Subscribe to Updates
Get the latest creative news from FooBar about art, design and business.
Author: kannadanewsnow09
ಕೊಡಗು: ರಾಜ್ಯದ ರೈತರು ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದರೇ, ಅಂತಹ ರೈತರು ಬಗರ್ ಹುಕುಂಗೆ ಅರ್ಜಿ ಸಲ್ಲಿಸಿದ್ದರೇ, ಅವುಗಳನ್ನು ವಿಲೇಗೆ 8 ತಿಂಗಳಲ್ಲೇ ವಿಲೇವಾರಿ ಮಾಡಲಾಗುತ್ತದೆ. ಸಾಗುವಳಿ ಪತ್ರ ವಿತರಣೆ ಮಾಡಲಾಗುವು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸೋಮವಾರದಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು,ಜಿಲ್ಲೆಯಲ್ಲಿ ಸಾವಿರಾರು ಬಗರ್ ಹುಕುಂ ಅರ್ಜಿಗಳು ಸಲ್ಲಿಕೆಯಾಗಿದ್ದು ಮುಂದಿನ 8 ತಿಂಗಳಲ್ಲಿ ಈ ಎಲ್ಲಾ ಅರ್ಜಿಗಳನ್ನೂ ವಿಲೇಗೊಳಿಸಿ ಅರ್ಹರಿಗೆ ಭೂಮಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಫಾರ್ಮ್ 57ರ ಅಡಿಯಲ್ಲಿ ಸಲ್ಲಿಸಲಾಗಿರುವ ಬಗರ್ ಹುಕುಂ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕೋರ್ಟ್ ಆದೇಶಿಸಿದೆ. ಹೀಗಾಗಿ ಅಧಿಕಾರಿಗಳು ಬಗರ್ ಹುಕುಂ ಆ್ಯಪ್ ಸಹಾಯದಿಂದ ಅರ್ಹರಿಗೆ ಶೀಘ್ರವಾಗಿ ಸಾಗುವಳಿ ಚೀಟಿ ಮಂಜೂರು ಮಾಡಬೇಕು. ಅಧಿಕಾರಿಗಳು ಯಾವುದೇ ಒತ್ತಡಕ್ಕೂ ಮಣಿಯದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು. ರೈತರ ಆರ್ಟಿಸಿ ಆಧಾರ್ ಲಿಂಕ್ ಗೆ ಕರೆ ರೈತರ ಆರ್ಟಿಸಿ ಜೊತೆಗೆ ಆಧಾರ್ ಲಿಂಕ್ ಜೋಡಣೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸ್ಟಾಂಪು(ತಿದ್ದುಪಡಿ) ಅಧಿನಿಯಮಕ್ಕೆ ತಿದ್ದುಪಡಿಯನ್ನು ಕಳೆದ ವಿಧಾನಸಭೆಯ ಅವಧಿಯಲ್ಲಿ ತರಲಾಗಿತ್ತು. ಅದನ್ನು ಉಭಯ ಸದನಗಳನಲ್ಲೂ ಅಂಗೀಕರಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲರು ಅದಕ್ಕೆ ಅಂಕಿತದ ಮುದ್ರೆ ಒತ್ತಿದ್ದಾರೆ. ಹೀಗಾಗಿ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯದ ಜನತೆಗೆ ಸ್ಟಾಂಪ್ ಡ್ಯೂಟಿ ಹೆಚ್ಚಳ ( Stamp Duty Hike ) ಮಾಡಿ ಸರ್ಕಾರ ಆದೇಶಿಸಿದಂತೆ ಆಗಿ, ಶಾಕ್ ನೀಡಲಾಗಿದೆ. ಈ ಕುರಿತಂತೆ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಿಂದ ವಿಶೇಷ ರಾಜ್ಯಪತ್ರಿಕೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸ್ಟಾಂಪು (ತಿದ್ದುಪಡಿ) ಅಧಿನಿಯಮ, 2023ಕ್ಕೆ ರಾಜ್ಯಪಾಲರಿಂದ ಅಧಿಕೃತಗೊಳಿಸಲಾಗಿದೆ. ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ. ಯಾವುದಕ್ಕೆ ಎಷ್ಟು ಹೆಚ್ಚಾಗಲಿದೆ ಶುಲ್ಕ? ರಾಜ್ಯಪತ್ರದಲ್ಲಿ ಪ್ರಕಟಿತ ತಿದ್ದುಪಡಿ ದರದ ಪ್ರಕಾರ, ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರಿಂದ 1,000 ರೂ.ಗೆ ಏರಿಕೆಯದಂತೆ ಆಗಿದೆ. ಸದ್ಯ 20 ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಹೊಂದಿರುವ…
ಬರ್ಕಿಂಗ್ಹ್ಯಾಮ್: ಕಿಂಗ್ ಚಾರ್ಲ್ಸ್ ( King Charles III ) ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ತಕ್ಷಣವೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ದೃಢಪಡಿಸಿದೆ. ಕ್ಯಾನ್ಸರ್ ವಿಧವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಕ್ಯಾನ್ಸರ್ ನ ನಿಖರ ಸ್ವರೂಪವನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಅರಮನೆಯು ಕಿಂಗ್ಸ್ ಚಾರ್ಲ್ಸ್ ಅವರಿಗೆ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ಈಗ ಅದು ಮುಂದುವರೆದಿದೆ ಎಂಬುದಾಗಿ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದೆ ಎಂದು ಬಿಬಿಸಿ ವರದಿ ಮಾಡಿದೆ. https://twitter.com/RoyalFamily/status/1754565735655887066 ಸವಾಲಿನ ಸಂದರ್ಭಗಳ ಹೊರತಾಗಿಯೂ, ರಾಜನು “ತನ್ನ ಚಿಕಿತ್ಸೆಯ ಬಗ್ಗೆ ಸಂಪೂರ್ಣವಾಗಿ ಸಕಾರಾತ್ಮಕವಾಗಿದ್ದಾನೆ ಮತ್ತು ಸಾಧ್ಯವಾದಷ್ಟು ಬೇಗ ಪೂರ್ಣ ಸಾರ್ವಜನಿಕ ಕರ್ತವ್ಯಕ್ಕೆ ಮರಳಲು ಎದುರು ನೋಡುತ್ತಿದ್ದಾನೆ” ಎಂದು ಬಕಿಂಗ್ಹ್ಯಾಮ್ ಅರಮನೆ ಒತ್ತಿಹೇಳಿತು. ಅವರ ರೋಗನಿರ್ಣಯದ ಪರಿಣಾಮವಾಗಿ, ಕಿಂಗ್ ಚಾರ್ಲ್ಸ್ ತಮ್ಮ ಸಾರ್ವಜನಿಕ ಕಾರ್ಯಕ್ರಮಗಳಿಂದ ತಾತ್ಕಾಲಿಕವಾಗಿ ಹಿಂದೆ ಸರಿಯಲಿದ್ದಾರೆ. ಅವರ ಚಿಕಿತ್ಸೆಯ ಸಮಯದಲ್ಲಿ ರಾಜಮನೆತನದ ಇತರ ಹಿರಿಯ ಸದಸ್ಯರು ಅವರ ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಅರಮನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಕ್ಯಾನ್ಸರ್ ಹಂತ ಅಥವಾ ಯಾವುದೇ…
ಬ್ರಿಟನ್ನ ಕಿಂಗ್ ಚಾರ್ಲ್ಸ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಮತ್ತು ಸಾರ್ವಜನಿಕ ಕರ್ತವ್ಯಗಳನ್ನು ಮುಂದೂಡಲಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. 75 ವರ್ಷದ ಚಾರ್ಲ್ಸ್ ಕಳೆದ ತಿಂಗಳು ಹಿಗ್ಗಿದ ಪ್ರಾಸ್ಟೇಟ್ಗಾಗಿ ಸರಿಪಡಿಸುವ ಕಾರ್ಯವಿಧಾನಕ್ಕೆ ಒಳಗಾದ ನಂತರ ಮೂರು ರಾತ್ರಿಗಳನ್ನು ಆಸ್ಪತ್ರೆಯಲ್ಲಿ ಕಳೆದಿದ್ದರು. ಪರೀಕ್ಷೆಗಳು ಕ್ಯಾನ್ಸರ್ನ ಒಂದು ರೂಪವನ್ನು ಗುರುತಿಸಿವೆ ಎಂದು ಅರಮನೆ ಹೇಳಿದೆ. ಚಾರ್ಲ್ಸ್ ಅವರ ಕ್ಯಾನ್ಸರ್ ಬಗ್ಗೆ ಅರಮನೆ ಯಾವುದೇ ವಿವರಗಳನ್ನು ನೀಡಿಲ್ಲ. ಆದರೆ ಇದು ಪ್ರಾಸ್ಟೇಟ್ ಅಲ್ಲ ಎಂದು ರಾಜಮನೆತನದ ಮೂಲಗಳು ತಿಳಿಸಿವೆ. ಕಿಂಗ್ ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಬಕಿಂಗ್ಹ್ಯಾಮ್ ಅರಮನೆ ಸೋಮವಾರ ದೃಢಪಡಿಸಿದೆ. ಆರಂಭಿಕ ಊಹಾಪೋಹಗಳಿಗೆ ವಿರುದ್ಧವಾಗಿ, ಇದು ಪ್ರಾಸ್ಟೇಟ್ ಕ್ಯಾನ್ಸರ್ ಅಲ್ಲ, ಬದಲಿಗೆ ವಿಸ್ತೃತ ಪ್ರಾಸ್ಟೇಟ್ಗೆ ಅವರ ಇತ್ತೀಚಿನ ಚಿಕಿತ್ಸೆಯ ಸಮಯದಲ್ಲಿ ಕಂಡುಹಿಡಿಯಲಾದ ಸ್ಥಿತಿಯಾಗಿದೆ. ಕ್ಯಾನ್ಸರ್ನ ನಿಖರ ಸ್ವರೂಪವನ್ನು ಬಹಿರಂಗಪಡಿಸಲಾಗಿಲ್ಲ, ಆದರೆ ಅರಮನೆಯ ಹೇಳಿಕೆಯು ರಾಜನು ಸೋಮವಾರ “ನಿಯಮಿತ ಚಿಕಿತ್ಸೆಗಳನ್ನು” ಪ್ರಾರಂಭಿಸಿದ್ದಾನೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿತು. ಸವಾಲಿನ ಸಂದರ್ಭಗಳ ಹೊರತಾಗಿಯೂ,…
ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಈ ಬಗ್ಗೆ ಅವರು ಪ್ರಕಟಣೆ ಹೊರಡಿಸಿದ್ದಾರೆ. 1.ಚಿಕ್ಕೋಡಿ: ಉಸ್ತುವಾರಿ: ಕೆ.ಪಿ.ಮೇಗಣ್ಣನವರ ಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿ 2.ಬೆಳಗಾವಿ: ಉಸ್ತುವಾರಿ: ಶಂಕರ ಮಾಡಳಗಿ ಸಹ ಉಸ್ತುವಾರಿ: ನಾಜೀರ್ ಭಗವಾನ್ 3.ಬಾಗಲಕೋಟೆ: ಉಸ್ತುವಾರಿ: ಹನುಮಂತ ಮವಿನಮರದ ಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿ 4.ವಿಜಯಪುರ: ಉಸ್ತುವಾರಿ: ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ) ಸಹ ಉಸ್ತುವಾರಿ ದೇವಾನಂದ್ ಚೌಹಾಣ್ , ಸೋಮನಗೌಡ ಪಾಟೀಲ್, ಬಸವರಾಜ್ ಪಾಟೀಲ್ 5.ಕಲಬುರಗಿ: ಉಸ್ತುವಾರಿ: ದೊಡ್ಡಪ್ಪ ಶಿವಲಿಂಗಪ್ಪ ಗೌಡ ಸಹ ಉಸ್ತುವಾರಿ: ಶರಣುಗೌಡ ಕಂದಕೂರು, ಬಂಡೆಪ್ಪ ಕಾಷೆಂಪೂರ್, ಬಾಲರಾಜ್ ಗುತ್ತೇದಾರ್, ಅಶೋಕ್ ಗುತ್ತೇದಾರ್ 6.ರಾಯಚೂರು: ಉಸ್ತುವಾರಿ: ವೆಂಕಟರಾವ್ ನಾಡಗೌಡ ಸಹ ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ, ಕರೆಮ್ಮ ನಾಯಕ್, ರಾಜಾ ವೆಂಕಟಪ್ಪ ನಾಯಕ ದೊರೆ, ಗುರುಲಿಂಗಪ್ಪ ಗೌಡ 7.ಬೀದರ್:…
ಬೆಂಗಳೂರು: ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಖಾಯಂ ನಿರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಬಿಗ್ ಶಾಕ್ ಎನ್ನುವಂತೆ ಅತಿಥಿ ಉಪನ್ಯಾಸಕರನ್ನು ಖಾಯಂ ಇಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ದೇವೇಗೌಡ ಅವರು ಮಾಡಿದಂತ ಪ್ರಸ್ತಾಪಕ್ಕೆ ಉತ್ತರಿಸಿರುವಂತ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಅತಿಥಿ ಉಪನ್ಯಾಸಕರನ್ನು ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂಬುದಾಗಿ ಸದನಕ್ಕೆ ಸ್ಪಷ್ಟ ಪಡಿಸಿದ್ದಾರೆ. ಅಂದಹಾಗೆ ರಾಜ್ಯದ ಸರ್ಕಾರ ಪ್ರಥಮ ದರ್ಜೆ ಕಾಲೇಜಿನಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಖಾಯಂ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಕೇಳಿ ಬಂದಿತ್ತು. ಆದ್ರೇ ಇದನ್ನು ಸರ್ಕಾರ ಈಗ ನಿರಾಕರಿಸಿದೆ. ಒಟ್ಟಾರೆಯಾಗಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡೋದಕ್ಕೆ ಸಾಧ್ಯವಿಲ್ಲ. ಇದಕ್ಕಾಗಿ ನಿಯಮ ಕೂಡ ಇಲ್ಲ ಎಂಬುದಾಗಿ ಸರ್ಕಾರ ಹೇಳುವ ಮೂಲಕ, ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ ನೀಡಲಾಗಿದೆ. https://kannadanewsnow.com/kannada/launch-of-upi-a-milestone-in-existing-strong-bilateral-ties-mauritius-envoy/…
ಬೆಂಗಳೂರು: ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವ ರಾಜಕೀಯ ಸ್ಟಂಟ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಳೆ ಚಾಳಿ ಬಿಟ್ಟಿಲ್ಲ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೊಪ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ರೈತ ವಿರೋಧಿ ಸರಕಾರ ರಾಜ್ಯದಲ್ಲಿದೆ. ಒಂಬತ್ತು ತಿಂಗಳಿಂದ ಒಂದು ರೂಪಾಯಿನೂ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. 14ನೇ ಹಣಕಾಸಿಗಿಂತ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ _ಹಣ ಕಡಿಮೆ ಆಗಿದೆ ಅಂತ ಹೇಳಿದ್ದಾರೆ. 15 ನೇ ಹಣಕಾಸು ಆಯೋಗದ ಸಮಿತಿ ಬಂದಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇತ್ತು. ಆಗ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಆಯೋಗಕ್ಕೆ ಸರಿಯಾಗಿ ಮಾಹಿತಿ ನೀಡಿಲ್ಲ ಹೀಗಾಗಿ 15 ನೇ ಹಣಕಾಸು ಆಯೋಗದಲ್ಲಿ 4.7 % ನಿಂದ 3.6 % ಗೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದರು.…
ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯಕ್ಕೆ ನಿರಂತರವಾಗಿ ಬಂಡವಾಳ ಆಕರ್ಷಿಸಲು ಮತ್ತು ಈಗಾಗಲೇ ನಮ್ಮಲ್ಲಿ ನೆಲೆಯೂರಿರುವ ಉದ್ಯಮಗಳಿಂದ ಮರುಹೂಡಿಕೆ ಉತ್ತೇಜಿಸಲು ಪೂರ್ಣ ಪ್ರಮಾಣದ ಹೊಸ ಸಂಸ್ಥೆಯನ್ನು ರಚಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಮಾಲೋಚನಾ ಸಭೆಗಳನ್ನು ಆರಂಭಿಸಿದ್ದಾರೆ. ರಾಜನೀತಿ ಸಂಸ್ಥೆ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ತಯಾರಿಸಿರುವ ಪ್ರಾತ್ಯಕ್ಷಿಕೆಗಳನ್ನು ಸಚಿವರು ಸೋಮವಾರ ವೀಕ್ಷಿಸಿದರು. ಮುಂದಿನ ದಿನಗಳಲ್ಲಿ ಈ ಉಪಕ್ರಮವನ್ನು ಮುಂದಿನ ಸ್ತರಕ್ಕೆ ಕೊಂಡೊಯ್ಯಲಾಗುವುದು’ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ಔದ್ಯಮಿಕ ಬೆಳವಣಿಗೆ ಸಾಧಿಸುವುದು ಮತ್ತು ನಿರಂತರ ಹೂಡಿಕೆ ಸೆಳೆಯುವ ನಿಟ್ಟಿನಲ್ಲಿ ಸಿಂಗಪುರ, ತೈವಾನ್, ವಿಯಟ್ನಾಂ, ಚಿಲಿ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಹಲವು ದೇಶಗಳ ಮಾದರಿಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಲಾಗಿದೆ. ಚಿಲಿ ದೇಶವು ಅಳವಡಿಸಿಕೊಂಡಿರುವ `ಇನ್ವೆಸ್ಟ್ ಚಿಲಿ’ ಉಪಕ್ರಮವು ಜಗತ್ತಿನಲ್ಲೇ ಅಗ್ರಸ್ಥಾನದಲ್ಲಿದ್ದು, ಆಸಕ್ತಿದಾಯಕವಾಗಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯವು ಬಂಡವಾಳ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿರುವುದು ನಿಜ. ಆದರೆ, ನಮ್ಮಲ್ಲಿ ನೆಲೆಯೂರಿರುವ ಕಂಪನಿಗಳಿಂದ ಇನ್ನೂ ಹೆಚ್ಚಿನ…
ಬೆಂಗಳೂರು: ಪಶ್ಚಿಮ ಘಟ್ಟದ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿರಿಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಉತ್ತರ ಕನ್ನಡ ಜಿಲ್ಲೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಪ್ರತಿ ವರ್ಷ ಸಾಗರ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಂಗನ ಕಯಾಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಭಾಗದ ಜನರಲ್ಲಿ ಕೆಮ್ಮು ಜ್ಚರದಂತ ಲಕ್ಷಣಗಳು ಕಾಣಿಸಿಕೊಂಡಾಗ ಆರಂಭಿಕ ಹಂತದಲ್ಲಿಯೇ ಟೆಸ್ಟ್ ಮಾಡಿ ಮಂಗನ ಕಾಯಿಲೆಯನ್ನ ಖಚಿತಪಡಿಸಿಕೊಂಡು ತಕ್ಷಣ ಚಿಕಿತ್ಸೆ ನೀಡಬೇಕು. ಅಲ್ಲದೇ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಚಿವ ಗುಂಡೂರಾವ್ ಸೂಚನೆ ನೀಡಿದರು. ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಎಫ್ ಡಿ ಟೆಸ್ಟ್ ಹೆಚ್ಚಿನ ರೀತಿಯಲ್ಲಿ ನಡೆಸುವ ಬಗ್ಗೆ…
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಬಳಿಕ ಮಂಗನಕಾಯಿಲೆ ಉಲ್ಬಣಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ ಒಬ್ಬರಿಗೆ ಮಂಗನಕಾಯಿಲೆ ದೃಢಪಟ್ಟಿದೆ. ಹೀಗಾಗಿ ಒಟ್ಟು ಪಾಸಿಟಿವ್ ಪ್ರಕರಣ 65ಕ್ಕೆ ಏರಿಕೆಯಾದಂತೆ ಆಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಮೂವರನ್ನು ಕೆಎಫ್ ಡಿ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರಾದಂತ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ 37 ಮಂದಿಗೆ ಮಂಗನಕಾಯಿಲೆಯಿಂದ ಬಳಲುತ್ತಿರೋರು ಇದ್ದಾರೆ ಎಂಬುದಾಗಿ ತಿಳಿಸಿದೆ. ದಿನಾಂಕ 01-01-2024ರಿಂದ ದಿನಾಂಕ 05-02-2024ರ ಇಂದಿನವರೆಗೆ 2413 ಮಂದಿಯನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 65 ಮಂದಿಗೆ ಸೋಂಕು ದೃಢಪಟ್ಟಿದೆ. ಈವರೆಗೆ 26 ಸೋಂಕಿತರು ಗುಣಮುಖರಾಗಿದ್ದಾರೆ. ಸೋಂಕಿಗೆ ಒಳಗಾದಂತ ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ 37 ಸಕ್ರೀಯ ಕೆಎಫ್ ಡಿ ಪ್ರಕರಣಗಳಿದ್ದಾವೆ ಎಂದಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಇಬ್ಬರು, ಚಿಕ್ಕಮಗಳೂರು ಒಬ್ಬರನ್ನು ಕೆಎಫ್ ಡಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಚಿಕ್ಕಮಗಳೂರಿನಲ್ಲಿ ಪರೀಕ್ಷೆಗೆ ಒಳಗಾದಂತವರಿಗೆ ಮಂಗನಕಾಯಿಲೆ…