Author: kannadanewsnow09

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಈ ಮೂರೂ ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಹೇಗೆ ಎನ್ನುವ ಚಿಂತನೆ ಇದೆ. ಆದರೆ, ಈ ಸಂಬಂಧ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಮುಖ್ಯಮಂತ್ರಿ ಜತೆ‌ ಸಭೆ ನಡೆಸಿದ ನಂತರ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು. ಬಿಜೆಪಿ ಸದಸ್ಯ ವೈ ಎಂ ಸತೀಶ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಮಂಗಳವಾರ ಉತ್ತರಿಸಿದರು. ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಆಲೋಚನೆ ಬಂದಿದ್ದು 2010ರಲ್ಲಿ. ಇದಕ್ಕಾಗಿ 900 ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಚೆನ್ನೈನ ಮೆ.ಮಾರ್ಗ್ ಶ್ರೀಕೃಷ್ಣದೇವರಾಯ ಏರ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ವಿಮಾನ ನಿಲ್ದಾಣ ನಿರ್ಮಿಸಲು ವಹಿಸಿ, ಭೂಮಿಯನ್ನು ಹಸ್ತಾಂತರಿಸಲಾಗಿತ್ತು. ಆದರೆ, ಆ ಸಂಸ್ಥೆಯು ನಿಯಮಾನುಸಾರ 2 ವರ್ಷವಾದರೂ ಕೆಲಸ ಶುರು ಮಾಡಲಿಲ್ಲ. ಹೀಗಾಗಿ, ಅದರೊಂದಿಗಿನ ಒಪ್ಪಂದ ರದ್ದಾಗಿದೆ. ಇದಾದ ಮೇಲೆ, ಯೋಜನೆಗೆ…

Read More

ಬೆಳಗಾವಿ: ಅಸಹಾಯಕ ಅಂಗವಿಕಲ ಹಾಗೂ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಫಾಸ್ಟ್‌ಟ್ರ್ಯಾಕ್ ಪೋಕ್ಸೋ ಕೋರ್ಟ್) 40 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 1.50 ಲಕ್ಷ ರೂಪಾಯಿ ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: ದಿನಾಂಕ 25-08-2025 ರಂದು ಹುಕ್ಕೇರಿ ತಾಲೂಕಿನ ಕರಜಗಾ ಗ್ರಾಮದ ನಿವಾಸಿ ಧರೇಪ್ಪ @ ಧೀರಜ ಅಂಗತ ಬಿನಸೆ (25 ವರ್ಷ) ಎಂಬಾತ, ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯ ಸಾಧಿಸಿ, ಪರಿಶಿಷ್ಟ ಜಾತಿಗೆ ಸೇರಿದ ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯನ್ನು ಎಳೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದನು. ಈ ಬಗ್ಗೆ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಕೇವಲ 4 ತಿಂಗಳಲ್ಲಿ ತೀರ್ಪು: ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಬೆಳಗಾವಿ ಡಿಸಿಆರ್‌ಇ ಪೊಲೀಸ್ ನಿರೀಕ್ಷಕರಾದ ಶ್ರೀ ಮಹಾಂತೇಶ ವಿ. ಹೊಸಪೇಟೆ ಅವರು ಕ್ಷಿಪ್ರವಾಗಿ ತನಿಖೆ ನಡೆಸಿ,…

Read More

ಕಲಬುರಗಿ: ಜಿಲ್ಲೆಯ ನಿರುದ್ಯೋಗಿ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಸಿಹಿ ಸುದ್ದಿ ನೀಡಿದೆ. ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿದೆ: ಹುದ್ದೆಗಳ ವಿವರ: ಅಂಗನವಾಡಿ ಕಾರ್ಯಕರ್ತೆಯರು: 89 ಹುದ್ದೆಗಳು ಅಂಗನವಾಡಿ ಸಹಾಯಕಿಯರು: 323 ಹುದ್ದೆಗಳು ಒಟ್ಟು ಹುದ್ದೆಗಳು: 412 ಶೈಕ್ಷಣಿಕ ಅರ್ಹತೆ: ಕಾರ್ಯಕರ್ತೆಯರ ಹುದ್ದೆಗೆ: ಕನಿಷ್ಠ ಪಿಯುಸಿ (PUC) ಉತ್ತೀರ್ಣರಾಗಿರಬೇಕು. ಸಹಾಯಕಿಯರ ಹುದ್ದೆಗೆ: 10ನೇ ತರಗತಿ (SSLC) ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karnemakaone.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವಾಗ ಇತ್ತೀಚಿನ ಭಾವಚಿತ್ರ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ ಮತ್ತು ಅಗತ್ಯ ಶೈಕ್ಷಣಿಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ: ಫೆಬ್ರವರಿ…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG) ತೀವ್ರ ಅಭಾವ ಸೃಷ್ಟಿಯಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು, ಕೂಡಲೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಹೋಟೆಲ್ ಉದ್ಯಮಕ್ಕೆ ಹೊಡೆತ ಪೆಟ್ರೋಲಿಯಂ ಸಚಿವಾಲಯವು ಗೃಹ ಬಳಕೆಯ ಎಲ್‌ಪಿಜಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ಭಾರಿ ಕುಸಿತ ಕಂಡಿದೆ. ಬೆಂಗಳೂರಿನ ಸಾವಿರಾರು ಹೋಟೆಲ್‌ಗಳು, ಮೆಸ್ಸುಗಳು ಮತ್ತು ಕೇಟರಿಂಗ್ ಘಟಕಗಳು ಸಿಲಿಂಡರ್ ಸಿಗದೆ ಪರದಾಡುತ್ತಿವೆ. “ಇದೇ ಪರಿಸ್ಥಿತಿ ಮುಂದುವರಿದರೆ ಹೋಟೆಲ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಬೇಕಾದ ಅನಿವಾರ್ಯತೆ ಎದುರಾಗಬಹುದು,” ಎಂದು ಸಿಎಂ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ಜನರ ಮೇಲೆ ಪರಿಣಾಮ ಬೆಂಗಳೂರು ನಗರದಲ್ಲಿ ನೆಲೆಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಹೊರಗಿನಿಂದ ಬಂದಿರುವ…

Read More

ನವದೆಹಲಿ: ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹಿತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜೆಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಅದರಿಂದ ಇರಾನಿನಲ್ಲಿ ನಮ್ಮ ದೇಶದ ಮೂರು ಹಡಗುಗಳಿಗೆ ಇರಾನ್ ಅವಕಾಶ ಕಲ್ಪಿಸಿದೆ. ಇದು ಮೋದಿ ಸರ್ಕಾರದ ಸಕಾರಾತ್ಮಕ ಪರಿಣಾಮವಾಗಿದೆ. ಆ ಕಾರಣದಿಂದ ಪೆಟ್ರೊಲ್ ಮತ್ತು ಡಿಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಈಗ ಎಲ್ ಪಿಜಿ ಸಮಸ್ಯೆ ಇದೆ. ಆ ಕಡೆಗೆ ಗಮನ ಹರಿಸಬೇಕು ಎಂದು ಹೇಳಿದರು. ಪ್ರತಿಪಕ್ಷದವರು ದೇಶದ ಯಾವುದೇ ಭಾಗದಲ್ಲಿ ಏನೇ ನಡೆದರೂ, ಎಲ್ಲಿಯೇ ನಾಯಿಯೆ ಕಡಿದರೂ ಅದಕ್ಕೆ ಮೋದಿಯವರಿಗೆ ಲಿಂಕ್ ಮಾಡುತ್ತಾರೆ. ಅವರ ಪರಿಸ್ಥಿತಿ ಅಷ್ಟು…

Read More

ಬೆಂಗಳೂರು : ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು ರೂಂ 71 ಲಕ್ಷ ಕೋಟಿ ವಹಿವಾಟು ನಡೆದಿದ್ದು, ರೂ 476.65 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಟಿ.ಶರವಣ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ರೂಂ 82 ಲಕ್ಷ ಕೋಟಿ ವಹಿವಾಟು ನಡೆದಿತ್ತು. ಈ ಅವಧಿಯಲ್ಲಿ ರೂ 498 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಪ್ರಮಾಣ ಇನ್ನು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ 170 ಎಪಿಎಂಸಿಗಳಿದ್ದು, ಅಂಗಡಿಗಳ ಹಂಚಿಕೆ ಪ್ರಕ್ರಿಯೆ ನಿರಂತರವಾಗಿರುತ್ತದೆ. 141 ಎಪಿಎಂಸಿಗಳಲ್ಲಿ ಅಂಗಡಿ ಹರಾಜು ಬಾಕಿ ಇದ್ದು, ಕ್ರಮ ಕೈಗೊಳ್ಳಲು ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ವಾಣಿಜ್ಯ ಸ್ವರೂಪದ ಚಿಕ್ಕ ಮಳಿಗೆಗಳನ್ನು 55 ತಿಂಗಳ ಹಂಚಿಕೆ ಅವಧಿ…

Read More

ಬೆಂಗಳೂರು : ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿಗಳಲ್ಲಿ ನೀರನ್ನು ಹರಿಸುವ ಮುನ್ನ ವೈಜ್ಞಾನಿಕ ಕ್ರಮಗಳ ಅನುಸಾರ ನೀರನ್ನು ಶುದ್ದೀಕರಿಸಲಾಗುತ್ತಿದೆ. ಈ ಯೋಜನೆಯ ಮೂಲಕ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸಲಾಗುತಿದೆ. ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲವನ್ನೂ ವೃದ್ಧಿಸಲಾಗುತ್ತಿದೆ. ಆದರೆ, ರಾಜಕೀಯ ಕಾರಣಗಳಿಗಾಗಿ ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಅಸಮಾಧಾನ ಹೊರಹಾಕಿದರು. ಮಂಗಳವಾರದ ವಿಧಾನಸಭೆಯಲ್ಲಿ ಶಾಸಕ ಸಮೃದ್ಧಿ.ವಿ.ಮಂಜುನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಣ್ಣ ನೀರಾವರಿ ಸಚಿವರಾದ ಭೋಸರಾಜು ಅವರ ಪರವಾಗಿ ಉತ್ತರ ನೀಡಿದ ಅವರು, “ಪದೇ ಪದೇ ತಪ್ಪು ಮಾಹಿತಿ ಹರಡಿ ಜನರಿಗೆ ಗೊಂದಲ ಉಂಟು ಮಾಡಬಾರದು. ಕೆ.ಸಿ ವ್ಯಾಲಿ ಹಾಗೂ ಹೆಚ್.ಎನ್ ವ್ಯಾಲಿ ನೀರಿನ ಗುಣ್ಣಮಟ್ಟದ ಬಗ್ಗೆ ಯಾವುದೇ ವೈಜ್ಞಾನಿಕ ಅಧ್ಯಯನ, ಆಧಾರ ಇಲ್ಲದೆ ಅನಗತ್ಯವಾಗಿ ಮಾತನಾಡುವುದರಿಂದ ಸಾರ್ವಜನಿಕ ಹಿತ ಸಾಧ್ಯವಿಲ್ಲ” ಎಂದು ಅಸಮಾಧಾನ ಹೊರಹಾಕಿದರು. 2006 ರಲ್ಲಿ ಅಂದಿನ ಸರ್ಕಾರ ಕೋಲಾರಕ್ಕೆ ಭದ್ರಾ ನದಿಯಿಂದ ನೀರು ಕೊಡುವುದಾಗಿ…

Read More

ಬೆಂಗಳೂರು: ರಾಜ್ಯದಲ್ಲಿ ಐಎಎಸ್ (IAS) ದರ್ಜೆಗೆ ಬಡ್ತಿ ಪಡೆದ ಸುಮಾರು 25 ಅಧಿಕಾರಿಗಳು ನಿಯಮಾನುಸಾರ ಪಡೆಯಬೇಕಾದ ಕಡ್ಡಾಯ ಪ್ರವೇಶ ತರಬೇತಿಯನ್ನು (Induction Training) ಇದುವರೆಗೆ ಪೂರೈಸದಿರುವ ಬಗ್ಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಕಳವಳ ವ್ಯಕ್ತವಾಗಿದೆ. ಈ ಗಂಭೀರ ವಿಷಯವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಅನುಮತಿ ಕೋರಿರುವ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು, ಇದು ಸಾರ್ವಜನಿಕ ಹಿತಾಸಕ್ತಿಯ ವಿಷಯವಾಗಿದ್ದು, ಸರ್ಕಾರ ತಕ್ಷಣವೇ ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. https://youtu.be/PoiGKhd3r6k ಸುದ್ದಿಯ ಮುಖ್ಯಾಂಶಗಳು: ನಿಯಮ ಉಲ್ಲಂಘನೆ: ಕರ್ನಾಟಕ ಆಡಳಿತ ಸೇವೆ (KAS) ಇಂದ ಐಎಎಸ್ ಕೆಡರ್ಗೆ ಬಡ್ತಿ ಪಡೆದ ಅಧಿಕಾರಿಗಳು, ಜವಾಬ್ದಾರಿ ವಹಿಸಿಕೊಳ್ಳುವ ಮೊದಲು ಕಡ್ಡಾಯವಾಗಿ ತರಬೇತಿ ಪಡೆಯಬೇಕು ಎಂಬ ನಿಯಮವಿದೆ. ಆದರೆ, ಸುಮಾರು 25 ಅಧಿಕಾರಿಗಳು ಈ ತರಬೇತಿಯನ್ನು ತಪ್ಪಿಸಿಕೊಂಡಿದ್ದಾರೆ ಎಂದು ರಮೇಶ್ ಬಾಬು ಪತ್ರದಲ್ಲಿ ತಿಳಿಸಿದ್ದಾರೆ. ತರಬೇತಿಯ ಅವಶ್ಯಕತೆ: ಕೇಂದ್ರ ಲೋಕಸೇವಾ ಆಯೋಗದ (UPSC) ಮೂಲಕ ನೇರವಾಗಿ ಆಯ್ಕೆಯಾದ ಅಧಿಕಾರಿಗಳು ಮಸ್ಸೂರಿಯಲ್ಲಿ ತರಬೇತಿ ಪಡೆಯುವಂತೆಯೇ,…

Read More

ಬೆಂಗಳೂರು: `ಸುಲಲಿತ ಕೈಗಾರಿಕಾ ಸಂಸ್ಕೃತಿ’ಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಸರಕಾರದ ಉನ್ನತ ಅಧಿಕಾರಿ ಮತ್ತು ಖಾಸಗಿ ಉದ್ಯಮಿಗಳನ್ನು ಒಳಗೊಂಡ ಜಂಟಿ ಸಮಾಲೋಚನಾ ಸಮಿತಿಯನ್ನು ರಚಿಸಲಾಗುವುದು. ಇದರಿಂದ ಕೈಗಾರಿಕಾ ರಂಗಕ್ಕೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆ ಮುಂತಾದವು ತ್ವರಿತವಾಗಿ ಪರಿಹಾರ ಕಾಣಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ರಾಜ್ಯ ಶಾಖೆಯ ವಾರ್ಷಿಕ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಕೈಗಾರಿಕಾ ವಲಯದಲ್ಲಿ ಕಂಡುಬರುವ ಸಮಸ್ಯೆಗಳಿಗೆ ಕ್ಷಿಪ್ರವಾಗಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಕೇರಳದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಉದ್ಯಮಿಗಳಿಬ್ಬರೂ ಇರುವ ವೇದಿಕೆ ಇದ್ದು, ಅದು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎನ್ನುವ ಸಂಗತಿಯನ್ನು ಸಿಐಐ ಪ್ರತಿನಿಧಿಗಳು ಗಮನಕ್ಕೆ ತಂದಿದ್ದಾರೆ. ಇದನ್ನು ನಮ್ಮಲ್ಲೂ ಅಳವಡಿಸಿಕೊಳ್ಳಲಾಗುವುದು. ಒಟ್ಟಿನಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಬೇಕಾದ ರಚನಾತ್ಮಕ ಕ್ರಮಗಳು ಎಲ್ಲೇ ಇದ್ದರೂ ಅವುಗಳನ್ನು ನಮ್ಮದನ್ನಾಗಿಸಿಕೊಳ್ಳಲು ಮುಕ್ತ ಮನಸ್ಸಿದೆ’ ಎಂದಿದ್ದಾರೆ.…

Read More

ತ್ರಿಷ್ಟಿಯನ್ನು ಆಚರಿಸಲು ಸಾಮಾನ್ಯವಾಗಿ ಬಾಗಿಲಲ್ಲಿ ನಿಂಬೆಹಣ್ಣನ್ನು ಎರಡು ಭಾಗಗಳಾಗಿ ಕತ್ತರಿಸಲಾಗುತ್ತದೆ. ಇದನ್ನು ಮಾಡುವವರು ಗಮನಿಸಬೇಕಾದ ಒಂದು ಪ್ರಮುಖ ಅಂಶವಿದೆ. ನೆರೆಹೊರೆಯಲ್ಲಿ ಕಾಣದಂತೆ ಅನೇಕ ಜನರು ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಸಾಲಿನಲ್ಲಿ ನಿಂಬೆಹಣ್ಣಿನಿಂದ ನೀವು ಏನು ಮಾಡಬಹುದು? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿದುಕೊಳ್ಳಲು ಹೊರಟಿದ್ದೇವೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಕಣ್ಣಿನ…

Read More