Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯಪಾಲರು ಯಾವುದೇ ಪಕ್ಷದ ಸದಸ್ಯರಲ್ಲ, ಅವರು ರಾಜ್ಯದ ನಾಮಮಾತ್ರ ಕಾರ್ಯಾಂಗದ ಮುಖ್ಯಸ್ಥರು ಮತ್ತು ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರ ಬರೆದುಕೊಟ್ಟ ಭಾಷಣ ಮಾಡುವುದು ರಾಜ್ಯಪಾಲರ ಸಂವಿಧಾನಬದ್ಧವಾದ ಜವಾಬ್ದಾರಿ ಆಗಿದೆಯೇ ಹೊರತು, ಅದೇನು ಸರ್ಕಾರಕ್ಕೆ ಮಾಡುವ ಉಪಕಾರವಲ್ಲ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ವಿಧಾನಮಂಡಲದ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣವನ್ನು ‘ರಾಜ್ಯ ಸಚಿವ ಸಂಪುಟ’ ಒದಗಿಸುತ್ತದೆ. ಆ ಭಾ಼ಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ದನಿ ಎತ್ತಲಾಗಿದೆ ಎಂಬ ಕಾರಣಕ್ಕಾಗಿ ರಾಜ್ಯಪಾಲರು ಆ ಭಾಷಣವನ್ನು ನಿರಾಕರಿಸುವಂತಿಲ್ಲ. ಕೇಂದ್ರದ ಜನವಿರೋಧಿ ಯೋಜನೆಗಳನ್ನು ಅಧಿವೇಶನದಲ್ಲಿ ಚರ್ಚಿಸುವುದು ಒಕ್ಕೂಟ ವ್ಯವಸ್ಥೆಯ ಭಾಗವಾಗಿ ಅದು ರಾಜ್ಯ ಸರ್ಕಾರಗಳ ಹಕ್ಕು ಮತ್ತು ಜವಾಬ್ದಾರಿ ಆಗಿದೆ. ಬಹುಕಾಲದಿಂದಲೂ ಇದು ಅಸ್ತಿತ್ವದಲ್ಲಿರುವ ವಿದ್ಯಮಾನ ಆಗಿದೆ ಎಂದಿದ್ದಾರೆ. ರಾಜ್ಯಪಾಲರು ಯಾವುದೇ ಪಕ್ಷದ ಸದಸ್ಯರಾಗಿ ವರ್ತಿಸದೇ ತಮ್ಮ ರಾಜ್ಯಪಾಲರ ಜವಾಬ್ದಾರಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸುವುದು ಜನ ಸಾಮಾನ್ಯರ ಬದುಕಿನ ದೃಷ್ಟಿಯಿಂದ ಹೆಚ್ಚು ಉತ್ತಮ ಎನಿಸಿಕೊಳ್ಳುತ್ತದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/important-information-about-the-compulsory-service-of-medical-candidates-act-2012-in-the-state/ https://kannadanewsnow.com/kannada/guidelines-issued-for-renewal-of-fc-non-marine-registration-of-vehicles-in-the-state-compliance-with-these-rules-is-mandatory/
ಬೆಂಗಳೂರು: ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, “ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು. ಅವರ ಘನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ಫೆಡರಲ್ ವ್ಯವಸ್ಥೆಯ ಮೇಲೆ ನೇರ ದಾಳಿ ನಡೆಸುತ್ತಿದೆ” ಎಂದು ಹೇಳಿದರು. ಸರ್ಕಾರದ ಪಠ್ಯಕ್ಕೆ ರಾಜ್ಯಪಾಲರು ಯಾಂತ್ರಿಕವಾಗಿ ಬದ್ಧರಾಗಬೇಕಿಲ್ಲ “ಭಾರತದ ಸಂವಿಧಾನದ ವಿಧಿ 175 ಮತ್ತು 176ರ ಅಡಿಯಲ್ಲಿ ರಾಜ್ಯಪಾಲರಿಗೆ ವಿಧಾನಸಭೆ ಮತ್ತು ವಿಧಾನಪರಿಷತ್ತನ್ನು ಉದ್ದೇಶಿಸಿ ಭಾಷಣ ಮಾಡುವ ಸ್ಪಷ್ಟ ಅಧಿಕಾರವಿದೆ. ಆದರೆ ಸರ್ಕಾರ ತಯಾರಿಸಿದ ಪಠ್ಯದಲ್ಲಿರುವ ಪ್ರತಿಯೊಂದು ಪದವನ್ನೂ ರಾಜ್ಯಪಾಲರು ಕಡ್ಡಾಯವಾಗಿ ಓದಲೇಬೇಕು ಎಂಬ ನಿಯಮ ಸಂವಿಧಾನದಲ್ಲಿಯೂ ಇಲ್ಲ, ವಿಧಾನಸಭೆ ಅಥವಾ ವಿಧಾನಪರಿಷತ್ತಿನ ನಿಯಮಗಳಲ್ಲಿಯೂ ಇಲ್ಲ”…
ಯಾವುದೇ ವಿಟಮಿನ್, ವಿಶೇಷವಾಗಿ ವಿಟಮಿನ್ ಬಿ 12 ಕೊರತೆಯು ಅಪಾಯಕಾರಿಯಾಗಬಹುದು. ಕೊಬಾಲಾಮಿನ್ ಎಂದೂ ಕರೆಯಲ್ಪಡುವ ಈ ನೀರಿನಲ್ಲಿ ಕರಗುವ ಪೋಷಕಾಂಶವು ಆರೋಗ್ಯಕರ ನರ ಕೋಶಗಳು, ಕೆಂಪು ರಕ್ತ ಕಣಗಳ ರಚನೆ ಮತ್ತು ಡಿಎನ್ಎ ಸಂಶ್ಲೇಷಣೆಗೆ ಅತ್ಯಗತ್ಯ. ಆದಾಗ್ಯೂ, ನಿಮ್ಮ ದೇಹದಲ್ಲಿ ಇದರ ಕೊರತೆಯಿದ್ದಾಗ, ಅನೇಕ ಎಚ್ಚರಿಕೆ ಚಿಹ್ನೆಗಳು ಕಾಣಿಸಿಕೊಳ್ಳುತ್ತವೆ – ಮತ್ತು ಇವುಗಳಲ್ಲಿ ಒಂದು ವ್ಯಕ್ತಿಯ ಪಾದಗಳಲ್ಲಿ ಕಾಣಿಸಿಕೊಳ್ಳಬಹುದು. ವಿಟಮಿನ್ ಬಿ 12 ಕೆಂಪು ರಕ್ತ ಕಣಗಳನ್ನು ಉತ್ಪಾದಿಸಲು ಸಹಾಯ ಮಾಡುವ ಮೂಲಕ ಗಾಯದ ಚೇತರಿಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದರಿಂದ, ಅದರ ಕೊರತೆಯು ದೇಹದಾದ್ಯಂತ ಆಮ್ಲಜನಕದ ಕೊರತೆಯನ್ನು ಉಂಟುಮಾಡುತ್ತದೆ. ತಜ್ಞರ ಪ್ರಕಾರ, ವಿಟಮಿನ್ ಬಿ ಕೊರತೆಯು ಗಾಯದ ಗುಣಪಡಿಸುವಿಕೆಯ ಮೇಲೆ ಹಲವು ವಿಧಗಳಲ್ಲಿ ಪರಿಣಾಮ ಬೀರುತ್ತದೆ – ವಿಶೇಷವಾಗಿ ನಿಮ್ಮ ಪಾದಗಳು. ನಿಮ್ಮ ಪಾದಗಳಲ್ಲಿ ವಿಟಮಿನ್ ಬಿ 12 ಕೊರತೆಯ ಚಿಹ್ನೆಗಳು ಯಾವುವು? ನಿಮ್ಮ ಪಾದಗಳಲ್ಲಿ ಜುಮ್ಮೆನಿಸುವಿಕೆ ಸಂವೇದನೆಗಳು ಕಂಡುಬಂದರೆ, ನೀವು ತಕ್ಷಣ ನಿಮ್ಮ ವೈದ್ಯರನ್ನು ಭೇಟಿ ಮಾಡಬೇಕು ಏಕೆಂದರೆ ಅಂತಹ…
ದೈನಂದಿನ ಜೀವನದಲ್ಲಿ ಕಪ್ಪು ಕಾಫಿ ಎಷ್ಟು ಸುಲಭವಾಗಿ ಪ್ರವೇಶಿಸಿದೆ ಎಂದರೆ ಅದು ಈಗ ಒಂದು ಆಯ್ಕೆಯಂತೆ ಭಾಸವಾಗುವುದಿಲ್ಲ. ಅದು ಅಲ್ಲಿಯೇ ಇದೆ. ಬೆಳಗಿನ ಕಣ್ಣುಗಳು ಅರ್ಧ ತೆರೆದಿವೆ, ಕೆಟಲ್ನಲ್ಲಿ, ಕೈಯಲ್ಲಿ ಮಗ್. ಹಾಲು ಇಲ್ಲ, ಸಕ್ಕರೆ ಇಲ್ಲ, ಅಪರಾಧವಿಲ್ಲ. ಕಾಫಿ ಕುಡಿಯಲು ಇದನ್ನು ಅತ್ಯಂತ ಶುದ್ಧ ಮಾರ್ಗವೆಂದು ಹೆಚ್ಚಾಗಿ ವಿವರಿಸಲಾಗುತ್ತದೆ, ಬಹುತೇಕ ಆರೋಗ್ಯ ಶಾರ್ಟ್ಕಟ್ನಂತೆ. ಆ ಖ್ಯಾತಿಯಿಂದಾಗಿಯೇ ಜನರು ದೇಹದಲ್ಲಿ ಅದು ಹೇಗೆ ಭಾಸವಾಗುತ್ತದೆ ಎಂಬುದರತ್ತ ಗಮನ ಹರಿಸುವುದನ್ನು ನಿಲ್ಲಿಸುತ್ತಾರೆ. ಆಹಾರ ಮತ್ತು ಪಾನೀಯಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವುದಿಲ್ಲ. ಅವು ನಿದ್ರೆ, ಒತ್ತಡ, ಖಾಲಿ ಹೊಟ್ಟೆ, ಹಾರ್ಮೋನುಗಳು ಮತ್ತು ಅಭ್ಯಾಸಗಳಿಗೆ ಪ್ರತಿಕ್ರಿಯಿಸುತ್ತವೆ. ಕಪ್ಪು ಕಾಫಿ ಪೂರ್ವನಿಯೋಜಿತವಾಗಿ ಕೆಟ್ಟದ್ದಲ್ಲ, ಆದರೆ ನಿಮ್ಮ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಗಮನಿಸದೆ ನಿಯಮಿತವಾಗಿ ಕುಡಿಯುವುದರಿಂದ ಮೊದಲಿಗೆ ಸಂಬಂಧವಿಲ್ಲದ ಸಮಸ್ಯೆಗಳನ್ನು ಸದ್ದಿಲ್ಲದೆ ಸೃಷ್ಟಿಸಬಹುದು. ನ್ಯೂಟ್ರಿಯೆಂಟ್ಸ್ ಜರ್ನಲ್ನಲ್ಲಿ ಪ್ರಕಟವಾದ ಪೀರ್-ರಿವ್ಯೂಡ್ ಅಧ್ಯಯನವು ಕೆಫೀನ್ ಸೇವನೆ ಮತ್ತು ದೇಹದ ಮೇಲೆ ಅದರ ಪರಿಣಾಮಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. ಮಧ್ಯಮ ಕಾಫಿ ಸೇವನೆಯು ಆರೋಗ್ಯಕರ…
ಹೈದರಾಬಾದ್: ಇಲ್ಲಿನ ಬೋರಬಂಡಾ ಪ್ರದೇಶದಲ್ಲಿ ನಡೆದ ಮನಕಲಕುವ ಘಟನೆಯೊಂದು ನಡೆದಿದೆ. ಈ ಘಟನೆಯಲ್ಲಿ ವ್ಯಕ್ತಿಯೊಬ್ಬ ಮಲಗಿದ್ದ ತನ್ನ ಪತ್ನಿಯನ್ನು ಕೊಂದು, ತಕ್ಷಣವೇ ತನ್ನ ಅಪರಾಧವನ್ನು ಆನ್ಲೈನ್ನಲ್ಲಿ ಒಪ್ಪಿಕೊಂಡಿದ್ದಾನೆ. ತನ್ನ ಪತ್ನಿ ಕೊಂದಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪತ್ನಿ ಹಂಚಿಕೊಂಡಿರುವಂತ ವಿಚಿತ್ರ ಘಟನೆಯೊಂದು ನಡೆದಿದೆ. ಆರೋಪಿ ರೋಡ್ಡೆ ಆಂಜನೇಯುಲು ಸಾಮಾಜಿಕ ಮಾಧ್ಯಮದಲ್ಲಿ “ನನ್ನ ಸಂಗಾತಿಯನ್ನು ನನ್ನ ಕೈಯಿಂದಲೇ ಕೊಂದೆ” ಎಂದು ಪೋಸ್ಟ್ ಮಾಡಿದ್ದಾನೆ ಎಂದು ವರದಿಯಾಗಿದೆ. ಸೋಮವಾರ ತಡರಾತ್ರಿ ಬೋರಬಂಡಾದ ರಹಮತ್ನಗರದಲ್ಲಿರುವ ಅವರ ಮನೆಯಲ್ಲಿ ಈ ಭಯಾನಕ ದಾಳಿ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ದಂಪತಿಗಳ ಹಿನ್ನೆಲೆ ಪೊಲೀಸ್ ಮೂಲಗಳು ಮತ್ತು ನೆರೆಹೊರೆಯವರ ಪ್ರಕಾರ, ಮೃತ ಸರಸ್ವತಿ ಮತ್ತು ಆಂಜನೇಯುಲು ವನಪರ್ತಿ ಜಿಲ್ಲೆಯವರು. ಸುಮಾರು 14 ವರ್ಷಗಳ ಹಿಂದೆ ವಿವಾಹವಾದ ಈ ದಂಪತಿಗಳು ಉತ್ತಮ ಜೀವನೋಪಾಯವನ್ನು ಅರಸುತ್ತಾ ಹೈದರಾಬಾದ್ನ ರಾಜೀವ್ ಗಾಂಧಿ ನಗರದಲ್ಲಿ ನೆಲೆಸಿದ್ದರು. ಸರಸ್ವತಿ ಮನೆಗೆಲಸದವರಾಗಿ ಕೆಲಸ ಮಾಡುತ್ತಿದ್ದರು. ಆಂಜನೇಯುಲು ಕಾರು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು. ಆರಂಭದಲ್ಲಿ, ಅವರ ಜೀವನವು ಸಾಮಾನ್ಯವಾಗಿತ್ತು, ಆದರೆ…
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ನವದೆಹಲಿ: ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಅಭೂತಪೂರ್ವ ಮಟ್ಟಕ್ಕೆ ಏರಿದವು, ಏಕೆಂದರೆ ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ನಡುವಿನ ಹೊಸ ವ್ಯಾಪಾರ ಉದ್ವಿಗ್ನತೆಗಳು ಹೂಡಿಕೆದಾರರನ್ನು ಸುರಕ್ಷತೆಗಾಗಿ ಪರದಾಡುವಂತೆ ಮಾಡಿತು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಿವಾದಾತ್ಮಕ ಗ್ರೀನ್ಲ್ಯಾಂಡ್ ಪ್ರಚೋದನೆಗೆ ಸಂಬಂಧಿಸಿದಂತೆ ಯುರೋಪಿಯನ್ ರಾಷ್ಟ್ರಗಳ ವಿರುದ್ಧ ಸಂಭವನೀಯ ಸುಂಕಗಳ ಬಗ್ಗೆ ಎಚ್ಚರಿಕೆ ನೀಡಿದ ನಂತರ ಚಿನ್ನ, ಬೆಳ್ಳಿ ದರಗಳು ಗಣನೀಯವಾಗಿ ಏರಿಕೆಯಾಗೋದಕ್ಕೆ ಕಾರಣ ಎನ್ನಲಾಗುತ್ತಿದೆ. ಆ ಕಾರಣಗಳು ಏನು ಅಂತ ಮುಂದೆ ಓದಿ. ಭೌಗೋಳಿಕ ರಾಜಕೀಯ ಅನಿಶ್ಚಿತತೆ ಮತ್ತು ಪ್ರತೀಕಾರದ ಕ್ರಮಗಳ ಬಗ್ಗೆ ಹೆಚ್ಚಿದ ಕಳವಳಗಳು ಸಾಂಪ್ರದಾಯಿಕ ಸುರಕ್ಷಿತ ಸ್ವತ್ತುಗಳಿಗೆ ಬೇಡಿಕೆಯನ್ನು ಹೆಚ್ಚಿಸಿದವು, ಚಿನ್ನ ಮತ್ತು ಬೆಳ್ಳಿ ಎರಡೂ ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಲು ಸಹಾಯ ಮಾಡಿತು. MCX ಫ್ಯೂಚರ್ಸ್ ತೀವ್ರ ರ್ಯಾಲಿಯನ್ನು ವಿಸ್ತರಿಸಿದೆ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ನಲ್ಲಿ, ಫೆಬ್ರವರಿ 5, 2026 ರಂದು ಮುಕ್ತಾಯಗೊಳ್ಳುವ ಚಿನ್ನದ ಫ್ಯೂಚರ್ಗಳು 1,300…
ಮಂಡ್ಯ: ಜಿಲ್ಲೆಯ ವಿಶ್ವ ವಿಖ್ಯಾತ ಪ್ರವಾಸಿ ತಾಣವಾದ ಕೊಕ್ಕರೆ ಬೆಳ್ಳೂರು ಕುರಿತ ಲಕೋಟೆಯನ್ನು ಭಾರತೀಯ ಅಂಚೆ ಇಲಾಖೆ ಹೊರತಂದಿದ್ದು, ಈ ಮೂಲಕ ರಾಷ್ಟ್ರಮಟ್ಟದಲ್ಲಿ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪರಿಚಯಸುವ ಪ್ರಯತ್ನ ಮಾಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಬುಧವಾರ ತಿಳಿಸಿದರು. ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡದ ನವೀಕರಣ ಮತ್ತು ಕೂಸಿನ ಮನೆ ಉದ್ಘಾಟನೆ ಹಾಗೂ ಭಾರತೀಯ ಅಂಚೆ ಇಲಾಖೆ ಮಂಡ್ಯ ವಿಭಾಗದಿಂದ ಕೊಕ್ಕರೆ ಬೆಳ್ಳೂರು ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೊಕ್ಕರೆ ಬೆಳ್ಳೂರು ಹೆಸರಿನ ಅಂಚೆ ಲಕೋಟೆ ವಿಶೇಷವಾಗಿದ್ದು ಇದು ಇಡೀ ದೇಶದಲ್ಲೇ ಉದ್ಘಾಟನೆಯಾಗಿ ಲಕೋಟೆ ಐತಿಹಾಸಿಕ ಸ್ಥಳಗಳು, ಸಾಂಸ್ಕೃತಿಕ ಹಾಗೂ ಪರಂಪರೆಯನ್ನು ಗೌರವಿಸಲು ಅಂಚೆ ಇಲಾಖೆಯು ಆಯಾ ವಿಷಯದ ಮಹತ್ವವನ್ನು ದಾಖಲಿಸುವ ಉದ್ದೇಶದಿಂದ ಬಿಡುಗಡೆ ಮಾಡಿದ್ದು, ಕೊಕ್ಕರೆ ಬೆಳ್ಳೂರು ಗ್ರಾಮದ ಇತಿಹಾಸವು ಮುಂದಿನ ದಿನಗಳಲ್ಲಿ ದೇಶದಾದ್ಯಂತ ಪಸರಿಸುವುದಾಗಿ ಹೇಳಿದರು. ಕೊಕ್ಕರೆ ಬೆಳ್ಳೂರು ಗ್ರಾಮಕ್ಕೆ ವಿವಿಧ ದೇಶಗಳಿಂದ ಪಕ್ಷಿಗಳು ಗೂಡು ಕಟ್ಟಿಕೊಂಡು ಸಂತಾನೋತ್ಪತ್ತಿ ಮಾಡಲು…
ಪೌರಾಯುಕ್ತೆಗೆ ಬೆದರಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ FIR ರದ್ದು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯ ಆದೇಶ ಪ್ರಕಟ
ಬೆಂಗಳೂರು: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಾಗೆ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಅರ್ಜಿಯ ಆದೇಶವನ್ನು ನಾಳೆ ಹೈಕೋರ್ಟ್ ಪ್ರಕಟಿಸಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ದೂರವಾಣಿ ಕರೆ ಮಾಡಿ ಬ್ಯಾನರ್ ತೆರವು ವಿಚಾರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಪೌರಾಯುಕ್ತೆ ಅಮೃತಾ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ತನ್ನ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆ ಪ್ರಕಟಿಸಲಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/legislative-assembly-session-speech-do-you-know-what-minister-h-k-patil-said-after-meeting-the-governor/ https://kannadanewsnow.com/kannada/guidelines-issued-for-renewal-of-fc-non-marine-registration-of-vehicles-in-the-state-compliance-with-these-rules-is-mandatory/
ಬೆಂಗಳೂರು: ನಾಳೆಯಿಂದ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭಗೊಳ್ಳಲಿದೆ. ಸಂಪ್ರದಾಯದಂತೆ ವಿಧಾನಮಂಡಲದ ಜಂಟಿ ಅಧಿವೇಶವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೇ ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಹೆಗ್ಲೋಟ್ ನಿರಾಕರಿಸಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಈ ವಿಚಾರವಾಗಿ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದ ಭಾಷಣವನ್ನು ರಾಜ್ಯಪಾಲರು ಓದಬೇಕು. ಆರ್ಟಿಕಲ್ 161, 163ರ ಪ್ರಕಾರ ಭಾಷಣ ಓದಬೇಕು. ಕೇಂದ್ರದಿಂದ ಬರಬೇಕಾದ ಅನುದಾನದ ಬಗ್ಗೆ ಉಲ್ಲೇಖಿಸಿದ್ದೇವೆ ಎಂದರು. ಕೋರ್ಟ್ ಗೆ ಹೋಗಿ ಬರ ಪರಿಹಾರ, ನೆರೆ ಪರಿಹಾರ ಪಡೆದಿದ್ದೇವೆ. ಈ ವಿಚಾರ ಭಾಷಣದಲ್ಲಿ ಉಲ್ಲೇಖಿಸಿರುವುದಕ್ಕೆ ಆಕ್ಷೇಪಿಸಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೇ ಪ್ಯಾರಾಗಳನ್ನು ಕೈಬಿಡಬೇಕೆಂದು ಸಲಹೆ ನೀಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ನಡುವೆ ಸಂಬಂಧದ ಬಗ್ಗೆ ಅದರಲ್ಲಿ ಉಲ್ಲೇಖವಿದೆ ಎಂದರು. ಮನ್ ರೇಗಾ ಯೋಜನೆ ಮರುಸ್ಥಾಪನೆ ಬಗ್ಗೆ ಭಾಷಣದಲ್ಲಿ ಉಲ್ಲೇಖವಿದೆ. ಕೇಂದ್ರ ಸರ್ಕಾರ…














