Author: kannadanewsnow09

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ತಂಡ ಮನವಿ ಮಾಡಿತು. ಸಂಘದ ಮನವಿಗೆ ಪ್ರತಿಕ್ರಿಯಿಸಿದ ಸಭಾಪತಿ ಹೊರಟ್ಟಿ ಅವರು, ಇದೇ 23ಕ್ಕೆ ಬೀದರ್ ಬರುತ್ತಿದ್ದೇನೆ. ಈ ಸಂದರ್ಭದಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ಬೀದರ್ ಪತ್ರಿಕಾ ಭವನದಲ್ಲಿ ಫೆ.23ಕ್ಕೆ ಆಯೋಜಿಸುವ ಕಾರ್ಯಕ್ರಮದಲ್ಲಿಯೂ ಭಾಗವಹಿಸುವುದಾಗಿ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಿಂದೆ ಆಯೋಜಿಸಿದ್ದ ರಾಜ್ಯ ಸಮ್ಮೇಳನಕ್ಕೆ ಬಂದಿದ್ದೇನೆ. ಬೀದರ್ ಸಮ್ಮೇಳನಕ್ಕೂ ಬರುವೆ ಎಂದು ಹೇಳಿದರು. ಕೆಯುಡಬ್ಲ್ಯೂಜೆ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಘಕದ ಜಿಲ್ಲಾಧ್ಯಕ್ಷ ಅನಂದ ದೇವಪ್ಪ, ಸಮಿತಿ ಸದಸ್ಯರಾದ ಅಪ್ಪಾರಾವ ಸೌದಿ, ಪತ್ರಕರ್ತ ನಂದಕುಮಾರ ಕರಂಜಿ, ಮಂಡ್ಯ ಜಿಲ್ಲಾ ಮಾಜಿ ಅಧ್ಯಕ್ಷ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://kannadanewsnow.com/kannada/mla-gopalakrishna-belurs-statement-welcomed-by-farmers-on-the-banks-of-sharavati-river-g-t-satyanarayana/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More

ಬೆಂಗಳೂರು : ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ 30 ಕೆಜಿ ವರೆಗೆ ಲಗೇಜ್ ಉಚಿತವಾಗಿದೆ. ಅದರ ನಂತರದ ಲಗೇಜಿಗೆ ದರ ವಿಧಿಸುವುದಾಗಿ ನಿಗಮ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಕೆ ಎಸ್ ಆರ್ ಟಿ ಸಿ ಬಿಡುಗಡೆ ಮಾಡಿದ್ದು, ಪ್ರತಿ ಬಾರಿಯೂ ಲಗೇಜು ದರ ಏರಿಕೆ‌ ಬಸ್ ಪ್ರಯಾಣ‌ ದರ‌ ಏರಿಕೆಯೊಂದಿಗೆ ಆಗುತ್ತದೆ. ಕಳೆದ ವರ್ಷ ಜನವರಿ 2025 ರಂದು ಬಸ್ ಪ್ರಯಾಣ ದರ ಏರಿಕೆ‌ಯಾಗಿತ್ತು, ಆದರೆ ಲಗೇಜು ದರ‌ ಏರಿಕೆ‌ ಮಾಡಿರಲಿಲ್ಲ. ಆ ಸಂಬಂದ ನಾಳೆಯಿಂದ ಜಾರಿಗೆ ಬರುವಂತೆ ಲಗೇಜು ದರ ಏರಿಕೆಯಾಗಿದೆ‌ ಎಂದಿದೆಮ 30 kg ವರೆಗೂ ಉಚಿತ,‌ನಂತರ ದರ ಅನ್ವಯಿಸುತ್ತದೆ ಈ‌ ಹಿಂದೆ ಲಗೇಜು ದರ ಡಿಸೆಂಬರ್ 2021 ರಲ್ಲಿ ಏರಿಕೆಯಾಗಿತ್ತು. ಈಗ ಏರಿಕೆ ಮಾಡಲಾಗಿದೆ. 30 ಕೆಜಿ ವರೆಗೆ ಲಗೇಜ್ ಉಚಿತವಾಗಿದೆ. ಆ ಬಳಿಕದ ಲಗೇಜ್ ಗೆ ಮಾತ್ರ ನಾಳೆಯಿಂದ ಜಾರಿಯಾಗುವ ಲಗೇಜ್ ದರ ಅನ್ವಹಿಸಲಿದೆ ಎಂದು ತಿಳಿಸಿದೆ. ಯಾವಾಗಲೂ…

Read More

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ನಾನು ಇದ್ದೇನೆ. ಯಾವುದೇ ಕಾರಣಕ್ಕೂ ಯಾರನ್ನೂ ತೆರವುಗೊಳಿಸೋದಿಲ್ಲ. ಕೆಪಿಸಿ ಭೂಮಿ ಇರಲಿ, ಅರಣ್ಯ ಭೂಮಿ ಆದರೂ ಸರಿಯೇ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು ಹೇಳಿದ್ದರು. ಆ ಮೂಲಕ ಯಡಮನೆ ಜನರ ಬೆನ್ನಿಗೆ ನಿಂತಿದ್ದರು. ಇಂತಹ ಶಾಸಕರ ಇಂದಿನ ಹೇಳಿಕೆಯನ್ನು ಶರಾವತಿ ನದಿ ದಂಡೆ ರೈತರು ಸ್ವಾಗತಿಸುತ್ತೇವೆ ಎಂಬುದಾಗಿ ಕೆಡಿಪಿ ಸದಸ್ಯ, ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ಅವರು ತಿಳಿಸಿದ್ದಾರೆ. ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಮಾತನಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವಂತ ಜಿ.ಟಿ ಸತ್ಯನಾರಾಯಣ ಅವರು, ಶರಾವತಿ ಸಂತ್ರಸ್ತರ ಭೂಮಿ ಸಮಸ್ಯೆ ಅಂದರೆ ಇಲ್ಲಿಂದ ಮುಳುಗಡೆ ಆಗಿ ಅನಿವಾರ್ಯವಾಗಿ ಬೇರೆ ಕಡೆ ಹೋದವರ ಸಮಸ್ಯೆ ಎನ್ನುವುದು ಇಲ್ಲಿಯ ತನಕ ಸರ್ಕಾರ ನೋಟ ಆಗಿದೆ. ವಾಸ್ತವದಲ್ಲಿ ಮುಳುಗಡೆ ಆಗದೇ ಉಳಿದ ನದಿ ದಂಡೆಯಲ್ಲಿ 10-12 ಸಾವಿರ ಕುಟುಂಬ ಕೃಷಿ ಮಾಡಿಕೊಂಡು ಬದುಕಿವೆ… ಅವರಿಗೆ ಭೂಮಿ ಹಕ್ಕು ನೀಡಬೇಕು ಎಂದಿದ್ದಾರೆ.…

Read More

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವಂತ ಘಟನೆ ದಾಬಾಸ್ ಪೇಟೆ ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ದಾಬಾಸ್ ಪೇಟೆ ಬಳಸಿಯ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿಯಲ್ಲಿ ಬಿಎಂಟಿಸಿ ಬಸ್ ಬೈಕಿಗೆ ಡಿಕ್ಕಿಯಾದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೇ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಮೃತರ ಬಗ್ಗೆ ವಿವರ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/om-birla-to-attend-tarique-rahmans-swearing-in-ceremony-in-bangladesh-sources/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More

ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಅನೇಕ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಕೂದಲು ಸಂಬಂಧಿತ ಸಮಸ್ಯೆಯೂ ಒಂದು. ಇಂದಿನ ಕಾಲದಲ್ಲಿ ಚಿಕ್ಕ ಮಕ್ಕಳು ಸಹ ಕೂದಲು ಉದುರುವಿಕೆ ಮತ್ತು ಬೂದುಬಣ್ಣವನ್ನು ಹೆಚ್ಚಾಗಿ ಅನುಭವಿಸುತ್ತಾರೆ. ಇದು ಜೀವನಶೈಲಿಯಲ್ಲಿನ ಬದಲಾವಣೆಗಳಿಂದಾಗಿ. ಈ ಜೀವನಶೈಲಿಯ ಬದಲಾವಣೆಗಳನ್ನು ಬದಲಾಯಿಸುವುದರ ಜೊತೆಗೆ, ನಾವು ನಮ್ಮ ಕೂದಲನ್ನು ಸರಿಯಾಗಿ ನೋಡಿಕೊಳ್ಳುತ್ತಿದ್ದರೆ, ನಮಗೆ ಯಾವುದೇ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳು ಇರುವುದಿಲ್ಲ. ಈ ವಿಭಾಗದಲ್ಲಿ, ಕೂದಲು ಉದುರುವಿಕೆಯನ್ನು ನಿವಾರಿಸಲು ಮತ್ತು ಕಪ್ಪು, ದಪ್ಪ ಕೂದಲನ್ನು ಪಡೆಯಲು ತಯಾರಿಸಬಹುದಾದ ಎಣ್ಣೆಯನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ…

Read More

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಎನ್ನುವಂತೆ, ನಾಳೆಯಿಂದಲೇ ಜಾರಿಗೆ ಬರುವಂತೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಕೆ ಎಸ್ ಆರ್ ಟಿ ಸಿ ಎಂ.ಡಿ ಅಕ್ರಂ ಪಾಷಾ ಆದೇಶ ಮಾಡಿದ್ದು, ಪ್ರಯಾಣಿಕರ ರಹಿತವಾಗಿ ಸಾಗಿಸುವ ಲಗೇಜ್ ದರದಲ್ಲಿ ಪರಿಷ್ಕರಣೆ ಮಾಡಿದ್ದಾರೆ. 1-5 ಸ್ಟೇಜ್ ವರೆಗೆ 6 ರೂಪಾಯಿ, 6-12 ಸ್ಟೇಜ್ ವರೆಗೆ 12 ರೂಪಾಯಿ, 156 ರಿಂದ 160 ಸ್ಟೇಜ್ ವರೆಗೆ 145 ರೂಪಾಯಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದ್ದಾರೆ. 2021ರಲ್ಲಿ ಪ್ರಯಾಣಿಕ ರಹಿತ ಲಗೇಜ್ ದರ ಏರಿಕೆಯಾಗಿತ್ತು. ಟಿಕೆಟ್ ದರ ಪರಿಷ್ಕರಣೆಯಾದಗ ಲಗೇಜ್ ದರ ಹೆಚ್ಚಿಸಿರಲಿಲ್ಲ. ಹೀಗಾಗಿ ಈಗ ನಾಳೆಯಿಂದ ಜಾರಿಗೆ ಬರುವಂತೆ ಪ್ರಯಾಣಿಕರ ರಹಿತ ಲಗೇಜ್ ದರವನ್ನು ಹೆಚ್ಚಳ ಮಾಡಿ ಕೆ ಎಸ್ ಆರ್ ಟಿ ಸಿ ಎಂ.ಡಿ ಅಕ್ರಂ ಪಾಷಾ ಆದೇಶಿಸಿದ್ದಾರೆ. https://kannadanewsnow.com/kannada/minister-dinesh-gundu-raos-letter-to-union-minister-shivraj-singh-chouhan-for-fixing-minimum-support-price-msp-for-rubber/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More

ನವದೆಹಲಿ: ಫೆಬ್ರವರಿ 17 ರಂದು ಢಾಕಾದಲ್ಲಿ ನಡೆಯಲಿರುವ ಬಾಂಗ್ಲಾದೇಶದ ಪ್ರಧಾನಿಯಾಗಿ ಆಯ್ಕೆಯಾದ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಭಾರತವನ್ನು ಪ್ರತಿನಿಧಿಸಲಿದ್ದಾರೆ. 2024 ರಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ನಡೆದ ಮೊದಲ ರಾಷ್ಟ್ರೀಯ ಚುನಾವಣೆಯಲ್ಲಿ ತಮ್ಮ ಪಕ್ಷವು ಭರ್ಜರಿ ಜಯ ಸಾಧಿಸಿದ ನಂತರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷ ರೆಹಮಾನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ಓಂ ಬಿರ್ಲಾ ಅವರ ಉಪಸ್ಥಿತಿಯು ಢಾಕಾದೊಂದಿಗಿನ ಸಂಬಂಧಕ್ಕೆ ನೀಡುವ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ ಮತ್ತು ಎರಡು ನೆರೆಹೊರೆಯವರ ನಡುವಿನ ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಬಾಂಗ್ಲಾದೇಶವು ಪ್ರಧಾನಿ ನರೇಂದ್ರ ಮೋದಿಯವರನ್ನು ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನಿಸಿತ್ತು. ಆದರೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಈ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇತರ ಪ್ರಾದೇಶಿಕ ನಾಯಕರಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಢಾಕಾಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ…

Read More

ಮಂಗಳೂರು: ರಬ್ಬರ್‌ಗೆ ಕನಿಷ್ಠ ಬೆಂಬಲ ಬೆಲೆ (MSP) ಅಗತ್ಯತೆಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವರಿಗೆ ಬರೆದ ಪತ್ರದಲ್ಲಿ, ದಿನೇಶ್ ಗುಂಡೂರಾವ್ ಅವರು ರಬ್ಬರ್‌ಗೆ MSP ಅನ್ನು ಸೂಕ್ತವಾಗಿ ನೀಡಬೇಕು ಮತ್ತು ರೈತರು ಬೆಳೆ ಬೆಳೆಯಲು ಕಠಿಣ ಪರಿಸ್ಥಿತಿಯಲ್ಲಿ ಶ್ರಮಿಸುತ್ತಿದ್ದಾರೆ ಎಂದು ಗುರುತಿಸಬೇಕು ಎಂದು ಹೇಳಿದರು. ಬೆಳೆಗಾರರು ಕೈಗಾರಿಕಾ ಉತ್ಪನ್ನವನ್ನು ಉತ್ಪಾದಿಸುತ್ತಿಲ್ಲ ಎಂದು ಅವರು ಹೇಳಿದರು. MSP ಅಂತಿಮ ಬಳಕೆಯ ಬಗ್ಗೆ ಅಲ್ಲ, ಉತ್ಪಾದನೆಯ ಪ್ರಕ್ರಿಯೆಯ ಬಗ್ಗೆ ಇರಬೇಕು. ಆದ್ದರಿಂದ ಈ ವಿಷಯವನ್ನು ರೈತರ ಹಿತದೃಷ್ಟಿಯಿಂದ ನೋಡಬೇಕು ಮತ್ತು ಕೃಷಿ ಸಚಿವಾಲಯದ ಶಿಫಾರಸನ್ನು ದಯವಿಟ್ಟು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯಕ್ಕೆ ಕಳುಹಿಸಬೇಕು ಎಂದು ಕೋರಲಾಗಿದೆ. ಸಾವಿರಾರು ಜನರು ರಬ್ಬರ್ ಬೆಳೆಯುತ್ತಾರೆ ಮತ್ತು ಅವರ ಕುಟುಂಬಗಳು ಜೀವನೋಪಾಯಕ್ಕಾಗಿ ಅದನ್ನು ಅವಲಂಬಿಸಿವೆ. ಈ ನಿಟ್ಟಿನಲ್ಲಿ ಕರ್ನಾಟಕದ ಸಂಸತ್ ಸದಸ್ಯರೊಂದಿಗೆ ಮಾತನಾಡಲು ಮತ್ತು…

Read More

ಬೆಂಗಳೂರು: ರಾಜ್ಯ ಸರ್ಕಾರವು ಅಗ್ನಿಶಾಮಕ ಇಲಾಖೆಯ ಹುದ್ದೆಗಳ ಬದಲಾವಣೆಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇನ್ಮುಂದೆ ಫೈರ್ ಮ್ಯಾನ್ ಬದಲಾಗಿ ಫೈರ್ ಫೈಟರ್ ಎಂಬುದಾಗಿ ಹುದ್ದೆಯನ್ನು ಬದಲಾವಣೆ ಮಾಡಲಾಗಿದೆ. ಇದಷ್ಟೇ ಅಲ್ಲದೇ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೂ ತೀರ್ಮಾನ ಕೈಗೊಳ್ಳಲಾಗಿದೆ. ಲೇಡಿಂಗ್ ಫೈರ್ ಮ್ಯಾನ್ ಹುದ್ದೆ ಲೀಡಿಂಗ್ ಫೈರ್ ಫೈಟರ್ ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ. https://kannadanewsnow.com/kannada/despite-nutrition-scheme-in-karnataka-4-8-lakh-children-are-stunted/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More

ಗದಗ: ಮಹಾ ಶಿವರಾತ್ರಿಯ ಈ ದಿನದಂದೇ ಗದಗದಲ್ಲಿ ಕಿಡಿಗೇಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಗದಗದಲ್ಲಿ ಶಿವಲಿಂಗ, ನಂದಿ ವಿಗ್ರಹವನ್ನು ಭಗ್ನಗೊಳಿಸಿ, ವಿರೂಪಗೊಳಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರಲ್ಲಿ ಈ ಘಟನೆ ನಡೆದಿದೆ. ಶಿಂಗಟಾಲೂರು ಗ್ರಾಮದ ಹೊರ ವಲಯದಲ್ಲಿರುವಂತ ಶ್ರೀರಾಮೇಶ್ವರ ಹಾಗೂ ನಂದಿ ವಿಗ್ರಹವನ್ನು ರಾತ್ರೋ ರಾತ್ರಿ ದುಷ್ಕರ್ಮಿಗಳು ಭಗ್ನಗೊಳಿಸಿ, ಹೊಡೆದು ಹಾಕಿದ್ದಾರೆ. ಇಂದು ಮಹಾ ಶಿವರಾತ್ರಿಯ ದಿನವಾದ ಕಾರಣ ಪೂಜೆಗೆಂದು ಅರ್ಚಕರು ದೇವಾಲಯಕ್ಕೆ ತೆರಳಿದಂತ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ಮಹಾ ಶಿವರಾತ್ರಿ ಪ್ರಯುಕ್ತ ದೇವಾಲಯಕ್ಕೆ ಸುಣ್ಣ-ಬಣ್ಣ ಬಳಿಯಲಾಗಿತ್ತು. ಆದರೇ ಇಂದು ಬೆಳಗ್ಗೆ ಶಿವಲಿಂಗ, ನಂದಿ ವಿಗ್ರಹವನ್ನು ವಿರೂಪಗೊಳಿಸಿದ್ದರಿಂದ ಗ್ರಾಮದಲ್ಲಿ ಉದ್ವಿಗ್ನತೆಯ ವಾತಾವರಣ ಉಂಟಾಗಿದೆ. ಕಿಡಿಗೇಡಿಗಳ ಈ ದುಷ್ ಕೃತ್ಯವನ್ನು ಶಿಂಗಟಾಲೂರು ಗ್ರಾಮಸ್ಥರು ಖಂಡಿಸಿದ್ದಾರೆ. ಅಲ್ಲದೇ ಕಿಡಿಗೇಡಿ ಕೃತ್ಯ ಎಸಗಿದಂತ ದುಷ್ಕರ್ಮಿಗಳನ್ನು ಬಂಧಿಸುವಂತೆಯೂ ಒತ್ತಾಯಿಸಿದ್ದಾರೆ. https://kannadanewsnow.com/kannada/reserved-passengers-must-board-from-designated-station-or-lose-seat-raiways/

Read More