Author: kannadanewsnow09

ಧಾರವಾಡ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಸನ್ 2024-25 ನೇ ಸಾಲಿನಲ್ಲಿ ಭರ್ತಿಯಾಗಿ ಖಾಲಿ ಉಳಿದಿರುವ ಹುದ್ದೆಗಳು ಮತ್ತು ಸನ್ 2025-26 ನೇ ಸಾಲಿನ ಆರ್‍ಓಪಿ ಯಲ್ಲಿ ಅನುಮೋದನೆಯಾಗಿರುವ ಹುದ್ದೆಗಳಿಗೆ, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರು ರಾಷ್ಟ್ರೀಯ ಆರೋಗ್ಯ ಅಭಿಯಾನದ ಸುತ್ತೋಲೆ ಅನುಸಾರ ಕಂಪ್ಯೂಟರ್ ಸಾಕ್ಷರತೆ ಪರಿಕ್ಷೆಯಲ್ಲಿ ತೇರ್ಗಡೆಯಾದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಟ್ಟು 42 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿ, ಆಯ್ಕೆ ಪ್ರಕ್ರೀಯೆಯನ್ನು ಹಾಗೂ ಯೋಜನೆಯ ನಿಯಮಾನುಸಾರ ಮೇರಿಟ್ ಹಾಗೂ ರೊಷ್ಠರ್ ಆಧಾರದ ಮೇಲೆ ಮಾರ್ಚ್ 31, 2026 ವರೆಗೆ ಅಥವಾ ಸರ್ಕಾರದ ನಿಯಮಾವಳಿ ಸುತ್ತೋಲೆಯ ಪ್ರಕಾರ ಯಾವುದು ಮೊದಲು ಅದಕ್ಕೆ ಅನುಗುಣವಾಗಿ ವಿವಿಧ ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಡಿಸೆಂಬರ್ 02 ಮತ್ತು 03, 2025 ರಂದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿ, ಆಯ್ಕೆ ಪ್ರಕ್ರೀಯೆಯನ್ನು ಕೈಗೊಳ್ಳಲಾಗುವುದು. ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಮೂಲ ದಾಖಲಾತಿಗಳೊಂದಿಗೆ ಡಿಸೆಂಬರ್ 02 ಮತ್ತು 03, 2025…

Read More

ಬೆಳಗಾವಿ: ನಿನ್ನೆ ಕಲಬುರ್ಗಿಯ ಜೇವರ್ಗಿ ಬಳಿಯಲ್ಲಿ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದರು. ಅವರೊಂದಿಗೆ ಅವರ ಸಹೋದರರು ಸಾವನ್ನಪ್ಪಿದ್ದರು. ಪೊಲೀಸ್ ಗೌರವಗಳೊಂದಿಗೆ ಮಹಾಂತೇಶ್ ಬೀಳಗಿ ಅವರನ್ನು ರಾಮದುರ್ಗದ ಬಳಿ ಇರುವಂತ ಜಮೀನಿನಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಬೆಳಗಾವಿ ಜಿಲ್ಲಯೆ ರಾಮದುರ್ಗದಲ್ಲಿ ಇರುವಂತ ಜಮೀನಿನಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ನಾಲ್ವರನ್ನು ಏಕಕಾಲಕ್ಕೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಹಾಂತೇಶ್ ಬೀಳಗಿ, ಸಹೋದರರಾದ ಶಂಕರ್, ಈರಣ್ಣ, ಸ್ನೇಹಿತ ಈರಣ್ಣ ಶರಸಂಗಿ ಅಂತ್ಯಕ್ರಿಯೆಯನ್ನು ಮಾಡಲಾಯಿತು.

Read More

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಕೆ ಎಸ್ ಸಿ ಎ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಲ್ಲಿ ಕೆಎನ್ ಶಾಂತಾಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಅವಿರೋಧವಾಗಿ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಾಳೆಯವರೆಗೆ ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಆದೇಶಿಸಿದೆ. ಕೆ ಎಸ್ ಸಿ ಎ ಅಧ್ಯಕ್ಷ ಚುನಾವಣೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಕೆ.ಎನ್ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯಲ್ಲಿ ಚುನಾವಣಾಧಿಕಾರಿ ಆದೇಶ ರದ್ದುಪಡಿಸುವಂತೆ ಕೋರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ನಾಳೆಯವರೆಗೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಸೂಚಿಸಿದೆ. ಇದಲ್ಲದೇ ನಾಮಪತ್ರ ಪರಿಶೀಲನೆ ವೇಳೆಗೆ ಚಂದಾ ಹಣ ಪಾವತಿಸಲಾಗಿತ್ತೇ? ಇದರ ಮಾಹಿತಿಯನ್ನು ಚುನಾವಣಾಧಿಕಾರಿಗಳಿಗಿತ್ತೇ ತಿಳಿಸಬೇಕು ಎಂದು ಹೇಳಿ ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದೆ. ಪ್ರತಿವಾದಿ ಬಿಕೆ ವೆಂಕಟೇಶ್ ಪ್ರಸಾದ್, ಕೆ ಎಸ್ ಸಿ ಎ ಚುನಾವಣಾಧಿಕಾರಿ ಕಲ್ಪನಾ…

Read More

ಮೈಸೂರು: ನೈರುತ್ಯ ರೈಲ್ವೆ, ಮೈಸೂರು ವಿಭಾಗದಲ್ಲಿ ಇಂದು ಸಂವಿಧಾನ ದಿನವನ್ನು ಗೌರವಪೂರ್ಣ ಹಾಗೂ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ನಿರ್ವಾಹಕರಾದ ಶಮ್ಮಾಸ್ ಹಮೀದ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಇಂಗ್ಲಿಷ್ ನಲ್ಲಿ ಪಠಿಸಿದರು, ಕನ್ನಡದಲ್ಲಿ ಲೋಹಿತೇಶ್ವರ, ಹಿರಿಯ ವಾಣಿಜ್ಯ ವ್ಯವಸ್ಥಾಪಕರು ಇವರು ಪಠಿಸಿದರು. ರಾಷ್ಟ್ರದ ಸಂವಿಧಾನದಲ್ಲಿ ಅಳವಡಿಸಿರುವ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಆದರ್ಶಗಳಿಗೆ ಮರುನಿಷ್ಠೆಯನ್ನು ವ್ಯಕ್ತಪಡಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಮ್ಮಾಸ್ ಹಮೀದ್ ಅವರು, ರಾಷ್ಟ್ರದ ಪ್ರಗತಿಗೆ ಮಾರ್ಗದರ್ಶಕವಾಗಿರುವ ಪ್ರಸ್ತಾವನೆಯ ಮಹತ್ವವನ್ನು ಒತ್ತಿ ಹೇಳಿದರು. ಸಂವಿಧಾನಾತ್ಮಕ ತತ್ವಗಳನ್ನು ನಿತ್ಯಕೃತ್ಯಗಳಲ್ಲಿ ಕಾಪಾಡುವ ಜವಾಬ್ದಾರಿ ಎಲ್ಲ ನೌಕರರ ಮೇಲಿದೆ ಎಂದು ಅವರು ನೆನಪಿಸಿದರು. ದೇಶ ನಿರ್ಮಾಣದಲ್ಲಿ ನಿಷ್ಠೆ, ಪಾರದರ್ಶಕತೆ ಮತ್ತು ಏಕತೆಯೊಂದಿಗೆ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. https://kannadanewsnow.com/kannada/work-to-establish-7-gttcs-in-the-state-will-begin-soon-cm-siddaramaiah/ https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/

Read More

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ 7 ಜಿಟಿಟಿಸಿ ಸ್ಥಾಪನೆ ಕಾಮಗಾರಿಯನ್ನು ಆರಂಭಿಸಲಾಗುತ್ತೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 32 ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ ಹೊಸದಾಗಿ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುವುದು. ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1993633374502896037 https://kannadanewsnow.com/kannada/rajshree-and-kamal-pasand-owners-daughter-in-law-dies-by-suicide/ https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/

Read More

ನವದೆಹಲಿ: ಕಮಲಾ ಪಸಂದ್ ಮತ್ತು ರಾಜಶ್ರೀ ಬ್ರ್ಯಾಂಡ್‌ಗಳ ಹಿಂದಿನ ವ್ಯಕ್ತಿ, ಪಾನ್ ಮಸಾಲಾ ದೊರೆ ಕಮಲ್ ಕಿಶೋರ್ ಚೌರಾಸಿಯಾ ಅವರ ಸೊಸೆ, ದಕ್ಷಿಣ ದೆಹಲಿಯ ಐಷಾರಾಮಿ ವಸಂತ ವಿಹಾರ್‌ನಲ್ಲಿರುವ ಕುಟುಂಬದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಮಲ್ ಕಿಶೋರ್ ಅವರ ಮಗ ಅರ್ಪಿತ್ ಅವರನ್ನು ವಿವಾಹವಾಗಿದ್ದ ದೀಪ್ತಿ ಚೌರಾಸಿಯಾ (40) ನಿನ್ನೆ ಮಧ್ಯಾಹ್ನ ಕುಟುಂಬದ ಐಷಾರಾಮಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ, ಅವರು ದುಪಟ್ಟಾ ಬಳಸಿ ನೇಣು ಬಿಗಿದುಕೊಂಡಿದ್ದಾರೆ. ವರದಿಗಳ ಪ್ರಕಾರ, ಅವರ ಕೋಣೆಯಲ್ಲಿ ಕಂಡುಬಂದ ಒಂದು ಟಿಪ್ಪಣಿಯಲ್ಲಿ ಅವರು ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಲಾಗಿದೆ. ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆ ಇಲ್ಲದಿದ್ದರೆ, ಜೀವನದ ಅರ್ಥವೇನು?” ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಕೌಟುಂಬಿಕ ಸಮಸ್ಯೆಗಳು ದೀಪ್ತಿಯನ್ನು ಅಂಚಿಗೆ ತಳ್ಳಿವೆ ಎಂದು ಪೊಲೀಸರು ಶಂಕಿಸಿದ್ದಾರೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ. ದೀಪ್ತಿ ಮತ್ತು ಅರ್ಪಿತ್ 2010 ರಲ್ಲಿ ವಿವಾಹವಾದರು, ಮತ್ತು ದಂಪತಿಗೆ 14…

Read More

ಬೆಂಗಳೂರು: ಕೆಸೆಟ್ ಪರೀಕ್ಷೆ 2025 ಅನ್ನು ಪಾಸ್ ಮಾಡಿರುವಂತ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡುವ ಕುರಿತಂತೆ ಮಹತ್ವದ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಡಿದೆ. ಅದೇನು ಅಂತ ಮುಂದೆ ಓದಿ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್‌-2025) ಅರ್ಹತಾ ಪರೀಕ್ಷೆಗೆ ಪ್ರಾಧಿಕಾರವು ದಿನಾಂಕ: 22.08.2025 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿಯನ್ನು ದಿನಾಂಕ: 24.09.2025 ರವರೆಗೆ ಸ್ವೀಕರಿಸಲಾಗಿರುತ್ತದೆ. ಈ ಮಧ್ಯೆ ಸರ್ಕಾರವು ದಿನಾಂಕ 25.08.2025 ರಂದು ಆದೇಶ ಹೊರಡಿಸಿ ಪರಿಶಿಷ್ಟ ಜಾತಿಯಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ ಸಿ ಎಂದು ವರ್ಗೀಕರಿಸಿ ಆದೇಶಿಸಲಾಗಿರುತ್ತದೆ ಹಾಗೂ ಶಿಕ್ಷಣ & ಉದ್ಯೋಗದಲ್ಲಿ ಅಳವಡಿಸಿಕೊಳ್ಳಲು ತಿಳಿಸಲಾಗಿರುತ್ತದೆ. ಅದರಂತೆ ಪ.ಜಾತಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ (ಪ.ಜಾತಿ ಪ್ರಮಾಣ ಪತ್ರದ RD ಸಂಖ್ಯೆ ನಮೂದಿಸಿರುತ್ತಾರೆ (ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ನಮೂದಿಸದ) ಮತ್ತು ಆನ್‌ಲೈನ್ ಮೂಲಕ ಸದರಿ ಪ್ರಮಾಣ ಪತ್ರವನ್ನು ಪರಿಶೀಲಿಸಲಾಗಿರುತ್ತದೆ) ಸರ್ಕಾರದ ಆದೇಶ ಸಂಖ್ಯೆ: ಸಕಇ/8/ಎಸ್ಎಲ್ಪಿ/2024 ದಿನಾಂಕ 25.08.2025…

Read More

ಲಂಡನ್: ರಾಜ್ಯಕ್ಕೆ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ ಮುಂತಾದ ದಿಗ್ಗಜ ಕಂಪನಿಗಳೊಂದಿಗೆ ಎರಡನೆಯ ದಿನವಾದ ಮಂಗಳವಾರ ಮಾತುಕತೆ ನಡೆಸಿ, ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಇಲ್ಲಿನ ಫೋರ್ ಸೀಸನ್ ಹೋಟೆಲಿನಲ್ಲಿ ಮಾತುಕತೆ ನಡೆಸಿರುವ ಅವರು, ಡ್ರೋನ್ ಮತ್ತು ಮುಂದಿನ ತಲೆಮಾರಿನ ವಿಮಾನಗಳಿಗೆ ಬೇಕಾಗುವ ಅಧಿಕ ಸಾಮರ್ಥ್ಯದ ಎಲೆಕ್ಟ್ರಿಕ್ ಜೆಟ್ ಮತ್ತು ಡಕ್ಟೆಡ್-ಫ್ಯಾನ್ ಪ್ರೊಪಲ್ಶನ್ ತಯಾರಿಕೆಗೆ ಹೆಸರಾಗಿರುವ ಗ್ರೀನ್ ಜೆಟ್ಸ್ ಕಂಪನಿಯು ಬೆಂಗಳೂರಿಗೆ ಸಮೀಪವಿರುವ ಜಾಗದಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದೆ. ನಾವು ಕೂಡ ಆದ್ಯತೆಯ ಮೇಲೆ ಭೂಮಿ ಒದಗಿಸುವ ಭರವಸೆ ನೀಡಿದ್ದೇವೆ ಎಂದಿದ್ದಾರೆ. ಫಿಡೋ ಎಐ ಕಂಪನಿ ಕೂಡ ಕರ್ನಾಟಕದಲ್ಲಿ ತನ್ನದೊಂದು ತಯಾರಿಕಾ ಘಟಕ ಆರಂಭಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಅದರ ಉನ್ನತಾಧಿಕಾರಿಗಳು ತಿಳಿಸಿದ್ದಾರೆ. ವಿನ್ಯಾಸಕ್ಕೆ ಹೆಚ್ಚಿನ ಮಹತ್ತ್ವವಿರುವ ಸ್ಮಾರ್ಟ್…

Read More

ದಾವಣಗೆರೆ: ನ್ಯಾಯಾಲಯದ ತೀರ್ಪಿನ ಬಗ್ಗೆ ನಾನು ಮಾತನಾಡುವುದಿಲ್ಲ. ಸೂಕ್ತ ಸಮಯದಲ್ಲಿ ನಾನು ಎಲ್ಲಾ ಮಾತನಾಡುತ್ತೇನೆ. ನಿಮ್ಮನ್ನು ಕೆರೆದು ಮಾತನಾಡುವುದಾಗಿ ಪೋಕ್ಸೋ ಕೇಸಲ್ಲಿ ನಿರ್ದೋಷಿ ತೀರ್ಪು ಬಂದ ಬಳಿಕ ಮುರುಘಾ ಶರಣರು ಮೊದಲ ಪ್ರತಿಕ್ರಿಯೆ ನೀಡಿದರು. ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ: ವಕೀಲ ಕೆಬಿಕೆ ಸ್ವಾಮಿ ಮೊದಲ ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಕೋರ್ಟ್ ನಿರ್ದೋಷಿ ಎಂಬುದಾಗಿ ತೀರ್ಪು ನೀಡಿದೆ. ಹೀಗಾಗಿ ಶಿವಮೂರ್ತಿ ಮುರುಘಾ ಶರಣರು ನಿರಾಳರಾಗಿದ್ದಾರೆ ಎಂಬುದಾಗಿ ಮುರುಘಾ ಶ್ರೀ ಪರ ವಕೀಲ ಕೆಬಿಕೆ ಸ್ವಾಮಿ ತಿಳಿಸಿದ್ದಾರೆ. ಕೋರ್ಟ್ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುರುಘಾ ಶರಣರು, ಮತ್ತಿಬ್ಬರು ಆರೋಪಿಗಳಿಗೆ ಕೋರ್ಟ್ ಪೋಕ್ಸೋ ಕೇಸಲ್ಲಿ ಖುಲಾಸೆಗೊಳಿಸಿದೆ. ಮುಂದಿನ ದಿನಗಳಲ್ಲಿ ಮುರುಘಾ ಮಠಕ್ಕೆ ಒಳ್ಳೆಯದನ್ನು ತರಲಿ. ಮುರುಘಾ ಶ್ರೀಗಳು ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. ನಾಳೆ ಶ್ರೀಗಳಿಗೆ ಮತ್ತೊಂದು ತಪಾಸಣೆ ಇದೆ ಎಂದರು. ಮುರುಘಾ ಶರಣರಿಗೆ ನಿರ್ಬಂಧ ವಿಚಾರವಾಗಿ ಈಗ ಪ್ರತಿಕ್ರಿಯಿಸಲ್ಲ ಎಂದು ಹೇಳಿದರು. ಅಂದಹಾಗೇ ಶಿವಮೂರ್ತಿ ಮುರುಘಾ…

Read More

ಚನ್ನರಾಯಪಟ್ಟಣ: ದಶಕಗಳ ಹೋರಾಟದ ಪರಿಣಾಮವಾಗಿ ಚನ್ನರಾಯಪಟ್ಟಣ ತಾಲೂಕು ಸುರಂಗ ಸಂತ್ರಸ್ತ ಹಳ್ಳಿಗಳಾದ ತಗಡೂರು-ಲಕ್ಕರಸನಹಳ್ಳಿ ಕೆರೆಗೆ ಹೇಮಾವತಿ ನೀರು ಹರಿದಿದ್ದು, ಸಣ್ಣ ಕೆರೆ ಮತ್ತು ದೊಡ್ಡ ಕೆರೆಗಳೆರಡು ಕೋಡಿಬಿದ್ದಿವೆ. ತುಂಬಿದ ಎರಡೂ ಕೆರೆಗಳಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಎರಡೂ ಗ್ರಾಮಸ್ಥರ ಜೊತೆಯಲ್ಲಿ ಬಾಗೀನ ಅರ್ಪಿಸಿದರು. ಈ‌ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎನ್.ಬಾಲಕೃಷ್ಣ ಅವರು, ನಾನು ಜಿಪಂ ಸದಸ್ಯ ಆಗಿದ್ದ ಸಂದರ್ಭದಲ್ಲಿಯೂ ಬಾಗೂರು-ನವಿಲೆ ಹೋರಾಟ ನಡೆದಿತ್ತು. ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಅಂದು‌ ನಡೆದ ಹೋರಾಟದ ಪರಿಣಾಮವಾಗಿ ಏತನೀರಾವರಿ ಯೋಜನೆಗಳು ರೂಪುಗೊಂಡವು. ಅದನ್ನು ಶಾಸಕನಾಗಿ ಅನುಷ್ಠಾನ ಮಾಡಿ ನೀರು ಹರಿಸಿದ ಹೆಗ್ಗಳಿಕೆ ನನ್ನ ಪಾಲಿನದ್ದು ಎಂದು ಹೇಳಿದರು. ನವಿಲೆ ಏತನೀರಾವರಿ ಮೂಲಕ ತಗಡೂರು‌ ಕೆರೆಗೆ ನೀರು ಹರಿಸಲು ಹಲವು ಅಡ್ಡಿ ಆತಂಕಗಳು ಎದುರಾದವು. ಅವುಗಳನ್ನು ನಿವಾರಿಸಿ ಸಮಸ್ಯೆ ಬಗೆಹರಿಸಲಾಯಿತು ಎಂದು ಹೇಳಿದರು. ನಿಮ್ಮೂರಿನ ಪುತ್ರನಾದ ಶಿವಾನಂದ ತಗಡೂರು ಅವರು ವಿಧಾನ ಸೌಧದಲ್ಲಿ ನಮಗೊಂದು…

Read More