Author: kannadanewsnow09

ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನ ಜವಗೊಂಡನಹಳ್ಳಿ ಬಳಿಯ ಗೊರ್ಲಡಕುವಿನಲ್ಲಿ ಸೀಬರ್ಡ್ ಬಸ್ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ ಮೃತರಾದಂತ ಐವರು ಮೃತದೇಹದ ಗುರುತು ಡಿಎನ್ಎ ವರದಿಯಿಂದ ಪತ್ತೆಯಾಗಿದೆ. ಹೀಗಾಗಿ ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಡಿಸೆಂಬರ್.25, 2025ರಂದು ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದಂತ ಬಸ್ಸಿನಲ್ಲಿ ಶಿವಮೊಗ್ಗ, ಗೋಕರ್ಣ, ಕುಮಟಕ್ಕೆ ತೆರಳೋದಕ್ಕೆ 32 ಪ್ರಯಾಣಿಕರು ತೆರಳುತ್ತಿದ್ದರು. ಈ ಬಸ್ ಚಿತ್ರದುರ್ಗದ ಹಿರಿಯೂರಿನ ಗೊರ್ಲಡಕು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಯೊಂದು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರ್ಘಟನೆಯಲ್ಲಿ ಐವರು ಸುಟ್ಟು ಕರಕಲಾಗಿದ್ದರು. ಮೃತದೇಹವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಮೃತ ದೇಹದ ಮಾದರಿಯನ್ನು ಸಂಗ್ರಹಿಸಿ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯ ವರದಿ ಬಂದಿದ್ದು, ಮೃತ ಐವರ ಗುರುತು ಪತ್ತೆಯಾಗಿದೆ. ಹೀಗಾಗಿ ಮೃತ ದೇಹವನ್ನು ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಅಂದಹಾಗೇ ಮೃತ ರಶ್ಮೀ ಮಹಾಲೆ ಮೃತದೇಹವನ್ನು ಅವರ ಸಹೋದರ ವಿನಾಯಕಗೆ ಹಸ್ತಾಂತರಿಸಿದರೇ, ಬೆಂಗಳೂರಿನ ಬಿಂದು ಮತ್ತು ಅವರ ಮಗಳು ಗ್ರಿಯಾ ಮೃತದೇಹವನ್ನು ಬಿಂದು ಪತ್ನಿ ದರ್ಶನ್ ಗೆ…

Read More

ಚಿತ್ರದುರ್ಗ: ಜಿಲ್ಲೆಯ ಜವಗೊಂಡನಹಳ್ಳಿಯ ಗೊರ್ಲಡಕು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದ ಬಳಿಕ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಈ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರು ಯುವತಿಯರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಚಿತ್ರದುರ್ಗದ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಸ್ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಹಾಸನ ಜಿಲ್ಲೆಯ ಇಬ್ಬರು ಯುವತಿಯ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಶವಾಗಾರದ ಬಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಡಿಎನ್ಎ ಪರೀಕ್ಷೆ ವರದಿ ಆಧರಿಸಿ ನವ್ಯಾ, ಮಾನಸಾ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಇಂದು ನವ್ಯಾ, ಮಾನಸಾ ಅವರ ಶವದ ಅಂತ್ಯ ಸಂಸ್ಕಾರವನ್ನು ಕುಟುಂಬಸ್ಥರು ಹಾಸನದ ಎ.ಅಂಕನಹಳ್ಳಿಯಲ್ಲಿ ನೆರವೇರಿಸಲಿದ್ದಾರೆ. ಕಾಳೇನಹಳ್ಳಿ ಸ್ಮಶಾನದಲ್ಲಿ ಮಾನಸಾ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ. https://kannadanewsnow.com/kannada/newborn-baby-found-behind-college-in-bengaluru/

Read More

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ಒಂದರ ಹಿಂಭಾಗದಲ್ಲೇ ನವಜಾತ ಶಿಶುವೊಂದು ಪತ್ತೆಯಾಗಿರುವಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಎಎಸ್ ಸಿ ಕಾಲೇಜು ಹಿಂಭಾಗದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ನಿನ್ನೆ ಜನಿಸಿರುವಂತ ಮಗುವನ್ನು ಎಸೆದು ಹೋಗಿರೋದಾಗಿ ಹೇಳಲಾಗುತ್ತಿದೆ. ಮಾಗಡಿ ರಸ್ತೆ ಪೊಲೀಸರಿಂದ ನವಜಾತ ಶಿಶುವನ್ನು ರಕ್ಷಣೆ ಮಾಡಲಾಗಿದೆ. ವಾಣಿ ವಿಲಾಸ ಆಸ್ಪತ್ರೆಗೆ ಶಿಶುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sharavati-pumped-storage-project-25-talakalale-villagers-agree-to-give-their-land-write-to-mla/

Read More

ವೈಕುಂಠ ದ್ವಾರ ಎಂದರೇನು? ‎ ‎ ವೈಕುಂಠ ಏಕಾದಶಿಯಂದು ದೇವಸ್ಥಾನಗಳಲ್ಲಿ ತೆರೆಯುವ ಉತ್ತರ ದ್ವಾರವನ್ನೇ “ವೈಕುಂಠ ದ್ವಾರ” ಎಂದು ಕರೆಯುತ್ತಾರೆ. ಆದರೆ ಇದು ಬರೀ ದೇವಾಲಯದ ಬಾಗಿಲಲ್ಲ… ಇದು ಮೋಕ್ಷದ ಸಂಕೇತ, ಇದು ಅಂತರಂಗ ಶುದ್ಧಿಯ ಕರೆ.. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ‎‎ ಶಾಸ್ತ್ರೀಯ ಅರ್ಥ – ಪುರಾಣಗಳ ಪ್ರಕಾರ ಈ ದಿನ ಭಗವಂತನು ಭಕ್ತರಿಗೆ ಹೀಗೆ ಅನುಗ್ರಹಿಸಿದನೆಂದು ಹೇಳಲಾಗುತ್ತದೆ – “ನನ್ನನ್ನು ಶ್ರದ್ಧೆಯಿಂದ ಸ್ಮರಿಸುವವರಿಗೆ ನಾನು ಸ್ವತಃ ವೈಕುಂಠದ ದಾರಿ ತೆರೆದು ಕೊಡುತ್ತೇನೆ” ಹಾಗದರೆ ನಿಜವಾದ ವೈಕುಂಠ ದ್ವಾರ ಎಲ್ಲಿದೆ? ಬಾಗಿಲು ದೇವಸ್ಥಾನದಲ್ಲಿ… ಆದರೆ ವೈಕುಂಠ ನಮ್ಮ ಹೃದಯದಲ್ಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ…

Read More

ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರಕ್ಕೆ ಮಾರಕ, ಮಾಡಬಾರದು ಎಂಬುದು ಪರಿಸರ ವಾದಿಗಳು, ರೈತರ ಒತ್ತಾಯವಾಗಿದೆ. ಇದರ ನಡುವೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ನಮ್ಮ ಜಮೀನು ಬಿಟ್ಟುಕೊಡಲು ಸಿದ್ಧರಿದ್ದೇವೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರಿಗೆ 25 ತಲಕಳಲೆ ಗ್ರಾಮಸ್ಥರು ಪತ್ರ ಬರೆದಿದ್ದಾರೆ. ಈ ಕುರಿತಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ತಳಕಳಲೆ ಗ್ರಾಮಸ್ಥರು ಪತ್ರ ಬರೆದಿದ್ದು, ಅದರಲ್ಲಿ ನಾವು ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ತಳಕಳಲೆ ಗ್ರಾಮದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವ್ಯಾಪ್ತಿಯಲ್ಲಿ ಕೃಷಿ ಜಮೀನು ಹೊಂದಿದ್ದೇವೆ. ಸರ್ಕಾರದಿಂದ ಮಂಜೂರಾತಿ ಪಡೆದು ಕಂದಾಯ ಜಮೀನು ಹೊಂದಿರುತ್ತೇವೆ. ಸರ್ಕಾರದ ಮಹತ್ತರವಾದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು ಸುಗಮವಾಗಿ ಕಾರ್ಯಗತವಾಗಲು ಅನುಕೂಲವಾಗುವಂತೆ ನಾವುಗಳು ನಮ್ಮ ಕೃಷಿ ಜಮೀನನ್ನು ಸರ್ಕಾರಕ್ಕೆ ಷರತ್ತುಬದ್ಧವಾಗಿ ನೀಡಲು ಚಿಂತನೆ ಮಾಡಿರುತ್ತೇವೆ ಎಂದಿದ್ದಾರೆ. ನಾವು ಸುಮಾರು 25 ಕೃಷಿ ಕುಟುಂಬದವರು ಹೊಂದಿರುವ ಕೃಷಿ ಜಮೀನನ್ನು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸುರಂಗ ಮಾರ್ಗದಲ್ಲಿ ಹೊರತೆರೆಯುವ ಸುಮಾರು 18…

Read More

ಬೆಂಗಳೂರು: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿಗೆ. ಗಾನವಿ ಮತ್ತೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡ ಗಾನವಿ ಕುಟುಂಬಸ್ಥರ ವಿರುದ್ಧ, ಸೂರಜ್ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ನವ ವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ಸಂದರ್ಭದಲ್ಲಿ ಸೂರಜ್ ಮೇಲೆ ಗಾನವಿ ಕುಟುಂಬದವರು ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದರು. ಅಲ್ಲದೇ ಸೂರಜ್ ಕುಟುಂಬದ ವಿರುದ್ಧ ದೂರು ನೀಡಿದ್ದರಿಂದ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆಯ ನಡುವೆ ಗಾನವಿ-ಸೂರಜ್ ಮದುವೆಯ ಬಳಿಕ ಹನಿಮೂನ್ ಗೆ ಶ್ರೀಲಂಕಾಗೆ ತೆರಳಿದ್ದರು. ಆ ವೇಳೆಯಲ್ಲೇ ಗಾನವಿ ತಾನು ಹರ್ಷ ಎಂಬಾತನನ್ನು ಪ್ರೀತಿಸುತ್ತಿದ್ದೇನೆ.ಆತನನ್ನೇ ಮದುವೆಯಾಗೋದಕ್ಕೂ ನಿರ್ಧರಿಸಿದ್ದೆ. ಆದರೇ ಮನೆಯವರ ಒತ್ತಾಯಕ್ಕೆ ಮಣಿದು ನಿಮ್ಮನ್ನು ಮದುವೆಯಾಗಬೇಕಾಯಿತು ಎಂದು ತಿಳಿಸಿದ್ದಳು. ಈ ಎಲ್ಲಾ ವಿಷಯವನ್ನು ಕೇಳಿದಂತ ಸೂರಜ್ ತನ್ನ ಹನಿಮೂನ್ ಟ್ರಿಪ್ ಅರ್ಧಕ್ಕೆ…

Read More

ಶಿವಮೊಗ್ಗ: ಸಾಗರದಲ್ಲಿ ಕೆಲವು ಸೈಬರ್‌ಗಳಲ್ಲಿ ನಕಲಿ ಕಾರ್ಮಿಕರ ಕಾರ್ಡ್ ಮಾಡಿಕೊಡುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ನಕಲಿ ಕಾರ್ಡ್ ಮಾಡಿಕೊಡುವವರು ಮತ್ತು ನಕಲಿ ಕಾರ್ಡ್ ಮಾಡಿಸಿಕೊಳ್ಳುವವರನ್ನು ಜೈಲಿಗೆ ಕಳಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ರಂಗಮಂದಿರದಲ್ಲಿ ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪದಾಧಿಕಾರಿಗಳ ಪದಗ್ರಹಣ, ಟೀಶರ್ಟ್ ವಿತರಣೆ, ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸರ್ಕಾರ ಕಾರ್ಮಿಕರಿಗೆ ನೀಡುವ ಸೌಲಭ್ಯ ನೈಜ ಕಾರ್ಮಿಕರಿಗೆ ತಲುಪಬೇಕು. ಕಾರ್ಮಿಕರಿಗೆ ವಂಚನೆಯಾಗುವುದನ್ನು ಸಹಿಸಿಕೊಳ್ಳುವುದಿಲ್ಲ. ತಾಲ್ಲೂಕಿನಲ್ಲಿ ಕಾರ್ಮಿಕ ಸ್ನೇಹಿ ಅಧಿಕಾರಿಗಳಿಗೆ ಮಾತ್ರ ಅವಕಾಶ ಇದ್ದು, ಕಾರ್ಮಿಕರನ್ನು ಶೋಷಣೆ ಮಾಡುವ ಅಧಿಕಾರಿಯನ್ನು ಬೇರೆಡೆ ಕಳಿಸಲಾಗುತ್ತದೆ. ಕಾರ್ಮಿಕರಿಗೆ ಎಂತಹ ಸಮಸ್ಯೆ ಬಂದರೂ ನಿಮ್ಮ ಕುಟುಂಬದವನಾಗಿ ಅದನ್ನು ಬಗೆಹರಿಸಲು ಬೇಳೂರು ನಿಮ್ಮ ಜೊತೆ ಇರುತ್ತಾನೆ. ಗೋಪಾಲಕೃಷ್ಣ ಬೇಳೂರು ಮನೆಗೆ ಬಾಗಿಲು ಇಲ್ಲ. ಬೆಳಿಗ್ಗೆ 7ರಿಂದ 10ರವರೆಗೆ…

Read More

ಮೈಸೂರು: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ, ದರೋಡೆ ಮಾಡಿರುವಂತ ಘಟನೆ ಹುಣಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ದರೋಡೆ ಮಾಡಲಾಗಿದೆ. ಸ್ಕೈ ಆಭರಣ ಮಳಿಗೆಗೆ ನುಗ್ಗಿ ಹಣ ಮತ್ತು ಚಿನ್ನಾಭರಣ ದರೋಡೆ ಮಾಡಲಾಗಿದೆ. ಮೈಸೂರಿನ ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲೇ ಸ್ಕೈ ಆಭರಣ ಮಳಿಗೆ ಇದ್ದು, ಐದಕ್ಕು ಹೆಚ್ಚು ದುಷ್ಕರ್ಮಿಗಳ ಗುಂಪಿನಿಂದ ಈ ಕೃತ್ಯ ಎಸಗಲಾಗಿದೆ. ಆಭರಣ ಮಳಿಗೆಯ ಸಿಬ್ಬಂದಿಗಳಿಗೆ ಗನ್ ತೋರಿಸಿ ಬೆದರಿಸಿ ಹಾಡಹಗಲೇ ಹಣ, ಚಿನ್ನಾಭರಣವನ್ನು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹುಣಸೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ. https://kannadanewsnow.com/kannada/suspicions-are-rising-that-the-state-police-are-involved-in-drug-trafficking-mp-bommai/

Read More

ಗದಗ: ಮಹಾರಾಷ್ಟ್ರ ಪೊಲೀಸರು ಕರ್ನಾಟಕಕ್ಕೆ ಬಂದು ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಪತ್ತೆ ಹೆಚ್ಚುತ್ತಾರೆ ಎಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಕರ್ನಾಟಕ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಗ್ಸ್ ಬಳಕೆ ಕರ್ನಾಟಕದಲ್ಲಿ ಅತಿ ಹೆಚ್ಚಿದೆ. ಅದನ್ನು ನಿಯಂತ್ರಿಸಲು ಸರ್ಕಾರ ಸ್ಪೆಷಲ್ ಸ್ಮಾಡ್ ಮಾಡಿದ್ದಾರೆ. ಆದರೆ, ಪೊಲೀಸರ ಭಯ ಇಲ್ಲ. ಹಲವಾರು ಪ್ರಸಂಗಗಳಲ್ಲಿ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ. ಇದಕ್ಕಾಗಿ ವಿಶೇಷ ಕಾನೂನಿದೆ. ಅದನ್ನು ಬಳಕೆ ಮಾಡುತ್ತಿಲ್ಲ. ಮಹಾರಾಷ್ಟ್ರದವರು ಬಂದು ಇಲ್ಲಿ ಡಗ್ಸ್ ಪತ್ತೆ ಹೆಚ್ಚುತ್ತಾರೆ ಎಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಹಾವೇರಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಡ್ರಗ್ಸ್ ಮುಕ್ತವಾಗಿ ಮಾರಾಟವಾಗುತ್ತಿದೆ. ಇದೇ ರೀತಿ ಮುಂದುವರೆದರೆ ಪಂಜಾಬ್ ಆದ ಹಾಗೆ ಆಗುತ್ತದೆ. ಉಡ್ತಾ ಪಂಜಾಬ್ ಥರಾ ಉಡ್ತಾ ಕರ್ನಾಟಕ ಆಗುತ್ತದೆ ಎಂದು ಹೇಳಿದರು.…

Read More

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಚಾಲನಾ ಪರವಾನಗಿ ಹೊಂದಿರುವವರು ಮತ್ತು ವಾಹನ ಮಾಲೀಕರು ವಾಹನ್ ಮತ್ತು ಸಾರಥಿ ಪೋರ್ಟಲ್‌ಗಳಲ್ಲಿ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳನ್ನು ನವೀಕರಿಸಲು ಕೇಳಿದೆ. ನಿಖರವಾದ ದಾಖಲೆಗಳು, OTP ಆಧಾರಿತ ಪರಿಶೀಲನೆ ಮತ್ತು ಸಾರಿಗೆ ಸಂಬಂಧಿತ ಸೇವೆಗಳಿಗೆ ಅಡೆತಡೆಯಿಲ್ಲದ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಈ ನವೀಕರಣವನ್ನು ಉದ್ದೇಶಿಸಲಾಗಿದೆ. ನಿಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸುವುದು ಏಕೆ ಮುಖ್ಯ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು OTP ದೃಢೀಕರಣ, ಸ್ಥಿತಿ ಎಚ್ಚರಿಕೆಗಳು ಮತ್ತು ಚಾಲನಾ ಪರವಾನಗಿಗಳು ಮತ್ತು ವಾಹನ ನೋಂದಣಿಗಳಿಗೆ ಸಂಬಂಧಿಸಿದ ಸೇವಾ ಅಧಿಸೂಚನೆಗಳಿಗಾಗಿ ಬಳಸಲಾಗುತ್ತದೆ. ಹಳೆಯ ಸಂಖ್ಯೆಯು ವಿಫಲವಾದ ಲಾಗಿನ್‌ಗಳು, ತಪ್ಪಿದ ನವೀಕರಣಗಳು ಅಥವಾ ಆನ್‌ಲೈನ್ ಸೇವೆಗಳನ್ನು ಪಡೆಯುವಲ್ಲಿ ವಿಳಂಬಕ್ಕೆ ಕಾರಣವಾಗಬಹುದು. ಈ ವಿವರವನ್ನು ಪ್ರಸ್ತುತವಾಗಿಡುವುದರಿಂದ ಡೇಟಾಬೇಸ್‌ಗಳಲ್ಲಿ ಸುರಕ್ಷಿತ ಮತ್ತು ಸ್ಥಿರವಾದ ದಾಖಲೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ಸಚಿವಾಲಯ ಹೇಳುತ್ತದೆ. ವಾಹನ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಲು ಹಂತ-ಹಂತದ ಮಾರ್ಗದರ್ಶಿ (ವಾಹನ ಮಾಲೀಕರಿಗೆ) 1. ನಿಮ್ಮ ಬ್ರೌಸರ್‌ನಲ್ಲಿ ಅಧಿಕೃತ ವಾಹನ್ ಮೊಬೈಲ್…

Read More