ್ ಎಂಬುದಾಗಿ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ವಿಜಯನಗರದ ಕೊಟ್ಟೂರಿನ ಎಲ್ ಬಿ ಬಡಾವಣೆಯಲ್ಲಿನ ಬಾಡಿಗೆ ಮನೆಯಲ್ಲಿ ಈ ಕೃತ್ಯವನ್ನು ಆರೋಪಿ ಅಕ್ಷಯ್ ಎಸಗಿದ್ದಾನೆ. ಜನವರಿ.27ರಂದು ತಂದೆ, ತಾಯಿ, ಸಹೋದರಿಯನ್ನು…

Read More

ಮೈಸೂರು: ಜಿಲ್ಲೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ದಂಪತಿಗಳು, ಮಗುವಿನ ಮೇಲೆ ಚಿರತೆಯೊಂದು ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಬೈಕ್ ನಿಂದ ಕೆಳಗೆ ಬಿದ್ದಂತ ದಂಪತಿಗಳು, ಮಗು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಬಳಿಯಲ್ಲಿ ಈ ಘಟನೆ ನಡೆದಿದೆ. ಚಿರತೆ ದಾಳಿಯಿಂದಾಗಿ ರೈತ ಮಹದೇವಸ್ವಾಮಿ, ಪತ್ನಿ, ಮಗುವಿಗೆ ಗಾಯವಾಗಿದೆ. ಗಾಯಾಳುಗಳ್ನು ತಗಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಮನುಷ್ಯರ ಮೇಲೆ ದಾಳಿ ನಡೆಸಿದಂತ ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಸಾರ್ವಜನಿಕರು ಆಗ್ರಹಿಸಿದ್ದಾರೆ. https://kannadanewsnow.com/kannada/bmrcl-launches-special-awareness-campaign-to-ensure-compliance-with-rules-among-passengers/

Read More

ಬೆಂಗಳೂರು: ವಿಬಿ ಜಿ ರಾಮ್ ಜಿಯಲ್ಲಿ ರಾಮನ ಉದ್ಭವವನ್ನು ಕಾಂಗ್ರೆಸ್ಸಿಗೆ ಸಹಿಸಲು ಸಾಧ್ಯವಾಗಿಲ್ಲ. ಹಿಂದುತ್ವ, ರಾಮನ ವಿರೋಧ ಕಾಂಗ್ರೆಸ್ಸಿಗೆ ಸಹಜವಾದುದು. ಇದನ್ನು ವಿರೋಧಿಸಲೇಬೇಕೆಂದೇ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಜೋಡಿಸಿದ್ದಲ್ಲ; ವಿಕಸಿತ ಭಾರತ ಗ್ಯಾರಂಟಿ ರೋಜ್‍ಗಾರ್ ಅಜೀವಿಕಾ ಮಿಷನ್ ಎಂಬುದು ರಾಮ್ ಎಂದು ಬಂದಿದೆ. ಯೋಜನೆಯಲ್ಲಿ ಇದೊಂದು ರೀತಿಯ ರಾಮೋದ್ಭವ ಆಗಿದೆ ಎಂದು ತಿಳಿಸಿದರು. ಸದ್ಯಕ್ಕೆ ಸದನ ಕರೆಯುವ ಅವಶ್ಯಕತೆ ಇರಲಿಲ್ಲ ಎಂದ ಅವರು, ನರೇಗಾ ಯೋಜನೆಯನ್ನು ಇನ್ನಷ್ಟು ಗಟ್ಟಿಗೊಳಿಸಿ ಕಾಯ್ದೆಯನ್ನಾಗಿ ಮಾಡಿ ಕೇಂದ್ರ ಸರಕಾರ ಜಾರಿಗೊಳಿಸಿದ ‘ವಿಬಿ ಜಿ ರಾಮ್ ಜಿ’ ಅಡಿಯಲ್ಲಿ 100 ದಿನಗಳ ಬದಲು 125 ದಿನ ಕೆಲಸ ನೀಡಲಾಗುತ್ತಿದೆ. ಜನರೇ ಕೆಲಸ ಮಾಡಬೇಕು. ಬಯೋಮೆಟ್ರಿಕ್‍ನಲ್ಲಿ ಹೆಸರು ಬಂದು ಅವರಿಗೆ 370 ರೂ. ಕೂಲಿಯನ್ನು ನೇರವಾಗಿ ಖಾತೆಗೇ ನೀಡುವ ಯೋಜನೆ ಇದಾಗಿದೆ.…

Read More

ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ ಬಂಪರ್ ನೇಮಕಾತಿ ಡ್ರೈವ್ ಘೋಷಿಸುವ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. RRB ಒಟ್ಟು 22,000 ಹುದ್ದೆಗಳಿಗೆ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಇಂದಿನಿಂದ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಈ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಜನವರಿ 31, 2026ರ ಇಂದಿನಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28, 2026. RRB ಗ್ರೂಪ್ D ನೇಮಕಾತಿಯು ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳನ್ನು ಒಳಗೊಂಡಿರುತ್ತದೆ. ಈ ಹುದ್ದೆಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆ 10 ನೇ ತರಗತಿ ಉತ್ತೀರ್ಣ ಮತ್ತು ITI ಡಿಪ್ಲೊಮಾ. ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು ITI ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯಸ್ಸಿನ ಮಿತಿಗೆ ಸಂಬಂಧಿಸಿದಂತೆ, ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು…

Read More

ಉದ್ಯಮಿ ಸಿ.ಜೆ ರಾಯ್ ಅವರ ಸಾವಿನ ಸುದ್ದಿ ಕೇಳಿ ತುಂಬಾ ನೋವಾಯಿತು. ಎರಡು ಬಾರಿ ನನಗೆ ಅವರು ಹಣ ನೀಡಿದ್ದರು. ನಿಮ್ಮೂರಿಗೆ ಬರುತ್ತೇನೆ ಅಂತ ಹೇಳಿದ್ದರು. ಮನೆ ಗೃಹ ಪ್ರವೇಶಕ್ಕೆ ಬರ್ತೀನಿ. ಕರಿ ಅಂತ ಹೇಳಿದ್ದರು. ಸಂಗೀತದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು ಎಂಬುದಾಗಿ ಬಿಗ್ ಬಾಸ್ ವಿನ್ನರ್ ಹನುಮಂತ ಲಮಾಣಿ ದುಃಖ ತೋಡಿಕೊಂಡರು. ಕೋವಿಡ್ ಸಮಯದಲ್ಲಿ ಬಾರಿ ಸಮಸ್ಯೆ ಉಂಟಾಗಿತ್ತು. ಪ್ಲಾಟ್ ತೆಗೆದುಕೊಳ್ಳುತ್ತೀಯೋ ಅಥವಾ ಹಣ ಬೇಕೋ ಅಂತ ಕೇಳಿದ್ರು. 9 ಲಕ್ಷ ರೂಪಾಯಿ ತೆರಿಗೆ ಕಡಿತಗೊಳಿಸಿ. 21 ಲಕ್ಷ ರೂಪಾಯಿಯನ್ನು ಉದ್ಯಮಿ ಸಿ.ಜೆ ರಾಯ್ ನೀಡಿದ್ದರು. ಅವರ ಸಾವನ್ನು ಅರಗಿಸಿಕೊಳ್ಳೋದಕ್ಕೆ ಆಗುತ್ತಿಲ್ಲ ಎಂಬುದಾಗಿ ಬಿಗ್ ಬಾಸ್ ವಿನ್ನರ್ ಹನುಮಂತ ಲಮಾಣಿ ಕಣ್ಣೀರಾಕಿದರು. ನಾನು ನಿಮ್ಮೂರಿಗೆ ಬರುತ್ತೇನೆ ಅಂದಿದ್ದರು. ಮನೆ ಗೃಹ ಪ್ರವೇಶಕ್ಕೆ ಬರುವುದಾಗಿ ಹೇಳಿದ್ದರು. ಊರಿಗೆ ಬಂದಾಗ ಏನು ಮಾಡ್ತೀಯ ಅಂದಿದ್ದರು. ಕುರಿ ಕೊಯ್ಯುತ್ತೇನೆ ಅಂದಿದ್ದೆ. ನನಗೂ ಕುರಿ ಕೊಡು ಸಾಕುತ್ತೇನೆ ಅಂದಿದ್ದರು. ಆಯ್ತು ಕೊಡುತ್ತೇನೆ ಅಂತ ಹೇಳಿದ್ದೆ…

Read More

ಮೈಸೂರು: ಸಾಗರ ತಾಲ್ಲೂಕಿನಲ್ಲಿ ನಡೆಯಲಿರುವ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ನಿಭಾಯಿಸುವ ಉದ್ದೇಶದಿಂದ, ನೈರುತ್ಯ ರೈಲ್ವೆ ಯಶವಂತಪುರ ಮತ್ತು ತಾಳಗುಪ್ಪ ನಡುವಿನಲ್ಲಿ ವಿಶೇಷ ಎಕ್ಸಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ ಎಂಬುದಾಗಿ ಮೈಸೂರಿನ ನೈರುತ್ಯ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ 06585 / 06586 – ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸಪ್ರೆಸ್ (04 ಟ್ರಿಪ್ ಗಳು) ರೈಲು ಸಂಖ್ಯೆ 06585 – ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸಪ್ರೆಸ್ ಈ ರೈಲು 03.02.2026, 05.02.2026, 08.02.2026 ಮತ್ತು 10.02.2026 (ಮಂಗಳವಾರ, ಗುರುವಾರ, ಭಾನುವಾರ ಮತ್ತು ಮಂಗಳವಾರ) ದಿನಗಳಲ್ಲಿ ಸಂಚರಿಸಲಿದೆ. ಈ ರೈಲು ಯಶವಂತಪುರದಿಂದ ರಾತ್ರಿ 22:45ಕ್ಕೆ ಹೊರಟು, ಮರುದಿನ ಬೆಳಿಗ್ಗೆ 05:05ಕ್ಕೆ ತಾಳಗುಪ್ಪಕ್ಕೆ ತಲುಪಲಿದೆ. ರೈಲು ಸಂಖ್ಯೆ 06586 ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸಪ್ರೆಸ್ ರೈಲು 04.02.2026, 06.02.2026, 09.02.2026 ಮತ್ತು 11.02.2026( ಬುಧವಾರ, ಶುಕ್ರವಾರ, ಸೋಮವಾರ ಮತ್ತು ಬುಧವಾರ) ದಿನಗಳಲ್ಲಿ ಸಂಚರಿಸಲಿದೆ. ಈ…

Read More

ಮೈಸೂರು: ಸಾಗರ ತಾಲ್ಲೂಕಿನಲ್ಲಿ ನಡೆಯಲಿರುವ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ನಿಭಾಯಿಸುವ ಉದ್ದೇಶದಿಂದ, ನೈರುತ್ಯ ರೈಲ್ವೆ ಯಶವಂತಪುರ ಮತ್ತು ತಾಳಗುಪ್ಪ ನಡುವಿನಲ್ಲಿ ವಿಶೇಷ ಎಕ್ಸಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06585 / 06586 – ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸಪ್ರೆಸ್ (04 ಟ್ರಿಪ್ ಗಳು) ರೈಲು ಸಂಖ್ಯೆ 06585 – ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸಪ್ರೆಸ್ ಈ ರೈಲು 03.02.2026, 05.02.2026, 08.02.2026 ಮತ್ತು 10.02.2026 (ಮಂಗಳವಾರ, ಗುರುವಾರ, ಭಾನುವಾರ ಮತ್ತು ಮಂಗಳವಾರ) ದಿನಗಳಲ್ಲಿ ಸಂಚರಿಸಲಿದೆ. ಈ ರೈಲು ಯಶವಂತಪುರದಿಂದ ರಾತ್ರಿ 22:45ಕ್ಕೆ ಹೊರಟು, ಮರುದಿನ ಬೆಳಿಗ್ಗೆ 05:05ಕ್ಕೆ ತಾಳಗುಪ್ಪಕ್ಕೆ ತಲುಪಲಿದೆ. ರೈಲು ಸಂಖ್ಯೆ 06586 ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸಪ್ರೆಸ್ ರೈಲು 04.02.2026, 06.02.2026, 09.02.2026 ಮತ್ತು 11.02.2026( ಬುಧವಾರ, ಶುಕ್ರವಾರ, ಸೋಮವಾರ ಮತ್ತು ಬುಧವಾರ) ದಿನಗಳಲ್ಲಿ ಸಂಚರಿಸಲಿದೆ. ಈ ರೈಲು ತಾಳಗುಪ್ಪದಿಂದ ಬೆಳಿಗ್ಗೆ 09:30ಕ್ಕೆ ಹೊರಟು,…

Read More

ಶಿವಮೊಗ್ಗ: ಫೆ.3ರಿಂದ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಆರಂಭಗೊಳ್ಳಲಿದೆ. ಈ ಜಾತ್ರೆಗೆ ಅಮ್ಯೂಸ್ಮೆಂಟ್ ಪಾರ್ಕ್ ಅತ್ಯಂತ ಆಕರ್ಷಣೆಯಲ್ಲಿ ಒಂದು. ಇದರ ಟಿಕೆಟ್ ದರವನ್ನು ಟೆಂಡರ್ ಹಿಡಿದವರು, ಉದ್ಯಮಿ ಲಿಂಗರಾಜು ರಿವೀಲ್ ಮಾಡಿದ್ದಾರೆ. ಹಾಗಾದರೆ ಎಷ್ಟು ಟಿಕೆಟ್ ದರ ಅನ್ನೋ ಬಗ್ಗೆ ಮುಂದೆ ಓದಿ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಟೆಂಡರ್ ದಾರ, ಉದ್ಯಮಿ ಡಿ.ಹೆಚ್.ಲಿಂಗರಾಜು ಅವರು, ಮಾರಿಕಾಂಬ ಜಾತ್ರೆಯ ಪ್ರಯುಕ್ತ ಅಮ್ಯೂಸ್ಮೆಂಟ್ ಪಾರ್ಕ್ ಟೆಂಡರ್ 1.34 ಕೋಟಿಗೆ ಹಿಡಿಯಲಾಗಿರುವುದೇ ಬಹು ಚರ್ಚೆಯಾಗುತ್ತಿದೆ. ಕಾರಣ ಅಷ್ಟೇ ದುಬಾರಿಯಾದ ದರವನ್ನು ಅಮ್ಯೂಸ್ಮೆಂಟ್ ಪಾರ್ಕ್ ಟಿಕೆಟ್ ದರ ನಿಗದಿ ಪಡಿಸಲಾಗುತ್ತದೆ ಅಂತ. ಆದರೇ ನಾವು ಜನಸಾಮಾನ್ಯರ ಪರವಾಗಿದ್ದೇವೆ. ಯಾವುದೇ ಕಾರಣಕ್ಕೂ ದುಬಾರಿ ದರ ನಿಗದಿ ಮಾಡೋದಿಲ್ಲ ಎಂದರು. ಸಾಮಾನ್ಯರಿಗೆ ಕೈಗೆಟುಕುವ ರೀತಿಯ ದರ ಎನ್ನುವಂತೆ ಕಳೆದ ಬಾರಿಗಿಂತ ಸ್ವಲ್ಪವೇ ಹೆಚ್ಚಿಗೆ ಮಾಡಲಾಗಿದೆ. ದೊಡ್ಡವರಿಗೆ ರೂ.100, ಮಕ್ಕಳಿಗೆ ರೂ.80 ಟಿಕೆಟ್ ದರ ನಿಗದಿ ಪಡಿಸಲಾಗಿದೆ.…

Read More