Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಕಳೆದ ಒಂದು ವರ್ಷದಿಂದ ಕೈಗಾರಿಕೆ ಸ್ಥಾಪನೆಗೆ ಜಾಗ ಹುಡುಕಲು ಜಿಲ್ಲಾಧಿಕಾರಿಗೆ ಹೇಳುತ್ತಿದ್ದೇನೆ. ಇನ್ನೂ ಜಾಗ ಸಿಕ್ಕಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿನ ವಿಸಿ ಫಾರಂನಲ್ಲಿ ನಡೆಯುತ್ತರಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಕೇಂದ್ರ ಸಚಿವರು; ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರಕಾರ ನಮಗೆ ಜಾಗ ನೀಡಿಲ್ಲ ಎಂದರು. ರಾಜ್ಯದಲ್ಲಿ ನನ್ನ ಇಲಾಖೆ ಯಿಂದ ಸಾಧ್ಯವಾಗುವ ಕೆಲಸಗಳನ್ನು ಮಾಡುತ್ತಿದ್ದೇನೆ. ಭದ್ರಾವತಿಯಲ್ಲರಿವ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ ಚಿಂತನೆ ನಡೆಸಲಾಗಿದೆ. ಇತ್ತೀಚೆಗೆ ನಾನು ಆ ಕಾರ್ಖಾನೆಗೆ ಎರಡನೇ ಸಲ ಭೇಟಿ ನೀಡಿದ್ದೆ ಎಂದು ಕೇಂದ್ರ ಸಚಿವರು ಹೇಳಿದರು. ಕೃಷಿ ಮೇಳ…
ಬೆಂಗಳೂರು: “ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದರು. ಡಿ.19 ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕು “ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್ 19 ನೇ ತಾರೀಕಿನ…
ಶಿವಮೊಗ್ಗ: ಜಿಲ್ಲೆಯ ಸಾಗರದ ತಾಲ್ಲೂಕಿನ ಮಡಸೂರು ಬಳಿಯಲ್ಲಿ ಕಳೆದ ಐದು ದಿನಗಳಿಂದ ಪತ್ತೆಯಾಗದ ಎರಡು ಆಸೆಗಳು ಡ್ರೋನ್ ಕ್ಯಾಮರಾ ಹದ್ದಿನ ಕಣ್ಣಿನಲ್ಲಿ ಪತ್ತೆಯಾಗಿವೆ. ಒಂದು ಗಂಡು ಹಾಗೂ ಮತ್ತೊಂದು ಹೆಣ್ಣು ಆನೆಗಳು ಇಂದಿನ ಥರ್ಮಲ್ ಸ್ಕ್ಯಾನ್ ಡ್ರೋನ್ ಕ್ಯಾಮರಾ ಕಣ್ಣಿಗೆ ಸಿಕ್ಕಿ ಬಿದ್ದಿವೆ. ಇದೀಗ ರಸ್ತೆ ಸಂಚಾರ ಬಂದ್ ಮಾಡಿ ಶೆಟ್ಟಿಹಳ್ಳಿ ಕಡೆಗೆ ಓಡಿಸೋದಕ್ಕ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಸಾರ್ವಜನಿಕರಲ್ಲಿ ಈ ಮನವಿ ಮಾಡಿದ ಡಿಎಫ್ಓ ಮೋಹನ್ ಕುಮಾರ್ ಈ ಕುರಿತು ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಸಾಗರ-ಸೊರಬ ಡಿಎಫ್ಓ ಮೋಹನ್ ಕುಮಾರ್ ಅವರು, ಸಾಗರ ತಾಲೂಕಿನ ಮಡಸೂರು ಬಳಿಯ ಕಾಡಿನಲ್ಲಿ ಗಂಡು ಹಾಗೂ ಹೆಣ್ಣು ಆನೆಗಳು ಪತ್ತೆ ಆಗಿದ್ದಾವೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಕೃಷಿ ಕೆಲಸದಲ್ಲಿ ತೊಡಗಿದ್ದರೇ ಆನೆ ಕಾಣಿಸಿಕೊಂಡಿರುವ ವ್ಯಾಪ್ತಿಯಿಂದ ದೂರ ತೆರಳಬೇಕು. ರಾತ್ರಿ ಮನೆಯಿಂದ ಹೊರ ಬರದಂತೆ ಎಚ್ಚರಿಕೆ ವಹಿಸಲು ಮನವಿ ಮಾಡಿದ್ದಾರೆ. ಇಂದಿನ ಥರ್ಮಲ್ ಡ್ರೋನ್ ಸ್ಕ್ಯಾನ್ ಕಾರ್ಯಾಚರಣೆ ಸಾಗರ-ಸೊರಬ ಡಿಎಫ್ಓ…
ಶಿವಮೊಗ್ಗ: ಜಿಲ್ಲೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆಯೊಂದು ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ(57) ಹಾಗೂ ಪುತ್ರ ಆಕಾಶ್(32) ಆತ್ಮಹತ್ಯೆಗೆ ಶರಣಾದಂತವರಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಆತ್ಮಹತ್ಯೆಗೆ ಶರಣಾಗಿದ್ದು ನೋಡಿ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರು ವರ್ಷದ ಹಿಂದೆ ಮೊದಲ ಪತ್ನಿ ನವ್ಯಾ ಆತ್ಮಹತ್ಯೆಗೆ ಶರಣಾಗಿದ್ದರು. 6 ತಿಂಗಳ ಹಿಂದೆಯಷ್ಟೇ 2ನೇ ಮದುವೆಯನ್ನು ಆಕಾಶ್ ಆಗಿದ್ದರು. 2ನೇ ಹೆಂಡತಿ ಮನೆಯಲ್ಲಿದ್ದಾಗ ತಾಯಿ, ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು: ರಾಜಧಾನಿಯಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುವ ಲಕ್ಷಣ ಗೋಚರಿಸುತ್ತಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ (ಬಿಎಸ್ಡಬ್ಲ್ಯುಎಂಎಲ್), ಹೊಸ ‘ಲೀಚೆಟ್ ಸಂಸ್ಕರಣಾ ಘಟಕ’ನಿರ್ಮಿಸಲು ಮತ್ತು ಲೀಚೆಟ್ ತ್ಯಾಜ್ಯ ಸಂಸ್ಕರಿಸಲು ಮುಂದಾಗಿದೆ. ಇದಕ್ಕಾಗಿ ಬಿಎಸ್ಡಬ್ಲ್ಯುಎಂಎಲ್, ಪ್ರತಿ ಲೀಟರ್ ಲೀಚೆಟ್ ತ್ಯಾಜ್ಯ ಸಂಸ್ಕರಣೆಗೆ 1 ರೂಪಾಯಿ 65 ಪೈಸೆನಂತೆ ಒಟ್ಟು 474.89 ಕೋಟಿ ರೂ. ಮೊತ್ತದ ಟೆಂಡರ್ನ್ನು ‘ಮುಕ್ಕ ಪ್ರೋಟಿನ್ಸ್ ಲಿಮಿಟೆಡ್’ಗೆ ನಿಯಮದಂತೆ ನೀಡಲಾಗಿದೆ. ಸಚಿವ ಸಂಪುಟ, ಆರ್ಥಿಕ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗೆ ಟೆಂಡರ್ ಮೊತ್ತಕ್ಕೆ ಈಗಾಗಲೇ ಅನುಮೋದನೆ ನೀಡಿದೆ. ಮಿಟ್ಟಗಾನಹಳ್ಳಿ, ಕಣ್ಣೂರು ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಘನತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಘನತ್ಯಾಜ್ಯ ವಿಲೇವಾರಿಯ ಪರಿಣಾಮ ಈ ಪ್ರದೇಶಗಳಲ್ಲಿ ಅಂದಾಜು 2,878 ಮಿಲಿಯನ್ ಲೀ. ಲಿಚೇಟ್ ( ತ್ಯಾಜ್ಯದಿಂದ ಹೊರಬರುವ ದ್ರವ ತ್ಯಾಜ್ಯ) ಶೇಖರಣೆಯಾಗಿದೆ. ಆದ್ದರಿಂದ, ಲೀಚೆಟ್ ಸಂಸ್ಕರಣಾ ಘಟಕ ನಿರ್ಮಿಸಲು, ಲೀಚೆಟ್ ತ್ಯಾಜ್ಯ ಸಂಸ್ಕರಿಸಲು ಬಿಎಸ್ಡಬ್ಲ್ಯುಎಂಎಲ್ನಿಂದ ಮುಕ್ಕ ಪ್ರೋಟಿನ್ಸ್ ಲಿಮಿಟೆಡ್, ಕಾರ್ಯಾದೇಶ ಪತ್ರ ಪಡೆದಿದೆ. 9 ತಿಂಗಳದೊಳಗೆ…
ಬೆಂಗಳೂರು: ಮೂರು ವರ್ಷಗಳಿಗೆ ಒಮ್ಮೆ ನಡೆಯುವಂತ ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ 2 ಕೋಟಿ ಅನುದಾನ ಮಂಜೂರಿಗೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿಗೆ ಸಿಎಂ ಸಿದ್ದರಾಮಯ್ಯ ತಕ್ಷಣವೇ ಪ್ರತಿ ಸ್ಪಂದಿಸಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿಯಾಗಿ ಪತ್ರ ನೀಡಿ ಮನವಿ ಮಾಡಿದ್ದರು. ಸಿಎಂಗೆ ನೀಡಿದ ಮನವಿ ಪತ್ರದಲ್ಲಿ ಸಾಗರದ ಮಾರಿಕಾಂಬ ದೇವಿ ಜಾತ್ರೆ ಮೂರು ವರ್ಷಗಳಿಗೆ ಒಮ್ಮೆ ಮಾಡಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಯ ಭಕ್ತರು ಆಗಮಿಸುತ್ತಾರೆ ಎಂದಿದ್ದರು. 9 ದಿನಗಳ ಕಾಲ ನಡೆಯುವಂತ ಸಾಗರದ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿ ಅಗಲಿದ್ದಾರೆ. ಹೀಗಾಗಿ ಮೂಲ ಸೌಕರ್ಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೊಂದು ವಿಶೇಷ ಆದ್ಯತೆ ಮೇರೆಗೆ ಪರಿಗಣಿಸಿ ಅನುದಾನ ಕಲ್ಪಿಸಲು ಮನವಿ ಮಾಡಿದ್ದರು. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮನವಿಗೆ ಸ್ಥಳದಲ್ಲೇ ಸಿಎಂ ಸಿದ್ದರಾಮಯ್ಯ…
ಸಾಮಾನ್ಯವಾಗಿ ಈಗಿನ ಕಾಲದಲ್ಲಿ ವಿವಾಹಕ್ಕೆ ಸಂಬಂಧಪಟ್ಟಂತಹ ತೊಂದರೆಗಳನ್ನು ಸಾಕಷ್ಟು ಜನರು ಅನುಭವಿಸುತ್ತಿರುತ್ತಾರೆ. ಆದ್ದರಿಂದ ವಿವಾಹಕ್ಕೆ ಸಂಬಂಧಪಟ್ಟಂತೆ ತೊಂದರೆಯನ್ನು ದೂರ ಮಾಡಿಕೊಳ್ಳಬೇಕೆಂದರೆ ಯಾವ ಪೂಜೆಯನ್ನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ…
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ದುರ್ನಡತೆ ತಡೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಘಟಕಾಧಿಕಾರಿಗಳು ಕೆಲ ಕ್ರಮಗಳನ್ನು ಕೈಗೊಳ್ಳುವಂತೆ ಖಡಕ್ ಆದೇಶ ಮಾಡಲಾಗಿದೆ. ಈ ಕುರಿತಂತೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರಾದಂತ ಡಾ.ಎಂ.ಎ ಸಲೀಂ ಅವರು ಆದೇಶ ಹೊರಡಿಸಿದ್ದು, ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ ಸಿಬ್ಬಂದಿಯವರುಗಳ ಹೆಸರುಗಳು ತಳಕು ಹಾಕಿಕೊಂಡಿರುವುದು ತೀರಾ ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಪ್ರವೃತ್ತಿಗಳು ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸಾರ್ಹತೆಗೆ ಧಕ್ಕೆಯಾಗುವುದರೊಂದಿಗೆ ಇಲಾಖೆಯನ್ನು ಅಪಕೀರ್ತಿಗೆ ಗುರಿ ಮಾಡುತ್ತವೆ. ಈ ರೀತಿಯ ದುಷ್ಕೃತ್ಯಗಳು ಸಾರ್ವಜನಿಕರಿಗೆ ಪೊಲೀಸರ ಮೇಲಿನ ನಂಬಿಕೆಯನ್ನು ಕುಂದಿಸುವುದಲ್ಲದೆ, ಕಾನೂನು ಜಾರಿಯ ಸಂಪೂರ್ಣ ವ್ಯವಸ್ಥೆಯ ಮೂಲ ಸಿದ್ಧಾಂತಗಳನ್ನೇ ಸಂಶಯಾಸ್ಪದವಾಗಿ ನೋಡುವಂತಹ ಸನ್ನಿವೇಶವನ್ನು ನಿರ್ಮಾಣ ಮಾಡುತ್ತದೆ. ಆದ್ದರಿಂದ ಇಂತಹ ಘಟನೆಗಳನ್ನು ಸಮರ್ಥವಾಗಿ ತಡೆಗಟ್ಟಿ, ಹೊಣೆಗಾರಿಕೆಯನ್ನು ನಿಗಧಿಪಡಿಸುವ ಮೂಲಕ ಪೊಲೀಸ್ ಇಲಾಖೆಯ ಸಮಗ್ರತೆಯನ್ನು ಪುನರ್ನಿಮಿ್ರಸುವ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ ಎಂದಿದ್ದಾರೆ. ಇತ್ತೀಚೆಗೆ ದಾವಣಗೆರೆಯಲ್ಲಿ ಒಬ್ಬ ಚಿನ್ನದ ವ್ಯಾಪಾರಿಯ ಮೇಲೆ ದರೋಡೆ…
ಬೆಂಗಳೂರು: ಹಿರಿಯ ಪತ್ರಕರ್ತರಾದ ಟಿ.ಜೆ.ಎಸ್. ಜಾರ್ಜ್ ಅವರು ಸುದ್ದಿ ಮನೆಗೆ ಘನತೆ ತಂದರೆ, ಸಂಜೆವಾಣಿ ಅ.ಚ.ಶಿವಣ್ಣ ಅವರು ಸ್ಕೂಪ್ ಮತ್ತು ಬ್ರೇಕಿಂಗ್ ನ್ಯೂಸ್ಗಳಿಗೆ ಹೊಸ ಮೆರಗು ಕೊಟ್ಟರು ಎಂದು ಕೆಯುಡಬ್ಲೂಜೆ ಶ್ಲಾಗಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯೂಡಬ್ಲ್ಯೂಜೆ)ವತಿಯಿಂದ ಅಗಲಿದ ಹಿರಿಯ ಪತ್ರಕರ್ತರಾದ ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಆರಂಭದಲ್ಲಿ ಇಬ್ಬರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಒಂದು ನಿಮಿಶ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ, ಹಿರಿಯ ಪತ್ರಕರ್ತರಾದ ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ ಅವರಲ್ಲಿದ್ದ ಸಮಗ್ರ ಒಳನೋಟ ಮತ್ತು ದೂರದೃಷ್ಟಿಯಿಂದಾಗಿ ಸುದ್ದಿಮನೆಗೆ ಆ ಕಾಲಘಟ್ಟದಲ್ಲಿ ತನ್ನದೇ ಆದ ಮಹತ್ವ ತುಂಬಿತ್ತು ಎಂದು ಹೇಳಿದರು. ಇಂದು ನಾವು ಕಾಣುತ್ತಿರುವ ಪತ್ರಿಕೋದ್ಯಮದಲ್ಲಿ ಒಂದಷ್ಟು ವೃತ್ತಿ ಬದ್ದತೆಯ ಬೆಳವಣಿಗೆಗೆ ಅಂದು ಅವರಲ್ಲಿದ್ದ ಕೆಲ ಮೌಲ್ಯಗಳು ಪೂರಕವಾಗಿದ್ದವು ಎಂದು ಅಭಿಪ್ರಾಯಪಟ್ಟರು. ಕಳೆದ…
ಶಿವಮೊಗ್ಗ : ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗದಿಂದ ಫಸಲು ಕಳೆದುಕೊಂಡಿರುವ ಬೆಳೆಗಾರರಿಗೆ ಪರಿಹಾರ ನೀಡುವಂತೆ ಸದನದಲ್ಲಿ ಗಟ್ಟಿಯಾಗಿ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ. ಅಡಿಕೆ ಬೆಳೆಗಾರರು ತೀವೃ ಸಂಕಷ್ಟದಲ್ಲಿದ್ದು, ಅಡಿಕೆ ಬೆಳೆಯುವ ಪ್ರದೇಶದಿಂದ ಬಂದ ಶಾಸಕರು ಒಟ್ಟಾಗಿ ಸರ್ಕಾರದ ಮೇಲೆ ಪರಿಹಾರಧನ ಬಿಡುಗಡೆಗೆ ಒತ್ತಡ ತರುತ್ತೇವೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇದರ ಜೊತೆಗೆ ಹವಮಾನ ಆಧಾರಿತ ಬೆಳೆವಿಮೆ ಬಿಡುಗಡೆಗೂ ಸಹ ಸರ್ಕಾರಕ್ಕೆ, ಸಂಬAಧಪಟ್ಟ ಸಚಿವರಿಗೆ ಮನವಿ ಮಾಡಲಾಗಿದ್ದು, ಶೀಘ್ರ ಪರಿಹಾರಧನ ಬಿಡುಗಡೆಯಾಗುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಗೊಂದಲ ಶೀಘ್ರದಲ್ಲಿಯೆ ಬಗೆಹರಿಸಲು ನಾವು ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ನನ್ನ ಹತ್ತಿರ ಸಹಜವಾಗಿ ಕೆಲವೊಂದು ವಿಷಯಗಳನ್ನು ಚರ್ಚೆ ಮಾಡಿದ್ದು, ಕೆಲವು ಮಾಧ್ಯಮದಲ್ಲಿ ಬಂದಿತ್ತು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಗರವ್ಯಾಪ್ತಿಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಗೆ…














