Author: kannadanewsnow09

ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ ಕುಬೇರನನ್ನು ಅತ್ಯಂತ ಸರಳವಾಗಿ ಪೂಜಿಸುವುದಾಗಲಿ ಅದರೊಂದಿಗೆ ಈ ಮಂತ್ರವನ್ನು ಪಠಿಸಬೇಕು. ಈ ಕುಬೇರ ಪೂಜೆಯನ್ನು ಯಂತ್ರವನ್ನು ಇಟ್ಟುಕೊಂಡು, ಪೆಟ್ಟಿಗೆಯನ್ನು ಇಟ್ಟು, ಮಂತ್ರಗಳನ್ನು ಪಠಿಸುವ ಮೂಲಕ ಬಹಳ ವಿಮರ್ಶಾತ್ಮಕವಾಗಿ ನಡೆಸಲಾಗುತ್ತದೆ. ಅಷ್ಟರ ಮಟ್ಟಿಗೆ ಈ ಪೂಜೆ ಮಾಡಬಹುದೋ ಗೊತ್ತಿಲ್ಲ. ಆದರೆ ಮಂಗಳವಾರ ಮತ್ತು ಶುಕ್ರವಾರ ಸಂಜೆ ನಮ್ಮ ಮನೆಯಲ್ಲಿ ಈ ಪೂಜೆಯನ್ನು ಮಾಡಬಹುದಷ್ಟೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ…

Read More

ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ ಮಾಡಲಾಗಿದೆ. ಮಾಹಿತಿ ನೀಡದ  245 ಅಧಿಕಾರಿಗಳಿಗೆ 45.29 ಲಕ್ಷ ದಂಡಾಸ್ತ್ರವನ್ನು ಪ್ರಯೋಗಿಸಲಾಗಿದೆ. ಈ ಕುರಿತು ಕರ್ನಾಟಕ ಮಾಹಿತಿ ಆಯೋಗ ಪತ್ರಿಕಾ ಪ್ರಕಟಣೆಯಲ್ಲು ಮಾಹಿತಿ ಬಿಡುಗಡೆ ಮಾಡಿದ್ದು, ಮಾಹಿತಿ ಆಯೋಗವು ಇಡೀ ದೇಶದಲ್ಲಿಯೇ ಅತ್ಯಂತ ವೇಗವಾಗಿ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ, ಶಿಸ್ತುಕ್ರಮಕ್ಕೆ ಶಿಫಾರಸುಗಳ ಜತೆಗೆ 36474 ಮೇಲ್ಮನವಿಗಳನ್ನು ವಿಲೇವಾರಿ ಮಾಡಿದೆ ಎಂದಿದೆ. ಕರ್ನಾಟಕ ಮಾಹಿತಿ ಆಯೋಗಕ್ಕೆ 2005ರ ಫೆಬ್ರವರಿ 4 ರಂದು ಎಂಟು ಜನ ಮಾಹಿತಿ ಆಯುಕ್ತರನ್ನು ನೇಮಕ ಮಾಡಿತ್ತು. ಡಿಸೆಂಬರ್‌ನಲ್ಲಿ ಮೂರು ಜನ ಮಾಹಿತಿ ಆಯುಕ್ತರ ನೇಮಕವಾಗಿದೆ. 2023 ರಿಂದ 2025ರ ಫೆಬ್ರವರಿ ತನಕ ಕೇವಲ ಮೂರು ಜನ ಮಾತ್ರ ಆಯುಕ್ತರು ಕಾರ್ಯ ನಿರ್ವಹಿಸುತ್ತಿದ್ದರು. ಆದ್ದರಿಂದ ಅರ್ಜಿಗಳ ವಿಲೇವಾರಿ ಕುಂಠಿತವಾಗಿತ್ತು. ಆದರೆ ಒಂದು ವರ್ಷದ ಅವಧಿಯಲ್ಲಿ ದ್ವಿತೀಯ ಮೇಲ್ಮನವಿ ಅರ್ಜಿಗಳ ವಿಲೇವಾರಿಗೆ ವೇಗ ಸಿಕ್ಕಿದೆ.…

Read More

ಶಿವಮೊಗ್ಗ: 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ‌. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಆರ್.ಮೋಹನ್ ಕುಮಾರ್‌ರವರು ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, 2026ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅರ್ಹ ಅಧಿಕಾರಿ-ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದಿದ್ದಾರೆ. ರಾಜ್ಯ ಮಟ್ಟಕ್ಕೆ 30 ಪ್ರಶಸ್ತಿ ಹಾಗೂ ಶಿವಮೊಗ್ಗ ಜಿಲ್ಲೆಗೆ 10 ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ರಾಜ್ಯ ಮಟ್ಟದ ಪ್ರಶಸ್ತಿ ತಲಾ 50 ಸಾವಿರ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ತಲಾ 20 ಸಾವಿರ ನಗದು ಬಹುಮಾನ ಒಳಗೊಂಡಿರಲಿದೆ. ಜಿಲ್ಲಾ ಮತ್ತು ರಾಜ್ಯ ಮಟ್ಟದ ಎರಡೂ ಹಂತದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಧಿಕಾರಿ-ನೌಕರರು ಪ್ರತ್ಯೇಕ ನಾಮನಿರ್ದೇಶನ ಸಲ್ಲಿಸುವ ನೌಕರರು ಕನಿಷ್ಠ 03 ವರ್ಷಗಳ…

Read More

ಬೆಂಗಳೂರು : 220/66/11 kV ಹೆಬ್ಬಾಳ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 07.02.2026 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 18:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ,…

Read More

ಬೆಂಗಳೂರು: ಅಳ್ನಾವರ್ – ದಾಂಡೇಲಿ ನಡುವೆ ಹೊಸ DEMU ರೈಲು ಸೇವೆಗಳ ಪ್ರಾರಂಭಕ್ಕೆ ಫೆಬ್ರವರಿ.7ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ. 1. ಉದ್ಘಾಟನಾ ವಿಶೇಷ ಸೇವೆ ಮೇಲಿನ ರೈಲು ಸೇವೆಗಳ ಪ್ರಾರಂಭದ ಅಂಗವಾಗಿ, ವಿ.ಸೋಮಣ್ಣ, ಮಾನ್ಯ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರು, ಕೆಳಗಿನ ವಿವರಗಳಂತೆ ಉದ್ಘಾಟನಾ ವಿಶೇಷ DEMU ರೈಲು ಸೇವೆಗೆ ಹಸಿರು ನಿಶಾನೆ ನೆರವೇರಿಸಲಿದ್ದಾರೆ: * ರೈಲು ಸಂಖ್ಯೆ: 07371 (ಒಂದು ದಿಕ್ಕಿನ ಉದ್ಘಾಟನಾ ವಿಶೇಷ) * ಪ್ರಾರಂಭಿಕ ನಿಲ್ದಾಣ: ದಾಂಡೇಲಿ ರೈಲು ನಿಲ್ದಾಣ * ದಿನಾಂಕ ಮತ್ತು ವಾರ: 07.02.2026 (ಶನಿವಾರ) * ಸಮಯ: ಸಂಜೆ 04:00 ಗಂಟೆಗೆ 2. ನಿಯಮಿತ ರೈಲು ಸೇವೆಗಳು ನಿಯಮಿತ DEMU ರೈಲು ಸೇವೆಗಳು 09.02.2026 ರಿಂದ ಕೆಳಗಿನ ಕಾರ್ಯಾಚರಣಾ ವಿವರಗಳೊಂದಿಗೆ ಪ್ರಾರಂಭವಾಗಲಿವೆ: ರೈಲು ಸಮಯಗಳು – ಅಳ್ನಾವರ್ ಜಂಕ್ಷನ್ ↔ ದಾಂಡೇಲಿ ↔ ಅಳ್ನಾವರ್ ಜಂಕ್ಷನ್ ಅಳ್ನಾವರ್ ಜಂಕ್ಷನ್‌ನಿಂದ ದಾಂಡೇಲಿಗೆ *…

Read More

ಶಿವಮೊಗ್ಗ: ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಪ್ರಯುಕ್ತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಗಣಪತಿ ಕೆರೆಯಲ್ಲಿ ಬೋಟಿಂಗ್ ಗೆ ಚಾಲನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಗಣಪತಿ ಕೆರೆಯಲ್ಲಿ ಮಾರಿಕಾಂಬ ಜಾತ್ರಾ ಮಹೋತ್ಸವದ ಪ್ರಯುಕ್ತ ಬೋಟಿಂಗ್ ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಆ ಬಳಿಕ ತಾವು ಕೂಡ ಒಂದೆರಡು ಸುತ್ತು ಬೋಟಿಂಗ್ ಮಾಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರಿಕಾಂಬ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಬೋಟಿಂಗ್ ಅನುಭವ ಅತ್ಯದ್ಭುತವಾಗಿತ್ತು. ಸಾಗರದ ಸಮಸ್ತ ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದರು. https://youtu.be/NJOR14q-_ws?si=SBta3NWRSwGOtEjW ಇದೇ ವೇಳೆ ಸಮೀಪದಲ್ಲೇ ಇದ್ದಂತ ಶಾಲಾ ಮಕ್ಕಳು ಶಾಸಕರನ್ನು ಕೈ ಬೀಸಿ ಮಾತನಾಡಿಸಿದಾಗ, ಅವರನ್ನೆಲ್ಲ ಕರೆದುಕೊಂಡು ಬಂದು, ಶಾಲಾ ಮಕ್ಕಳಿಗೂ ಗಣಪತಿ ಕೆರೆಯಲ್ಲಿ ಒಂದು ರೌಂಡ್ ಬೋಟಿಂಗ್ ಮಾಡಿಸಿದರು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೋಟಿಂಗ್…

Read More

ಬೆಂಗಳೂರು: ನಗರದಲ್ಲಿ ನಿಯಮ ಪಾಲಿಸದ ಪಿಜಿ, ಹೋಟೆಲ್ ಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಿಗ್ ಶಾಕ್ ನೀಡಿದೆ. ಅದೇ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಪಿ.ಜಿ ಗಳ ಹಾಗೂ ಹೋಟೆಲ್ ಗಳ ಪರಿಶೀಲನೆ ಹಾಗೂ ರೂ.2,57,100/- ದಂಡ ವಸೂಲಿ ಮಾಡಿರುವುದಾಗಿ ಆಯುಕ್ತ ಕೆ ಎನ್ ರಮೇಶ್ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನಾಂಕ : 12-01-2026 ರಿಂದ ದಿನಾಂಕ : 04-02-2026ರ ವರೆಗೆ ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ವಸತಿ ಗೃಹಗಳಲ್ಲಿ (PG) ಹಾಗೂ ಹೋಟೆಲ್ ಉದ್ದಿಮೆಗಳಲ್ಲಿ ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು FSSA ನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ನ್ಯೂನತೆಗಳು ಕಂಡುಬಂದಿವೆ ಎಂದಿದ್ದಾರೆ.…

Read More

ಶಿಲ್ಲಾಂಗ್ : ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ಮೈನ್ಸಿಂಗಟ್-ಥಾಂಗ್ಸ್ಕೊ ಪ್ರದೇಶದ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಡೈನಮೈಟ್ ಸ್ಫೋಟದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೂರದಲ್ಲಿರುವ ಕಲ್ಲಿದ್ದಲು ಗಣಿ ಪ್ರದೇಶದಿಂದ 10 ಮಂದಿ ಶವಗಳನ್ನು ಹೊರತೆಗೆಯಲಾಗಿದೆ. ಸುಟ್ಟ ಗಾಯಗಳಾಗಿರುವ ಒಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಶಿಲ್ಲಾಂಗ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೂರ್ವ ಜೈಂಟಿಯಾ ಹಿಲ್ಸ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ತಿಳಿಸಿದ್ದಾರೆ. ಮೇಘಾಲಯಯ ಜೈಂಟಿಯಾ ಹಿಲ್ಸ್ ನಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಆಗಮಿಸಿ, ಸ್ಪೋಟದಿಂದ ಗಾಯಗೊಂಡಿರುವಂತ ಗಾಯಾಳುಗಳನ್ನು ರಕ್ಷಿಸುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

Read More

ಬೆಂಗಳೂರು: ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಅದಿರು ರಪ್ತು ಕೇಸಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದಂತ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶಾಸಕ ಸತೀಶ್ ಸೈಲ್ ಅವರು ಅಕ್ರಮ ಅದಿರು ರಪ್ತು ಪ್ರಕರಣದಲ್ಲಿ ಅನಾರೋಗ್ಯದ ಕಾರಣ ನೀಡಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದಂತ ನ್ಯಾಯಪೀಠವು, ಲಿವರ್ ಸಮಸ್ಯೆಯಿರುವ ಕಾರಣ ಚಿಕಿತ್ಸೆಗೆ ಅಗತ್ಯತೆಯ ಕಾರಣ ನೀಡಿ, ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ. ಇನ್ನೂ ಜಾಮೀನು ಮಂಜೂರು ವೇಳೆಯಲ್ಲಿ ಕೆಲ ಷರತ್ತುಗಳನ್ನು ವಿಧಿಸಿದೆ. 5 ಲಕ್ಷದ ಮೌಲ್ಯದ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ತಿಳಿಸಿದೆ.

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಖಾಲಿ ಜಾಗದಲ್ಲಿ ಹಾಕಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಧಗಧಗಿಸಿ ಉರಿದಿದೆ. ಬೆಂಗಳೂರಿನ ಜೆಪಿ ನಗರದ ಶ್ರೀನಿಧಿ ಲೇಔಟ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮರ ಇದ್ದಿದ್ದರಿಂದ ಹೊತ್ತಿ ಬೆಂಕಿ ಉರಿದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸದ್ಯ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.

Read More