Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಂಸ್ಥೆಯಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳಿಂದ ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರಮಾಣವು ವೃದ್ಧಿಯಾಗಿದ್ದು, ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್-Refused Derived Fuel) ಸಂಗ್ರಹಣೆಯ ಪ್ರಮಾಣದಲ್ಲಿಯೂ ಸಹ ವೃದ್ಧಿಯಾಗಿರುತ್ತದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾಧಿಸಿದ ದಿಟ್ಟ ಕ್ರಮವಾಗಿರುತ್ತದೆ. ಪ್ರಸ್ತುತ, ಪ್ರತಿದಿನ 350 ಮೆ.ಟನ್ ರಿಂದ 400 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್ – Refused Derived Fuel) ಸಂಗ್ರಹಣೆಯಾಗುತ್ತಿದೆ. * ಅಂದಾಜು 100-150 ಮೆ.ಟನ್ ತ್ಯಾಜ್ಯವನ್ನು ಬಿಡದಿ ಬಳಿಯ ತ್ಯಾಜ್ಯದಿಂದ ಇಂಧನ ಉತ್ಪಾದನೆ ಸ್ಥಾವರಕ್ಕೆ ಕಳುಹಿಸಲಾಗುತ್ತಿದೆ. * 200-250 ಮೆ.ಟನ್ ತ್ಯಾಜ್ಯವನ್ನು ನೆರೆಯ ಕಡಪ ಜಿಲ್ಲೆಯ ಮೆ||ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಘಟಕಕ್ಕೆ ಸಾಗಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಇಂದು (ದಿನಾಂಕ:15.12.2025) ಮೊದಲನೇ ದಿನ ಒಟ್ಟು 160 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್ – Refused…
ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ. ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು. ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆಯಲ್ಲಿ ನೀರವಮೌನವೇ ಆವರಿಸಿತ್ತು. ಕೊಡುಗೈ ದಾನಿಯ ಕೊನೆಯ ಯಾತ್ರೆಯಲ್ಲಿ ಜನಸಾಗರವೇ ಸೇರಿತ್ತು. ಭಾವುಕರಾಗಿಯೇ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇಂದು ದಾವಣಗೆರೆಯಲ್ಲಿ ಅಂತಿನ ದರ್ಶನದ ಬಳಿಕ ಕಲ್ಲೇಶ್ವರ ಮಿಲ್ ಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಸಮಾಧಿಯ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ…
ಬೆಂಗಳೂರು: ಅಪಘಾತ, ಅಪರಾಧ ರಹಿತವಾಗಿ ಸೇವೆ ಸಲ್ಲಿಸುವಂತ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿ ನಿಗಮವು ಆದೇಶ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು ಸುತ್ತೋಲೆ ಹೊರಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಿಗಮದ ವಾಹನಗಳಲ್ಲಿ ಪಯಾಣಿಸುವವರ ಸುರಕ್ಷತೆಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಅಪಘಾತ ರಹಿತ ಚಾಲನೆಯ ಪ್ರವೃತ್ತಿಯನ್ನು ಹೊಂದಿರುವ ಚಾಲಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಪಘಾತ ಮುಕ್ತ ಚಾಲನೆಗೆ ಪ್ರೇರೆಪಿಸುವ ಸಲುವಾಗಿ ಅಪಘಾತರಹಿತ ಮತ್ತು ಅಪರಾಧರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ವಿತರಿಸುವ ಜೊತೆಗೆ ಪ್ರಶಂಸನಾ ಪತ್ರದೊಂದಿಗೆ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ. ನಂತರ ಪದಕ ಪಡೆದ ಚಾಲಕರಿಗೆ ಪ್ರತಿ ತಿಂಗಳು ಮಾಸಿಕ ಭತ್ಯೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ. ಮುಂದುವರೆದು, ಮುಖ್ಯ ಮಂತ್ರಿ ಚಿನ್ನದ ಪದಕ ಮತ್ತು ಬೆಳ್ಳಿ…
ದಾವಣಗೆರೆ: ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿದ್ದ ದಾವಣಗೆರೆಯನ್ನು ವಿದ್ಯಾನಗರಿಯಾಗಿ ಪರಿವರ್ತಿಸಿದ ಶಾಮನೂರು ಶಿವಶಂಕಪ್ಪ ಅವರು ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಶಾಮನೂರು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ದಶಕಕ್ಕೂ ಹೆಚ್ಚುಕಾಲ ಅವರು ಸಲ್ಲಿಸಿರುವ ಸೇವೆ ಅನುಪಮವಾದ್ದು ಎಂದರು. ಸಭಾದ ನಿಕಟಪೂರ್ವ ಅಧ್ಯಕ್ಷರಾಗಿದ್ದ ತಮ್ಮ ತಂದೆ ಶತಾಯುಷಿ ಭೀಮಣ್ಣ ಖಂಡ್ರೆ ಅವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಶಾಮನೂರು ಅವರು ತಮಗೂ ಮಾರ್ಗದರ್ಶಕರಾಗಿದ್ದರು ಎಂದು ತಿಳಿಸಿದರು. ದಾವಣಗೆರೆ ತಾಲೂಕನ್ನು ಜಿಲ್ಲೆಯಾಗಿ ಮಾಡುವಲ್ಲಿ ಅವರ ಕೊಡುಗೆ ಅಪಾರವಾಗಿದೆ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು. ನೇರ ನಿಷ್ಟುರ ವಾದಿಯಾಗಿದ್ದ ಅವರ ಆಗಲಿಕೆಯಿಂದ ರಾಷ್ಟ್ರ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಈಶ್ವರ ಖಂಡ್ರೆ ಶೋಕ ವ್ಯಕ್ತಪಡಿಸಿದರು. https://kannadanewsnow.com/kannada/good-news-for-ksrtc-bus-drivers-monthly-allowance-cash-reward-for-accident-free-crime-free-service-increased/ https://kannadanewsnow.com/kannada/government-orders-appointment-of-taluk-medical-officers-for-84-taluks-of-the-state-here-is-the-list/
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಚಾಲಕರಿಗೆ ಅಪಘಾತ ರಹಿತ ಮತ್ತು ಅಪರಾಧ ರಹಿತವಾಗಿ ಸೇವೆ ಸಲ್ಲಿಸಿದವರಿಗೆ ಮಾಸಿಕ ಭತ್ಯೆಯನ್ನು ಮತ್ತು ನಗದು ಪುರಸ್ಕಾರ ನೀಡಲಾಗುತ್ತದೆ. ಈ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಳ ಮಾಡಿ ಕೆ ಎಸ್ ಆರ್ ಟಿಸಿ ಆದೇಶಿಸಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು ಸುತ್ತೋಲೆ ಹೊರಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಿಗಮದ ವಾಹನಗಳಲ್ಲಿ ಪಯಾಣಿಸುವವರ ಸುರಕ್ಷತೆಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಅಪಘಾತ ರಹಿತ ಚಾಲನೆಯ ಪ್ರವೃತ್ತಿಯನ್ನು ಹೊಂದಿರುವ ಚಾಲಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಪಘಾತ ಮುಕ್ತ ಚಾಲನೆಗೆ ಪ್ರೇರೆಪಿಸುವ ಸಲುವಾಗಿ ಅಪಘಾತರಹಿತ ಮತ್ತು ಅಪರಾಧರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ವಿತರಿಸುವ ಜೊತೆಗೆ ಪ್ರಶಂಸನಾ…
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹುಚ್ಚಾ ಪ್ರದರ್ಶಿಸುವವರ ಸಂಖ್ಯೆ ಹೆಚ್ಚಾಗಿದೆ. ನೀವು ಸೋಷಿಯಲ್ ಮೀಡಿಯಾ ಸ್ಟಾರ್ ಆಗಬೇಕು ಎನ್ನುವ ಹುಚ್ಚಿಗೆ ಬಿದ್ದು, ತಲ್ವಾರ್ ಹಿಡಿದು ರೀಲ್ಸ್ ಮಾಡೋಕೆಲ್ಲ ಹೋಗಬೇಡಿ. ಅಂತ ಸಾಹಸಕ್ಕೆ ಕೈ ಹಾಕೋ ಮುನ್ನ ಎಚ್ಚರ. ಯಾಕೆ ಅಂತ ಮುಂದೆ ಓದಿ. ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿದ್ದಂತ ಆ ಇಬ್ಬರು, ಆ ವೀಡಿಯೋ ರೀಲ್ಸ್ ಗೆ ಹಾಕಿದ್ದರು. ಅವರು ಹಾಕಿದ್ದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಜೊತೆ ಜೊತೆಗೆ ಪೊಲೀಸರ ಕಣ್ಣಿಗೂ ಬಿದ್ದಿತ್ತು. ಈ ಸಂಬಂಧ ದಾಖಲಾದಂತ ಪ್ರಕರಣದಲ್ಲಿ ಮಂಗಳೂರಿನ ಬಂದರು ನಿವಾಸಿ ಅಮೀರ್ ಸುಹೇಲ್ ಹಾಗೂ ಕಾವೂರು ನಿವಾಸಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದೆ. ಡಿಸೆಂಬರ್.13ರಂದು ಅಮೀರ್ ಸುಹೇಲ್ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ, ತಾನಿರುವಂತ ಸೋಷಿಯಲ್ ಮೀಡಿಯಾದಲ್ಲಿ ಆ ವೀಡಿಯೋ ಹಾಕಿದ್ದನು. ಇದೇ ವೀಡಿಯೋಗೆ ಕಾವೂರು ನಿವಾಸಿ ಸುರೇಶ್ ಲೈಕ್ ಮಾಡಿದ್ದಲ್ಲದೇ, ಶೇರ್ ಕೂಡ ಮಾಡಿದ್ದನು. ಹೀಗಾಗಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವಂತ ರೀಲ್ಸ್ ಹಾಕಿದ ಆರೋಪದಡಿ ಇಬ್ಬರ ವಿರುದ್ಧ…
ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಹೈಕೋರ್ಟ್ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಶೀಘ್ರವೇ ಚುನಾವಣಾ ಪ್ರಕ್ರಿಯೆ ಮುಂದುವರೆಸಿ, ಚುನಾವಣಾ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸುವಂತೆ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸದಸ್ಯರು ಡಿಆರ್ ಭೇಟಿಯಾಗಿ ಮನವಿ ಮಾಡಿದರು. ಇಂದು ಶಿವಮೊಗ್ಗದ ಡಿಆರ್ ಕಚೇರಿಗೆ ಭೇಟಿ ಮಾಡಿದಂತ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸಂಚಾಲಕ ಎಂ.ಡಿ ಆನಂದ್ ಮತ್ತು ಸಮಿತಿಯ ಸದಸ್ಯರು, ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಚುನಾವಣೆ ಮುಂದೂಡಿಕೆ ಮಾಡಿದ್ದನ್ನು ಮತ್ತೆ ಪುನರಾರಂಭಿಸುವಂತೆ ಕೋರಲಾಯಿತು. ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಹಾಲಿ ಸಮಿತಿಯ ನಡೆಗೆ ಆಕ್ರೋಶ ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ತಡೆಯಾಜ್ಞೆ ನೀಡುತ್ತಿದ್ದಂತೆ, ಹಾಲಿ ಸಮಿತಿಯ ಅಧ್ಯಕ್ಷರಾದಂತ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿ ಭಟ್ ಅವರು, ಚುನಾವಣಾಧಿಕಾರಿ ಭೇಟಿಯಾಗಿ ಕೋರ್ಟ್ ತಡೆಯಾಜ್ಞೆಯ ಮಾಹಿತಿಯನ್ನು ಸಲ್ಲಿಸಿದ್ದರು. ಆದರೇ ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನೀಡಿದ್ದಂತ…
ಬೆಂಗಳೂರು: ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ರಾಜ್ಯದ 84 ತಾಲ್ಲೂಕಿಗೆ ತಾಲ್ಲೂಕು ವೈದ್ಯಾಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಜ್ಞಾಪನಾಪತ್ರ ಹೊರಡಿಸಿದ್ದಾರೆ. ಅದರಲ್ಲಿ 2025ನೇ ಸಾಲಿನ ವಿಶೇಷ ಆಡಳಿತಾತ್ಮಕ ಹುದ್ದೆಗಳಿಗೆ ದಿನಾಂಕ 19-11-2025ರಂದು ಆನ್ ಲೈನ್ ಮೂಲಕ ಸಮಾಲೋಚನೆ ನಡೆಸಲಾಗಿರುತ್ತದೆ. ಅದರಂತೆ ಈ ಕೆಳಕಂಡ ಅಧಿಕಾರಿಗಳನ್ನು ತಾಲ್ಲೂಕು ವೈದ್ಯಾಧಿಕಾರಿಗಳನ್ನಾಗಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟಿಹೆಚ್ಓ ಆಗಿ ಹಾವೇರಿಯ ಎಸ್ಎಂಓ ಆಗಿದ್ದಂತ ನೀಲಕಾಂತಸ್ವಾಮಿ ಎಂ.ವೈ ನ್ಯಾಮತಿ ಅವರನ್ನು ನೇಮಕ ಮಾಡಿದ್ದರೇ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಟಿಹೆಚ್ಓ ಆಗಿ ಬಳ್ಳಾರಿಯ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಆಗಿದ್ದಂತ ಡಾ.ಸಿವಿ ಕಂಬಲಿ ಮಠ ಅವರನ್ನು ನೇಮಕ ಮಾಡಿದ್ದರೇ, ಚಿತ್ರದುರ್ಗ ಟಿಹೆಚ್ಓ ಆಗಿ ದಾವಣಗೆರೆಯ ಜಿಲ್ಲಾ ಟಿಬಿ ಆಫೀಸರ್ ಆಗಿದ್ದಂತ ಡಾ.ಮುರುಳೀಧರ ಪಿ.ಡಿ ನೇಮಿಸಲಾಗಿದೆ. ಇನ್ನೂ ಶಿವಮೊಗ್ಗ ಟಿಹೆಚ್ಓ ಆಗಿ ಹಾವೇರಿಯ…
ಗದಗ: ಜಿಲ್ಲೆಯ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಐದು ಬಾಂಬ್ ಗಳಿಂದ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆ ಸಂದೇಶ ಕಂಡು ಜಿಲ್ಲಾಡಳಿತ ಭವನದ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಆರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಪಾಕ್ ಐಎಸ್ಐ, ಎಲ್ ಟಿಟಿಇ ಕಾರ್ಯಕರ್ತರ ಜೊತೆ ಸೇರಿ ಸ್ಪೋಟಿಸುವುದಾಗಿ ಧಮ್ಕಿ ಹಾಕಲಾಗಿದೆ. ಗದಗ ಜಿಲ್ಲಾಡಳಿತ ಭವನದ ಐದು ಕಡೆಯಲ್ಲಿ ಬಾಂಬ್ ಇಟ್ಟಿರುವುದಾಗಿಯೂ ಇ-ಮೇಲ್ ನಲ್ಲಿ ತಿಳಿಸಲಾಗಿದೆ. ಹೀಗಾಗಿ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/extend-the-belgaum-session-by-1-week-r-ashok-writes-to-speaker-u-t-khader-demanding/
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ, ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ ಎಂದಿದ್ದಾರೆ. ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ.…














