Author: kannadanewsnow09

ಶಿವಮೊಗ್ಗ: ರಾಜಕೀಯವಾಗಿ ಅನುನುಭವಿಯಾಗಿದ್ದ ನನಗೆ ರಾಜಕೀಯ ಪ್ರಜ್ಞೆ ಮೂಡಲು ತಾಲ್ಲೂಕಿನ ಪತ್ರಕರ್ತರಿಂದ ಸಲಹೆ, ಸಹಕಾರ ಪಡೆದು ಸುಶಿಕ್ಷಿತನಾಗಲು ಸಾಧ್ಯವಾಗಿದೆ ಎಂದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಮಂಗಳವಾರ ಪಟ್ಟಣದ ಶ್ರೀರಂಗ ಕನ್ವೆನ್ಷನ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಾಂಗ,ಕಾರ್ಯಾಂಗ,ಶಾಸಕಾಂಗದ ಜೊತೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಸಮರ್ಥವಾಗಿರುವ ಪತ್ರಿಕಾ ರಂಗ ತನ್ನದೇ ಆದ ಶಕ್ತಿ ಉಳಿಸಿಕೊಂಡಿದೆ. ಆದರೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ಬಂದ ಮೇಲೆ ಪತ್ರಿಕಾ ರಂಗದ ನಿಜವಾದ ದಿಕ್ಕು,ದಿಸೆ ಬದಲಾಗಿದೆ. ಸಮಾಜಕ್ಕೆ ಸರಿ ದಾರಿ ತೋರಿಸುವ ಕ್ಷೇತ್ರ ತನ್ನ ನಿಜತನವನ್ನು ಬದಲಾಯಿಸಿಕೊಂಡರೆ ಯಾರಿಗೆ ಪ್ರಶ್ನೆ ಮಾಡಲು ಸಾಧ್ಯ. ಸಾಮಾಜಿಕ ಮಾಧ್ಯಮಗಳ ಹಾವಳಿಯಿಂದ ಎಲ್ಲರೂ ತಮ್ಮ ತನವನ್ನು ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸಚಿವನಾಗಿ ಉತ್ತಮ ಕೆಲಸ ಮಾಡಿದ್ದರೂ ತಿರುಚಿ ಹಾಕಿದಾಗ ಬಹಳ ಬೇಸರವಾಗುತ್ತದೆ. ಸಾರ್ವಜನಿಕರು ರಾಜಕಾರಣಿಗಳನ್ನು ದೂರಿದಂತೆ ಪತ್ರಕರ್ತರನ್ನು ದೂರುವ ಸಂದರ್ಭ ಹೆಚ್ಚಾಗಿದೆ. ವೃತ್ತಿಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ನಡೆಸೋದಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಈ ಆದೇಶವನ್ನು ದಿಢೀರ್ ಹಿಂಪಡೆಯಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಆದೇಶ ಮಾಡಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ನಡೆಸಲು ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ. ದಿನಾಂಕ 16-01-2026ರಂದು ಅಧಿಕೃತ ಜ್ಞಾಪನಾ ಪತ್ರದಲ್ಲಿ ಹೊರಡಿಸಿದ್ದಂತ ಆದೇಶವನ್ನು ಈ ಕೂಡಲೇ ಹಿಂಪಡೆಯಲಾಗಿದೆ. ಸದರಿ ಕಾರ್ಯಕ್ಕೆ ನೇಮಿಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮೂಲ ಸ್ಥಳದಲ್ಲಿಯೇ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/shivamogga-power-outage-in-these-areas-of-soraba-ulavi-on-january-22nd/

Read More

ಶಿವಮೊಗ್ಗ: ಜನವರಿ.22, 2026ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಸೊರಬ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 22-01-2026ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದೆ. ಜನವರಿ.22ರಂದು ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಜನವರಿ.22ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಬರಗಿ, ಕಾನಳ್ಳಿ, ಉಳವಿ, ಹೊಸಬಾಳೆ ಮತ್ತು ದೂಗೂರು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಕರೆಂಟ್ ಇರೋದಿಲ್ಲ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದೆ. ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/bjp-holds-protest-in-sagar-condemning-state-governments-failure/ https://kannadanewsnow.com/kannada/nhm-contract-employees-protest-against-state-government-for-not-releasing-salaries-call-for-struggle/

Read More

ಶಿವಮೊಗ್ಗ : ಸಾಗರದ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ, ಕ್ಷೇತ್ರವ್ಯಾಪ್ತಿಯಲ್ಲಿ ಗಾಂಜಾ ಸೇರಿ ವಿವಿಧ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ವಿಫಲವಾಗಿರುವ ಆಡಳಿತದ ಕ್ರಮದ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಪೊಲೀಸ್ ಸ್ಟೇಷನ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಶಿವಮೊಗ್ಗದ ಸಾಗರದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಕ್ಷೇತ್ರವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಪ್ರಕರಣ ಜಾಸ್ತಿಯಾಗಿದೆ. ಗಾಂಜಾ ಎಲ್ಲಿಂದ ಬರುತ್ತಿದೆ, ಯಾರಿಗೆ ಸರಬರಾಜು ಮಾಡುತ್ತಿದ್ದಾರೆ ಎಂದು ಪೊಲೀಸರಿಗೆ ಗೊತ್ತಿದ್ದರೂ ಅವರು ಗಮನ ಹರಿಸುತ್ತಿಲ್ಲ. ಹೊರಜಿಲ್ಲೆಗಳಿಂದ ಗಾಂಜಾ ಅಕ್ರಮವಾಗಿ ಸರಬರಾಜು ಆಗುತ್ತಿದೆ. ತಕ್ಷಣ ಇದರ ವಿರುದ್ದ ಕ್ರಮ ಜರುಗಿಸಬೇಕು. ಇಲ್ಲವಾದರೆ ಆಡಳಿತದ ವಿರುದ್ದ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಪದೇ ಪದೇ ಸಾಗರ ಕ್ಷೇತ್ರದಲ್ಲಿ ಈ ರೀತಿಯ ಪ್ರಕರಣಗಳು ದಾಖಲಾಗುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ ಸಾಗರ ತಾಲ್ಲೂಕಿನಲ್ಲಿ ಅಸಮರ್ಪಕ ವಿದ್ಯುತ್ ವ್ಯವಸ್ಥೆಯಿಂದ ರೈತರು ಹೈರಾಣಾಗಿದ್ದಾರೆ ಎಂಬುದಾಗಿ…

Read More

ಬೆಂಗಳೂರು: ಶಕ್ತಿ ಯೋಜನೆಯಡಿ ಹೊರ ರಾಜ್ಯದವರಿಗೂ ಟಿಕೆಟ್ ನೀಡಿ, ಅದರ ಬದಲಿಗೆ ತಮ್ಮ ಯುಪಿಐ ಖಾತೆಗೆ ಟಿಕೆಟ್ ಮೊತ್ತದ ದರವನ್ನು ಕೆಲ ಬಿಎಂಟಿಸಿ ನಿರ್ವಾಹಕರು ಪಡೆದಿದ್ದು ಬೆಳಕಿಗೆ ಬಂದಿತ್ತು. ಈ ಯುಪಿಐ ಸ್ಕ್ಯಾನರ್ ದುರುಪಯೋಗ ಪ್ರಕರಣದಲ್ಲಿ ನಾಲ್ವರು ನಿರ್ವಾಹಕರನ್ನು ಅಮಾನತುಗೊಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದೇಶಿಸಿದೆ. ಹೊರ ರಾಜ್ಯದವರಿಗೆ ಐಡಿ ಕಾರ್ಡ್ ನೋಡಿದ ನಂತ್ರ, ಅವರಿಗೆ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡುವಂತಿಲ್ಲ. ಹೀಗಿದ್ದರೂ ಬಿಎಂಟಿಸಿಯ ಕಂಡಕ್ಟರ್, ಅವರಿಗೂ ಶಕ್ತಿ ಯೋಜನೆಯ ಟಿಕೆಟ್ ನೀಡಿ, ಅವರಿಂದ ಅದರಲ್ಲಿ ಇದ್ದಂತ ಹಣವನ್ನು ತಮ್ಮ ಯುಪಿಐ ಸ್ಕ್ಯಾನರ್ ಗೆ ಹಾಕಿಸಿಕೊಂಡಿದ್ದರು. ಬಿಎಂಟಿಸಿ ತನಿಖಾಧಿಕಾರಿಗಳು ಟಿಕೆಟ್ ಚೆಕ್ ಮಾಡಿದಂತ ಸಂದರ್ಭದಲ್ಲಿ ಹೀಗೊಂದು ಹಗರಣ ಬೆಳಕಿಗೆ ಬಂದಿತ್ತು. ಹೀಗಾಗಿ ಬಿಎಂಟಿಸಿಯ ಎಲ್ಲಾ ಘಟಕದಲ್ಲೂ ಯುಪಿಐ ಸ್ಕ್ಯಾನರ್ ದುರುಪಯೋಗದ ಬಗ್ಗೆ ಸಮಗ್ರ ತನಿಖೆಯನ್ನು ಸಂಸ್ಥೆಯು ನಡೆಸಿತ್ತು. ಈ ಸಂದರ್ಭದಲ್ಲಿ ಮೂವರು ಕಂಡಕ್ಟರ್ ಯುಪಿಐ ಸ್ಕ್ಯಾನರ್ ದುರುಪಯೋಗ ಮಾಡಿಕೊಂಡಿರೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ಬಿಎಂಟಿಸಿಯ ಈಶಾನ್ಯ ವಲಯದ ಘಟಕ…

Read More

ಬೆಂಗಳೂರು: ಕರ್ನಾಟಕದಲ್ಲಿ ಮತ್ತು ಬಿಬಿಎಂಪಿ (ಜಿಬಿಎ) ವ್ಯಾಪ್ತಿಯಲ್ಲಿ ಬರುವ ಕ್ಲಬ್ ಗಳ ಸದನ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸುವಂತೆ ಸಭಾಧ್ಯಕ್ಷರಾದಂತ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು,ಕರ್ನಾಟಕ 14ನೇ ವಿಧಾನಸಭೆಯು 2012-13ನೇ ಸಾಲಿನಲ್ಲಿ ರಾಜ್ಯದ ಮತ್ತು ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬರುವ ಕ್ಲಬ್ ಗಳ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸದನ ಸಮಿತಿಯನ್ನು ರಚಿಸಿತ್ತು. ಗೌರವಾನ್ವಿತ ಸಮಿತಿಯು 07-06-2013 ರಲ್ಲಿ ಮಧ್ಯಂತರ ವರದಿಯನ್ನು ಸದನದಲ್ಲಿ ಮಂಡಿಸಿರುತ್ತದೆ. ತದನಂತರ 07-02-2017 ರಲ್ಲಿ ಸುಮಾರು 180 ಪುಟಗಳ ಸಮಗ್ರ ವರದಿಯನ್ನು ಸದನ ಸಮಿತಿಯು ಸಭಾಧ್ಯಕ್ಷರಿಗೆ ಸಲ್ಲಿಸಿರುತ್ತದೆ ಎಂದಿದ್ದಾರೆ. ಸದನ ಸಮಿತಿಯು ಕ್ಲಬ್ ಗಳು ಸರ್ಕಾರದ ನಿಯಮಗಳನ್ನು ಮತ್ತು ಕಾನೂನುಗಳನ್ನು ಗಾಳಿಗೆ ತೂರಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ತಮ್ಮ ವರದಿಯಲ್ಲಿ ಪ್ರಸ್ತಾಪಿಸಿರುತ್ತಾರೆ. ಇದರ ಜೊತೆಗೆ ಅನೇಕ ಕ್ಲಬ್ ಗಳಿಗೆ ಭೇಟಿ ನೀಡಿ ಕ್ಲಬ್ ಗಳ…

Read More

ಬೆಂಗಳೂರು: ಪ್ರತಿ ಮೂರು ತಿಂಗಳಿಗೊಮ್ಮೆ ವೇತನ ,ಜಿಲ್ಲೆಗಳಿಗೆ ಅನುದಾನ ಬಿಡುಗಡೆಗೆ ವಿಳಂಬ ಮಾಡಲಾಗುತ್ತಿದೆ. ಶೇ.15ರಷಅಟು ವೇತನ ಹೆಚ್ಚಳಕ್ಕೆ ಅನುದಾನ ಬಿಡುಗಡೆಯನ್ನೇ ಮಾಡಿಲ್ಲ. ಖಾಯಂ ಪ್ರಕ್ರಿಯೆಯನ್ನು ಆರಂಭಿಸಿಲ್ಲ. ಈ ಎಲ್ಲಾ ಕಾರಣದಿಂದಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸೋದಕ್ಕೆ ಎನ್ ಹೆಚ್ ಎಂ ಗುತ್ತಿಗೆ ನೌಕರರು ಮುಂದಾಗಿದ್ದಾರೆ. 14 ದಿನಗಳ ಒಳಗಾಗಿ ಬೇಡಿಕೆ ಈಡೇರಿಸದೇ ಇದ್ದರೇ, ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ KSHCOEA ಸಂಘವು, ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು, ಈಗ ನವೆಂಬರ್ ಡಿಸೆಂಬರ್ ತಿಂಗಳಿನಿಂದ ವೇತನ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದೂ, ಮನೆ ಬಾಡಿಗೆ, ಮಕ್ಕಳ ಶಾಲೆ ಫೀಸ್, ಗಾಡಿ ಬಾಡಿಗೆ, ಪೆಟ್ರೋಲ್ ಖರ್ಚು, ವಿದ್ಯುತ್ ಬಿಲ್ಲು ಮನೆಗೆ ಬೇಕಾಗುವ ಮೂಲಭೂತ ಅಗತ್ಯತೆಗಳು (ರೇಷನ್, ತರಕಾರಿ, ಹಾಲು, ಹಣ್ಣು, ಇನ್ನಿತರೇ ), ಬ್ಯಾಂಕ್ ಇ.ಎಂ.ಐ,…

Read More

ಲಕ್ನೋ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಲಕ್ನೋದಲ್ಲಿ ಸಂಕ್ರಾಂತಿ ಪ್ರಯುಕ್ತ ಅದ್ಧೂರಿಯಾಗಿ ಸುಗ್ಗಿ ಸಂಕ್ರಾಂತಿ ಸಾಂಸ್ಖೃತಿಕ ಕಾರ್ಯಕ್ರಮ ನೆರವೇರಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ  ಹಾಗೂ ಉತ್ತರಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕನ್ನಡ ಅಸೋಸಿಯೇಷನ್‌ ಲಕ್ನೋ ಕುರ್ಸಿ ರೋಡ್‌ ಯುನಿಟಿ ಸಿಟಿ ಬಹುದ್ದೂರ್‌ ಪುರ್, ಲಕ್ನೋ, ಉತ್ತರಪ್ರದೇಶ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಬೌದ್ಧ ಸಂಶೋಧನಾ ಸಂಸ್ಥೆ, ಗೋಮ್ತಿನಗರ, ಲಕ್ನೋ   ಉತ್ತರ ಪ್ರದೇಶ, ಇಲ್ಲಿ “ಸುಗ್ಗಿ ಸಂಕ್ರಾಂತಿ ಸಾಂಸ್ಕೃತಿಕ ಕಾರ್ಯಕ್ರಮ   ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಲಕ್ನೋ ಕನ್ನಡ ಅಸೋಸಿಯೇಷನ್‌ ಅಧ್ಯಕ್ಷೆ ಕನ್ನಡತಿ ಡಾ.ಗಾಯತ್ರಿ, ರಾಷ್ಟ್ರೀಯ ಬಟಾನಿಕಲ್‌ ರಿಸರ್ಚ ಸಂಸ್ಥೆಯ ಹಿರಿಯ ವಿಜ್ಞಾನಿ,ಹಾಗೂ ಸಂಸ್ಥೆಯ  ಕಾರ್ಯದರ್ಶಿ ಡಾ.ಸಂಜೀವ ನಾಯಕ, ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್‌ ಮತ್ತಿಹಳ್ಳಿ, ಶಿಕ್ಷಣ ಇಲಾಖೆಯ ನಿರ್ದೇಶಕ ಸತೀಶ್‌ ಕುಮಾರ್‌ ಹೊಸಮನಿ, ಗಡಿ ಪ್ರಾಧಿಕಾರದ ಸದಸ್ಯರಾದ ಶಿವರೆಡ್ಡಿ, ಡಾ. ಸಂಜೀವಕುಮಾರ್‌ ಅತಿವಾಳೆ, ಸಮಾಜ ಸೇವಕಿ ಜಾನಕಿ ಮುಂತಾದವರು ಭಾಗವಹಿಸಿದ್ದರು. ಲಕ್ನೋದಲ್ಲಿ ವಾಸಿಸುತ್ತಿರುವ …

Read More

ಶಿವಮೊಗ್ಗ : ಸಾಗರದಲ್ಲಿ ಫೆಬ್ರವರಿ 3ರಿಂದ 11ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧವಾದ ಶ್ರೀ ಮಾರಿಕಾಂಬಾ ಜಾತ್ರೆಯ 9 ದಿನಗಳ ಕಾಲ 25ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಬರುವ ಭಕ್ತರಿಗೆ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಮೂಲಭೂತ ಸೌಕರ್ಯಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳ ಬೇಕಾದುದ್ದು ನಮ್ಮೆಲ್ಲರ ಜವಾಬ್ದಾರಿ ಜಾತ್ರೆಗೆ ಸಂಬಂಧಿಸಿದಂತೆ ಸಕಲ ಸಿದ್ದತೆ ನಡೆದಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಉನ್ನತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಜಾತ್ರೆ ಹಿನ್ನೆಲೆಯಲ್ಲಿ ಅಡಿಷನಲ್ ಎಸ್ಪಿ, ಮೂವರು ಡಿವೈಎಸ್‌ಪಿ, ಇನ್ಸ್ಪೆಕ್ಟರ್ ಹಾಗೂ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಕ ಮಾಡಲು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಮಾಡಿದ ಶಾಸಕರು, ಜಾತ್ರೆ ಯಶಸ್ಸಿಗಾಗಿ ರಚಿಸಿರುವ 20 ಸಮಿತಿಗಳಿಗೂ ಒಬ್ಬೊಬ್ಬ ಅಧಿಕಾರಿಯನ್ನು ಮೇಲುಸ್ತುವಾರಿಯಾಗಿ ನೇಮಕ ಮಾಡಿದ್ದು ಅವರು 9 ದಿನಗಳ ಕಾಲ ರಜೆ ಹಾಕದೆ…

Read More

ನವದೆಹಲಿ: ಇಂದು ಭಾರತದ ಷೇರು ಮಾರುಕಟ್ಟೆ ತನ್ನ ಹಿನ್ನಡೆಯನ್ನು ಹೆಚ್ಚಿಸಿಕೊಂಡಿದ್ದು, ಎರಡು ದಿನಗಳ ಕ್ರೂರ ಮಾರಾಟವನ್ನು ಮಿತಿಗೊಳಿಸಿದೆ. ಇದು ₹10 ಲಕ್ಷ ಕೋಟಿಗೂ ಹೆಚ್ಚಿನ ಹೂಡಿಕೆದಾರರ ಸಂಪತ್ತನ್ನು ಅಳಿಸಿಹಾಕಿದೆ. 30 ಷೇರುಗಳ ಎಸ್ & ಪಿ ಬಿಎಸ್ಇ ಸೆನ್ಸೆಕ್ಸ್ 1,065.71 ಪಾಯಿಂಟ್‌ಗಳ ಕುಸಿತದೊಂದಿಗೆ 82,180.47 ಕ್ಕೆ ತಲುಪಿದೆ, ಆದರೆ ವಿಶಾಲವಾದ ನಿಫ್ಟಿ 50 353 ಪಾಯಿಂಟ್‌ಗಳ ಕುಸಿತದೊಂದಿಗೆ 25,232.50 ಕ್ಕೆ ತಲುಪಿದೆ, ಇದು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ನಿರಂತರ ವಿದೇಶಿ ಹೊರಹರಿವುಗಳು ಮತ್ತು ಬಜೆಟ್ ಪೂರ್ವದ ನಡುಕಗಳ ಪರಿಪೂರ್ಣ ಚಂಡಮಾರುತವಾಗಿದ್ದು, ಹೂಡಿಕೆದಾರರ ಅಪಾಯದ ಹಸಿವನ್ನು ಹೊಡೆದಿದೆ. ಟ್ರಂಪ್ ಯುಗದ ಸುಂಕಗಳ ಕುರಿತು ಯುಎಸ್ ಸುಪ್ರೀಂ ಕೋರ್ಟ್‌ನ ತೀರ್ಪಿನ ಮುಂದೆ ದೇಶೀಯ ಮಾರುಕಟ್ಟೆಗಳು ಜಾಗರೂಕವಾಗಿದ್ದವು, ಯುಎಸ್ ವ್ಯಾಪಾರ ನೀತಿಯ ಮೇಲಿನ ಹೊಸ ಅನಿಶ್ಚಿತತೆಯು ಇತ್ತೀಚಿನ ಏಕೀಕರಣವನ್ನು ಹೆಚ್ಚಿಸಿದೆ” ಎಂದು ಜಿಯೋಜಿತ್ ಇನ್ವೆಸ್ಟ್‌ಮೆಂಟ್ಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮುಂದುವರೆದ ಎಫ್‌ಐಐ ಹೊರಹರಿವು, ಹೆಚ್ಚುತ್ತಿರುವ ಯುಎಸ್ ಮತ್ತು ಜಪಾನಿನ ಬಾಂಡ್ ಇಳುವರಿ…

Read More