Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮನೆ ಮಾಡಿರುವ ‘ವಿಐಪಿ ಸಂಸ್ಕೃತಿ’ ಹಾಗೂ ಶಾಸಕರಿಗೆ ಐಪಿಎಲ್ ಟಿಕೆಟ್ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗಿಂತ ಶಾಸಕರ ಸೌಲಭ್ಯಕ್ಕೇ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಅವರು ಚಾಟಿ ಬೀಸಿದ್ದಾರೆ. ಈ ಕುರಿತು ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದಿರುವಂತ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಮೋಹ! “ರಾಜ್ಯದಲ್ಲಿ ತಾವು ‘ಸಮಾಜವಾದಿ’ ಎಂದು ಕರೆದುಕೊಳ್ಳುವ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವಿದೆ. ಆದರೆ, ಇಂತಹ ಆಡಳಿತದಲ್ಲೂ ವಿಐಪಿ ಸಂಸ್ಕೃತಿ ಮುಂದುವರಿಯುತ್ತಿರುವುದು ಅಚ್ಚರಿ ಮತ್ತು ದುರಂತ” ಎಂದು ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. ಕಳೆದ ವರ್ಷ ಆರ್.ಸಿ.ಬಿ ವಿಜಯೋತ್ಸವದ ವೇಳೆ ಮುಖ್ಯಮಂತ್ರಿಗಳು ತಮ್ಮ ಮೊಮ್ಮಗನನ್ನು ವೇದಿಕೆಗೆ ಕರೆತಂದಿದ್ದನ್ನು ನೆನಪಿಸಿದ ಅವರು, ಅಧಿಕಾರವನ್ನು ವೈಯಕ್ತಿಕ ಪ್ರತಿಷ್ಠೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಸದನದಲ್ಲಿ ಜನಸಾಮಾನ್ಯರ ಧ್ವನಿ ಎಲ್ಲಿ? ಮಾರ್ಚ್ 26ರಂದು ವಿಧಾನಸಭೆಯಲ್ಲಿ ನಡೆದ ವಿದ್ಯಮಾನಗಳ…

Read More

ಬೆಂಗಳೂರು: ದಿನಾಂಕ 28.03.2026 ಮತ್ತು 05.04.2026 ಗಳಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 2026-IPL T20 ಕ್ರಿಕೆಟ್‌  ಪಂದ್ಯಾವಳಿಗಳ ವೀಕ್ಷಣೆಗೆ ಬಂದು ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ನೀಡಿದ್ದು, ದಿನಾಂಕ: 28.03.2026 & 05.04.2026 ಗಳಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ TATA Indian Premier League 2026-IPL T20 ಕ್ರಿಕೆಟ್‌  ಪಂದ್ಯಾವಳಿಗಳು ನಡೆಯಲಿದ್ದು, ಸದರಿ ಕ್ರಿಕೆಟ್‌ ಪಂದ್ಯಾವಳಿಗಳ ವೀಕ್ಷಣೆಗೆ ಬಂದು-ಹೋಗುವ ವೀಕ್ಷಕರಿಗೆ ದಟ್ಟಣೆಗನುಗುಣವಾಗಿ ಬೆಂ.ಮ.ಸಾ.ಸಂಸ್ಥೆಯಿಂದ ಸಾರಿಗೆಗಳನ್ನು ಕಾರ್ಯಾಚರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶಗಳಿಗೆ ನಡುವೆ ಕಾರ್ಯಾಚರಿಸಲಾಗುವ ಸಾರಿಗೆಗಳ ವಿವರ ಕೆಳಕಂಡಂತಿದೆ: ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ 1 ಎಸ್.ಬಿ. ಎಸ್-1ಕೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಕಾಡುಗೋಡಿಬಸ್‌ ನಿಲ್ದಾಣ ಹೆಚ್.ಎ.ಎಲ್‌ರಸ್ತೆ 2 ಜಿ-2 ಸರ್ಜಾಪುರ 3 ಜಿ-3 ಎಲೆಕ್ಟ್ರಾನಿಕ್‌ ಸಿಟಿ (ಹೊಸೂರುರಸ್ತೆ) 4 ಜಿ-4 ಬನ್ನೇರುಘಟ್ಟ ನ್ಯಾಷನಲ್‌  ಪಾರ್ಕ್ 5 ಜಿ-7 ಜನಪ್ರಿಯ    …

Read More

ಬೆಂಗಳೂರು: ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪಿ.ಇ.ಎಸ್. ವಿಶ್ವವಿದ್ಯಾಲಯದ (PES University) ಉಪನ್ಯಾಸಕರೊಬ್ಬರು ತರಗತಿಯಲ್ಲೇ ವಿದ್ಯಾರ್ಥಿಯೊಬ್ಬನನ್ನು ‘ಭಯೋತ್ಪಾದಕ’ (Terrorist) ಎಂದು ಕರೆದು ಅವಮಾನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಸದರಿ ಉಪನ್ಯಾಸಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ವರದಿಗಳ ಪ್ರಕಾರ, ವಿಶ್ವವಿದ್ಯಾಲಯದ ಬಿಬಿಎ ಅನಾಲಿಟಿಕ್ಸ್ ವಿಭಾಗದ ಅಡ್ಜಂಕ್ಟ್ ಫ್ಯಾಕಲ್ಟಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮುರಳೀಧರ್ ದೇಶಪಾಂಡೆ ಎಂಬುವವರು ಈ ಕೃತ್ಯ ಎಸಗಿದ್ದಾರೆ. ತರಗತಿಯಲ್ಲಿ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬನ ಧರ್ಮ ಅಥವಾ ಹೆಸರನ್ನು ಗುರಿಯಾಗಿಸಿಕೊಂಡು ಸುಮಾರು 13ಕ್ಕೂ ಹೆಚ್ಚು ಬಾರಿ ಆತನನ್ನು “ಉಗ್ರ” ಎಂದು ಕರೆದಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಉಪನ್ಯಾಸಕರು, “ನಿನಗೆ ನಾಚಿಕೆಯಾಗುವುದಿಲ್ಲವೇ? ನೀನೊಬ್ಬ ನಿರುಪಯುಕ್ತ ವ್ಯಕ್ತಿ, ನೀನೊಬ್ಬ ಭಯೋತ್ಪಾದಕ” ಎಂಬರ್ಥದ ಮಾತುಗಳನ್ನು ಆಡಿದ್ದಾರೆ. ಅಲ್ಲದೆ, ಇರಾನ್ ಯುದ್ಧ ಮತ್ತು ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಅವರ ಹೆಸರನ್ನು ಪ್ರಸ್ತಾಪಿಸಿ ವಿದ್ಯಾರ್ಥಿಯನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ. ವೈರಲ್ ಆದ ವಿಡಿಯೋ – ಆಕ್ರೋಶ: ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು…

Read More

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಮದ್ಯವ್ಯಸನಿಯೊಬ್ಬ ಮೊಬೈಲ್ ಟವರ್ ಹತ್ತಿ ವಿಚಿತ್ರ ಬೇಡಿಕೆ ಇಡುವ ಮೂಲಕ ಸಾರ್ವಜನಿಕರನ್ನು ಹಾಗೂ ಪೊಲೀಸರನ್ನು ತಲ್ಲಣಗೊಳಿಸಿದ ಘಟನೆ ನಡೆದಿದೆ. ಏನಿದು ಘಟನೆ? ಕೋಟ್ಯಾಳ ಗ್ರಾಮದ ನಿವಾಸಿಯಾಗಿರುವ ಶ್ರೀಶೈಲ್ ಎಂಬ ವ್ಯಕ್ತಿ ಮದ್ಯದ ಅಮಲಿನಲ್ಲಿ ಗ್ರಾಮದ ಮೊಬೈಲ್ ಟವರ್ ಹತ್ತಿದ್ದಾನೆ. ಕೆಳಗೆ ಇಳಿಯುವಂತೆ ಗ್ರಾಮಸ್ಥರು ಎಷ್ಟೇ ವಿನಂತಿಸಿದರೂ ಕೇಳದ ಆತ, “ನನಗೆ ಒಂದು ಬಾಟಲ್ ಮದ್ಯ ಕೊಟ್ಟರೆ ಮಾತ್ರ ನಾನು ಕೆಳಗೆ ಬರುತ್ತೇನೆ” ಎಂದು ಪಟ್ಟು ಹಿಡಿದು ಕೂತಿದ್ದಾನೆ. ಹಳೆಯ ಚಾಳಿ: ವರದಿಗಳ ಪ್ರಕಾರ, ಶ್ರೀಶೈಲ್ ಈ ರೀತಿ ಟವರ್ ಹತ್ತುವುದು ಇದೇ ಮೊದಲೇನಲ್ಲ. ಕಳೆದ ಎರಡು ವರ್ಷಗಳಲ್ಲಿ ಈತ ಎರಡನೇ ಬಾರಿಗೆ ಈ ಸಾಹಸಕ್ಕೆ ಕೈ ಹಾಕಿದ್ದಾನೆ. ಮದ್ಯದ ಅಮಲಿನಲ್ಲಿ ಪದೇ ಪದೇ ಮೊಬೈಲ್ ಟವರ್ ಹತ್ತಿ ಈ ರೀತಿ ಹುಚ್ಚಾಟ ಮೆರೆಯುವುದು ಈತನಿಗೆ ಒಂದು ಚಾಳಿಯಾಗಿ ಬಿಟ್ಟಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಿಕೋಟಾ ಪೊಲೀಸರು ಮತ್ತು ಅಗ್ನಿಶಾಮಕ…

Read More

ಶಿವಮಾಗ್ಗ; ಸಾಗರದ ಮಾರಿಕಾಂಬಾ ನ್ಯಾಸ ಸಮಿತಿಯ ಚುನಾವಣೆಯ ಘೋಷಣೆಗೂ ಮುನ್ನವೇ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಫೈನಲ್ ಆಗಿದೆ. ಇಂದು ಚುನಾವಣೆಗೆ ನಾಮಪತ್ರ ಸಲ್ಲಿಸೋ ಮುನ್ನವೇ ಖಾಸಗಿ ಹೋಟೆಲ್ ನಲ್ಲಿ ನಡೆದಂತ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಮಾರಿಗುಡಿ ಸಮಿತಿಗೆ ಅಧ್ಯಕ್ಷರಾಗಿ ಪವಿತ್ರ ನಾಗರಾಜ್, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ ಆನಂದ್ ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ನ್ಯಾಸ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಸಂಬಂಧ ಹಿತರಕ್ಷಣಾ ಸಮಿತಿ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಒಟ್ಟುಗೂಡಿ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಕೆಗೂ ಮುನ್ನವೇ ಪದಾಧಿಕಾರಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹೀಗಿದೆ ಮಾರಿಗುಡಿ ಸಮಿತಿ ಪದಾಧಿಕಾರಿಗಳ ಪೈನಲ್ ಪಟ್ಟಿ 1. ಪವಿತ್ರಾ ನಾಗರಾಜ್, ಅಧ್ಯಕ್ಷರು 2. ಶ್ರೀನಿವಾಸ್ ಮೇಸ್ತ್ರಿ, ಉಪಾಧ್ಯಕ್ಷರು 3. ಎಂ.ಡಿ ಆನಂದ್, ಪ್ರಧಾನ ಕಾರ್ಯದರ್ಶಿಗಳು 4. ಪುರುಷೋತ್ತಮ್(ಪುಚ್ಚಿ) ಹಾಗೂ ವಿ.ಗುರು, ಕಾರ್ಯದರ್ಶಿಗಳು 5. ವಿ.ಶಂಕರ್(ಮಾಸ್ಟರ್…

Read More

ಬೆಂಗಳೂರು: ಗುರುವಾರದಂದು ನಡೆದ ʼ ಇನ್ವೆಸ್ಟ್ ಕರ್ನಾಟಕ ಸಮಾವೇಶ 2026ʼದಲ್ಲಿ ವೈಮಾಂತರಿಕ್ಷ, ವಾಹನ, ಜೈವಿಕ ತಂತ್ರಜ್ಞಾನ ಮತ್ತು ತಯಾರಿಕಾ ವಲಯದ 48 ಬಹುರಾಷ್ಟ್ರೀಯ ಕಂಪನಿಗಳು ರಾಜ್ಯದಲ್ಲಿ ₹51,469 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ವ್ಯಕ್ತಪಡಿಸಿದ್ದು, ಈ ಸಂಬಂಧ ಒಪ್ಪಂದಗಳಿಗೆ ಸಹಿ ಮಾಡಿವೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ವಿವಿಧ ಕಂಪೆನಿಗಳ ಮುಖ್ಯಸ್ಥರು ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಿ, ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ ಅವರು, ʼಈ ಹೊಸ ಹೂಡಿಕೆಗಳು ಜಾಗತಿಕ ಹೂಡಿಕೆದಾರರ ಸಮಾವೇಶ ಹಾಗೂ ದಾವೋಸ್‌ ಶೃಂಗಸಭೆಗೆ ಹೊರತಾಗಿದ್ದು, ಕಳೆದ ಎರಡು ತಿಂಗಳ ಸತತ ಪ್ರಯತ್ನದ ಫಲ ಇದಾಗಿದೆ. ಬಂಡವಾಳ ಹೂಡಿಕೆ ಆಕರ್ಷಿಸುವ ಪ್ರಯತ್ನಗಳು ಮುಂದೆಯೂ ಸುಸ್ಥಿರ ರೀತಿಯಲ್ಲಿ ನಡೆಯಲಿವೆ. ಈ ಹೂಡಿಕೆ ಬದ್ಧತೆಗಳಿಂದ ರಾಜ್ಯದಲ್ಲಿ 70,000 ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ದೇಶದ ಕೈಗಾರಿಕಾ ಭೂಪಟದಲ್ಲಿ ಪ್ರಮುಖ ಕೈಗಾರಿಕಾ ಮತ್ತು ಉದ್ಯೋಗ ಕೇಂದ್ರವಾಗಿ ಕರ್ನಾಟಕದ ಸ್ಥಾನವನ್ನು ಇನ್ನಷ್ಟು ಬಲಪಡಿಸುವಲ್ಲಿ…

Read More

ಶಿವಮೊಗ್ಗ: ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ನಡೆದು 36 ಮಂದಿ ಆಯ್ಕೆಯಾಗಿದ್ದಾರೆ. ಇವರಲ್ಲಿ ಅಧ್ಯಕ್ಷರ ಆಯ್ಕೆಗಾಗಿ ನಾಳೆ ಚುನಾವಣೆ ನಿಗದಿಯಾಗಿದೆ. ತೀವ್ರ ಕುತೂಹಲ ಮೂಡಿಸಿರುವಂತ ಅಧ್ಯಕ್ಷರ ಆಯ್ಕೆಯ ಚುನಾವಣೆಗೂ ಮುನ್ನವೇ, ಕನ್ನಡ ನ್ಯೂಸ್ ನೌ ಗೆ ಯಾರಾಗಲಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ. ಆ ಮಾಹಿತಿಯಂತೆ ಸಾಗರದ ಮಾರಿಗುಡಿ ಸಮಿತಿಯ ಅಧ್ಯಕ್ಷರಾಗಿ ಪವಿತ್ರ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ ಆನಂದ್ ಆಯ್ಕೆಯಾಗೋದು ಫಿಕ್ಸ್ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಐತಿಹಾಸಿಕ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಅಧ್ಯಕ್ಷರು ಸೇರಿದಂತೆ ಇತರೆ ಪದಾಧಿಕಾರಿಗಳ ಆಯ್ಕೆ ನಾಳೆ ನಡೆಯಲಿದೆ. ಇಂದು ತೀವ್ರ ಕುತೂಹಲ ಕೆರಳಿಸಿದ್ದಂತ ಅಧ್ಯಕ್ಷರ ಹುದ್ದೆಯ ಆಕಾಂಕ್ಷೆಯಿಂದ ಹಿರಿಯ ಮುಖಂಡ ಟಿ.ವಿ ಪಾಂಡುರಂಗ ಹಿಂದೆ ಸರಿದಿದ್ದಾರೆ. ಸ್ವತಹ ಶಾಸಕ ಗೋಪಾಲಕೃಷ್ಣ ಬೇಳೂರು ಅವರೇ ಟಿ.ವಿ ಪಾಂಡುರಂಗ ಅವರಿಗೆ ಗಣಪತಿ ದೇವಸ್ಥಾನದ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅವರು ಮಾರಿಗುಡಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲ್ಲ ಎಂದರು. ಶಾಸಕರ…

Read More

ಮಂಗಳೂರು: ಮೀನುಗಾರರ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದ ಮೇಲೆ, ಮಂಗಳೂರಿನ ಉಪ ಜಾರಿ ನಿರ್ದೇಶನಾಲಯ (ED) ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮತ್ತು ಅದರ ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಈ ದೂರು ದಾಖಲಾಗಿದ್ದು, ಸುಮಾರು 1.66 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ವಂಚಿಸಿರುವ ಗಂಭೀರ ಆರೋಪ ಟ್ರಸ್ಟ್ ಮೇಲಿದೆ. ವಂಚನೆ ನಡೆದಿದ್ದು ಹೇಗೆ? ಸರ್ಕಾರವು ಮೀನುಗಾರರ ಆರ್ಥಿಕ ಸಬಲೀಕರಣಕ್ಕಾಗಿ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಸೌಲಭ್ಯವನ್ನು ಮೂಕಾಂಬಿಕಾ ಟ್ರಸ್ಟ್‌ನ ಪದಾಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಅರ್ಹವಲ್ಲದ ವ್ಯಕ್ತಿಗಳ ಹೆಸರಿನಲ್ಲಿ ಸಾಲ ಮನ್ನಾ ಸೌಲಭ್ಯ ಪಡೆದಿರುವುದು. ನಕಲಿ ಗುಂಪುಗಳನ್ನು ತೋರಿಸಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇಡಿ ತನಿಖೆ ಚುರುಕು: ಈ ಹಿಂದೆ…

Read More

ಬೆಂಗಳೂರು: ವೈವಾಹಿಕ ಜೀವನದಲ್ಲಿ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮತ್ತು ದೈನಂದಿನ ಜೀವನದ ಸಾಮಾನ್ಯ ಘರ್ಷಣೆಗಳನ್ನು ‘ವರದಕ್ಷಿಣೆ ಕಿರುಕುಳ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್, ಮಹಿಳೆಯೊಬ್ಬರು ತನ್ನ ಅತ್ತೆ-ಮಾವ ಹಾಗೂ ಮೈದುನನ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದ್ದು, “ಐಪಿಸಿ ಸೆಕ್ಷನ್ 498A (ವರದಕ್ಷಿಣೆ ಕಿರುಕುಳ) ಎಂಬುದು ದಾಂಪತ್ಯದ ಎಲ್ಲಾ ಸಮಸ್ಯೆಗಳಿಗೂ ರಾಮಬಾಣವಲ್ಲ” ಎಂದು ಮಾರ್ಮಿಕವಾಗಿ ನುಡಿದಿದೆ. ಪ್ರಕರಣದ ಹಿನ್ನೆಲೆ ಏನು? ದೂರುದಾರೆ ಮಹಿಳೆ ಮತ್ತು ಆಕೆಯ ಪತಿ 2017 ರಲ್ಲಿ ವಿವಾಹವಾಗಿ ಅಮೆರಿಕಾದ ಟೆಕ್ಸಾಸ್‌ನಲ್ಲಿ ವಾಸವಾಗಿದ್ದರು. ಅಲ್ಲಿ ಸುಮಾರು ಆರು ವರ್ಷಗಳ ಕಾಲ ದಾಂಪತ್ಯ ನಡೆಸಿದ ನಂತರ, ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಭಾರತಕ್ಕೆ ಮರಳಿದ ಮಹಿಳೆ, ತನ್ನ ಪತಿ, ಅತ್ತೆ, ಮಾವ ಮತ್ತು ಮೈದುನನ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು…

Read More

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸೋನ್ಮಾರ್ಗ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಮಪಾತವು ದೊಡ್ಡ ಮಟ್ಟದ ದುರಂತಕ್ಕೆ ಕಾರಣವಾಗಿದ್ದು, ಈ ಘಟನೆಯಲ್ಲಿ ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಹಿಮ ಮತ್ತು ಹಠಾತ್ ಸಂಭವಿಸಿದ ಈ ನೈಸರ್ಗಿಕ ವಿಕೋಪದಿಂದಾಗಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹತ್ತಾರು ವಾಹನಗಳು ಸಂಪೂರ್ಣವಾಗಿ ಹಿಮದ ಅಡಿಯಲ್ಲಿ ಹೂತುಹೋಗಿವೆ. ಸೋಮವಾರ ಮಧ್ಯಾಹ್ನದ ವೇಳೆಗೆ ಸೋನ್ಮಾರ್ಗ್ ಮತ್ತು ಜೋಜಿಲಾ ಪಾಸ್ ನಡುವಿನ ಆಯಕಟ್ಟಿನ ಜಾಗದಲ್ಲಿ ಈ ಹಿಮಪಾತ ಸಂಭವಿಸಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಪ್ರಯಾಣಿಸುತ್ತಿದ್ದ ವಾಹನಗಳು ಹಿಮದ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿವೆ. ಘಟನೆ ಸಂಭವಿಸಿದ ತಕ್ಷಣವೇ ಸ್ಥಳೀಯ ಆಡಳಿತ, ಪೊಲೀಸ್ ಪಡೆ ಮತ್ತು ಸೇನೆಯ ವಿಪತ್ತು ನಿರ್ವಹಣಾ ತಂಡಗಳು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಹಿಮದಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಜೆಸಿಬಿ ಮತ್ತು ಆಧುನಿಕ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಸದ್ಯ ಹೆದ್ದಾರಿಯಲ್ಲಿ…

Read More