Author: kannadanewsnow09

ಬೆಂಗಳೂರು : ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ” ಎಂದು ತಿರುಗೇಟು ನೀಡಿದರು.

Read More

ಬೆಂಗಳೂರು : ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ ಗೊಂದಲ ಇರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಗೋವಿಂದರಾಜ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಕಾರ್ಪೊರೇಟರ್ ಗೋವಿಂದರಾಜ್ ಹಾಗೂ ಅವರ ಧರ್ಮಪತ್ನಿ ಗೌರಮ್ಮ, ಚಂದ್ರಶೇಖರ್, ಜೆಡಿಎಸ್ ಅಧ್ಯಕ್ಷರಾಗಿದ್ದ ಡೇವಿಡ್ ಸೇರಿದಂತೆ ನೂರಾರು ಮುಖಂಡರನ್ನು ಸ್ವಾಗತಿಸುತ್ತೇನೆ. ಗೋವಿಂದರಾಜು ಅವರು ಕುಟುಂಬ ಸ್ನೇಹಿತರು, ನನಗೆ ಮೊದಲಿನಿಂದಲೂ ಪರಿಚಯಸ್ಥರು. ಅವರು ಜೆಡಿಎಸ್ ಪಕ್ಷ ಸಂಘಟಿಸಿ ಅಭ್ಯರ್ಥಿಯೂ ಆಗಿದ್ದರು. ಆದರೆ ಈಗ ಬಿಜೆಪಿ ಹಾಗೂ ಜೆಡಿಎಸ್ ಮಾಡಿಕೊಂಡಿರುವ ಹೊಂದಾಣಿಕೆ…

Read More

ಚಿತ್ರದುರ್ಗ: ತನಗೆ ಮದುವೆ ಮಾಡಲಿಲ್ಲವೆಂದು ತಂದೆಯೊಂದಿಗೆ ದಿನವೂ ಪುತ್ರನೊಬ್ಬ ಜಗಳ ಮಾಡುತ್ತಿದ್ದನಂತೆ. ಈ ವಿಚಾರವಾಗಿ ಅಣ್ಣ, ಅಕ್ಕ, ತಾಯಿ, ಕುಟುಂಬಸ್ಥರು ಎಷ್ಟೇ ಬುದ್ದಿವಾದ ಹೇಳಿದರೂ ಜಗಳ ಮಾತ್ರ ನಿಲ್ಲಿಸಿಲ್ಲ. ಇದೇ ವಿಚಾರಕ್ಕೆ ಸಿಟ್ಟಾಗಿದ್ದ ಪುತ್ರನೊಬ್ಬ ತಂದೆ ಮಲಗಿದ್ದ ವೇಳೆ ರಾಡ್ ನಿಂದ ತಲೆಗೆ ಹೊಡೆದು ಹತ್ಯೆಗೈದಿರುವಂತ ಘಟನೆ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮದ ಸಣ್ಣನಿಂಗಪ್ಪ ಎಂಬುವರೇ ಪುತ್ರ ನಿಂಗರಾಜನಿಂದ ಹತ್ಯೆಯಾದಂತ ತಂದೆಯಾಗಿದ್ದಾರೆ. ಮೃತ ಸಣ್ಣನಿಂಗಪ್ಪನಿಗೆ ಮೂವರು ಮಕ್ಕಳು. ಹಿರಿಯ ಮಗ ಮಾರುತಿಯಾಗಿದ್ದರೇ, ಎರಡನೇ ಮಗ ನಿಂಗರಾಜ, ಕಿರಿಯ ಮಗಳು ಜ್ಯೋತಿ. ಮಾರುತಿ ಹಾಗೂ ಜ್ಯೋತಿಗೆ ಮದುವೆಯಾಗಿತ್ತು. ಎರಡನೇ ಮಗ ನಿಂಗರಾಜ ಮದುವೆ ಆಗಿರಲಿಲ್ಲ. ನಿನ್ನೆ ನಿಂಗರಾಜ ಮದುವೆ ಮಾಡದ ವಿಚಾರಕ್ಕೆ ತಂದೆ ಸಣ್ಣ ನಿಂಗಪ್ಪ ಜೊತೆಗೆ ಜಗಳ ಮಾಡಿದ್ದಾನೆ. ಈ ವೇಳೆ ಹೊಸದುರ್ಗದಲ್ಲಿ ಇದ್ದಂತ ಹಿರಿಯ ಮಗ ಮಾರುತಿಯನ್ನು ಮನೆಗೆ ಕರೆದು ಬುದ್ದಿ ಹೇಳಿಸಿದ್ದಾರೆ. ಆಗ ಸುಮ್ಮನೇ ಆಗಿದ್ದಂತ ನಿಂಗರಾಜ, 11 ಗಂಟೆಯ…

Read More

ಬೆಂಗಳೂರು: ಬಳ್ಳಾರಿ ಘಟನೆಯ ಪ್ರಕರಣದ‌ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮಾರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ‌. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದು ಹೇಳಿದರು‌. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು. ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು…

Read More

ನವದೆಹಲಿ : 2027 ರ ಜನಗಣತಿಯ ಮೊದಲ ಹಂತ – ಮನೆ ಪಟ್ಟಿ ಕಾರ್ಯಾಚರಣೆಗಳು – ಈ ವರ್ಷ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವು ನಿರ್ದಿಷ್ಟಪಡಿಸಿದ 30 ದಿನಗಳ ಅವಧಿಯಲ್ಲಿ ನಡೆಯಲಿದೆ ಎಂದು ಸರ್ಕಾರಿ ಅಧಿಸೂಚನೆ ಬುಧವಾರ ತಿಳಿಸಿದೆ. 30 ದಿನಗಳ ಮನೆ ಪಟ್ಟಿ ಕಾರ್ಯಾಚರಣೆಗಳು ಪ್ರಾರಂಭವಾಗುವ ಮೊದಲು 15 ದಿನಗಳ ಅವಧಿಯಲ್ಲಿ ಸ್ವಯಂ ಎಣಿಕೆ ಮಾಡುವ ಆಯ್ಕೆಯೂ ಇರುತ್ತದೆ ಎಂದು ಗೃಹ ಸಚಿವಾಲಯ (ಎಂಎಚ್‌ಎ) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. 2021 ರಲ್ಲಿ ನಡೆಯಬೇಕಿದ್ದ ದಶಕದ ವ್ಯಾಯಾಮವನ್ನು COVID-19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಯಿತು. ದೇಶದ ಜನಸಂಖ್ಯೆಯ ಸಂಖ್ಯೆಯನ್ನು ನೀಡುವ ಬೃಹತ್ ವ್ಯಾಯಾಮವನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು – ಮನೆ ಪಟ್ಟಿ ಮತ್ತು ವಸತಿ ಜನಗಣತಿ ಏಪ್ರಿಲ್ ನಿಂದ ಸೆಪ್ಟೆಂಬರ್, 2026 ರವರೆಗೆ; ಮತ್ತು ಫೆಬ್ರವರಿ 2027 ರಲ್ಲಿ ಜನಸಂಖ್ಯಾ ಎಣಿಕೆ (PE). ಮನೆಪಟ್ಟಿ ಮತ್ತು…

Read More

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದಾರೆ. ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದಾರೆ. ಈ ಪತ್ರದ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ವಹಿಸುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ…

Read More

ನವದೆಹಲಿ: ಏಪ್ರಿಲ್.1, 2026ರಿಂದ 2027ರ ಜನಗಣತಿಯ ಆರಂಭದ ಭಾಗವಾಗಿ ಮನೆಗಳ ಪಟ್ಟಿ ಮಾಡುವಿಕೆ ಶುರುವಾಗಲಿದೆ ಎಂಬುದಾಗಿ ಕೇಂದ್ರ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ. ಈ ಕುರಿತಂತೆ ಕೇಂದ್ರ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, 2027 ರ ಭಾರತದ ಜನಗಣತಿಯ ಹಂತ I ಅಂದರೆ ಮನೆಪಟ್ಟಿ ಮತ್ತು ವಸತಿ ಗಣತಿ (HLO) ಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮನೆಪಟ್ಟಿ ಕಾರ್ಯಾಚರಣೆಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1 ಏಪ್ರಿಲ್ 2026 ರಿಂದ 30 ಸೆಪ್ಟೆಂಬರ್ 2026 ರವರೆಗೆ, ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶವು ನಿರ್ದಿಷ್ಟಪಡಿಸಿದ 30 ದಿನಗಳ ಅವಧಿಯಲ್ಲಿ ನಡೆಸಲಾಗುವುದು ಎಂದಿದೆ. ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶವು ಸೂಚಿಸಿದ ವೇಳಾಪಟ್ಟಿಯ ಪ್ರಕಾರ, ಮನೆ-ಮನೆಗೆ ಮನೆಪಟ್ಟಿ ಪ್ರಾರಂಭವಾಗುವ ಮೊದಲು 15 ದಿನಗಳ ಅವಧಿಗೆ ಸ್ವಯಂ-ಗಣತಿಗೆ ಅವಕಾಶ ಲಭ್ಯವಿರುತ್ತದೆ ಎಂದು ಹೇಳಿದೆ. https://twitter.com/CensusIndia2027/status/2008901659741782526

Read More

ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್, ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಬಾಬು, ಮುನಿಯಪ್ಪ ಮೊದಲಾದ ಕಾನೂನು ತಜ್ಞರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿತ್ತು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಸಂಸದ ಅಭಿಷೇಕ್ ಮನು ಸಿಂಘ್ವಿ ಹಾಗೂ ಸಲ್ಮಾನ್ ಖುರ್ಷಿದ್ ಅವರು ಕರ್ನಾಟಕದ ಈ ನಾಯಕರ ಜೊತೆ ಇಡೀ ದಿನ ಸರಣಿ ಸಭೆಗಳನ್ನು ನಡೆಸಿದರು. ದೇಶದ ಎಲ್ಲೆಡೆ ಕಾನೂನು ಘಟಕಗಳನ್ನು ಬಲಗೊಳಿಸಬೇಕು,…

Read More

ಬೆಂಗಳೂರು: ಕುಡಿಯುವ ನೀರಿನ ಮಾಲಿನ್ಯವನ್ನು ಸರಬರಾಜಿಗೂ ಮುನ್ನ ಪತ್ತೆಹಚ್ಚಲು, ಜೈವಿಕ ಮೇಲ್ವಿಚಾರಣೆಯ ಮೇಲೆ ಕೇಂದ್ರೀಕರಿಸಿದ ಸುಧಾರಿತ ನೀರಿನ ತಂತ್ರಜ್ಞಾನ ಪರಿಹಾರಗಳ ಮೇಲೆ ಕೆಲಸ ಮಾಡುವ ಸಿಂಗಾಪುರ ಮೂಲದ (ಜ್ವೆಕ್) ZWEEC ತಂಡವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು. ನೀರಿನ ಸುರಕ್ಷತೆ ಮತ್ತು ಪರಿಸರ ಮೇಲ್ವಿಚಾರಣೆಯನ್ನು ಬಲಪಡಿಸಲು ಸ್ವಯಂಚಾಲಿತ ಮತ್ತು ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಬಳಸುವುದರ ಮೇಲೆ ಈ ವಿಧಾನವು ಕೇಂದ್ರೀಕರಿಸುತ್ತದೆ. ಕರ್ನಾಟಕದ ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಗೆ ಸಿಂಗಾಪುರ ತಂತ್ರಜ್ಞಾನ ಹೇಗೆ ಪ್ರಸ್ತುತವಾಗಬಹುದು ಎಂಬುದನ್ನು ಸಚಿವರು ದರಲ್ಲದೆ, ಸಂಸ್ಥೆ ವಿವರಿಸಿದ ಪರಿಹಾರಗಳನ್ನು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿವರವಾಗಿ ಮೌಲ್ಯಮಾಪನ ಮಾಡಲಾಗುವುದು ಮತ್ತು ಈ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲು ಮಾದರಿ ಯೋಜನೆಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಲ…

Read More

ಮಂಡ್ಯ : ಮದ್ದೂರು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ರಮೇಶ್ (35) ಎಂಬುವರೇ ಆತ್ಮಹತ್ಯೆ ಮಾಡಿಕೊಂಡಿರುವ ಪೇದೆಯಾಗಿದ್ದು, ನಗರದ ಪೊಲೀಸ್ ಠಾಣೆಯ ಹಿಂದೆ ಇರುವ ವಿಶ್ರಾಂತಿ ಗೃಹದಲ್ಲಿರುವ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಂಗಳವಾರ ರಾತ್ರಿ 10 ಘಂಟೆಗೆ ಪೊಲೀಸ್ ಪೇದೆಯೊಬ್ಬರು ವಿಶ್ರಾಂತಿ ಗೃಹಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮೃತರ ಪತ್ನಿ ಪುಷ್ಪಲತಾ ಎಂಬುವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪೇದೆಯಾದ ಮಹೇಶ್ ಎಂಬುವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡಾ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತ ಪೇದೆ ರಮೇಶ್ ಹಾಗೂ ದೂರು ದಾಖಲಾಗಿರುವ ಮಹೇಶ್ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ಠಾಣೆಯ…

Read More