Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “117 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ (ಈ ಹಿಂದಿನ ಪೆರಿಫೆರಲ್ ರಿಂಗ್ ರಸ್ತೆ)ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಭೂಸಂತ್ರಸ್ತ ರೈತರಿಗೆ ಪರಿಹಾರ ಪಡೆಯಲು ನಾಲ್ಕು ಆಯ್ಕೆಗಳನ್ನು ಕಲ್ಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ರಾಜ್ಯ ಸರ್ಕಾರ ದೊಡ್ಡ ತೀರ್ಮಾನ ಕೈಗೊಂಡಿದ್ದು, ಈ ಹಿಂದಿನ ಸರ್ಕಾರ ಉದ್ದೇಶಿಸಿದ್ದ ಪೆರಿಫೆರಲ್ ರಿಂಗ್ ರಸ್ತೆಯನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂದು ಮರುನಾಮಕರಣ ಮಾಡಿ 117 ಕಿ.ಮೀ ಉದ್ದದ ರಸ್ತೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಇಷ್ಟು ಪ್ರಮಾಣದ ಹೊಸ ರಸ್ತೆಯನ್ನು ಸೇರಿಸುವ ಮೂಲಕ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆಯುತ್ತಿದೆ. ತುಮಕೂರು ರಸ್ತೆಯಿಂದ ಆರಂಭವಾಗಿ ಯಲಹಂಕ, ವೈಟ್ ಫೀಲ್ಡ್, ಆನೇಕಲ್, ಎಲೆಕ್ಟ್ರಾನಿಕ್ ಸಿಟಿ ಮೂಲಕ ಮೈಸೂರು…
ಶಿವಮೊಗ್ಗ : ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು ಆಗಿರುತ್ತದೆ ಎಂದು ಸಾಗರದ ಬೀರೇಶ್ವರ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಬೀರೇಶ್ವರ ಕೋ. ಆಪರೇಟಿವ್ ಸೊಸೈಟಿಗೆ ನೂತನ ನೇಮಕವಾಗಿರುವ ಶಾಖಾ ಸಲಹಾ ಸಮಿತಿ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ, ಸಹಕಾರಿ ಸಂಸ್ಥೆ ಅಭಿವೃದ್ದಿಯಾಗಬೇಕಾದರೆ ಷೇರುದಾರರ ಸಹಕಾರದ ಜೊತೆಗೆ ಆಡಳಿತ ಮಂಡಳಿ ನಿರ್ದೇಶಕರ ಪಾತ್ರವೂ ಪ್ರಮುಖವಾಗಿರುತ್ತದೆ ಎಂದು ಹೇಳಿದರು. ಸಾಗರವು ಸಹಕಾರಿ ಕ್ಷೇತ್ರಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ ತಾಲ್ಲೂಕು ಆಗಿದೆ. ಅನೇಕ ಸಹಕಾರಿ ಸಂಸ್ಥೆಗಳು ಇಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿದೆ. ಬೆಳಗಾವಿ ಜಿಲ್ಲೆಯ ಬೀರೇಶ್ವರ ಸಹಕಾರಿ ಸಂಸ್ಥೆ ಅನೇಕ ವರ್ಷಗಳಿಂದ ಗ್ರಾಹಕರಿಗೆ ಇಲ್ಲಿ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ. ಸಂಸ್ಥೆಗೆ ಹೊಸಹೊಸ ನಿರ್ದೇಶಕರು ಬರುತ್ತಿದ್ದು, ಅವರ ಸಕ್ರಿಯ ಸೇವೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ದಿ ಹೊಂದುತ್ತದೆ ಎಂದು ತಿಳಿಸಿದರು. ಸಹಕಾರಿ ಸಂಸ್ಥೆ ವ್ಯವಸ್ಥಾಪಕ ರವೀಂದ್ರ ಹನಗಂಡಿ ಮಾತನಾಡಿ, ಬೀರೇಶ್ವರ ಸಹಕಾರಿ ಸಂಸ್ಥೆ ಒಟ್ಟು…
ಶಿವಮೊಗ್ಗ : ಬದುಕಿನಲ್ಲಿ ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟವಾಗಿರುತ್ತದೆ ಪೋಷಕರ ನಿರೀಕ್ಷೆ ನಿಜವಾಗಿಸಲು ಅವಿರತ ಪ್ರಯತ್ನ ಮಾಡಿ ಉತ್ತಮ ಫಲಿತಾಂಶ ಪಡೆಯಿರಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಮತಿ ಇಂದಿರಾಗಾoಧಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ, ಪ್ರಿಯದರ್ಶಿನಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಶ್ರೀಮತಿ ಇಂದಿರಾಗಾoಧಿ ಕಾಲೇಜು ರಾಜ್ಯದಲ್ಲಿಯೆ ಮಾದರಿಯಾಗಿ ಕೆಲಸ ಮಾಡುತ್ತಿದೆ. ಅತಿಹೆಚ್ಚು ವಿದ್ಯಾರ್ಥಿನಿಯರು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದು, ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಯಲ್ಲೂ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಕಾಲೇಜಿನ ಅಭಿವೃದ್ದಿಗೆ ಬೇಕಾದ ಅಗತ್ಯ ಸೌಲಭ್ಯ ನೀಡಲಾಗಿದೆ. ಆದರೂ ಕೆಲವರು ಹೊರ ಜಿಲ್ಲೆಗಳಿಗೆ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳಿಸುತ್ತಿರುವುದು ಬೇಸರದ ಸಂಗತಿ. ಕಾಲೇಜಿಗೆ ಸುಸಜ್ಜಿತ ರಂಗಮoದಿರ ನಿರ್ಮಾಣಕ್ಕೆ ಬೇಕಾದ ಸಹಕಾರ ನೀಡಲಾಗುತ್ತದೆ. ಕಾಲೇಜಿನ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ರೀತಿಯ ಸಮಸೆಯಾಗಬಾರದು ಎಂದರು. ಚಿತ್ರನಟ…
ಬೆಂಗಳೂರು: ರಾಜ್ಯದ 7 ನಿಗಮಗಳನ್ನು ಮುಚ್ಚುವಂತೆ, 9 ನಿಗಮಗಳನ್ನು ವಿಲೀನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಶಿಫಾರಸ್ಸು ಮಾಡಿದೆ. ಈ ಬಗ್ಗೆ ಮಾಹಿತಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು ಮಾಹಿತಿ ನೀಡಿದ್ದು, 9ನೇ ವರದಿಯಲ್ಲಿ 449 ಹೊಸ ಶಿಫಾರಸ್ಸುಗಳನ್ನು ಮಾಡಿ, ಸಿಎಂಗೆ ವರದಿಯನ್ನು ಸಲ್ಲಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿರುವಂತ ಶಿಫಾರಸ್ಸು ವರದಿಯಲ್ಲಿ 7 ಬೋರ್ಡ್, ಕಾರ್ಪೊರೇಷನ್ ಗಳನ್ನು ಮುಚ್ಚಲು ಸಲಹೆ ಮಾಡಲಾಗಿದೆ. ಜೊತೆಗೆ 9 ಬೋರ್ಡ್ ಕಾರ್ಪೊರೇಷನ್ ಗಳನ್ನು ವಿಲೀನ ಮಾಡುವುದಕ್ಕೂ ಶಿಫಾರಸ್ಸು ಮಾಡಿರುವುದಾಗಿ ಹೇಳಿದ್ದಾರೆ. ವಿಲೀನಕ್ಕೆ ಶಿಫಾರಸ್ಸು ಮಾಡಿರುವಂತ ನಿಗಮಗಳ ಪಟ್ಟಿ ಈ ಕೆಳಗಿನಂತಿದೆ.. 1.ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವ ಸೊಸೈಟಿ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೋಂದಿಗೆ ವೀಲಿನ) 2.ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ ನಿಯಮಿತ (ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ಲಿಮಿಟೆಡ್ ವಿಲೀನ ಮಾಡಬೇಕು) 3.ಆಹಾರ ಕರ್ನಾಟಕ ಲಿಮಿಟೆಡ್ (ಕರ್ನಾಟಕ ರಾಜ್ಯ ಕೃಷಿ…
ಬೆಂಗಳೂರು: ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ತಿಳಿಸಿದ್ದಾರೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ…
ಮಂಡ್ಯ : ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರು ಸಹ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದ ವೇಳೆ ದಾಳಿ ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 15 ಟನ್ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧವಾರ ದಾಳಿ ಮಾಡಿದ ಅಧಿಕಾರಿಗಳು ಅಂದಾಜು 15 ಟನ್ ಮರಳು ಹಾಗೂ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳ ದಾಳಿಗೆ ಬೆಚ್ಚಿದ ಮರಳು ದಂಧೆಕೋರರು ತುಂಬಿ ಹರಿಯುತ್ತಿರುವ ನದಿಯಲ್ಲೆ ಪರಾರಿಯಾಗಿದ್ದಾರೆ. ಈಗಾಗಲೇ ಇದೇ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಸಂಬಂಧ 2 ಪ್ರಕರಣಗಳನ್ನು ದಾಖಲಿಸಿದ್ದರೂ ಸಹ ಅಕ್ರಮ ಮರಳು ಗಣಿಗಾರಿಕೆ ದಂಧೆ ಮುಂದುವರಿಯುತ್ತಿದ್ದು, ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಮದ್ದೂರು ನ್ಯಾಯಾಲಯದಲ್ಲಿ ದೂರು ದಾಖಲಿಸುವುದಾಗಿ ಭೂ ವಿಜ್ಞಾನಿ ಮಹೇಶ್ ರವರು ಎಚ್ಚರಿಕೆ ನೀಡಿದರು. ಇನ್ನು ಕಳೆದ ತಿಂಗಳು ಅಜ್ಜಹಳ್ಳಿ ಗ್ರಾಮದ ಸ್ಥಳೀಯರು ರಾತ್ರಿ ವೇಳೆ ಅಕ್ರಮವಾಗಿ…
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. * ರೈಲು ಸಂಖ್ಯೆ 07317/07318 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ (ಒಂದು ಟ್ರಿಪ್): ರೈಲು ಸಂಖ್ಯೆ 07317 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ ವಿಶೇಷ ಎಕ್ಸ್ ಪ್ರೆಸ್ ರೈಲು 17.10.2025 ರಂದು ರಾತ್ರಿ 11:25ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 02:55ಕ್ಕೆ ವಾಸ್ಕೊ-ಡ-ಗಾಮ ತಲುಪಲಿದೆ. ಮರಳಿ ಪ್ರಯಾಣದಲ್ಲಿ, ರೈಲು ಸಂಖ್ಯೆ 07318 ವಾಸ್ಕೊ-ಡ-ಗಾಮ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು 18.10.2025 ರಂದು ಸಂಜೆ 05:00ಕ್ಕೆ ವಾಸ್ಕೊ-ಡ-ಗಾಮದಿಂದ ಹೊರಟು, ಮರುದಿನ ಬೆಳಿಗ್ಗೆ 08:30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ರೈಲು ಸಂಖ್ಯೆ 07317 ಮಾರ್ಗಮಧ್ಯೆ ಬೆಂಗಳೂರು ಕಂಟೋನ್ಮೆಂಟ್, ಎಸ್ಎಂವಿಟಿ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ,…
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಹುಶಃ ಸುಳ್ಳಿನ ಕಟ್ಟು ಕಥೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರು ಮುಖ್ಯಮಂತ್ರಿ ಆಗಬೇಕೆಂಬ ಕನಸು ಕಾಣುತ್ತಿದ್ದರೆ ನಮ್ಮದೇನೂ ಅಭ್ಯಂತರ ಇಲ್ಲ; ಆದರೆ, ಬಿಜೆಪಿಯಿಂದ ಬೆದರಿಕೆ ಕರೆ ಬಂದಿತ್ತು ಎಂದಿದ್ದಾರೆ. ಬೆದರಿಕೆ ಕರೆ ಆಗಿದ್ದರೆ ಅವರು ದೂರು ಕೊಡಬೇಕಿತ್ತು. ಸತ್ಯ ಹೊರಕ್ಕೆ ಬರುತ್ತಿತ್ತು ಎಂದು ನುಡಿದರು. ಅವರ ಹೇಳಿಕೆ ಒಂದು ರೀತಿಯ ಅಭಾಸ ಎಂದು ಟೀಕಿಸಿದರು. ಈ ಮೂಲಕ ಅವರು ಕಾಂಗ್ರೆಸ್ ಪಕ್ಷವನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ನನ್ನ ಅನಿಸಿಕೆ ಎಂದು ನುಡಿದರು. ಮುಖ್ಯಮಂತ್ರಿ ಹುದ್ದೆ ಬಯಸುವವರು ಹಲವು ತಂತ್ರಗಳನ್ನು ಹೂಡುವುದು ಸಹಜ. ಬಿಜೆಪಿ ವಿರುದ್ಧ ಆಪಾದನೆ ಮಾಡಿ, ಕಾಂಗ್ರೆಸ್ ಪಕ್ಷ ಅಥವಾ ಹೈಕಮಾಂಡಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ನನ್ನ ಅನಿಸಿಕೆ ಎಂದರು. ಕನ್ನೇರಿ ಸ್ವಾಮೀಜಿಯವರಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿದ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯಗೊಳಿಸುವುದು ಸೇರಿದಂತೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಪೆರಿಪರಲ್ ರೋಡ್ ಅಂತ ಕರೆಯಲಾಗಿತ್ತು. ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ, ಎಲೆಕ್ಟ್ರಾನಿಕ್ ಸಿಟಿಯಿಂದ ಮೈಸೂರು ರಸ್ತೆವತೆಗೆ ಇತ್ತು. ಹಿಂದೆ ಸರ್ಕಾರ ಡ್ರಾಪ್ ಮಾಡೋಕೆ ಹೊರಟಿತ್ತು. ತೊಂದರೆಯಾಗುತ್ತೆ ಅಂತ ಹೊರಡಿತ್ತು. ಈಗ ಪರ್ಯಾಯ ರಸ್ತೆ ಅಗತ್ಯವಿದೆ. ಡಿನೊಟಿಫೈ ಮಾಡಬಾರದು. ಟ್ರಾಫಿಕ್ ತಡೆಯಬೇಕು ಅಂತ ನಾವು ಪರಿಗಣಿಸಿದ್ದೇವೆ. ನೈಸ್ ಪಕ್ಕ ಬಿಡಿಎ ಯಿಂದ ಹೊಸ ರಸ್ತೆ ನಿರ್ಮಾಣ. 117 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಈಗಾಗಲೇ ಕಾರ್ಯಯೋಜನೆ ನಡೆದಿದೆ. ಭೂಸ್ವಾಧೀನಕ್ಕೆಹೊಸ ಪರಿಹಾರಕ್ಕೆ ಅವಕಾಶ ಇರಲಿಲ್ಲ. ರೈತರಿಗೆ ಸಹಾಯ ಮಾಡಲು ನಿರ್ಧರಿಸಿದ್ದೇವೆ. 100 ಮೀಟರ್ ಗೆ ನೊಟಿಫಿಕೇಶನ್ ಆಗಿತ್ತು. ಬೆಂ,ಮೈಸೂರು ರಸ್ತೆ 60 ಮೀಟರ್ ಇದೆ. ಈಗ ಈರಸ್ತೆಯನ್ನೂ ಅಷ್ಟಕ್ಕೇ ನಿಲ್ಲಿಸ್ತೇವೆ. ಉಳಿದ ಜಾಗ ರೈತರಿಗೆ…
ಅಷ್ಟ ದಿಕ್ಪಾಲಕರು ಎಂದರೆ ಯಾರು? ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿಂದ ಆಗುವ ಪ್ರಯೋಜನು ಗೊತ್ತಾ? ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿರುಋುತಿ(ರಾಕ್ಷಸ)- ನೈಋುತ್ಯ. ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ. ಅಗ್ನಿ: ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ. ಅಗ್ನಿಯು ಪೃಥ್ವಿಗೆ ಅಧಿಧಿಪತಿಯಾದ…