Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಅಮೆರಿಕ ಮೂಲದ ಹುಡುಕಾಟ ದೈತ್ಯ ಗೂಗಲ್ ಪ್ರಮುಖ ಅಡಚಣೆಯನ್ನು ಎದುರಿಸುತ್ತಿದೆ ಎಂದು ವರದಿಯಾಗಿದೆ. ಅನೇಕ ಬಳಕೆದಾರರು ಗೂಗಲ್ ಹುಡುಕಾಟ, ಯೂಟ್ಯೂಬ್ ಮತ್ತು ಯೂಟ್ಯೂಬ್ ಟಿವಿ ಸೇರಿದಂತೆ ಬಹು ಸೇವೆಗಳಲ್ಲಿ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಔಟೇಜ್ ಟ್ರ್ಯಾಕಿಂಗ್ ಪ್ಲಾಟ್ಫಾರ್ಮ್ ಡೌನ್ಡೆಕ್ಟರ್ ಪ್ರಕಾರ, ಇಲ್ಲಿಯವರೆಗೆ 11,000 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ, ಬಳಕೆದಾರರು ಹುಡುಕಲು, ವೀಡಿಯೊಗಳನ್ನು ಲೋಡ್ ಮಾಡಲು ಅಥವಾ ಲೈವ್ ಟಿವಿ ಸ್ಟ್ರೀಮ್ಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಬಳಕೆದಾರರು ಸಮಸ್ಯೆಯು ತಮ್ಮ ಕಡೆ ಇದೆಯೇ ಅಥವಾ ದೊಡ್ಡ ಜಾಗತಿಕ ಸ್ಥಗಿತವಾಗಿದೆಯೇ ಎಂದು ಲೆಕ್ಕಾಚಾರ ಮಾಡಲು ಪ್ರಯತ್ನಿಸುತ್ತಿರುವಾಗ ಈ ಅಡಚಣೆಯು ಸಾಮಾಜಿಕ ಮಾಧ್ಯಮ ದೂರುಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಸಮಸ್ಯೆಗೆ ಕಾರಣವೇನು ಅಥವಾ ಸೇವೆಗಳನ್ನು ಯಾವಾಗ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗುತ್ತದೆ ಎಂಬುದರ ಕುರಿತು ಗೂಗಲ್ ಇನ್ನೂ ಅಧಿಕೃತ ಹೇಳಿಕೆಯನ್ನು ಹಂಚಿಕೊಂಡಿಲ್ಲ. ಈ ಪ್ರವೃತ್ತಿ ಇನ್ನೂ ಹೆಚ್ಚುತ್ತಲೇ ಇದೆ, ಏಕೆಂದರೆ ಈಗ ವರದಿಗಳ ಸಂಖ್ಯೆ 11,000 ತಲುಪಿದೆ. ಭಾರತದ ಬಗ್ಗೆ ಹೇಳುವುದಾದರೆ, ಯೂಟ್ಯೂಬ್ ಸ್ಥಗಿತದ ವಿರುದ್ಧದ…
ಬೆಳಗಾವಿ ಸುವರ್ಣ ವಿಧಾನಸೌಧ : ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕಕ್ಕೆ ಮೇಲ್ಮನೆಯಲ್ಲಿ ಡಿ.19ರಂದು ಅಂಗೀಕಾರ ದೊರೆಯಿತು. ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕ ಜಾರಿ ಮಾಡಲಾಗುತ್ತಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಸದನಕ್ಕೆ ತಿಳಿಸಿದರು. ಸುಧೀರ್ಘ ಅವಧಿಯ ಚರ್ಚೆಯ ನಂತರ ಪ್ರಸ್ತಾವವನ್ನು ಸಭಾಪತಿಯವರು ಧ್ವನಿಮತಕ್ಕೆ ಹಾಕಿದರು. ಸದಸ್ಯರ ಸಹಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು. https://kannadanewsnow.com/kannada/karnataka-state-sc-st-commission-amendment-bill-2025-passed-in-council/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/
ಬೆಳಗಾವಿ ಸುವರ್ಣ ವಿಧಾನಸೌಧ : ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಡಿ.19ರಂದು ಅಂಗೀಕಾರ ದೊರೆಯಿತು. ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರನ್ನಾಗಿ ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಒಬ್ಬ ವ್ಯಕ್ತಿಯನ್ನು ಹಾಗೂ ಒಬ್ಬ ಮಹಿಳೆಯನ್ನು ನಾಮನಿರ್ದೇಶಿಸಲು ಮತ್ತು ಸರ್ಕಾರದಿಂದ ಹೊಸ ದತ್ತಾಂಶ ಅಥವಾ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ಅನುಸೂಚಿತ ಜಾತಿಗಳ ಸದಸ್ಯರಿಗೆ ಉಪ-ವರ್ಗೀಕರಣದ ಶೇಕಡವಾರು ಮೀಸಲಾತಿಯಲ್ಲಿ ಅಗತ್ಯ ಮಾರ್ಪಾಡನ್ನು ಮಾಡಲು ಶಿಫಾರಸ್ಸು ಮಾಡುವಂತೆ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರವನ್ನು ನೀಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ, 2002 (2002ರ ಕರ್ನಾಟಕ ಅಧಿನಿಯಮ 20)ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ಜಾರಿ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಸದನಕ್ಕೆ ತಿಳಿಸಿದರು. ಚರ್ಚೆಯ…
ಬೆಳಗಾವಿ ಸುವರ್ಣ ವಿಧಾನಸೌಧ : ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ನಡುವೆ ಇರುವ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ನಮ್ಮ ಸರ್ಕಾರ ಬದ್ಧವಿದ್ದು, ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಸರ್ಕಾರದ ಪರವಾಗಿ ವಿಧಾನಸಭೆಯಲ್ಲಿ ಶುಕ್ರವಾರದಂದು ಉತ್ತರ ನೀಡಿದರು. ರಾಜ್ಯದಲ್ಲಿನ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪರಿಹಾರ ಕಂಡುಕೊಳ್ಳಲು 2001 ರಲ್ಲಿ ಆಗಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಆರ್ಥಿಕ ತಜ್ಞ ಪ್ರೊ.ನಂಜುಂಡಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಅವರಿಂದ 2002 ರಲ್ಲಿ ವರದಿ ಪಡೆಯಲಾಗಿತ್ತು. ನಂಜುಂಡಪ್ಪ ವರದಿಯಂತೆ ಅತ್ಯಂತ ಹಿಂದುಳಿದ 39 ತಾಲ್ಲೂಕು, ಅತಿ ಹಿಂದುಳಿದ 40 ತಾಲ್ಲೂಕು ಹಾಗೂ 35 ಹಿಂದುಳಿದ ತಾಲ್ಲೂಕು ಸೇರಿದಂತೆ ಒಟ್ಟು 114 ತಾಲ್ಲೂಕುಗಳನ್ನು ಹಿಂದುಳಿದ ತಾಲ್ಲೂಕುಗಳೆಂದು ತಿಳಿಸಿದ್ದರು. ಈ ಪೈಕಿ 27 ತಾಲ್ಲೂಕುಗಳು ಉತ್ತರ ಕರ್ನಾಟಕ…
ಮಂಡ್ಯ : ಮದ್ದೂರು ನಗರದ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ಆದಷ್ಟು ಬೇಗ ನೀಲನಕ್ಷೆ ತಯಾರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚನೆ ನೀಡಿದರು. ಶಿವಪುರದ ಧ್ವಜ ಸೌಧಕ್ಕೆ ಶುಕ್ರವಾರ ನಗರಸಭೆ, ಲೋಕೋಪಯೋಗಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ನಗರಸಭೆ ಕಛೇರಿಯ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಮದ್ದೂರಿನ ಶಿವಪುರದಲ್ಲಿರುವ ಐತಿಹಾಸಿಕ ಪಾರಂಪರಿಕ ಸ್ಥಳವಾದ ಧ್ವಜ ಸತ್ಯಾಗ್ರಹ ಸೌಧವು ದೇಶದ ಸ್ವಾತಂತ್ರ್ಯ ಹೋರಾಟದ ಪ್ರಮುಖ ಐತಿಹಾಸಿಕ ಸ್ಮಾರಕವಾಗಿದ್ದು, ಹೀಗಾಗಿ ಸೌಧದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 2 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಹೀಗಾಗಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಸೌಧದ ಅನೆಕ್ಸ್ ಕಟ್ಟಡದಲ್ಲಿರುವ ಶೌಚಾಲಯ ದುರಸ್ತಿ, ಬೋರ್ವೆಲ್, ನಾಮಫಲಕ, ಶಿಲಾಫಲಕ ಅಳವಡಿಕೆ ಹಾಗೂ ಸ್ವಾಗತ ಕಮಾನು ನಿರ್ಮಾಣ ಮಾಡಬೇಕಿದೆ ಎಂದರು. ಸೌಧದ ಆವರಣದ ತಗ್ಗು…
ಶಿವಮೊಗ್ಗ: ಜಿಲ್ಲೆಯ ಸಾಗರದ ಚಂದ್ರಮಾವಿನ ಕೊಪ್ಪಲು ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರವಾದಂತ ಗಾಯವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ತಾಳಗುಪ್ಪದಿಂದ ಮೈಸೂರಿಗೆ ಹೊರಡುವ ರೈಲು ಗಾಡಿ ಸಂಖ್ಯೆ 16205 ಇಂದು ಮದ್ಯಾಹ್ನ ಸಾಗರ ಪಟ್ಟಣದ ಚಂದ್ರಮಾವಿನಕೊಪ್ಪಲು ಬಳಿ ಹಾದು ಹೋಗುವ ಸಮಯದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಮುಗುಡ್ತಿ ಗ್ರಾಮದ ನರೇಂದ್ರ ಕುಮಾರ್(61) ಎಂಬುದಾಗಿ ಹೇಳಲಾಗುತ್ತಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದಂತ ಸಂದರ್ಭದಲ್ಲಿ ತಲೆಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಾಗರದಲ್ಲಿ ಚಿಕಿತ್ಸೆ ನಂತ್ರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ನರೇಂದ್ರ ಕುಮಾರ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದೋ ಅಥವಾ ರೈಲು ಚಲಿಸುತ್ತಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿರೋದೋ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/betting-app-case-ed-attaches-assets-belonging-to-yuvraj-uthappa-sonu-sood/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/
ಬೆಟ್ಟಿಂಗ್ ಆ್ಯಪ್ ಕೇಸ್: ಯುವರಾಜ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿದ ED
ಚೆನ್ನೈ: ಅಕ್ರಮ ಆನ್ಲೈನ್ ಬೆಟ್ಟಿಂಗ್ ಅರ್ಜಿಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ, ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ನಟ ಮಿಮಿ ಚಕ್ರವರ್ತಿ ಮತ್ತು ಬಾಲಿವುಡ್ ನಟ ಸೋನು ಸೂದ್ ಅವರಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ. ಈ ಪ್ರಕರಣವು ರೂ. 1,000 ಕೋಟಿಗೂ ಹೆಚ್ಚು ಮೌಲ್ಯದ ಅಪರಾಧದ ಶಂಕಿತ ಆದಾಯವನ್ನು ಒಳಗೊಂಡಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಶುಕ್ರವಾರ ವರದಿ ಮಾಡಿದೆ. ಅಧಿಕಾರಿಗಳ ಪ್ರಕಾರ, ಬಹು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸಂಕೀರ್ಣ ಹಣಕಾಸು ಮಾರ್ಗಗಳ ಮೂಲಕ ದೊಡ್ಡ ಮೊತ್ತದ ಹಣವನ್ನು ರವಾನಿಸಿದ ಅಕ್ರಮ ಬೆಟ್ಟಿಂಗ್ ವೇದಿಕೆಗಳ ಜಾಲದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಗತ್ತುಗಳನ್ನು ಕೈಗೊಳ್ಳಲಾಗಿದೆ. ಕಾನೂನುಬಾಹಿರ ಬೆಟ್ಟಿಂಗ್ ಚಟುವಟಿಕೆಗಳ ಮೂಲಕ ಉತ್ಪತ್ತಿಯಾಗುವ ಹಣವನ್ನು ಪತ್ತೆಹಚ್ಚುವುದು ಮತ್ತು ಈ ಆದಾಯದಿಂದ ಪಡೆದಿರುವ ಅಥವಾ…
ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ನೀಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆ ಮಾಡಲಾಗಿತ್ತು. ಇಂತಹ ಅವರಿಗೆ ಇಂದು ನಡೆದಂತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಂದು ಬೆಂಗಳೂರು ಶೇಷಾದ್ರಿಪುರಂನಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಂತ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ಮುಖ್ಯ ಅತಿಥಿಗಳಾಗಿ ದೂರದರ್ಶನ ಕಾರ್ಯಕ್ರಮ ಮುಖ್ಯಸ್ಥರಾದ ಎಚ್.ಎನ್.ಆರತಿ, ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷರಾದ ಡಾ.ಎಂ.ಆರ್.ವೆಂಕಟೇಶ್ ಜೊತೆಗೂಡಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಕಾರ್ಯಕ್ರಮವನ್ನು ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಐನಕೈ ಅವರು ಕಾರ್ಯಕ್ರಮ ಉದ್ಘಾಟಿಸಿದರೇ, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ ಅವರು ಅಭಿನಂದನಾ ಭಾಷಣ ಮಾಡಿದರು. ರೈತ, ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ…
ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞ ಡಾ.ನಾಗೇಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸ್ತ್ರೀ ರೋಗ ತಜ್ಞ ಡಾ.ನಾಗೇಂದ್ರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಕೆಎನ್ಎನ್ ಸಂಸ್ಥೆಯಿಂದಲೂ ಅಭಿನಂದನೆ, ಶುಭಾಶಯಗಳನ್ನು ತಿಳಿಸುತ್ತಿದೆ. ಈ ಹಿಂದೆಯೇ ಹಲವು ಹುದ್ದೆ ನಿರ್ವಹಿಸಿದ್ದ ಡಾ.ನಾಗೇಂದ್ರಪ್ಪ, ಡಿಹೆಚ್ಓ, ಡಿಎಸ್ಓಗೆ ಧನ್ಯವಾದ ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಲ್ಲಿ ವಿವಿಧ ಪದಾಧಿಕಾರಿಯ ಹುದ್ದೆಯನ್ನು ಡಾ.ನಾಗೇಂದ್ರಪ್ಪ ನಿರ್ವಹಿಸಿದ್ದರು. ಆ ಬಳಿಕ ಇದೀಗ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಮ್ಮ ಅವಿರೋಧ ಆಯ್ಕೆಯ ಹಿಂದೆ ಮೆಗ್ಗಾನ್ ಜಿಲ್ಲಾ ಸರ್ಜನ್ ಹಾಗೂ ಈ ಹಿಂದಿನ ನಿಕಪೂರ್ವ ಜಿಲ್ಲಾಧ್ಯಕ್ಷರಾದಂತ ಡಾ.ಸಿದ್ದನಗೌಡ ಪಾಟೀಲ್ ಅವರು ಕಾರಣವೆಂದು ಡಾ.ನಾಗೇಂದ್ರಪ್ಪ ಸ್ಮರಿಸಿದ್ದಾರೆ. ಜೊತೆಗೆ ಶಿವಮೊಗ್ಗ ಡಿಹೆಚ್ಓ ಡಾ.ನಟರಾಜ್ ನಾಯ್ಕ್, ಡಿಎಸ್ಓ ಡಾ.ನಾಗರಾಜ್ ಹಾಗೂ ಡಿಹೆಚ್ಓ ಕಚೇರಿಯ ಅಧಿಕಾರಿ ಡಾ.ಗುಡ್ಡಪ್ಪ ಕಸವಿ ಅವರಿಗೆ ಧನ್ಯವಾದವನ್ನು ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ. ಮಾಜಿ ಸಿಎಂ ದಿವಂಗತ…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿರುವುದಾಗಿ ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಚಂದ್ರಮಾವಿನ ಕೊಪ್ಪಲು ಬಳಿಯಲ್ಲಿ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಅಪರಿಚಿತ ವ್ಯಕ್ತಿಯ ತಲೆಗೆ ಗಂಭೀರವಾದಂತ ಗಾಯವಾಗಿದೆ. ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡಂತ ಸ್ಥಳೀಯರು ಆತನನ್ನು ರಕ್ಷಿಸಿ, ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿ ಯಾರು ಎನ್ನುವುದು ತಿಳಿದು ಬರಬೇಕಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು… https://kannadanewsnow.com/kannada/should-your-whatsapp-messages-auto-delete-after-24-hours-this-is-all-you-need-to-do/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/













