Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಟಾಟಾ ಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲದ ಗುಂಡೇನಹಳ್ಳಿ ಗೇಟ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಮನೆಗೆ ದಿನಸಿ ಖರೀದಿಸಿ ಬೈಕ್ ನಲ್ಲಿ ತಾಯಿ-ಮಗ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 45 ವರ್ಷದ ಶೈಲಜಾ, 26 ವರ್ಷದ ಪ್ರಜ್ವಲ್ ಸಾವನ್ನಪ್ಪಿದ್ದಾರೆ. ದಿನಸಿಯನ್ನು ಖರೀದಿಸಿ ಮನೆಗೆ ಡಿಯೋ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/ https://kannadanewsnow.com/kannada/fire-suspected-to-have-started-at-reddy-model-house-in-bellary-due-to-cigarette-spark-sp-information/
ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಬಳಿಕ ಮತ್ತೊಂದು ಘಟನೆ ಎನ್ನುವಂತೆ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ನಿನ್ನೆ ಬಿದ್ದಿತ್ತು. ಆದರೇ ಇದೊಂದು ಸಿಗರೇಟ್ ನಿಂದ ಬೆಂಕಿ ತಗುಲಿರುವಂತ ಶಂಕೆ ಇರುವುದಾಗಿ ಎಸ್ಪಿ ತಿಳಿಸಿದ್ದಾರೆ. ಅಲ್ಲದೇ ಈ ಸಂಬಂಧ 8 ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನಾ ಡಿ ಪನ್ನೇಕರ್ ಅವರು, ರೆಡ್ಡಿ ಮಾಡೆಲ್ ಹೌಸ್ ಗೆ ರೀಲ್ಸ್, ಪೋಟೋ ಶೂಟ್ ಗೆ ಹುಡುಗರು ಬಂದಿದ್ದರೆಂಬ ಮಾಹಿತಿ ಇದೆ. ಪೋಟೋ ಶೂಟ್ ಗೆ ಮನೆಯ ಮೊದಲ ಮಹಡಿಗೆ ಹೋಗಿದ್ರು. ಈ ವೇಳೆ ಸಿಗರೇಟ್ ಕಿಡಿಯಿಂದ ಮಾಡೆಲ್ ಗೆ ಬೆಂಕಿ ಬಿದ್ದಿರುವಂತ ಸಾಧ್ಯತೆ ಇದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು. ಬಳ್ಳಾರಿಯ ರೆಡ್ಡಿ ಮಾಡೆಲ್ ಹೌಸ್ ನಲ್ಲಿ ಸ್ಥಳ ಪರಿಶೀಲನೆ ವೇಳೆಯಲ್ಲಿ ಸಿಗರೇಟ್ ತುಂಡುಗಳು ಬಿದ್ದಿರುವುದು ಕಂಡು ಬಂದಿದೆ. ರೀಲ್ಸ್ ವೇಳೆ ಸಿಗರೇಟ್ ತಾಗಿ ಬೆಂಕಿ ಹೊತ್ತಿಕೊಂಡಿರಬಹುದು.…
ಬೆಂಗಳೂರು: ವಿಶೇಷ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ವಿವಾದದ ಬಳಿಕ, ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇರಿಸಿದೆ. ರಾಜ್ಯಪಾಲರ ಆಕ್ಷೇಪಕ್ಕೆ ಅವಕಾಶ ನೀಡದಂತೆ ಗಣರಾಜ್ಯೋತ್ಸವ ಭಾಷಣ ಸಿದ್ಧಪಡಿಸಿತ್ತು. ಇದನ್ನು ರಾಜ್ಯಪಾಲರ ಒಪ್ಪಿಗೆಯ ಮುದ್ರೆಗೆ ಕಳುಹಿಸಿ ಕೊಡಲಾಗಿತ್ತು. ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ. ಜನವರಿ.26, 2026ರ ಗಣರಾಜ್ಯೋತ್ಸವ ಸಂಬಂಧ ರಾಜ್ಯದ ಜನತೆ ಉದ್ದೇಶಿಸಿ ಭಾಷಣ ಮಾಡುವಂತ ಭಾಷಣವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ನಿನ್ನೆ ಲೋಕಭವನಕ್ಕೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಣರಾಜ್ಯೋತ್ಸವ ಭಾಷಣ ಪರಿಶೀಲಿಸಿದ್ದು, ಭಾಷಣ ಓದೋದಕ್ಕೆ ಓಕೆ ಮಾಡಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂಬುದಾಗಿ ಸರ್ಕಾರದ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಅಂದಹಾಗೇ ಜನವರಿ.26ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವಂತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿರುವಂತ ಗಣರಾಜ್ಯೋತ್ಸವದ ಭಾಷಣ ಮಾಡಲಿದ್ದಾರೆ. https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/ https://kannadanewsnow.com/kannada/friend-kills-siblings-over-financial-issues-three-arrested-by-honnavar-police/
ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಬಳಿಕ ಮತ್ತೊಂದು ಘಟನೆ ಎನ್ನುವಂತೆ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ನಿನ್ನೆ ಬಿದ್ದಿತ್ತು. ಆದರೇ ಇದೊಂದು ಸಿಗರೇಟ್ ನಿಂದ ಬೆಂಕಿ ತಗುಲಿರುವಂತ ಶಂಕೆ ಇರುವುದಾಗಿ ಎಸ್ಪಿ ತಿಳಿಸಿದ್ದಾರೆ. ಅಲ್ಲದೇ ಈ ಸಂಬಂಧ 8 ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನಾ ಡಿ ಪನ್ನೇಕರ್ ಅವರು, ರೆಡ್ಡಿ ಮಾಡೆಲ್ ಹೌಸ್ ಗೆ ರೀಲ್ಸ್, ಪೋಟೋ ಶೂಟ್ ಗೆ ಹುಡುಗರು ಬಂದಿದ್ದರೆಂಬ ಮಾಹಿತಿ ಇದೆ. ಪೋಟೋ ಶೂಟ್ ಗೆ ಮನೆಯ ಮೊದಲ ಮಹಡಿಗೆ ಹೋಗಿದ್ರು. ಈ ವೇಳೆ ಸಿಗರೇಟ್ ಕಿಡಿಯಿಂದ ಮಾಡೆಲ್ ಗೆ ಬೆಂಕಿ ಬಿದ್ದಿರುವಂತ ಸಾಧ್ಯತೆ ಇದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು. ಬಳ್ಳಾರಿಯ ರೆಡ್ಡಿ ಮಾಡೆಲ್ ಹೌಸ್ ನಲ್ಲಿ ಸ್ಥಳ ಪರಿಶೀಲನೆ ವೇಳೆಯಲ್ಲಿ ಸಿಗರೇಟ್ ತುಂಡುಗಳು ಬಿದ್ದಿರುವುದು ಕಂಡು ಬಂದಿದೆ. ರೀಲ್ಸ್ ವೇಳೆ ಸಿಗರೇಟ್ ತಾಗಿ ಬೆಂಕಿ ಹೊತ್ತಿಕೊಂಡಿರಬಹುದು.…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಘಟಕ–08, ಯಶವಂತಪುರದಲ್ಲಿ ದಿನಾಂಕ 24-01-2026 ರಂದು ರಾಷ್ಟ್ರೀಯ ಚಾಲಕರ ದಿನಾಚರಣೆಯನ್ನು ಸಂಸ್ಥೆಯ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಸಾರ್ವಜನಿಕ ಸಾರಿಗೆಯ ಪ್ರಮುಖ ಅಂಗವಾಗಿರುವ ಚಾಲಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾದ ವಿ.ಎಸ್. ಆರಾಧ್ಯ, ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಕೆ.ಬಿ., ಭಾ.ಆ.ಸೇ., ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ. ಪ್ರಭಾಕರ ರೆಡ್ಡಿ, ಹಾಗೂ ಉತ್ತರ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಎಸ್.ಆರ್. ರವರು ಉಪಸ್ಥಿತರಿದ್ದರು. ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್. ಆರಾಧ್ಯ ಅವರು, ಎಲ್ಲಾ ಚಾಲಕ ಮಿತ್ರರಿಗೆ ರಾಷ್ಟ್ರೀಯ ಚಾಲಕರ ದಿನಾಚರಣೆಯ ಶುಭಾಶಯಗಳನ್ನು ಸಲ್ಲಿಸಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಭಾರತದ ಇತಿಹಾಸದಲ್ಲಿಯೇ ಒಂದು ಮಾದರಿ ಮಹಾನಗರ ಸಾರಿಗೆ ಸಂಸ್ಥೆಯಾಗಿ ಗುರುತಿಸಿಕೊಂಡಿರುವುದು ಚಾಲಕರು ಹಾಗೂ ನಿರ್ವಾಹಕರ ಶಿಸ್ತು, ನಿಷ್ಠೆ ಮತ್ತು ಪ್ರಾಮಾಣಿಕ…
ಬೆಂಗಳೂರು: ನಗರದಲ್ಲಿ ಹಿಟ್ ಅಂಡ್ ರನ್ ಗೆ ಮತ್ತೊಂಬು ಬಲಿಯಾಗಿದೆ. ಬೆಂಗಳೂರಿನ ಕೆ ಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿಯಲ್ಲಿ ನಡೆದಂತ ಭೀಕರ ಅಪಘಾತದಲ್ಲಿ ಸ್ವಿಗ್ಗಿ ಡಿಲವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತನನ್ನ ನೇಪಾಳ ಮೂಲದ ಸುರೇಂದರ್ ಬಹದ್ದೂರ್(38) ಎಂಬುದಾಗಿ ತಿಳಿದು ಬಂದಿದೆ. ಸ್ವಿಗ್ಗಿಯಲ್ಲಿ ಸುರೇಂದರ್ ಬಹದ್ದೂರ್ ಕೆಲಸ ಮಾಡುತ್ತಿದ್ದರು. ಡೆಲಿವರಿ ಕೊಡಲು ಹೋಗುವಾಗ ಬೈಕ್ ಗೆ ಕಾರು ಡಿಕ್ಕಿಯಾಗಿ ಈ ಅಫಘಾತ ಸಂಭವಿಸಿದೆ. ಸ್ವಿಗ್ಗಿ ಆರ್ಡರ್ ತೆಗೆದುಕೊಂಡು ಕೊಡೋದಕ್ಕೆ ತೆರುವಾಗ ಕಾರೊಂದು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಸುರೇಂದರ್ ಬಹದ್ದೂರ್ ಸಾವನ್ನಪ್ಪಿದರೂ ಕಾರು ಚಾಲಕ ಪರಾರಿಯಾಗಿದ್ದಾನೆ. ಕಾರು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆ ಆರ್ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/there-are-10365-transgenders-in-the-state-gender-minority-survey-report/ https://kannadanewsnow.com/kannada/karnataka-sslc-preparatory-exam-2-schedule-announced/
ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸರು ಉತ್ತಮ ನಡೆಯನ್ನು ಸಾರ್ವಜನಿಕ ಜೀವನದಲ್ಲಿ ತೋರಬೇಕು. ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರಬಾರದು ಎಂಬುದಾಗಿ ಖಡಕ್ ಎಚ್ಚರಿಕೆಯ ಆದೇಶವನ್ನೇ ಮಾಡಿದೆ. ಹೀಗಿದ್ದರೂ ಇಲ್ಲೊಬ್ಬ ಪೊಲೀಸ್ ಪೇದೆ ಮಾತ್ರ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಗಲಾಕೊಂಡಿದ್ದಾನೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯ ಯಮನಾ ನಾಯಕ್ ಎಂಬಾತನೇ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತನಾಗಿರುವಂತ ಕಾನ್ ಸ್ಟೇಬಲ್ ಆಗಿದ್ದಾರೆ. ಇವರು ಕರ್ತವ್ಯದ ವೇಳೆಯಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಂದಹಾಗೇ ಆರ್.ಟಿ ನಗರ ಪೊಲೀಸ್ ಠಾಣೆಯ ಕಾನ್ಸ್ ಸ್ಟೇಬಲ್ ಯಮನಾ ನಾಯಕ್ ಅವರನ್ನು ಫ್ರೀಡಂ ಪಾರ್ಕ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೇದೆ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ಬಂಧಿಸಲಾಗಿದೆ. https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/
ತುಮಕೂರು: ರಾಜ್ಯದಲ್ಲೂ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡೋದಕ್ಕೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದರು. ಹೀಗಾಗಿ ತಮಿಳುನಾಡು ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸರ್ ಸರ್ಕಾರದ ಸಂಘರ್ಷ ಆರಂಭಗೊಂಡಿತ್ತು. ಈ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರಲಿದ್ದಾರೆ ಎಂಬುದಾಗಿ ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಸಂವಿಧಾನಿಕವನ್ನು ನನ್ನ ಕೈನಲ್ಲಿ ಓದಿಸಬೇಡಿ ಎಂಬುದಾಗಿ ರಾಜ್ಯಪಾಲರು ಈಗಾಗಲೇ ತೋರಿಸಿದ್ದಾರೆ. ಹೀಗಾಗಿ ಇನ್ನಾದರೂ ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಗೌರವಯುತವಾಗಿ ಕಾಣಬೇಕು. ಇಲ್ಲದೇ ಹೋದರೇ ರಾಜ್ಯಪಾಲರು ರಾಷ್ಟ್ರಪತಿ ಆಡಳಿತವನ್ನು ಕರ್ನಾಟಕದಲ್ಲಿ ಹೇರುತ್ತಾರೆ ಎಂಬುದಾಗಿ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ರಾಜ್ಯಪಾಲರಿಗೆ ಧಮ್ಕಿ ಹಾಕಿದ್ದಾರೆ. ಇವರ ಗೂಂಡಾ ವರ್ತನೆಯಿಂದಲೇ ರಾಜ್ಯಪಾಲರು ಸದನದಲ್ಲಿ ಭಾಷಣ ಮಾಡದೇ ಗಡಿಬಿಡಿಯಿಂದಲೇ ಹೋಗಿದ್ದಾರೆ. ಇವರು ಬೆದರಿಕೆ ಹಾಕಿದ್ದಕ್ಕೇ ಸದನದಿಂದ ಅವರು ಭಯದಿಂದ ಹೋಗಿದ್ದು ಎಂಬುದಾಗಿ ಕಿಡಿಕಾರಿದರು. https://kannadanewsnow.com/kannada/father-kills-4-year-old-daughter-for-not-doing-homework/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/
ಚಂಡೀಗಢ: ತನ್ನ ಮಗಳು ಶಾಲೆಯಲ್ಲಿ ಕೊಟ್ಟಂತ ಹೋಂ ವರ್ಕ್ ಮಾಡಿಲ್ಲ ಎನ್ನುವಕ ಕಾರಣಕ್ಕಾಗಿ, ತಂದೆಯೊಬ್ಬ ಹೊಡೆದು ಕೊಂದಿರುವಂತ ಶಾಕಿಂಗ್ ಘಟನೆ ಚಂಡೀಗಢದ ಫರೀದಾಬಾದ್ ನಲ್ಲಿ ನಡೆದಿದೆ. ಚಂಡೀಗಢದ ಸೋನ್ ಭದ್ರಾ ಜಿಲ್ಲೆಯ ಖೇರತಿಯಾ ಮೂಲದ ಗ್ರಾಮದ ಕೃಷ್ಣ ಜೈಸ್ವಾಲ್ ಹಾಗೂ ಪತ್ನಿ ಇಬ್ಬರೂ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬದೊಂದಿಗೆ ಫರೀದಾಬಾದ್ ನಲ್ಲಿ ವಾಸಿಸುತ್ತಿದ್ದರು. ಆರೋಪಿ ಕೃಷ್ಣ ಜೈಸ್ವಾಲ್ (31) ಎಂಬಾತನನ್ನು ಆತನ ಪತ್ನಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಉತ್ತರ ಪ್ರದೇಶದ ಸೋನ್ಭದ್ರಾದಿಂದ ಇತ್ತೀಚೆಗೆ ಸ್ಥಳಾಂತರಗೊಂಡಿದ್ದ ಝಡ್ಸೆಂಟ್ಲಿ ಪ್ರದೇಶದಲ್ಲಿರುವ ಕುಟುಂಬದ ಬಾಡಿಗೆ ಮನೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಜೈಸ್ವಾಲ್ ಪದೇ ಪದೇ ಬಾಲಕಿಯ ಮೇಲೆ ಹಲ್ಲೆ ನಡೆಸುತ್ತಿದ್ದನು ಮತ್ತು ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದನು, ಆಟವಾಡುವಾಗ ಅವಳು ಮೆಟ್ಟಿಲುಗಳಿಂದ ಕೆಳಗೆ ಬಿದ್ದಿದ್ದಾಳೆ ಎಂದು ಹೇಳಿಕೊಂಡಿದ್ದಾಳೆ. ಅಲ್ಲಿಗೆ ಬಂದ ಕೂಡಲೇ ವೈದ್ಯರು ಮಗು ಮೃತಪಟ್ಟಿದೆ ಎಂದು ಘೋಷಿಸಿದರು. ಆರೋಪಿ ಆರಂಭದಲ್ಲಿ ಇದೇ ಹೇಳಿಕೆಯನ್ನು ತನ್ನ ಪತ್ನಿ…
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಾಗೂ ಅವರ ಹಕ್ಕುಗಳ ರಕ್ಷಣೆಗಾಗಿ ಇರುವ ಕಾರ್ಯಕ್ರಮಗಳು, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿಗಾಗಿ ಮಾಡಬೇಕಿರುವ ಕೆಲಸಗಳ ಕುರಿತು ಶಿಫಾರಸ್ಸುಗಳು ಸಮೀಕ್ಷಾ ವರದಿಯಲ್ಲಿವೆ. ವಸತಿ ನಿಲಯಗಳಲ್ಲಿ ಆದ್ಯತೆಯ ಮೇರೆಗೆ ಲಿಂಗತ್ವ ಅಲ್ಪಸಂಖ್ಯಾತರನ್ನು ದಾಖಲಾತಿ ಮಾಡಿಕೊಳ್ಳಲು ಕ್ರಮವಹಿಸುವುದು, ಲಿಂಗತ್ವ ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಯೋಜನೆ ರೂಪಿಸುವುದು, ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಕೋಚಿಂಗ್ ನೀಡುವುದು, ಆರೋಗ್ಯ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ, ವಸತಿ ಮತ್ತು ಮೂಲಭೂತ ಸೌಕರ್ಯ, ಲಿಂಗತ್ವ ಅಲ್ಪಸಂಖ್ಯೆತರ ಕ್ಷೇಮಾಭಿವೃದ್ದಿ ಬೋರ್ಡ್ ಸ್ಥಾಪಿಸುವುದು, ಸಾಮಾಜಿಕ ವಿಷಯಗಳಿಗೆ ಹಾಗೂ ಹಾಲಿ ಇರುವ ಸರ್ಕಾರಿ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೆ (ಟ್ರಾನ್ಸ್ ಜೆಂಡರ್)…














