Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇದು ಕೃತಕ ಬುದ್ಧಿಮತ್ತೆ (ಎ.ಐ.)ಕಾಲವಾಗಿದ್ದು, ಮಾಧ್ಯಮಗಳು ಸುದ್ದಿ ಪ್ರಸಾರಕ್ಕೆ ಮುನ್ನ ಸುದ್ದಿ ಚಿತ್ರಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳುವುದು ಅಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧೀಭವನದಲ್ಲಿಂದು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸುಳ್ಳು ಸುದ್ದಿಗಳು, ನಕಲಿ ಚಿತ್ರ, ದೃಶ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯ. ಒಮ್ಮೆ ಚಾರಿತ್ರ್ಯವಧೆ ಆದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಮುಖ್ಯ. ಹೀಗಾಗಿ ಪೂರ್ವಾಗ್ರಹ ಪೀಡಿತವಾಗಿ ಮತ್ತು ರೋಚಕ ಸುದ್ದಿಗಳನ್ನು ಬಿತ್ತಸಿರುವ ಧಾವಂತದಲ್ಲಿ ಸುಳ್ಳೇ ಸತ್ಯ ಎಂಬಂತೆ ಬಿಂಬಿಸಬಾರದು, ಇದು ಜನರ ನಂಬಿಕೆಯನ್ನು ದೂರ ಮಾಡುತ್ತದೆ ಎಂದರು. ಮಾಧ್ಯಗಳಿಗೆ ಸ್ವಾತಂತ್ರ್ಯ ಇರಬೇಕು. ನಿಯಂತ್ರಣ ಹಾಕಲು ಹಲವು ಕಾಯಿದೆಗಳಿವೆ. ಆದರೆ, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ, ನಿಖರ ಮಾಹಿತಿಯನ್ನು ಜನರಿಗೆ ನೀಡಬೇಕು. ಮಾಹಿತಿದಾಹವನ್ನು ತಣಿಸಬೇಕು ಎಂದು ಹೇಳಿದರು. ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗದ ಜೊತೆಗೆ ನಾಲ್ಕನೇ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಆರ್.ಬಿ.ಐ, ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.11.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನ.26ರಂದು ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದರು. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/the-power-to-drive-away-evil-lies-in-two-leaves/
ಚಿಕ್ಕಬಳ್ಳಾಪುರ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಸಿಎಂ ಸಿದ್ಧರಾಮಯ್ಯ ಹೈಕಮಾಂಡ್ ವಿಚಾರವನ್ನು ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ. ನಾನು ಹೇಳುವ ಅಗತ್ಯವಿಲ್ಲ ಎಂದರು. ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಹೇಳಿಕೆಗೆ ಬದ್ಧ ಎಂಬುದಾಗಿ ತಿಳಿಸಿದ್ದರು. ಆ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಸುಳಿವು, ಸಂಪುಟ ಪುನಾರಚನೆಯ ಬಗ್ಗೆ ಮಾತನಾಡಿದ್ದರು. https://kannadanewsnow.com/kannada/14th-foundation-day-celebration-at-aap-office-in-bengaluru-on-nov-26-convener-jagadish-v-sadam/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/
ಬೆಂಗಳೂರು: ಆಮ್ ಆದ್ಮಿ ಪಕ್ಷದ 14ನೇ ಸಂಸ್ಥಾಪನಾ ದಿನಾಚರಣೆಯನ್ನು ಇದೇ ತಿಂಗಳ 26ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಡಗರದಿಂದ ಆಚರಿಸಲಾಗುವುದೆಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಬಗ್ಗೆ ಮಾತನಾಡುತ್ತಾ ” ದೇಶದಲ್ಲಿ ಅವ್ಯಾಹತವಾಗಿ ಬೇರು ಬಿಟ್ಟಿರುವ ಭ್ರಷ್ಟ ಆಡಳಿತ ವ್ಯವಸ್ಥೆ, ಪಾರಂಪರಿಕ ಪಕ್ಷಗಳ ಕುಟುಂಬ ರಾಜಕಾರಣ , ಸ್ವಜನ ಪಕ್ಷಪಾತ, ಜನಸಾಮಾನ್ಯರಿಗೆ ಮೂಲಭೂತ ಹಕ್ಕುಗಳ ನಿರಾಕರಣೆ ಇವುಗಳ ವಿರುದ್ಧ ಕಳೆದ 13 ವರ್ಷಗಳ ಹಿಂದೆ ಉದಯಿಸಿದ ಆಮ್ ಆದ್ಮಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ಜನಪರ ರಾಜಕೀಯ ಆಂದೋಲನವಾಗಿದೆ. ಪ್ರತಿಯೊಬ್ಬ ಜನಸಾಮಾನ್ಯನು ಸಹ ರಾಜಕೀಯ ಹಕ್ಕುಗಳನ್ನು ಪಡೆಯಬೇಕೆಂಬುದೇ ಪಕ್ಷದ ಹೆಗ್ಗುರಿಯಾಗಿದೆ. ಜಲಸಾಮಾನ್ಯನಿಂದಲೇ ಜಲಸಾಮಾನ್ಯನ ಮೂಲಭೂತ ಸಮಸ್ಯೆಗಳೆಲ್ಲ ಪರಿಹಾರ ಆಗಬೇಕೆಂಬುದು ಪಕ್ಷದ ಆಶಯವಾಗಿದೆ” ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ವಿಶ್ವ ಮಾನ್ಯ ಜನಪ್ರಿಯ ನಾಯಕ ಅರವಿಂದ ಕೇಜ್ರಿವಾಲ್ ರವರ ನೇತೃತ್ವದಲ್ಲಿ ಪಕ್ಷವು ದೆಹಲಿ, ಪಂಜಾಬ್…
ಮೈಸೂರು: ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ ಕಾಂಪ್ರಮೈಸ್ ಸಿದ್ದರಾಮಯ್ಯ ಆದರೆ ಬಿಟ್ಟುಕೊಡುತ್ತಾರೆ. ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ತಮ್ಮ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಗಲಿದೆ. ನಾವು ನೋಡಿದ ಸಿದ್ದರಾಮಯ್ಯ ಮೊದಲಿನಿಂದಲೂ ರೆಬೆಲಿಯನ್. ಅವರದ್ದು ಯಾವಗಲೂ ಗಟ್ಟಿ ಗಡಸುತನದ ರಾಜಕಾರಣ. ಅದೇ ಮೂಲ ಸಿದ್ದರಾಮಯ್ಯ ಈಗ ಅಧಿಕಾರದ ಆಸೆಗಾಗಿ ಬದಲಾಗಿದ್ದಾರಾ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು. ಬಿಜೆಪಿ ಸರ್ಕಾರದ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದ ಮೇಲೆ ಕಮಿಷನ್ ಆರೋಪ ಮಾಡಿದ್ದು ಸುಳ್ಳು ಎಂಬುದು ತನಿಖಾ ವರದಿಯಿಂದ ಸಾಬೀತಾಗಿದೆ. ಈಗ ಅವರ…
ಮಂಡ್ಯ : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ಒಕ್ಕಲಿಗ ಸಮುದಾಯ ಬೀದಿಗಿಳಿದಿದ್ದು, ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು. ಮದ್ದೂರು ನಗರದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಚುಂಚಶ್ರೀ ಗೆಳೆಯರ ಬಳಗ ಹಾಗೂ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಚುಂಚಶ್ರೀ ಗೆಳೆಯರ ಬಳಗ ಅಧ್ಯಕ್ಷ ಡಾ.ಬಿ.ಕೃಷ್ಣ ಅವರು, ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು, ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಹಾಗೂ ಸಧೃಡಗೊಳಿಸುವ ಮೂಲಕ 126ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ…
ಬೆಂಗಳೂರು: ಮಾಜಿ ಸಚಿವ, ಶತಾಯುಷಿ, ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಹೆಸರಲ್ಲಿ ಪತ್ರಕರ್ತರಿಗೆ ಪ್ರಶಸ್ತಿ ನೀಡಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದತ್ತಿ ನಿಧಿ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ನಗರದ ಗಾಂಧೀಭವನದಲ್ಲಿಂದು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ತಂದೆಯವರು ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು, ಅವರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ ನೀಡಲು ಕೆ.ಯು.ಡಬ್ಲ್ಯು.ಜೆ.ಯಲ್ಲಿ 2.5 ಲಕ್ಷ ರೂ. ಠೇವಣಿ ಇಡುವುದಾಗಿ ಘೋಷಿಸಿದರು. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/women-who-are-the-indomitable-force-of-motherhood-should-become-well-educated-and-bring-about-change-dr-nagalakshmi-chaudhary/
ಶಿವಮೊಗ್ಗ : ಹೆಣ್ಣು ಮಾತೃತ್ವದ ಅದಮ್ಯ ಶಕ್ತಿ ಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪದವಿ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಕಾಲೇಜು ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿಕ್ಷಣ ಬಹಳ ದೊಡ್ಡ ಶಕ್ತಿ ಮತ್ತು ಶಸ್ತ್ರ. ಇದರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗಿದ್ದು ನೀವೆಲ್ಲಾ ಸುಶಿಕ್ಷತರಾಗಿ ಬದಲಾವಣೆ ತರಬೇಕೆಂದರು. ಡಾ.ಅಂಬೇಡ್ಕರ್ ರವರ ಧ್ಯೇಯವಾಕ್ಯಗಳಾದ ಶಿಕ್ಷಣ, ಸಂಘಟನೆ, ಹೋರಾಟ ನಮಗೆಲ್ಲ ಬಹು ಮುಖ್ಯವಾಗಿದ್ದು ಶಿಕ್ಷಣ ಪಡೆದು, ಸಂಘಟಿತರಾಗಿ ನಮ್ಮ ಹಕ್ಕುಗಳಿಗಾಗಿ ನಾವು ಹೋರಾಡಬೇಕು ಯಾವ ಹಕ್ಕುಗಳಿಗಾಗಿ ನಾವು ಹೋರಾಡುತ್ತೀವೋ ಅದು ಲಭಿಸುತ್ತದೆ. ನನ್ನ ತಂದೆ ನನಗೆ…
ಚಿಕ್ಕಬಳ್ಳಾಪುರ: ಖಜಾನೆ ಖಾಲಿ ಎನ್ನುವ ಬಿಜೆಪಿ ಸುಳ್ಳಿನ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗಲಿದೆ ಎಂದರು. ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ಒಂದು ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣ ಇದುವರೆಗೂ ತೆಗೆದಿಟ್ಟಿರುವುದು ಮಾತ್ರವಲ್ಲದೆ ಇಷ್ಟೇ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನೂ ನಾವು ನಡೆಸುತ್ತಿದ್ದೇವೆ. ಇದಕ್ಕೆ ಇಂದು ಇಲ್ಲಿ ಉದ್ಘಾಟನೆಗೊಂಡ…
ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ “ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) ” ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ ‘ರಾಷ್ಟ್ರೀಯ ಜಲ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಾಗೂ ಪರಿಣಾಮಕಾರಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನ ನೀಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಇತರೆ ಯೋಜನೆಗಳಡಿ ಜಿಲ್ಲೆಯು 2024ರ ಏಪ್ರಿಲ್…














