Author: kannadanewsnow09

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಮತ್ತು ಉಪ ಮುಖ್ಯಮಂತ್ರಿಗಳ ಕುರ್ಚಿ ಗುದ್ದಾಟದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಎಳ್ಳುನೀರು ಬಿಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮಗಳು ನಡೆಯುತ್ತಿಲ್ಲ; ಪರಿಶಿಷ್ಟ ಜಾತಿ, ವರ್ಗಗಳಿಗೆ ಇಟ್ಟ ಹಣ ಸಂಪೂರ್ಣ ಪೋಲಾಗಿದೆ. ಈ ವರ್ಷದಲ್ಲಿ ಅವರಿಗೆ ಇಟ್ಟ ಹಣದ ಒಂದು ರೂಪಾಯಿಯೂ ಬಿಡುಗಡೆ ಆಗಿಲ್ಲ ಎಂದು ಆಕ್ಷೇಪಿಸಿದರು. ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದೆ. ಗ್ಯಾರಂಟಿ ಹಣ ಸಕಾಲದಲ್ಲಿ ಜನರನ್ನು ತಲುಪುತ್ತಿಲ್ಲ. ನರೇಗಾದಡಿ ಕೆಲಸ ಆಗಿ ಆರು ತಿಂಗಳಾದರೂ ಪಾವತಿ ಮಾಡಲು ಸರಕಾರಕ್ಕೆ ಆಗುತ್ತಿಲ್ಲ; ಪ್ರತಿಯೊಂದಕ್ಕೂ ಕೇಂದ್ರ ಸರಕಾರದ ಮೇಲೆ ಆಪಾದನೆ ಮಾಡುತ್ತಾರೆ; ಆದರೆ, ಈ ವಿಷಯದಲ್ಲಿ ಹಣ ಕೊಡಬೇಕಾಗಿಲ್ಲ. ಎಲ್ಲವೂ ಬಂದಿದೆ ಎಂದು ತಿಳಿಸಿದರು. ರಾಜಕಾರಣಕ್ಕಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು. 5 ವರ್ಷವೂ ನಾನೇ ಮುಖ್ಯಮಂತ್ರಿ, 2028ರ ನಂತರವೂ ನಾನೇ ಎಂದು ಸಿದ್ದರಾಮಯ್ಯನವರು ಏರುಧ್ವನಿಯಲ್ಲಿ…

Read More

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಇದೇ ಜುಲೈ.14ರಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲೇ ಸೇತುವೆಗೆ ಸಿಗಂದೂರು ಚೌಡೇಶ್ವರಿ ಅಂತ ಹೆಸರಿಡಿ ಎಂಬುದಾಗಿ ಒಂದಷ್ಟು ಜನರು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿ ಹೈಕೋರ್ಟ್ ಗೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ನದಿಯ ಹಿನ್ನೀರಿಗೆ ನಿರ್ಮಿಸಿರುವಂತ ನೂತನ ಸೇತುವೆ ಜುಲೈ.14, 2025ರಂದು ಲೋಕಾರ್ಪಣೆಗೊಳ್ಳಲಿದೆ. ಇಂತಹ ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ಶಿವಮೊಗ್ಗದ ಬಿದರಿ ಗ್ರಾಮದ ನಿವಾಸಿ ಕೆ.ಹರನಾಥ್ ರಾವ್ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರು, ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ.17ಕ್ಕೆ ಮುಂದೂಡಿದ್ದಾರೆ. ಶಿವಮೊಗ್ಗದ ಬಿದರಿ ಗ್ರಾಮದ ಕೆ.ಹರನಾಥ್ ರಾವ್ ಸಲ್ಲಿಸಿದಂತ ಅರ್ಜಿಯಲ್ಲಿ ಏನಿದೆ.? ನಾನು ಜುಲೈ.7ರಂದು ಕೇಂದ್ರ ಭೂಸಾರಿಗೆ…

Read More

ಗುರುಗ್ರಾಮ: ಗುರುವಾರ ಗುರುಗ್ರಾಮದಲ್ಲಿ 25 ವರ್ಷದ ರಾಜ್ಯ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಅವರ ಸ್ವಂತ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಸೆಕ್ಟರ್ 57 ರಲ್ಲಿರುವ ಅವರ ಕುಟುಂಬದ ಮೊದಲ ಮಹಡಿಯಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಲ್ಲಿ ರಾಧಿಕಾ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ತಂದೆ ತನ್ನ ಮಗಳು ರಾಧಿಕಾ ಮೇಲೆ ಸತತ ಮೂರು ಗುಂಡುಗಳನ್ನು ಹಾರಿಸಿದ್ದಾರೆ. ಯುವ ಕ್ರೀಡಾಪಟುವನ್ನು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು. 25 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ನಮಗೆ ಆಸ್ಪತ್ರೆಯಿಂದ ಮಾಹಿತಿ ಸಿಕ್ಕಿತು. ಅವರಿಗೆ ಮೂರು ಗುಂಡುಗಳ ಗಾಯಗಳಾಗಿವೆ. ನಾವು ಮಹಿಳೆಯ ಚಿಕ್ಕಪ್ಪನನ್ನು ಭೇಟಿಯಾದೆವು. ಆದರೆ ಅವರು ಏನನ್ನೂ ಹೇಳಲಿಲ್ಲ. ನಂತರ ನಾವು ಘಟನೆ ನಡೆದ ಸ್ಥಳಕ್ಕೆ ಹೋದೆವು, ಅಲ್ಲಿ ಮಹಿಳೆಯ ತಂದೆ ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ…

Read More

ಗುರುಗ್ರಾಮ: ಗುರುವಾರ ಗುರುಗ್ರಾಮದಲ್ಲಿ 25 ವರ್ಷದ ರಾಜ್ಯ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಅವರ ಸ್ವಂತ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಸೆಕ್ಟರ್ 57 ರಲ್ಲಿರುವ ಅವರ ಕುಟುಂಬದ ಮೊದಲ ಮಹಡಿಯಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಲ್ಲಿ ರಾಧಿಕಾ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ತಂದೆ ತನ್ನ ಮಗಳು ರಾಧಿಕಾ ಮೇಲೆ ಸತತ ಮೂರು ಗುಂಡುಗಳನ್ನು ಹಾರಿಸಿದ್ದಾರೆ. ಯುವ ಕ್ರೀಡಾಪಟುವನ್ನು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು. 25 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ನಮಗೆ ಆಸ್ಪತ್ರೆಯಿಂದ ಮಾಹಿತಿ ಸಿಕ್ಕಿತು. ಅವರಿಗೆ ಮೂರು ಗುಂಡುಗಳ ಗಾಯಗಳಾಗಿವೆ. ನಾವು ಮಹಿಳೆಯ ಚಿಕ್ಕಪ್ಪನನ್ನು ಭೇಟಿಯಾದೆವು. ಆದರೆ ಅವರು ಏನನ್ನೂ ಹೇಳಲಿಲ್ಲ. ನಂತರ ನಾವು ಘಟನೆ ನಡೆದ ಸ್ಥಳಕ್ಕೆ ಹೋದೆವು, ಅಲ್ಲಿ ಮಹಿಳೆಯ ತಂದೆ ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ…

Read More

ಬೆಂಗಳೂರು : ದೇಶದ ಕ್ವಾಂಟಮ್‌ ಕ್ಷೇತ್ರದ ಬೆಳವಣಿಗೆಯಲ್ಲಿ ಐಐಎಸ್ಸ್‌ಸಿ ಕ್ವಾಂಟಮ್‌ ರಿಸರ್ಚ್‌ ಪಾರ್ಕ್‌ ಮುಂದಾಳತ್ವವನ್ನು ವಹಿಸುವ ಸಾಮರ್ಥ್ಯ ಹೊಂದಿದೆ. ಇದರ ಅಭಿವೃದ್ದಿಗಾಗಿ ರಾಜ್ಯ ಸರಕಾರ 48 ಕೋಟಿ ರೂಪಾಯಿಗಳನ್ನು ನೀಡಿದ್ದು, ಅಗತ್ಯ ಸಹಕಾರ ನೀಡಲು ಸಿದ್ದವಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಐಐಎಸ್‌ಸಿ ಆವರಣದಲ್ಲಿರುವ ಕ್ವಾಂಟಮ್‌ ರಿಸರ್ಚ್‌ ಪಾರ್ಕ್‌ ಗೆ ಭೇಟಿ ನೀಡಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಅಗತ್ಯವಿರುವ ರೋಡ್‌ ಮ್ಯಾಪ್‌ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಕ್ವಾಂಟಮ್‌ ರಿಸರ್ಚ್‌ ಪಾರ್ಕ್‌ನ ಮುಖ್ಯಸ್ಥರಾದ ಪ್ರೊ. ಅರಿಂದಮ್ ಘೋಷ್ ಮಾತನಾಡಿ, ಬೆಂಗಳೂರು ನಗರದಲ್ಲಿರುವ ವಿಶ್ವದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಯಾಗಿರುವ ಐಐಎಸ್‌ಸ್ಸಿ ಯಲ್ಲಿ ಸ್ಥಾಪಿಸಲಾಗಿರುವ ಕ್ವಾಂಟಮ್‌ ರಿಸರ್ಚ್‌ ಪಾರ್ಕ ದೇಶದಲ್ಲಿ ಕ್ವಾಂಟಮ್‌ ಕ್ಷೇತ್ರದ ಸರ್ವತೋಮುಖ ಮುಂದಾಳತ್ವವನ್ನು ವಹಿಸುವ ಸಾಮರ್ಥ್ಯ ಹೊಂದಿದೆ. ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ಕ್ವಾಂಟಮ್‌ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿರುವಂತಹ ವಾತಾವರಣ ಹೊಂದಿದೆ. ನಗರದಲ್ಲಿರುವ ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆಗಳ,…

Read More

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪಿಸಲು ಕ್ರಮ ವಹಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅವರ ಸಹಾಯಕರಿಗೆ, ಸಂದರ್ಶಕರಿಗೆ ಸಾರ್ವಜನಿಕರಿಗೆ ಸಮಯದ ಸದುಪಯೋಗಪಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. https://twitter.com/KarnatakaVarthe/status/1943275041497715032

Read More

ನವದೆಹಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ , ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದರು. ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇನೆ. ಸರ್ಕಾರಕ್ಕೆ…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಂದುವರಿದು, ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಜುಲೈ 16 ರಿಂದ 27ನೇ ಜುಲೈ 2025 ರವರೆಗೆ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್‌ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ. https://kannadanewsnow.com/kannada/sda-suspended-under-the-allegation-of-assault-on-a-female-student/ https://kannadanewsnow.com/kannada/before-accepting-money-on-google-pay-or-phone-pay-shop-and-grocery-store-owners-should-read-this-news/

Read More

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಮೇಲೆ ಕಾಲೇಜಿನ ಕ್ಲರ್ಕ್ ನಿಂದಲೇ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಈ ಆರೋಪದಡಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಕ್ಲರ್ಕ್ ನನ್ನು ಅಮಾನತುಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ ಭೀಮರಾಜ್ ಎಂಬುವರೇ ಅಮಾನತುಗೊಂಡಿರುವಂತ ಅಧಿಕಾರಿಯಾಗಿದ್ದಾರೆ. ಇವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ.ಭೀಮನರಾಜ್ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಅತ್ಯಾಚಾರ ಆರೋಪದಡಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಂಗ ಬಂಧನದಲ್ಲಿರುವಂತ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶಿಸಿದೆ. https://kannadanewsnow.com/kannada/why-is-the-golden-hour-important-in-cases-of-severe-heart-attacks-here-is-the-information/ https://kannadanewsnow.com/kannada/before-accepting-money-on-google-pay-or-phone-pay-shop-and-grocery-store-owners-should-read-this-news/

Read More

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೇ ಹೊತ್ತಿನಲ್ಲಿ ತೀವ್ರ ಹೃದಯಾಘಾತದ ಸಂದರ್ಭದಲ್ಲಿ ಗೋಲ್ಡನ್ ಅವರ್ ಮುಖ್ಯ ಎಂಬುದು ಹೃದ್ರೋಗ ತಜ್ಞರ ಮಾತು. ಹಾಗಾದ್ರೇ ಗೋಲ್ಡನ್ ಅವರ್ ಏಕೆ ಮುಖ್ಯ ಎನ್ನುವ ಬಗ್ಗೆ ಮುಂದೆ ಮಾಹಿತಿ ಓದಿ. ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ಗೋಲ್ಡನ್‌ ಅವರ್‌ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು. ಸಾರ್ವಜನಿಕರು STEMI ಉಪಕ್ರಮವನ್ನು ಅನುಸರಿಸಿದರೇ ಹೃದಯಾಘಾತದ ಸಂದರ್ಭದಲ್ಲಿ ಪ್ರಾಣಾಪಾಯವನ್ನು ಶೇ.80ರಷ್ಟು ತಡೆಯಬಹುದಾಗಿದೆ. ಇನ್ನೂ ಹೃದಯಾಘಾತವಾದ ಕೂಡಲೇ ತಕ್ಷಣವೇ ಇಸಿಜಿ ಮತ್ತು ಟೆನೆಕ್ಟಪ್ಲೇಸ್ ಚುಚ್ಚುಮದ್ದು (ರಕ್ತ ಹೆಪ್ಪುಗಟ್ಟುವಿಕೆ ಕರಗಿಸಲು) ನೀಡಿದರೇ ಜೀವ ಉಳಿಸಬಹುದು. ಸೋ ಗೋಲ್ಡನ್ ಅವರ್ ಆರೈಕೆಯ ಬಗ್ಗೆ ಸದಾ ನೆನಪಿಟ್ಟುಕೊಳ್ಳಿ. ಹೃದಯಾಘಾತದ ಲಕ್ಷಣ ಪ್ರಾರಂಭವಾದ ಮೊದಲ 60 ನಿಮಿಷ ತಡಮಾಡದೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ. ಆಗ ಅಮೂಲ್ಯ ಜೀವವನ್ನು ಉಳಿಸಲು ಸಾಧ್ಯವಿದೆ. https://twitter.com/KarnatakaVarthe/status/1943237013056163924 https://kannadanewsnow.com/kannada/only-20-people-died-of-heart-attacks-in-hassan-report-submitted-to-the-state-government-by-experts/ https://kannadanewsnow.com/kannada/the-student-committed-suicide-due-to-being-admitted-to-a-residential-school/

Read More