Author: kannadanewsnow09

ಶಿವಮೊಗ್ಗ : ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಭ್ರದ್ರಾವತಿ ತಾಲೂಕಿನ ಕೊಮ್ಮನಹಳ್ಳಿ -1, ಹೊಸನಗರ ತಾಲೂಕಿನ ತಿರ್ನಿವೆ -1, ಬೆಳ್ಳೂರು -1, ಸಾಗರ ತಾಲೂಕಿನ ತಳವಾಟ-1 ಮಾಳ್ವೆ- 1 ಚೆನ್ನಗೊಂಡ -1, ಕುದರೂರು -1, ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ -1 , ಶಿವಮೊಗ್ಗ ತಾಲೂಕಿನ ಗಾಜನೂರು-1, ಸೊರಬ ತಾಲೂಕಿನ- ಮುದ್ದಿದೊಡ್ಡಿಕೊಪ್ಪ-1 , ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿ-1 ಆಗುಂಬೆ-1 ಹುದ್ದೆ ಖಾಲಿ ಇದ್ದು ಆಸಕ್ತರು ವೆಬ್‍ಸೈಟ್ https:/www.Karnatakaone.gov.in/Public/GramaOneFranchiseeTerms…

Read More

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ(JDS)ದಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಸಲುವಾಗಿ ಲೋಕಸಭೆಯ ಕ್ಷೇತ್ರವಾರು ಉಸ್ತುವಾರಿ ನಾಯಕರು ಮತ್ತು ಸಹ ನಾಯಕರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳನ್ನು ಸಂಘಟಿಸಿ, ಬಲವರ್ಧನೆಗೊಳಿಸಲು ಮತ್ತು ಚುನಾವಣೆಗೆ ಪೂರ್ವ ಸಿದ್ಧತೆ ಕಾರ್ಯಕೈಗೊಳ್ಳಲು ಲೋಕಸಭಾವಾರು ಉಸ್ತುವಾರಿ ನಾಯಕರು ಮತ್ತು ಸಹ ನಾಯಕರನ್ನು ನೇಮಿಸುವುದು ಸೂಕ್ತ ಮತ್ತು ಅಗತ್ಯವೆಂದು ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಸೀಟುಗಳ ಹಂಚಿಕೆ ಬಗ್ಗೆ ಒಮ್ಮತವಿದ್ದು, ಉಭಯ ಪಕ್ಷಗಳ ನಡುವೆ ಪರಸ್ಪರ ಹೊಂದಾಣಿಕೆ ಮತ್ತು ಸಮನ್ವಯ ಸಾಧಿಸುವುದು ಅಗತ್ಯವಿರುತ್ತದೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಮುಖಂಡರನ್ನು ಲೋಕಸಭೆವಾರು ಉಸ್ತುವಾರಿ ನಾಯಕರು ಮತ್ತು ಸಹ ನಾಯಕರನ್ನಾಗಿ ನೇಮಿಸಲಾಗಿದೆ. ಹೀಗಿದೆ ಲೋಕಸಭೆವಾರು…

Read More

ಶಿವಮೊಗ್ಗ: : ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ವಿಜಯ್‌ಕುಮಾರ್ ಹೆಚ್ ಬಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಕುವೆಂಪು ವಿವಿಗೆ ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ. 02ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸೋಮವಾರ ಬೆಳಿಗ್ಗೆ ಹೊಸ ಕುಲಸಚಿವರಾದ ಕೆಎಎಸ್ ಅಧಿಕಾರಿ ವಿಜಯ್‌ಕುಮಾರ್ ಹೆಚ್ ಬಿ ಕರ್ತವ್ಯ ಆರಂಭಿಸಿದ್ದಾರೆ. ಇವರು ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, 2014ರ ಬ್ಯಾಚ್‌ನಲ್ಲಿ ಕೆಎಎಸ್‌ಗೆ ಆಯ್ಕೆಯಾಗಿದ್ದಾರೆ. ಮೂಲತಃ ಚನ್ನಗಿರಿ ತಾಲೂಕಿನವರಾದ ವಿಜಯ್‌ಕುಮಾರ್ 2018ರ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದಾರೆ. ಕುವೆಂಪು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿರುವ ಅವರು ಪ್ರಸ್ತುತ ಕುವೆಂಪು ವಿವಿಗೆ ಆಡಳಿತ ಕುಲಸಚಿವರಾಗಿ ಸೇವೆ ಸಲ್ಲಿಸಲು ನಿಯುಕ್ತಿಗೊಂಡು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಸತ್ಯಪ್ರಕಾಶ್ ಎಂ ಆರ್ ಸೇರಿಂದತೆ ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.…

Read More

ಬೆಂಗಳೂರು: ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ತಪ್ಪನ್ನು ಮುಚ್ಚಿಟ್ಟುಕೊಳ್ಳಲು, ತಮ್ಮ ವೈಫಲ್ಯ ಮರೆ ಮಾಚುವುದಕ್ಕಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 14 ಸಾರಿ ಬಜೆಟ್ ಮಂಡಿಸಿದ್ದಾಗಿ ಹೇಳುವ ಸಿದ್ದರಾಮಯ್ಯನವರ ಬಜೆಟ್, ಫಿಸ್ಕಲ್ ರೆನ್ಸಾನ್ಸಿಬಿಲಿಟಿ ಆ್ಯಕ್ಟ್ ಅನ್ನು ಉಲ್ಲಂಘಿಸಿದೆ. ಇದಕ್ಕಾಗಿ ಇಲ್ಲಿನವರೆಗೆ ಅವರು ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ; ಸ್ಪಷ್ಟೀಕರಣವನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು. 12,522 ಕೋಟಿ ಮೊತ್ತದ ಕೊರತೆ ಬಜೆಟ್ ಮಂಡಿಸಿದ್ದರು. ಬಜೆಟ್ ಕಂಡಿಕೆ 369ರಲ್ಲಿ 2023-24ರಲ್ಲಿ ರಾಜಸ್ವ ಜಮೆ 2,38,410 ಕೋಟಿ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಇಲ್ಲಿನವರೆಗೆ ಎಷ್ಟು ಸಂಗ್ರಹಿಸಿದ್ದಾರೆ? ಎಂದು ಕೇಳಿದರಲ್ಲದೆ, ಡಿಸೆಂಬರ್ ಅಂತ್ಯಕ್ಕೆ 1,61,477 ಕೋಟಿ ಸಂಗ್ರಹಿಸಿದ್ದಾರೆ. ಬಜೆಟ್ ನಿಗದಿತ ಗುರಿಯ ಕೇವಲ ಶೇ 67ರಷ್ಟನ್ನು ಮಾತ್ರ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಹಣಕಾಸು ಇಲಾಖೆಯ ಪ್ರತಿಗಳನ್ನೂ ಅವರು…

Read More

ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ತಾವು ದುಡಿಯುವಾಗಲೇ ತಮ್ಮ ಪರಿವಾರಕ್ಕಾಗಿ ಒಂದು ಸ್ವಂತ ಮನೆ ಕಟ್ಟಿಕೊಂಡು ಹತ್ತಾರು ವರ್ಷ ಆ ಮನೆಯಲ್ಲಿ ನೆಮ್ಮದಿಯಾಗಿ ಜೀವನ ಕಳೆಯಬೇಕು ಎನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…

Read More

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗುಲಾಂ ನಬಿ ಆಜಾದ್ ವಂಶಪಾರಂಪರ್ಯ ರಾಜಕಾರಣದ ಬಲಿಪಶುಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. https://twitter.com/ANI/status/1754475715326824863 ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದರು. ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ‘ವಂದನಾ ನಿರ್ಣಯ’ಕ್ಕೆ ನನ್ನ ಉತ್ತರವನ್ನು ನೀಡಿದಂತ ಅವರು, ಈ ಹೊಸ ಸಂಸತ್ ಸಂಕೀರ್ಣದಲ್ಲಿ, ರಾಷ್ಟ್ರಪತಿಗಳು ನಮ್ಮನ್ನು ಉದ್ದೇಶಿಸಿ ಮಾತನಾಡಲು ಬಂದಾಗ ಮತ್ತು ಸೆಂಗೋಲ್ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದ ಹೆಮ್ಮೆ ಮತ್ತು ಗೌರವದಿಂದ, ನಾವು ಅದರ ಹಿಂದೆ ನಡೆದುಕೊಂಡು ಹೋಗುತ್ತಿದ್ದೆವು ಎಂದರು. ಹೊಸ ಸಂಸತ್ತಿನಲ್ಲಿನ ಈ ಹೊಸ ಸಂಪ್ರದಾಯ, ಭಾರತದ ಸ್ವಾತಂತ್ರ್ಯದ ಆ ಪವಿತ್ರ ಕ್ಷಣದ ಪ್ರತಿಬಿಂಬವಾಗಿದೆ. ಸಾಕ್ಷಿಯಾದಾಗ, ಪ್ರಜಾಪ್ರಭುತ್ವದ ಘನತೆ ಅನೇಕ ಪಟ್ಟು ಹೆಚ್ಚಾಗುತ್ತದೆ”ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. “ನಿಮ್ಮಲ್ಲಿ ಅನೇಕರು (ಪ್ರತಿಪಕ್ಷಗಳು) ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯವನ್ನು ಸಹ ಕಳೆದುಕೊಂಡಿದ್ದೀರಿ ಎಂದು ನಾನು ನೋಡುತ್ತೇನೆ. ಕಳೆದ ಬಾರಿಯೂ…

Read More

ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜೊತೆಯಾಗಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ದೊರಕಿಸೋದಕ್ಕಾಗಿ ಜಾರಿಗೆ ತಂದಿರೋ ಯೋಜನೆಯ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ. ಹಾಗಾದ್ರೇ ಆಯುಷ್ಮಾನ್ ಯೋಜನೆಗೆ ನೋಂದಾಯಿಸಿಕೊಳ್ಳೋದು ಹೇಗೆ ಅಂತ ಮುಂದೆ ಓದಿ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಸಿದ್ರೇ, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಆರೋಗ್ಯ ಸೌಲಭ್ಯ ಸಿಗಲಿದೆ. ಹೀಗಿದೆ ಆಯುಷ್ಮಾನ್ ಯೋಜನೆ ಸೌಲಭ್ಯಗಳು ಈ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರೋ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದವರೆಗೂ ಉಚಿತ ಮತ್ತು ಎಪಿಎಲ್ ಕಾರ್ಡ್ ಕುಟುಂಬಕ್ಕೆ 1.5 ಲಕ್ಷದವರೆಗೆ ಸಹಪಾವತಿ ಆಧಾರದ ಮೇಲೆ ಒಟ್ಟು 1650 ವಿವಿಧ ಬಗೆಯ ಚಿಕಿತ್ಸೆಗಳಿಗೆ ಎಲ್ಲಾ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ. ತುರ್ತು ಸಂದರ್ಭಗಳಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ನೋಂದಾಯಿತ…

Read More

ಬೆಂಗಳೂರು : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ…

Read More

ರಾಮನಗರ: ಬಿಜೆಪಿ ಸಂಸದರಿಗೆ ಮೋದಿ ಮುಂದೆ ಕೋರೋಕು ಧೈರ್ಯ ಇಲ್ಲ. ನಮ್ಮನ್ನು ನೋಡಿ ಬಿಜೆಪಿ ಗಂಡಸರು ಹೋರಾಟಾ ಮಾಡ್ತಾರೋ ಏನೋ. ಬಿಜೆಪಿ ಸಂಸದರೆಲ್ಲ ಶೋ ಪೀಸ್ ಗಳು. ಈಗಿರುವ ಬಿಜೆಪಿ ಎಂಬಿಗಳು ಯಾರೂ ಗಂಡಸರಲ್ಲ ಎಂಬುದಾಗಿ ಬಿಜೆಪಿ ವಿರುದ್ಧ ಶಾಸಕ ಹೆಚ್.ಸಿ ಬಾಲಾಕೃಷ್ಣ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯಲ್ಲಿ ಯಾರೂ ಗಂಡಸರು ಇಲ್ಲ ಎಂದರ್ಥ. ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ. ಬಿಜೆಪಿ ಸಂಸದರೆಲ್ಲ ಶೋ ಪೀಸ್ ಗಳು ಇದ್ದಂತೆ ಎಂದು ಗುಡುಗಿದರು. ಬಿಜೆಪಿ ಸಂಸದರು ಟಿಎ, ಡಿಎ ತಗೊಂಡು ಬರೋದಷ್ಟೇ ಇವರ ಕೆಲಸ ಆಗಿದೆ. ನಮಗೆ ಕೇಂದ್ರ ಸರ್ಕಾರದಿಂದ ಕೊಡಬೇಕಾಗಿರೋ ಅನುದಾನವನ್ನು ಕೊಡುತ್ತಿಲ್ಲ. ಬಿಜೆಪಿ ಸಂಸದರು ಮೋದಿ ಮುಂದೆ ಕೋರೋದು ಇಲ್ಲ ಎಂದು ಕಿಡಿಕಾರಿದರು. ನಮ್ಮನ್ನು ನೋಡಿ ಬಿಜೆಪಿ ಗಂಡಸರು ಹೋರಾಟ ಮಾಡ್ತಾರಾ.? ಅದನ್ನು ಕಾದು ನೋಡಬೇಕಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/jio-financial-shares-soar-15-amid-reports-of-paytm-wallet-acquisition-bid/ https://kannadanewsnow.com/kannada/lic-share-rises-lics-market-capitalisation-crosses-rs-1000-mark-for-the-first-time/

Read More

ನವದೆಹಲಿ: ಪೇಟಿಎಂನ ವ್ಯಾಲೆಟ್ ವ್ಯವಹಾರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಮುಖೇಶ್ ಅಂಬಾನಿ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ವರದಿಯಾದ ನಂತರ ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ (ಜೆಎಫ್ಎಸ್) ಷೇರುಗಳು ಸೋಮವಾರ ಶೇಕಡಾ 15 ಕ್ಕಿಂತ ಹೆಚ್ಚಾಗಿದೆ. ಮಧ್ಯಾಹ್ನ 2:22 ರ ಸುಮಾರಿಗೆ, ಜೆಎಫ್ಎಸ್ ಷೇರುಗಳು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ (ಎನ್ಎಸ್ಇ) ಶೇಕಡಾ 15.80 ರಷ್ಟು ಏರಿಕೆಯಾಗಿ 293.90 ರೂ.ಗೆ ತಲುಪಿದೆ. ಇದಕ್ಕೆ ವ್ಯತಿರಿಕ್ತವಾಗಿ, ಪೇಟಿಎಂ ಷೇರುಗಳು ಶೇಕಡಾ 10 ರಷ್ಟು ಲೋವರ್ ಸರ್ಕ್ಯೂಟ್ ಮಿತಿಯಲ್ಲಿ ಲಾಕ್ ಆಗಿದ್ದು, ನಿಯಂತ್ರಕ ಸವಾಲುಗಳ ನಡುವೆ ಮೂರು ವಹಿವಾಟು ಅವಧಿಗಳಲ್ಲಿ ಶೇಕಡಾ 43 ರಷ್ಟು ಕುಸಿತವನ್ನು ಎದುರಿಸುತ್ತಿವೆ. ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಈ ಸ್ವಾಧೀನಕ್ಕೆ ಪ್ರಮುಖ ಸ್ಪರ್ಧಿಗಳಲ್ಲಿ ಸೇರಿವೆ ಎಂದು ಹಿಂದೂ ಬಿಸಿನೆಸ್ ಲೈನ್ ವರದಿ ಮಾಡಿದೆ. ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಜಿಯೋ ಪೇಮೆಂಟ್ಸ್ ಬ್ಯಾಂಕ್ ಎಂಬ ಜಂಟಿ ಉದ್ಯಮವನ್ನು ಹೊಂದಿರುವ ಹೋಲ್ಡಿಂಗ್ ಕಂಪನಿಯಾಗಿದ್ದು, ಜಿಯೋ ಇನ್ಶೂರೆನ್ಸ್ ಬ್ರೋಕಿಂಗ್ (ಜೆಬಿಎಲ್), ಜಿಯೋ ಪಾವತಿ ಪರಿಹಾರಗಳು…

Read More