Author: kannadanewsnow09

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿ.ಈಶ್ವರ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓ ಎಸ್ ಜೆ ಸೋಮಶೇಖರ್ ಅವರು ಆದೇಶ ಹೊರಡಿಸಿದ್ದು, ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಬಗ್ಗೆ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 15 ಹಣಕಾಸಿನ ಖರ್ಚು ವೆಚ್ಚದ ಮಾಹಿತಿಯನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನೀಡದೆ ಉದ್ಧಟನವನ್ನು ತೋರಿರುವುದಾಗಿ ತಿಳಿಸಿದ್ದಾರೆ. ಇದಲ್ಲದೇ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ನೇಮಿಸಲಾದ ತನಿಖಾ ತಂಡ ಆಡಿಟ್ ನಡೆಸಲು ಸೂಕ್ತ ದಾಖಲೆಗಳನ್ನು ನೀಡದೇ ಬೇಜವಬ್ದಾರಿಯನ್ನು ಜವಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಿ.ಈಶ್ವರ ಪ್ರದರ್ಶಿಸಿದ್ದಾರೆ. ಹಣಕಾಸಿನ ವ್ಯವಹಾರದ ಲೆಕ್ಕ ಒದಗಿಸದೆ ಕರ್ತವ್ಯ ಲೋಪ ತೋರಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಎಲ್ಲಾ ಕಾರಣದಿಂದಾಗಿ ಸರ್ಕಾರಿ ನೌಕರರಾಗಿ ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಮಾವಳಿಗಳು-1966 ನಿಯಮ-3(I)(II)&(III) ಉಲ್ಲಂಘಿಸಿದ ಕಾರಣ ಪಿಡಿಓ ಸಿ.ಈಶ್ವರ್ ಅವರನ್ನು ಅಮಾನತುಗೊಳಿಸಿ…

Read More

ಶಿವಮೊಗ್ಗ: ಜಿಲ್ಲೆ ಸಾಗರದ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಅವರ ಪುತ್ರಿ ಪ್ರೇಕ್ಷಾ ಎಲ್ ಗೌಡ ಅವರು ವಿವಿಧ ಸ್ಪರ್ಧೆಯಲ್ಲಿ ಗೆಲುವು ಸಾಧಿಸುವ ಮೂಲಕ, ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದಂತ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೂಡಬಿದ್ರಿಯ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ 7ನೇ ತರಗತಿ ಓದುತ್ತಿರುವಂತ ಪ್ರೇಕ್ಷಾ ಎಲ್ ಗೌಡ ಅವರು, ವಿವಿಧ ವಿಭಾಗದ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 14 ವರ್ಷದ ಬಾಲಕಿಯರ ವಿಭಾಗದಲ್ಲಿ ಪ್ರೇಕ್ಷಾ ಎಲ್ ಗೌಡ ಪ್ರತಿನಿಧಿಸಿದ್ದರು. ಇಂತಹ ಇವರು 80 ಮೀಟರ್ ಹರ್ಡಾಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಅಲ್ಲದೇ  4×100 ಮೀಟರ್ ರಿಲೇಯಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆಯವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂದಹಾಗೇ ಮೂಡಬಿದರಿಯ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿರುವಂತ ಪ್ರೇಕ್ಷಾ ಎಲ್ ಗೌಡ ಅವರು ಸಾಗರ ಪೇಟೆ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರನ್ನು ಸಚಿವ ಜಮೀರ್ ಅಹ್ಮದ್ ಖಾನ್ ಕರಿಯಣ್ಣ ಅಂತ ಕರೆದಿದ್ದರು. ಈ ಹೇಳಿಕೆ ವಿವಾದಕ್ಕೂ ಕಾರಣವಾಗಿತ್ತು. ಜನಾಂಗೀಯ ನಿಂದನೆ ಮಾಡಿದಂತ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ನಿಂದನಾತ್ಮಕವಾದ ಭಾಷೆ ಬಳಸಿರುವುದನ್ನು ರಾಜ್ಯ ಒಕ್ಕಲಿಗರ ಸಂಘವು ತೀವ್ರವಾಗಿ ಖಂಡಿಸುತ್ತದೆ. ಕೂಡಲೇ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಜಮೀರ್ ಅವರು ಬಳಸಿರುವ ಭಾಷೆಯಿಂದ ಕುಮಾರಸ್ವಾಮಿ ಅವರಿಗೆ ಮಾತ್ರ ಅಪಮಾನ ಮಾಡಿಲ್ಲ. ಇಡೀ ಒಕ್ಕಲಿಗ ಜನಾಂಗಕ್ಕೆ ಮಾಡಿರುವ ಅವಹೇಳನವಾಗಿದೆ. ನಾಡಿನ ಜನರಿಗೂ ಅಪಮಾನ ಮಾಡಿದಂತೆ. ಎರಡು…

Read More

ನವದೆಹಲಿ: ಇತ್ತೀಚಿನ ಅಧ್ಯಯನದ ಪ್ರಕಾರ, ಭಾರತ, ನೇಪಾಳ ಮತ್ತು ಪಾಕಿಸ್ತಾನದಲ್ಲಿ ಮಾರಾಟವಾಗುವ ಅರಿಶಿನದ ವಿವಿಧ ಮಾದರಿಗಳಲ್ಲಿ ಹೆಚ್ಚಿನ ಮಟ್ಟದ ಸೀಸ ಕಂಡುಬಂದಿದೆ. ಈ ಮಟ್ಟಗಳು ಪ್ರತಿ ಡೋಸ್ಗೆ ಪ್ರತಿ ಗ್ರಾಂಗೆ 1,000 ಮೈಕ್ರೋಗ್ರಾಂ (μg / ಗ್ರಾಂ) ಮೀರುವ ನಿಯಂತ್ರಕ ಮಿತಿಗಿಂತ ಹೆಚ್ಚಾಗಿದೆ. ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಅರಿಶಿನದಲ್ಲಿ ಗರಿಷ್ಠ ಅನುಮತಿಸಬಹುದಾದ ಸೀಸದ ಅಂಶವನ್ನು 10 μg / ಗ್ರಾಂ ಎಂದು ನಿಗದಿಪಡಿಸುತ್ತದೆ. ಸೈನ್ಸ್ ಆಫ್ ದಿ ಟೋಟಲ್ ಎನ್ವಿರಾನ್ಮೆಂಟ್ನಲ್ಲಿ ಪ್ರಕಟವಾದ ಅಧ್ಯಯನವು ಭಾರತ, ಪಾಕಿಸ್ತಾನ, ಶ್ರೀಲಂಕಾ ಮತ್ತು ನೇಪಾಳದ 23 ನಗರಗಳಿಂದ ಅರಿಶಿನವನ್ನು ವಿಶ್ಲೇಷಿಸಿದೆ, ಸುಮಾರು 14% ಮಾದರಿಗಳು 2 μg / ಗ್ರಾಂ ಸೀಸದ ಸಾಂದ್ರತೆಯನ್ನು ಮೀರಿದೆ ಎಂದು ಬಹಿರಂಗಪಡಿಸಿದೆ. ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಸಂಶೋಧಕರು, ಪ್ಯೂರ್ ಅರ್ಥ್ ಮತ್ತು ಭಾರತದ ಫ್ರೀಡಂ ಎಂಪ್ಲಾಯಬಿಲಿಟಿ ಅಕಾಡೆಮಿಯ ಸಹಯೋಗದೊಂದಿಗೆ, ಲೋಹವು ಕ್ಯಾಲ್ಸಿಯಂ ಅನ್ನು ಅನುಕರಿಸುವ ಮೂಲಕ ಮತ್ತು ಮೂಳೆಗಳಲ್ಲಿ ಸಂಗ್ರಹವಾಗುವ ಮೂಲಕ ಅಗತ್ಯ ದೈಹಿಕ ಕಾರ್ಯಗಳಿಗೆ…

Read More

ಹಾವೇರಿ : ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್ ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ದವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರ್ಕಾರ ಪ್ರತಿ ಬಾರಿಯೂ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಹಾವೇರಿ ಜಿಲಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ‌. ಇದನ್ನು ಕೂಡಲೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ‌. ಚುನಾವಣೆಗೆ ಸರ್ಕಾರದ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಹಳ ಬಗ್ಗೆ ಮಾತನಾಡುತ್ತಾರೆ‌. ಇಡೀ ಸರ್ಕಾರವೇ ಸರ್ಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾವಿ ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ…

Read More

ಬೆಂಗಳೂರು: ಶಬರಿಮಲೆಗೆ ತೆರಳುವಂತೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಟು ನೀಲಕ್ಕರ್ ನಡುವೆ ಕೆ ಎಸ್ ಆರ್ ಟಿಸಿ ವೋಲ್ವೋ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಬಗ್ಗೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ದಿನಾಂಕ 29/11/2024 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ವಾಹನವನ್ನು ಈ ಕೆಳಕಂಡ  ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ವೇಳಾ ಪಟ್ಟಿ ಮತ್ತು ಪ್ರಯಾಣದ ದರದ ವಿವರಗಳು ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ನಡುವೆ ವೋಲ್ವೋ ಬಸ್ ಸಂಚಾರ ಮಾರ್ಗ ಪ್ರಾರಂಭಿಕ ದಿನಾಂಕ ಪ್ರಯಾಣ ದರ ವಯಸ್ಕರು ರೂ.  ಪೈಸೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡುವ ಸಮಯ ನೀಲಕ್ಕಲ್ (ಪಂಪಾ-ಶಬರಿಮಲೈ) ತಲುಪುವ ಸಮಯ ನೀಲಕ್ಕಲ್  (ಪಂಪಾ-ಶಬರಿಮಲೈ) ಹೊರಡುವ ಸಮಯ ಬೆಂಗಳೂರು ತಲುಪುವ ಸಮಯ ಬೆಂಗಳೂರು-ನೀಲಕ್ಕಲ್     (ಪಂಪಾ -ಶಬರಿಮಲೈ) 29/11/2024 1750=00 13:50 06:45 18:00 10:00…

Read More

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆಯೊಂದನ್ನು ರಚಿಸುವದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇ-ಖಾತ ಸಂಬಂಧದಲ್ಲಿ ನಾಳೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಇಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಗ್ರಾಮಠಾಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಛಯಗಳು ನಿರ್ಮಾಣಗೊಂಡಿದ್ಗು, ಬಹುಪಾಲು ಆಸ್ತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾಮ ಪಂಚಾಯತಿಗಳ ಸಂಪನ್ಮೂಲ ಕ್ರೋಢೀಕರಣದಲ್ಲಿ ಹಿನ್ನಡೆ ಉಂಟಾಗಿದೆ ಎಂದು ಸಚಿವರು ಹೇಳಿದರು. ಗ್ರಾಮ ಪಂಚಾಯತಿಗಳನ್ನು ಆರ್ಥಿಕವಾಗಿ ಸದೃಢಗೊಳಿಸುವಲ್ಲಿ ಸಬಲೀಕರಣ ಹಾಗೂ ನಾಗರಿಕರಿಗೆ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ಅನಿವಾರ್ಯತೆ ಇರುವುದರಿಂದ ಸಮಸ್ಯೆಗಳನ್ನು ಬಗಹರಿಸಿ ಪರಿಹಾರಗಳನ್ನು ಕಂಡುಕೊಳ್ಳಲು ಕಾರ್ಯಪಡೆಯನ್ನು ರಚಿಸಲಾಗುವುದು…

Read More

ಚೀನಾ: ದೇಶದಲ್ಲಿ ಕಾರೊಂದರ ಚಾಲಕನ ಹಿಟ್ ಅಂಡ್ ರನ್ ಗೆ 35 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ 43ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಗೆ ಕಾರಣವಾದಂತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚೀನಾದ ದಕ್ಷಿಣ ನಗರ ಝುಹೈನ ಕ್ರೀಡಾ ಕೇಂದ್ರದ ಹೊರಗೆ ಸೋಮವಾರ ಸಂಜೆ ಕಾರು ಜನರ ಗುಂಪಿನ ಮೇಲೆ ಹರಿದ ಪರಿಣಾಮ 35 ಜನರು ಸಾವನ್ನಪ್ಪಿದ್ದಾರೆ ಮತ್ತು 43 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯ ದೂರದರ್ಶನ ಸಿಸಿಟಿವಿ ಮಂಗಳವಾರ ವರದಿ ಮಾಡಿದೆ. ಶಂಕಿತ, 62 ವರ್ಷದ ವಿಚ್ಛೇದಿತ ಪುರುಷ, ಜನಸಮೂಹದ ಮೇಲೆ ಕಾರನ್ನು ಓಡಿಸಿದನು. ಘಟನಾ ಸ್ಥಳದಲ್ಲಿ ಪೊಲೀಸರು ಆತನನ್ನು ನಿಯಂತ್ರಿಸಿದಾಗ ಶಂಕಿತನು ಚಾಕುವಿನಿಂದ ಸ್ವಯಂ ಹಾನಿ ಮಾಡಲು ಪ್ರಯತ್ನಿಸುತ್ತಿದ್ದನು. ಶಂಕಿತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಝುಹೈ ಪೊಲೀಸರು ಮಂಗಳವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚೀನಾದ ದಕ್ಷಿಣ ನಗರ ಝುಹೈನ ಕ್ರೀಡಾ ಕೇಂದ್ರದ ಹೊರಗೆ ನೆರೆದಿದ್ದ ಜನರ ಮೇಲೆ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಕನಿಷ್ಠ…

Read More

ಚೀನಾ: ಇಲ್ಲಿನ ಕ್ರೀಡಾ ಕೇಂದ್ರದ ಹೊರಗಡೆ ಇಂದು ಕಾರೊಂದು ಜನರ ಗುಂಪಿನ ಮೇಲೆ ಹರಿದ ಪರಿಣಾಮ 35 ಮಂದಿ ಸಾವನ್ನಪ್ಪಿ, 43ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. ಚೀನಾದ ದಕ್ಷಿಣ ನಗರ ಝುಹೈನ ಕ್ರೀಡಾ ಕೇಂದ್ರದ ಹೊರಗೆ ಸೋಮವಾರ ಸಂಜೆ ಕಾರು ಜನರ ಗುಂಪಿನ ಮೇಲೆ ಹರಿದ ಪರಿಣಾಮ 35 ಜನರು ಸಾವನ್ನಪ್ಪಿದ್ದಾರೆ ಮತ್ತು 43 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯ ದೂರದರ್ಶನ ಸಿಸಿಟಿವಿ ಮಂಗಳವಾರ ವರದಿ ಮಾಡಿದೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡ ಸಹ ನಾಗರಿಕರಿಗೆ ಸಹಾಯ ಮಾಡುವಂತೆ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಜನರನ್ನು ಒತ್ತಾಯಿಸಿದರು ಎಂದು ಚೀನಾದ ರಾಜ್ಯ ಮಾಧ್ಯಮ ವರದಿ ಮಾಡಿದೆ. ಒಟ್ಟಾರೆಯಾಗಿ ಚೀನಾದ ದಕ್ಷಿಣ ನಗರ ಝುಹೈನ ಕ್ರೀಡಾ ಕೇಂದ್ರದ ಹೊರಗೆ ನೆರೆದಿದ್ದ ಜನರ ಮೇಲೆ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 43 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಟೆಲಿವಿಷನ್ ಸಿಸಿಟಿವಿ ವರದಿ ಮಾಡಿದೆ.…

Read More

ತುಳಸಿ ವಿವಾಹವನ್ನು ವರ್ಷಕ್ಕೊಮ್ಮೆ ನಡೆಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಕಾರ್ತಿಕ ಮಾಸದಲ್ಲಿ ತುಳಸಿ ವಿವಾಹ ಪೂಜೆಯನ್ನು ಮಾಡುವುದರಿಂದ ಕುಟುಂಬಕ್ಕೆ ಸಂತೋಷ ಮತ್ತು ಸಮೃದ್ಧಿ ಸಿಗುತ್ತದೆ. ತುಳಸಿ ವಿವಾಹದಲ್ಲಿ, ತುಳಸಿ ಸಸ್ಯದ ಮದುವೆಯನ್ನು ವಿಷ್ಣುವಿನ ಶಾಲಿಗ್ರಾಮ್ ರೂಪದೊಂದಿಗೆ ನಡೆಸಲಾಗುತ್ತದೆ. ತುಳಸಿ ವಿವಾಹ ಪೂಜೆಯನ್ನು ಮಾಡುವುದರಿಂದ ಮಗಳನ್ನು ಮದುವೆಯಲ್ಲಿ ನೀಡುವಷ್ಟೇ ಪ್ರಯೋಜನಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಈ ವರ್ಷ ತುಳಸಿ ವಿವಾಹ ಯಾವಾಗ ನಡೆಯುತ್ತದೆ, ಶುಭ ಸಮಯ, ಪೂಜಾ ವಿಧಾನ ಮತ್ತು ಸಾಮಗ್ರಿಗಳನ್ನು ಕಂಡುಹಿಡಿಯೋಣ. ತುಳಸಿ ವಿವಾಹ ಯಾವಾಗ? ಪಂಚಾಂಗದ ಪ್ರಕಾರ, ನವೆಂಬರ್ 13 ರಂದು ಬರುವ ಕಾರ್ತಿಕ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿಯಂದು ತುಳಸಿ ವಿವಾಹ ಪೂಜೆಯನ್ನು ನಡೆಸಲಾಗುತ್ತದೆ. ದ್ವಾದಶಿ ತಿಥಿ ನವೆಂಬರ್ 12 ರಂದು ಸಂಜೆ 04:04 ಕ್ಕೆ ಪ್ರಾರಂಭವಾಗುತ್ತದೆ ಮತ್ತು ನವೆಂಬರ್ 13 ರಂದು ಮಧ್ಯಾಹ್ನ 01:01 ಕ್ಕೆ ಕೊನೆಗೊಳ್ಳುತ್ತದೆ. ತುಳಸಿ ವಿವಾಹ ಆಚರಣೆ: ಹಿಂದೂ ಧರ್ಮದಲ್ಲಿ ತುಳಸಿ ಪೂಜೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಬ್ರಹ್ಮ ಮುಹೂರ್ತದಲ್ಲಿ ಸ್ನಾನ…

Read More