Subscribe to Updates
Get the latest creative news from FooBar about art, design and business.
Author: kannadanewsnow09
ಬೀದರ್: ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ವರದಿಯಾಗಿತ್ತು. ಈಗಾಗಲೇ ಶಿವಮೊಗ್ಗದಲ್ಲಿ ನಡೆದಿದ್ದಂತ ಘಟನೆ ಸಂಬಂಧ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನುತುಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಲಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತವಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ಸಂಬಂಧ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸಲಿದೆ. ಮತ್ತೊಂದೆಡೆ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಜಿಲ್ಲಾಧಿಕಾರಿಗಳು ವರದಿಯನ್ನು ಸಲ್ಲಿಸಿದ್ದಾರೆ. ಘಟನೆ ಸಂಬಂಧ ಸಂಪೂರ್ಣ ವರದಿಯನ್ನು ಬೀದರ್ ಜಿಲ್ಲಾಧಿಕಾರಿಗಳು KEAಗೆ ಸಲ್ಲಿಸಿದ್ದಾರೆ. https://kannadanewsnow.com/kannada/kl-rahul-becomes-fastest-indian-to-hit-200-sixes-in-ipl-history/ https://kannadanewsnow.com/kannada/check-website-avoid-unknown-links-mha-advisory-on-scams-targeting-pilgrims-tourists/
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 200 ಸಿಕ್ಸರ್ಗಳನ್ನು ಬಾರಿಸಿದ ಅತ್ಯಂತ ವೇಗದ ಭಾರತೀಯ ಮತ್ತು ಮೂರನೇ ಅತಿ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶನಿವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಮೊದಲ ಸಿಕ್ಸರ್ನೊಂದಿಗೆ, 129 ಇನ್ನಿಂಗ್ಸ್ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು. 128 ಇನ್ನಿಂಗ್ಸ್ಗಳಲ್ಲಿ 200 ಸಿಕ್ಸರ್ಗಳೊಂದಿಗೆ, ರಾಹುಲ್ ಕ್ರಿಸ್ ಗೇಲ್ ಮತ್ತು ಆಂಡ್ರೆ ರಸೆಲ್ ನಂತರ ವೇಗವಾಗಿ 200 ಸಿಕ್ಸರ್ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ನ ಪವರ್ಹೌಸ್ ಗೇಲ್ ಕೇವಲ 69 ಇನ್ನಿಂಗ್ಸ್ಗಳಲ್ಲಿ 200 ಐಪಿಎಲ್ ಸಿಕ್ಸರ್ಗಳನ್ನು ತಲುಪಿದರೆ, ರಸೆಲ್ 97 ಇನ್ನಿಂಗ್ಸ್ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು, ಇಬ್ಬರೂ 100 ಕ್ಕಿಂತ ಕಡಿಮೆ ಇನ್ನಿಂಗ್ಸ್ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ ಏಕೈಕ ಇಬ್ಬರು ಆಟಗಾರರು. ಡೆಲ್ಲಿ ಡೇರ್ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್)…
ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಎಂದರು. ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸಬೇಕು ಎನ್ನುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ…
ತುಮಕೂರು : ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು. ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ…
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷದಿಂದ ಹೊರನಡೆದು, ಗುಡ್ ಬೈ ಹೇಳಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಕೀಯದಿಂದ ದೂರ ತೆರಳಿ ಪರಿಸರ ಚಟುವಟಿಕೆಯಲ್ಲಿ ಭಾಗಿಯಾಗುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೇ ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಯನ್ನು ರಾಮಸ್ವಾಮಿ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಯ ನಂತ್ರ ಬಿಜೆಪಿಯ ಎಲ್ಲಾ ಚಟುವಟಿಕೆಯಿಂದ ದೂರವೇ ಉಳಿದಿದ್ದರು. ಇದೀಗ ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಅವರು ತಾನು ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ಸಕ್ರೀಯವಾಗುತ್ತಿದ್ದೇನೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿಸಿದ್ದೇನೆ ಅಂತ ತಿಳಿಸಿದ್ದಾರೆ. https://kannadanewsnow.com/kannada/new-utensils-for-16500-government-schools-in-the-state-smart-class-free-electricity-facility/ https://kannadanewsnow.com/kannada/shocking-man-chops-off-wifes-lovers-genitals-brings-him-to-police-station/
ಬೆಂಗಳೂರು: ರಾಜ್ಯದ 16,500 ಸರ್ಕಾರಿ ವಸತಿ ಶಾಲೆಗಳಿಗೆ ಹೊಸ ಪಾತ್ರೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಕಲಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗುತ್ತದೆ. ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿಯೂ ಹೇಳಿದ್ದಾರೆ. ಬಿಳಾಗಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು. ಈ ಬಳಿಕ ಮಾತನಾಡಿದರು. ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ…
ಕೇರಳ: ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರನ್ನು ಶನಿವಾರ ಬಂಧಿಸಲಾಗಿದ್ದು, ಸುಮಾರು ನಾಲ್ಕು ಗಂಟೆಗಳ ಕಾಲ ಪೊಲೀಸ್ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. ಈ ವಾರದ ಆರಂಭದಲ್ಲಿ ಕೊಚ್ಚಿಯ ಹೋಟೆಲ್ನಲ್ಲಿ ಮಾದಕ ದ್ರವ್ಯ ದಾಳಿಯ ಸಂದರ್ಭದಲ್ಲಿ ನಟ ಶೈನ್ ಟಾಮ್ ಚಾಕೊ ಪರಾರಿಯಾಗಿದ್ದ ಘಟನೆಗೆ ಈ ಬಂಧನ ಸಂಬಂಧಿಸಿದೆ. ಶೈನ್ ಟಾಮ್ ಚಾಕೊ ಅವರನ್ನು ಕೇರಳ ಪೊಲೀಸರು ಬಂಧನ ಪೊಲೀಸ್ ಅಧಿಕಾರಿಗಳ ಪ್ರಕಾರ, ಚಾಕೊ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ (ಎನ್ಡಿಪಿಎಸ್) ಕಾಯ್ದೆಯ ಸೆಕ್ಷನ್ 27 (ಮಾದಕ ದ್ರವ್ಯ ಸೇವನೆ) ಮತ್ತು 29 (ಕ್ರಿಮಿನಲ್ ಪಿತೂರಿ ಮತ್ತು ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಮತ್ತು ಮುಂದಿನ ಕಾನೂನು ಕ್ರಮಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ವಾರದ ಆರಂಭದಲ್ಲಿ ಪೊಲೀಸ್ ಮಾದಕ ದ್ರವ್ಯ ದಾಳಿಯ ಸಮಯದಲ್ಲಿ ಶೈನ್ ಟಾಮ್ ಚಾಕೊ ಓಡಿಹೋದ ನಂತರ ವಿವಾದಕ್ಕೆ ಸಿಲುಕಿದ್ದಾರೆ. ಕಳೆದ…
ಬೆಂಗಳೂರು: ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ಹಾಕಿರುವುದು ಅತ್ಯಂತ ಹೀನ ಕೃತ್ಯವಾಗಿದ್ದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ದೇಶದ ಸಂಸ್ಕೃತಿ ಆಚಾರ, ವಿಚಾರ, ನಂಬಿಕೆಗಳ ಬಗ್ಗೆ ಅರಿವಿಲ್ಲದಿರುವ ಕಾಂಗ್ರೆಸ್ ಸರ್ಕಾರ ನಿಯಮಗಳ ಪಾಲನೆಯ ಹೆಸರಿನಲ್ಲಿ ಧರ್ಮ ದ್ರೋಹ ಮಾಡುವುದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜನಿವಾರ ಹಾಕಿಕೊಳ್ಳುವುದರಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಏನು ಅಡ್ಡಿಯಾಗುತ್ತಿತ್ತು. ಸಂಸ್ಕಾರವೇ ಗೊತ್ತಿಲ್ಲದ ಸರ್ಕಾರದಲ್ಲಿ ಅಧಿಕಾರಿಗಳು ಹೃದಯ ಶೂನ್ಯರಾಗಿ ನಡೆದುಕೊಂಡಿರುವುದು ಅತ್ಯಂತ ಖಂಡನೀಯ. ಎಂಜನೀಯರ್ ಆಗಬೇಕೆಂದು ಕನಸು ಕಟ್ಟಿಕೊಂಡು ಅನಾಗರಿಕ ಅಧಿಕಾರಿಗಳಿಂದ ಈಗ ಸಿಇಟಿ ಪರೀಕ್ಷೆಯಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಿ ಅವರ ಮುಂದಿನ ಶೈಕ್ಷಣಿಕ ಬದುಕಿಗೆ ಅವಕಾಶ ಕಲ್ಪಿಸಿಕೊಡಬೇಕು…
ಅಫ್ಘಾನಿಸ್ತಾನ: ಇಲ್ಲಿನ ಗಡಿಯಲ್ಲಿ ಶನಿವಾರ 5.8 ತೀವ್ರತೆಯ ಭೂಕಂಪನ ಸಂಭವಿಸಿದ್ದು, ದೆಹಲಿ-ಎನ್ಸಿಆರ್ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ನಡುಕ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ಮಧ್ಯಾಹ್ನ 12:17 ಕ್ಕೆ ಮೇಲ್ಮೈಯಿಂದ 86 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿ ಪ್ರದೇಶದಲ್ಲಿದೆ, ಇದು ಟೆಕ್ಟೋನಿಕ್ ಚಲನೆಯಿಂದಾಗಿ ಭೂಕಂಪನ ಚಟುವಟಿಕೆಗೆ ಗುರಿಯಾಗುವ ಪ್ರದೇಶವಾಗಿದೆ. “ಇಕ್ಯೂ ಆಫ್ ಎಂ: 5.8, ಆನ್: 19/04/2025 12:17:53 IST, Lat: 36.10 N, ಉದ್ದ: 71.20 E, ಆಳ: 130 ಕಿ.ಮೀ, ಸ್ಥಳ: ಅಫ್ಘಾನಿಸ್ತಾನ” ಎಂದು ಎನ್ಸಿಎಸ್ ಎಕ್ಸ್ನಲ್ಲಿ ಬರೆದಿದೆ. https://twitter.com/NCS_Earthquake/status/1913488138472763402 ಕಾಶ್ಮೀರದ ಪೂಂಚ್ನಿಂದ ದೃಶ್ಯಗಳು ಅಭಿಮಾನಿಗಳು ಅಲುಗಾಡುತ್ತಿರುವುದನ್ನು ತೋರಿಸಿದೆ. ನೆಲ ನಡುಗಲು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಜನರು ಕಟ್ಟಡದಿಂದ ಹೊರಗೆ ಧಾವಿಸುತ್ತಿದ್ದಾರೆ. https://twitter.com/ANI/status/1913490788958249057 ಈ ವರದಿಯ ಪ್ರಕಟಣೆಯ ಪ್ರಕಾರ, ಗಡಿಯ ಎರಡೂ ಬದಿಗಳಿಂದ ಸಾವುನೋವುಗಳು ಅಥವಾ ದೊಡ್ಡ…
ಬಿಳಾಗಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಮ್ಮ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದರು. ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ ಬದಲಾಯಿಸಲಾಗುವುದು ಎಂದು ಹೇಳಿದರು. ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ಪ್ರಯತ್ನ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಮನೋಭಾವವನ್ನು ಹೆಚ್ಚಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ದೇವಸ್ಥಾನಗಳಲ್ಲಿ ಪ್ರಾರಂಭವಾದ ಸರ್ಕಾರಿ…












