Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ ಎಂಬ ಘೊಷವಾಕ್ಯದಡಿಯಲ್ಲಿ ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕಾರ್ಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. ಅತ್ಯಾಧುನಿಕ ಕಮಾಂಡ್ ಮತ್ತು ಕಂಟ್ರೋಲ್ ರೂಂ ಸ್ಥಾಪನೆ. 2008 ರಲ್ಲಿ ಜನರ ಅನುಕೂಲಕ್ಕಾಗಿ 108 ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ ಸಂಸ್ಥೆ ಇದನ್ನು ನಡೆಸುತ್ತಿತ್ತು. ಹಲವಾರು ಸಮಸ್ಯೆಗಳು ಇದ್ದವು. 25-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಗಳು ಇದನ್ನು ಉನ್ನತೀಕರಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಂತರ ಸರ್ಕಾರವೇ ಇದನ್ನು ನಡೆಸಬೇಕು. ಅತ್ಯಾಧುನಿಕ ವ್ಯವಸ್ಥೆ ಅಳವಡಿಸಬೇಕು ಎಂದು ತೀರ್ಮಾನಿಸಿ, ಹಲವಾರು ಮಾಡೆಲ್ ಗಳನ್ನು ಅಧ್ಯಯನ ಮಾಡಲಾಯಿತು. ಸಿಂಗಪೂರ್ ದೇಶದ ವ್ಯವಸ್ಥೆಯನ್ನೂ ಸಹ ಅಧ್ಯಯನ ಮಾಡಿ, ಸುಸಜ್ಜಿತಗೊಳಿಸಲು ಕಾರ್ಯೋನ್ಮುಖರಾದೆವು. ಈ ವ್ಯವಸ್ಥೆ ಯನ್ನು ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಸರ್ಕಾರಿ ಸ್ವಾಮ್ಯದ ಸಿ-ಡಾಕ್ ಸಂಸ್ಥೆ ಇದಕ್ಕೆ ಬೇಕಾದ ಸಾಪ್ಟವೇರ್ ಸಿದ್ಧಪಡಿಸಿದೆ. ಸುಸಜ್ಜಿತ 24/7 ಕಮಾಂಡ್ ಕಂಟ್ರೋಲ್ ರೂಂ…

Read More

ಮಹಾರಾಷ್ಟ್ರ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಈ ವಿವಾದಕ್ಕೆ ಮತ್ತೊಂದು ಅಮೂಲ್ಯ ಜೀವ ಬಲಿಯಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ರದ್ದಾಗಿದ್ದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳು ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಮಹಾರಾಷ್ಟ್ರದ ಲಾತೂರ್ ತಾಲೂಕಿನ ಗೊಂಡೆಗಾವ್ ಗ್ರಾಮದಲ್ಲಿ ಈ ದುರಂತ ನಡೆದಿದೆ. ಪರೀಕ್ಷೆ ರದ್ದಾದ ಹಿನ್ನೆಲೆ ತೀವ್ರಗೊಂಡಿದ್ದ ಮಾನಸಿಕ ಒತ್ತಡ ವೈದ್ಯೆಯಾಗಬೇಕೆಂಬ ದೊಡ್ಡ ಕನಸು ಹೊತ್ತಿದ್ದ ಮೃತ ವಿದ್ಯಾರ್ಥಿನಿಯು ನೀಟ್ ಪರೀಕ್ಷೆಗಾಗಿ ಹಗಲಿರುಳು ಕಷ್ಟಪಟ್ಟು ಭಾರಿ ಸಿದ್ಧತೆ ನಡೆಸಿದ್ದಳು. ಆದರೆ, ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ಜಾಲ ಬಯಲಿಗೆ ಬಂದು ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಆಕೆ ತೀವ್ರ ಆಘಾತಕ್ಕೆ ಒಳಗಾಗಿದ್ದಳು. ಕಷ್ಟಪಟ್ಟು ಓದಿದ್ದ ಪರೀಕ್ಷೆ ರದ್ದಾಗಿದ್ದರಿಂದ ಹಾಗೂ ಮುಂದೆ ಎದುರಾಗಬಹುದಾದ ಅನಿಶ್ಚಿತತೆಯಿಂದಾಗಿ ಆಕೆ ಕಳೆದ ಕೆಲವು ದಿನಗಳಿಂದ ತೀವ್ರ…

Read More

ಬೆಂಗಳೂರು: ಲೋಕಸಭೆ ಚುನಾವಣೆಯ ಟಿಕೆಟ್ ಕೈತಪ್ಪಿದ ಬಳಿಕ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಈಗ ಮತ್ತೊಮ್ಮೆ ಸಕ್ರಿಯ ರಾಜಕಾರಣಕ್ಕೆ ಮರಳಲು ಭಾರಿ ಕಸರತ್ತು ಆರಂಭಿಸಿದ್ದಾರೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಬಹಿರಂಗವಾಗಿ ಘೋಷಿಸುವ ಮೂಲಕ ಡಿವಿಎಸ್‌ ಬಿಜೆಪಿ ಹೈಕಮಾಂಡ್‌ಗೆ ನೇರ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಪ್ರವೇಶಿಸುವ ತಮ್ಮ ಇಂಗಿತವನ್ನು ಮುಚ್ಚುಮರೆ ಇಲ್ಲದೆ ಹಂಚಿಕೊಂಡಿದ್ದಾರೆ. ನನಗೂ ಅವಕಾಶ ಕೊಡಿ ಎಂದು ಹೈಕಮಾಂಡ್ ಮುಂದೆ ಬೇಡಿಕೆ ರಾಜ್ಯಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸದಾನಂದಗೌಡರು, “ರಾಜ್ಯಸಭೆಗೆ ಹೋಗಲು ನಾನೂ ಒಬ್ಬ ಆಕಾಂಕ್ಷಿ. ಪಕ್ಷದ ವರಿಷ್ಠರಾದ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಈಗಾಗಲೇ ಈ ಬಗ್ಗೆ ಮಾತನಾಡಿದ್ದೇನೆ. ಅವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ” ಎಂದು ತಿಳಿಸಿದರು. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಶಿಸ್ತು ಉಲ್ಲಂಘಿಸುವವರ ವಿರುದ್ಧ ಹೈಕಮಾಂಡ್ ಅತ್ಯಂತ ಕಠಿಣ ನಿಲುವನ್ನು ತಳೆದಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ಮಹತ್ವದ ‘ಎಸ್ಐಆರ್’ (SIR) ಕುರಿತಾದ ಕಾಂಗ್ರೆಸ್ ನಾಯಕರ ಸಭೆಗೆ ಗೈರುಹಾಜರಾದ 100ಕ್ಕೂ ಹೆಚ್ಚು ಪಕ್ಷದ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ತಕ್ಷಣವೇ ಹುದ್ದೆಯಿಂದ ತೆಗೆದುಹಾಕುವಂತೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಗರಂ ಆಗಿ ಆದೇಶಿಸಿದ್ದಾರೆ. ನಿನ್ನೆ ಮತ್ತು ಇಂದು (ಎರಡು ದಿನಗಳು) ನಡೆದ ಈ ಸಭೆಯ ಗಂಭೀರತೆಯನ್ನು ಅರಿಯದ ನಾಯಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರು ಜಂಟಿಯಾಗಿ ಈ ಶಿಸ್ತು ಕ್ರಮದ ಚಾವಟಿ ಬೀಸಿದ್ದಾರೆ. ದೇವನಹಳ್ಳಿ ಖಾಸಗಿ ಹೋಟೆಲ್‌ನಲ್ಲಿ ಎರಡು ದಿನಗಳ ಹೈವೋಲ್ಟೇಜ್ ಸಭೆ ರಾಜ್ಯದಲ್ಲಿ ‘ಎಸ್ಐಆರ್’ (SIR) ವಿಷಯಕ್ಕೆ ಸಂಬಂಧಿಸಿದಂತೆ ಭವಿಷ್ಯದ ಕಾರ್ಯತಂತ್ರಗಳನ್ನು ರೂಪಿಸಲು ಕಾಂಗ್ರೆಸ್ ಹಿರಿಯ ನಾಯಕರು ನಿನ್ನೆ ಮತ್ತು ಇಂದು ದೇವನಹಳ್ಳಿಯ ಹೊರವಲಯದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ…

Read More

‎ಬೆಳಗಾವಿ: ರಾಜ್ಯದ ಎರಡನೇ ರಾಜಧಾನಿ ಎಂದೇ ಬಿಂಬಿತವಾದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇದೇ 26ರಂದು ಮಂಗಳವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿವೆ. ‎ ‎ಕನ್ನಡಸೇನೆ-ಕರ್ನಾಟಕ, ಕಿತ್ತೂರು ಕರ್ನಾಟಕ ಸೇನೆ, ಗಡಿನಾಡ ಕನ್ನಡಿಗರ ಸೇನೆ, ಕನ್ನಡ ಕ್ರಿಯಾ ಸಮಿತಿ ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ. ‎ನಾಳಿನ ಹೋರಾಟದಲ್ಲಿ ನಾಡಿನ ಕನ್ನಡಪರ ಹಿರಿಯ ಹೋರಾಟಗಾರರಾದ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಕನ್ನಡಸೇನೆ-ಕರ್ನಾಟಕ ರಾಜ್ಯಾಧ್ಯಕ್ಷ  ಕೆ.ಆರ್. ಕುಮಾರ್ ಮತ್ತಿತರ ಮುಖಂಡರು ನೇತೃತ್ವ ವಹಿಸಲಿದ್ದಾರೆ. ‎ ‎ಪ್ರತಿಭಟನೆಗೆ ಮುನ್ನ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಪುನರ್ ಸ್ಥಾಪನೆಗೊಂಡ ಹಲ್ಮಿಡಿ ಶಾಸನದ ಪೂಜಾ ಕಾರ್ಯಕ್ರಮ ಆಯೋಜನೆಗೊಂಡಿದೆ. ಈ ವೇಳೆ ಕನ್ನಡಪರ ಹೋರಾಟಗಾರರು, ಹಲ್ಮಿಡಿ ಶಾಸನದ ಪ್ರತಿಕೃತಿಗೆ ಮಲಪ್ರಭೆ, ಘಟಪ್ರಭೆ, ದೂಧಗಂಗಾ, ಹಿರಣ್ಯಕೇಶಿ ಹಾಗೂ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹೈಕಮಾಂಡ್ ಮಟ್ಟದ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ನವದೆಹಲಿಯಿಂದ ತುರ್ತು ಕರೆ ಬಂದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ತಡರಾತ್ರಿಯೇ ರಾಷ್ಟ್ರ ರಾಜಧಾನಿಗೆ ಪ್ರತ್ಯೇಕವಾಗಿ ಪ್ರಯಾಣ ಬೆಳೆಸಲಿದ್ದಾರೆ. ಮೂಲಗಳ ಪ್ರಕಾರ, ಈ ದಿಢೀರ್ ದೆಹಲಿ ಭೇಟಿಯ ಹಿಂದೆ ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ನಡೆದ ಒಂದು ರಹಸ್ಯ ಸಭೆಯ ದೊಡ್ಡ ತಂತ್ರಗಾರಿಕೆಯೂ ಅಡಗಿದೆ ಎನ್ನಲಾಗುತ್ತಿದೆ. ಕನ್ನಿಂಗ್ ಹ್ಯಾಮ್ ರಸ್ತೆಯ ರಹಸ್ಯ ಸಭೆ ಮತ್ತು ಆಪ್ತರ ಒಮ್ಮತದ ನಿರ್ಧಾರ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಸ್ಥಳವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅತ್ಯಂತ ಆಪ್ತ ಸಚಿವರು ಮತ್ತು ನಾಯಕರೊಂದಿಗೆ ಸುದೀರ್ಘವಾದ ಸದ್ದಿಲ್ಲದ ಸಭೆ ನಡೆಸಿದ್ದರು. ಆ ರಹಸ್ಯ ಸಭೆಯಲ್ಲಿ ಮುಂದಿನ ರಾಜಕೀಯ…

Read More

ಶಿವಮೊಗ್ಗ: ನೆಲ ಮತ್ತು ಜಲವನ್ನು ಸಂರಕ್ಷಣೆ ಮಾಡಿದಾಗ ಮಾತ್ರ ಮಾನವನ ಬದುಕಿಗೆ ನಿಜವಾದ ಅರ್ಥ ಸಿಗುತ್ತದೆ. ಹೀಗಾಗಿ ಕೆರೆಗಳ ಹೂಳೆತ್ತುವ ಕಾಮಗಾರಿಗಳಲ್ಲಿ ವೈಜ್ಞಾನಿಕ ಪರಂಪರೆಯನ್ನು ಉಳಿಸಿಕೊಳ್ಳುವ ಕೆಲಸವಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕರಾದ ದಿನೇಶ್ ಎಂ. ತಿಳಿಸಿದರು. ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ವಲಯದ ಉಳ್ಳೂರು ಕೆರೆ ಕಾಮಗಾರಿಯ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯಾದ್ಯಂತ 995 ಕೆರೆಗಳ ಹೂಳೆತ್ತುವ ಕಾರ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ, ಪೂಜ್ಯ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯೋಜನೆಯ ಆರ್ಥಿಕ ಸಹಕಾರ ಹಾಗೂ ಸ್ಥಳೀಯ ಗ್ರಾಮಸ್ಥರ ಸಕ್ರಿಯ ಸಹಭಾಗಿತ್ವದೊಂದಿಗೆ ಈಗಾಗಲೇ ರಾಜ್ಯಾದ್ಯಂತ ಒಟ್ಟು 995 ಕೆರೆಗಳ ಹೂಳೆತ್ತುವ ಮಹತ್ತರ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಇದೇ ವೇಳೆ ಮಾಹಿತಿ ನೀಡಿದರು. ರೈತರ ಬದುಕಿಗೆ ಹೊಸ…

Read More

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ”ವನ್ನು ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತ್ವರಿತ ಗತಿಯಲ್ಲಿ ಚಿಕಿತ್ಸೆ ದೊರೆಯಬೇಕು. ಈ ದಿಸೆಯಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ಆರೋಗ್ಯ ಸೇವೆ ದೊರೆಯಲು ಈ ಕೇಂದ್ರ ಅತ್ಯಂತ ಸಹಕಾರಿಯಾಗಿದೆ. ರಾಜ್ಯದಲ್ಲಿ ಸುಮಾರು 18 ವರ್ಷಗಳಿಂದ 108 ಆ್ಯಂಬುಲೆನ್ಸ್ ಸೇವೆ ನಡೆಯುತ್ತಿದೆ. 2025-26 ರ ಬಜೆಟ್ ಘೋಷಣೆಯಂತೆ 108 ತುರ್ತು ಆಂಬುಲೆನ್ಸ್ ಸೇವೆಗಳ ನಿರ್ವಹಣೆಗೆ ಮೀಸಲಾದ ವ್ಯವಸ್ಥೆಯನ್ನು ರೂಪಿಸಲಾಗಿದೆ. ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ಲಭಿಸುವಂತಾಗುವುದು ಮುಖ್ಯ. ಸರ್ಕಾರದ ಗುಣಮಟ್ಟದ ಆರೋಗ್ಯ ಸೇವೆಯಿಂದ ಜನರ…

Read More

ಮರಣ ಎಂಬುದು ಪ್ರಕೃತಿಯ ಅಲಿಖಿತ ನಿಯಮ. ಪ್ರೀತಿಪಾತ್ರರು ತಮ್ಮ ಜೀವನದ ಕೊನೆಯ ದಿನಗಳಲ್ಲಿ ಇರುವಾಗ, ಅವರ ದೇಹದಲ್ಲಿ ಆಗುವ ಬದಲಾವಣೆಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅವರಿಗೆ ಗರಿಷ್ಠ ಆರಾಮವನ್ನು ನೀಡುವುದು ಅತ್ಯಂತ ಮುಖ್ಯವಾಗಿರುತ್ತದೆ. ವೈದ್ಯಕೀಯ ಸಂಶೋಧನೆಗಳು ಮತ್ತು ದ್ವಿತೀಯ ಹಂತದ ಆರೈಕೆ (Palliative Care) ತಜ್ಞರ ಪ್ರಕಾರ, ಒಬ್ಬ ವ್ಯಕ್ತಿ ಮರಣ ಹೊಂದುವುದಕ್ಕಿಂತ ಸುಮಾರು 24 ಗಂಟೆಗಳ ಮೊದಲು ಅವರ ದೇಹದಲ್ಲಿ ಕೆಲವು ನಿರ್ದಿಷ್ಟ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಅಂತಹ ಮೂರು ಪ್ರಮುಖ ಮತ್ತು ಸಾಮಾನ್ಯ ಲಕ್ಷಣಗಳ ವಿವರ ಇಲ್ಲಿದೆ: 1. ಉಸಿರಾಟದ ಶೈಲಿಯಲ್ಲಿ ಬದಲಾವಣೆ ಮತ್ತು ‘ಡೆತ್ ರ್ಯಾಟಲ್’ (Death Rattle) ಜೀವನದ ಕೊನೆಯ ಗಂಟೆಗಳಲ್ಲಿ ವ್ಯಕ್ತಿಯ ಉಸಿರಾಟದ ಪ್ರಕ್ರಿಯೆಯು ತೀವ್ರವಾಗಿ ಬದಲಾಗುತ್ತದೆ. ಉಸಿರಾಟವು ತುಂಬಾ ನಿಧಾನವಾಗಬಹುದು ಅಥವಾ ಕೆಲವೊಮ್ಮೆ ಅತ್ಯಂತ ವೇಗವಾಗಿ ಉಸಿರಾಡಿ, ನಂತರ ಕೆಲವು ಸೆಕೆಂಡುಗಳ ಕಾಲ ಉಸಿರಾಟವೇ ನಿಂತುಹೋಗುವ ಸ್ಥಿತಿ ಬರಬಹುದು (ಇದನ್ನು ‘Cheyne-Stokes’ ಉಸಿರಾಟ ಎನ್ನಲಾಗುತ್ತದೆ). ಇದರೊಂದಿಗೆ, ಗಂಟಲು ಮತ್ತು ಶ್ವಾಸಕೋಶದ ಹಿಂಭಾಗದಲ್ಲಿ ಲಾಲಾರಸ ಅಥವಾ…

Read More

ಬೆಂಗಳೂರು: ವಿಶೇಷಚೇತನರು ಸ್ವತಂತ್ರ ಜೀವನ ನಡೆಸಲು ಸಹಾಯವಾಗುವ ಎಲ್ಲಾ ಸಾಧನ, ಸಲಕರಣೆಗಳ ಮೇಲಿನ ಜಿಎಸ್‌ಟಿ ವಿನಾಯಿತಿ ನೀಡುವಂತೆ ಇಲ್ಲವೇ ಜಿಎಸ್‌ಟಿಯನ್ನು ಸಂಪೂರ್ಣ ಮನ್ನಾ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಪತ್ರ ಬರೆದಿದ್ದಾರೆ. ವಿಶೇಷಚೇತನರಿಗೆ ಅಗತ್ಯವಾದ ಸಹಾಯಕ ಸಾಧನಗಳು, ಪುನರ್ವಸತಿ ಸಾಧನಗಳು, ಸಲಕರಣೆಗಳ ಮೇಲೆ ಜಿಎಸ್‌ಟಿ ವಿಧಿಸಲಾಗುತ್ತದೆ. ಈ ಸಾಧನಗಳು ಐಷಾರಾಮಿ ವಸ್ತುಗಳಲ್ಲ, ಬದಲಾಗಿ ಅನಿವಾರ್ಯ ಅವಶ್ಯಕತೆಗಳಾಗಿದ್ದು ಜಿಎಸ್‌ಟಿ ವಿನಾಯಿತಿ ಅಥವಾ ಸಂಪೂರ್ಣ ಜಿಎಸ್‌ಟಿ ತೆಗೆದುಹಾಕಿದರೆ ಅನುಕೂಲವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ವಿಶೇಷಚೇತನರ ಬೆಂಬಲ ಸಾಧನಗಳನ್ನು ಶೂನ್ಯ ತೆರಿಗೆ ಅಥವಾ ವಿನಾಯಿತಿ ಪಡೆದ ವರ್ಗದ ಅಡಿಯಲ್ಲಿ ಸೇರಿಸಬೇಕು, ಈ ಪ್ರಯೋಜನಗಳನ್ನು ಪಡೆಯಲು ಪ್ರಮಾಣೀಕರಣ ಮತ್ತು ಖರೀದಿ ವಿಧಾನಗಳನ್ನು ಸರಳಗೊಳಿಸಬೇಕು, ಸಾಧನಗಳು ಕೈಗೆಟುಕುವ ರೀತಿ ತಯಾರಾಗಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. ವಿಶೇಷಚೇತನರಿಗೆ ಸರ್ಕಾರ ಈ ನಿಟ್ಟಿನಲ್ಲಿ ಸಹಾಯ ಮಾಡಿದರೆ ದೇಶದಾದ್ಯಂತ ಲಕ್ಷಾಂತರ ವಿಭಿನ್ನ ಸಾಮರ್ಥ್ಯ ಹೊಂದಿರುವ ನಾಗರಿಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು…

Read More