Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ 👉 https://chat.whatsapp.com/LE44dr3kKYG7AHE6b6ksTh ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಈ…
ಬೆಂಗಳೂರು: ರಾಜ್ಯದಲ್ಲಿ ಶುಚಿತ್ವ ಕಾಯಕದಲ್ಲಿ ತೊಡಗಿರುವಂತ 9000 ವಿವಿಧ ಬಗೆಯ ನೌಕರರನ್ನು ಮುಂದಿನ ದಿನಗಳಲ್ಲಿ ಖಾಯಂ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ ಮಾಡಿದರು. ಈ ಬಳಿಕ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ,…
ಬೆಂಗಳೂರು: ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಮದ್ಯವರ್ತಿಗಳ ಹಾವಳಿಯಿಂದ ಪೌರಕಾರ್ಮಿಕರು ಮುಕ್ತ ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು…
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ ಮಾಡಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು…
ಚಿಕ್ಕಬಳ್ಳಾಪುರ: ತನ್ನ ಒಂದು ವರ್ಷದ ಮಗುವಿನ ಎದುರೇ ಜೋಳಿಗೆಗೆ ನೇಣು ಬಿಗಿದುಕೊಂಡು ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸಿಎಂಸಿ ಬಡಾವಣೆಯಲ್ಲಿ ರಾಜ್ಯದಲ್ಲೇ ಧಾರುಣ ಘಟನೆ ಎನ್ನುವಂತ ಘಟನೆ ನಡೆದಿದೆ. ತನ್ನ ಒಂದು ವರ್ಷದ ಮುಗಿವನ ಎದುರೇ ತಾಯಿ ಝಾನ್ಸಿ(23) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಝಾನ್ಸಿ ಪತಿ ಕ್ರೈನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮನೆಗೆ ಊಟಕ್ಕೆ ಬಂದಾಗ ಪತ್ನಿ ಮಗುವಿನ ಜೋಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/our-government-has-brought-about-a-change-in-the-lives-of-pourakarmikas-as-promised-deputy-cm-dk-shivakumar-shivakumar/ https://kannadanewsnow.com/kannada/pahalgam-terror-attack-sc-refuses-to-entertain-plea-seeking-judicial-probe/
ಬೆಂಗಳೂರು: ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು ಬಂದಿದೆ. ಇಡೀ ವಿಶ್ವಕ್ಕೆ ದೊಡ್ಡ ಸೇವೆ ಮಾಡುವ ಕಾರ್ಮಿಕರ ದಿನವಿಂದು” ಎಂದು ಶ್ಲಾಘಿಸಿದರು.…
ಹಾವೇರಿ: ಕರ್ತವ್ಯದ ಅವಧಿಯಲ್ಲೇ ಬಸ್ ನಿಲ್ಲಿಸಿ ಸಾರಿಗೆ ಬಸ್ಸಿನಲ್ಲಿಯೇ ನಮಾಜ್ ಮಾಡಿದಂತ ಘಟನೆ ವೀಡಿಯೋ ವೈರಲ್ ಆಗಿತ್ತು. ಈ ನಡೆಯನ್ನು ತೋರಿದಂತ ಚಾಲಕ ಕಂ ಕಂಡಕ್ಟರ್ ಅಮಾನತುಗೊಳಿಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆದೇಶಿಸಿದೆ. ಈ ಸಂಬಂಧ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದು, ದಿನಾಂಕ:28/04/2025 ರಂದು ಹಾನಗಲ್ ಘಟಕದ ಅನುಸೂಚಿ ಸಂಖ್ಯೆ : 7/8, ಹಾನಗಲ್ ದಿಂದ ವಿಶಾಲಗಡ ಮಾರ್ಗದ ಮೇಲೆ ವಾಹನ ಸಂಖ್ಯೆ ಕೆಎ-27, ಎಫ್-0914, ರಲ್ಲಿ ಚಾಲಕರಾಗಿ ಕರ್ತವ್ಯಕ್ಕೆ ನಿಯೋಜಿಸಿದ್ದು, ದಿನಾಂಕ:29/04/2025 ರಂದು ವಿಶಾಲಗಡ ದಿಂದ ಹಾನಗಲ್ ಮಾರ್ಗವಾಗಿ ವಾಹನವನ್ನು ಕಾರ್ಯಾಚರಣೆ ಮಾಡುತ್ತಿರುವ ಸಮಯದಲ್ಲಿ ನೀವು ಸಮಯ 17:30 ಘಂಟೆಗೆ ಸುಮಾರಿಗೆ ವಾಹನವನ್ನು ಹುಬ್ಬಳ್ಳಿಯ ಹೊರ ಭಾಗದಲ್ಲಿನ ಗಟ್ಟೂರು ಕ್ರಾಸ್ನಿಂದ ಸ್ವಲ್ಪ ಮುಂದೆ ವಾಹನವನ್ನು ರಸ್ತೆಯ ಎಡಬದಿಗೆ ಹಾಕಿ, ವಾಹನವನ್ನು ಬಂದ್ ಮಾಡಿ, ಹ್ಯಾಂಡ್ ಬ್ರೇಕ್ ಹಾಕಿ, ಚಾಲಕರ ಸೀಟಿನಿಂದ ಎದ್ದು, ಚಾಲಕರ ಸೀಟಿನ್ ಹಿಂದೆ ಇರುವ ಮೂರರ (1,2,3)…
ಬೆಂಗಳೂರು: “ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಕೇಳಿದಾಗ, “ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು. ಸಮಾಜದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದರೆ ಜನಸಂಖ್ಯೆಯ ಆಧಾರದ ಮೇಲೆ ದೇಶದ ಜನರಿಗೆ ಸೌಲಭ್ಯಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ, ಬೇಡಿಕೆಯಾಗಿದೆ. ಮುಖ್ಯಮಂತ್ರಿಗಳು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಇದಕ್ಕೆ ಬೇಕಾದಂತಹ ಸಹಕಾರ ನೀಡಲಿದೆ” ಎಂದರು. https://kannadanewsnow.com/kannada/woman-arrested-for-circulating-video-claiming-to-be-wife-of-former-mp-dk-suresh/
ಬೆಂಗಳೂರು: ತನ್ನ ಇನ್ಸ್ಟಾ ಗ್ರಾಂನಲ್ಲಿ ಮಹಿಳೆಯೊಬ್ಬರು ತಾನು ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟಿದ್ದರು. ಇದು ವೈರಲ್ ಆಗಿ ತೀವ್ರ ವಿವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಆಕೆಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ನಾನು ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಬಿಟ್ಟ ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಪವಿತ್ರ ಎಂಬುವರ ವಿರುದ್ಧ ರಾಮನಗರ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮಾಜಿ ಸಂಸದ ಡಿ.ಕೆ ಸುರೇಶ್ ಪೋಟೋ ಜೊತೆಗೆ ತನ್ನ ಪೋಟೋ ಎಡಿಟ್ ಮಾಡಿ ಏಪ್ರಿಲ್.8ರಂದು ತಮ್ಮ ಫೇಸ್ ಬುಕ್, ಇನ್ ಸ್ಟಾಗ್ರಾಮ್ ನಲ್ಲಿ ಪವಿತ್ರ ಪೋಸ್ಟ್ ಮಾಡಿದ್ದರು. ಈ ಸಂಬಂಧ ವಕೀಲ ಪ್ರದೀಪ್ ಎಂಬುವರು ಡಿಕೆ ಸುರೇಶ್ ವಿರುದ್ಧ ದುರುದ್ದೇಶದಿಂದ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ…
ನವದೆಹಲಿ: ಪಹಲ್ಗಾಮ್ ನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ.ಸಿಂಗ್ ಅವರ ನ್ಯಾಯಪೀಠವು ಅರ್ಜಿದಾರರಾದ ಫತೇಶ್ ಸಾಹು ಅವರಿಗೆ ಇಂತಹ ಸಮಯದಲ್ಲಿ ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸದಂತೆ ಎಚ್ಚರಿಕೆ ನೀಡಿತು. ಭಯೋತ್ಪಾದನೆಯ ವಿರುದ್ಧ ಹೋರಾಡಲು ಪ್ರತಿಯೊಬ್ಬ ಭಾರತೀಯರೂ ಕೈಜೋಡಿಸಿರುವ ನಿರ್ಣಾಯಕ ಸಮಯ ಇದು. ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸಬೇಡಿ. ವಿಷಯದ ಸೂಕ್ಷ್ಮತೆಯನ್ನು ನೋಡಿ ಎಂದು ನ್ಯಾಯಪೀಠ ಹೇಳಿದೆ ನ್ಯಾಯಾಧೀಶರ ಕೆಲಸವು ವಿವಾದಗಳನ್ನು ನಿರ್ಧರಿಸುವುದು ಮತ್ತು ವಿಚಾರಣೆಗಳನ್ನು ನಡೆಸುವುದು ಅಲ್ಲ ಎಂದು ಅದು ಅರ್ಜಿದಾರರಿಗೆ ನೆನಪಿಸಿತು. ದಯವಿಟ್ಟು ಜವಾಬ್ದಾರಿಯುತ ಸಲಹೆಗಾರರಾಗಿರಿ. ಇಂತಹ ಸಮಯದಲ್ಲಿ ನೀವು ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತೀರಿ ಎಂದು ನ್ಯಾಯಾಲಯ ಹೇಳಿದೆ. ನಂತರ ಅರ್ಜಿದಾರರ ಪರ ವಕೀಲರು ತನಿಖೆಗಾಗಿ ಮನವಿಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದರು. ಆದಾಗ್ಯೂ,…