Subscribe to Updates
Get the latest creative news from FooBar about art, design and business.
Author: kannadanewsnow09
ತುಮಕೂರು: ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದೆ. ಶಾಲೆಯ ಬಳಿಯಲ್ಲೇ ಸಿಕ್ಕಂತ ಜಿಲೆಟಿನ್ ಕಡ್ಡಿಗಳನ್ನು ಅದರ ಬಗ್ಗೆ ತಿಳಿಯದೇ ವಿದ್ಯಾರ್ಥಿಗಳು ಮುಟ್ಟಿದ ನಂತ್ರ ಸ್ಪೋಟಗೊಂಡ ಪರಿಣಾಮ, ವಿದ್ಯಾರ್ಥಿ ಕೈಬೆರಳುಗಳು ಛಿದ್ರಛಿದ್ರಗೊಂಡಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿಎಸ್ ಪುರ ಹೋಬಳಿಯ ಇಡಗೂರು ಗ್ರಾಮದ ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜೆಲಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್ ಕಡ್ಡಿ ಮುಟ್ಟಿ ಸ್ಫೋಟ ಉಂಟಾಗಿ ವಿದ್ಯಾರ್ಥಿ ಕೈ ಬೆರಳುಗಳು ತುಂಡಾಗಿ ಆಸ್ಪತ್ರೆಗೆ ದಾಖಲಾದ ಆತಂಕದ ಘಟನೆ ನಡೆದಿದೆ. ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸುತ್ತಿದ್ದ ಸಮಯದಲ್ಲಿ ಇಡಗೂರು ಗ್ರಾಮದ ವಿದ್ಯಾರ್ಥಿ ಮೋನಿಶ್ ಗೌಡ(15) ಕಲ್ಲು ಬಂಡೆ ಚೂರುಗಳ ಮಧ್ಯೆ ಕಂಡ ವೈರ್ ಸಹಿತ ಇದ್ದ ಜೆಲಟಿನ್ ಕಡ್ಡಿ ಕಂಡು ಕುತೂಹಲದಿಂದ ತೆಗೆದುಕೊಂಡು ಶಾಲಾ ಆವರಣದಲ್ಲಿ ತೆರಳಿದ ನಂತರ ಬಿಸಿಯಾದ ಅನುಭವಕ್ಕೆ…
ಬೆಂಗಳೂರು: ದ್ವಿತೀಯ PUC ಪ್ರಾಯೋಗಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಯಾದೃಚ್ಛಿಕರಿಸುವ ಕ್ರಮಕ್ಕೆ ಶಾಲಾ ಪರೀಕ್ಷೆ ಮಂಡಳಿ ಬ್ರೇಕ್ ಹಾಕಿದೆ. ಈ ಮೂಲಕ ದ್ವಿತೀಯ PUC ಪ್ರಾಯೋಗಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಯಾದೃಚ್ಛಿಕರೀಸುವ ಕ್ರಮವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ. ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಯಾದೃಚ್ಛೀಕರಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ದಿನಾಂಕ 01-10-2024 ಮತ್ತು 05-10-2024ರಂದು ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ. ದಿನಾಂಕ 01-10-2024 ಮತ್ತು 05-10-2024ರಂದು ಮಂಡಳಿಯು ಹೊರಡಿಸಿದ್ದಂತ ಸುತ್ತೋಲೆಯನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಎಸ್ ಬಂಗಾರಪ್ಪ ಅವರ ಸೂಚನೆಯಂತೆ ಸದರಿ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/udupi-lakhs-of-rupees-have-been-deposited-by-changing-atm-cards-cheating-case-registered/ https://kannadanewsnow.com/kannada/demu-special-train-to-run-between-arasikere-and-mysuru-on-the-occasion-of-dasara-festival/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ಎಸ್ ಪಿಪಿ ವಾದಿಸಿ ಎ.13 ಆರೋಪಿ ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ವಾದಿಸಿದರು. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಪೊಲೀಸರ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸುತ್ತಾ, ಎ8 ರವಿಶಂಕರ್ ಜಾಕನಾದರೂ ಅಪಹಣದಲ್ಲಿ ಪಾತ್ರವಿದೆ. ಆತ ಬಟ್ಟೆಯಲ್ಲಿಯೂ ರೇಣುಕ್ಸಾವಮಿ ರಕ್ತದ ಕೆಲೆಗಳು ಪತ್ತೆಯಾಗಿವೆ. ಷಡ್ಯಂತ್ರ ಸಾಭೀತಿಗೆ ಒಂದೇ ಬಾರಿಗೆ ಎಲ್ಲ ಒಪ್ಪಂದವಾಗಬೇಕಿಲ್ಲ. ಎಲ್ಲಾ ಗೌಪ್ಯತೆಗಳೂ ಎಲ್ಲರಿಗೂ ತಿಳಿದಿರಬೇಕೆಂದಿಲ್ಲ. ಹೀಗಾಗಿ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್, ಎ11 ನಾಗರಾಜು. ಎ12 ಲಕ್ಷ್ಮಣ್ ಗೆ ಜಾಮೀನು ನೀಡಬಾರದು ಎಂದರು. ಇನ್ನೂ ಎ.13 ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರ ವಿರುದ್ಧ ಸಾಕ್ಷ್ಯ…
ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು, ನೈಋತ್ಯ ರೈಲ್ವೆಯು ಅಕ್ಟೋಬರ್ 10, 11 ಮತ್ತು 12, 2024 ರಂದು ಅರಸೀಕೆರೆ ಮತ್ತು ಮೈಸೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕುಗಳಲ್ಲಿ ಮೂರು ಟ್ರಿಪ್ ಡೆಮು ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 06207 ಅರಸೀಕೆರೆ-ಮೈಸೂರು ಡೆಮು ವಿಶೇಷ ರೈಲು ಅರಸೀಕೆರೆಯಿಂದ ಮಧ್ಯಾಹ್ನ 2.30ಕ್ಕೆ ಹೊರಟು, ಅದೇ ದಿನ ಸಂಜೆ 6.40ಕ್ಕೆ ಮೈಸೂರು ತಲುಪಲಿದೆ. ರೈಲು ಸಂಖ್ಯೆ 06208 ಮೈಸೂರು-ಅರಸೀಕೆರೆ ಡೆಮು ವಿಶೇಷ ರೈಲು ಮೈಸೂರಿನಿಂದ ಸಂಜೆ 6.50ಕ್ಕೆ ಹೊರಟು, ಅದೇ ದಿನ ರಾತ್ರಿ 11.43ಕ್ಕೆ ಅರಸೀಕೆರೆ ತಲುಪಲಿದೆ. ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಹಬ್ಬನಘಟ್ಟ, ಬಾಗೇಶಪುರ, ಹಾಸನ, ಮಾವಿನಕೆರೆ, ಹೊಳೆ ನರಸೀಪುರ, ಅನ್ನೇಚಾಕನಹಳ್ಳಿ ಹಾಲ್ಟ್, ಶ್ರವಣೂರು ಹಾಲ್ಟ್, ಮಂದಗೆರೆ, ಬಿರಹಳ್ಳಿ ಹಾಲ್ಟ್, ಅಕ್ಕಿಹೆಬ್ಬಾಳು, ಹೊಸ ಅಗ್ರಹಾರ, ಅರ್ಜುನಹಳ್ಳಿ ಹಾಲ್ಟ್, ಹಂಪಾಪುರ, ಕೃಷ್ಣರಾಜನಗರ, ಡೋರನಹಳ್ಳಿ, ಸಾಗರಕಟ್ಟೆ, ಕಲ್ಲೂರು ಎಡಹಳ್ಳಿ ಹಾಲ್ಟ್,…
ನವದೆಹಲಿ: 2024 ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು “ಕಂಪ್ಯೂಟೇಶನಲ್ ಪ್ರೋಟೀನ್ ವಿನ್ಯಾಸಕ್ಕಾಗಿ” ಡೇವಿಡ್ ಬೇಕರ್ ಮತ್ತು ಉಳಿದ ಅರ್ಧವನ್ನು ಜಂಟಿಯಾಗಿ ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ ಜಂಪರ್ ಅವರಿಗೆ “ಪ್ರೋಟೀನ್ ರಚನೆಯ ಮುನ್ಸೂಚನೆಗಾಗಿ” ನೀಡಲಾಗಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ನ ನೊಬೆಲ್ ಸಮಿತಿಯು ಬುಧವಾರ ಈ ಘೋಷಣೆ ಮಾಡಿದೆ, ಇಬ್ಬರು ಪ್ರವರ್ತಕರು ಕೃತಕ ಬುದ್ಧಿಮತ್ತೆಗಾಗಿ ಭೌತಶಾಸ್ತ್ರ ಪ್ರಶಸ್ತಿಯನ್ನು ಗೆದ್ದ ಒಂದು ದಿನದ ನಂತರ ಘೋಷಿಸಲಾಗಿದೆ. https://twitter.com/NobelPrize/status/1843951197960777760 ಹಿಂದಿನ ವರ್ಷದಲ್ಲಿ, ಕೆಲವೇ ನ್ಯಾನೋಮೀಟರ್ ವ್ಯಾಸವನ್ನು ಅಳೆಯುವ ಸಣ್ಣ ಕಣಗಳಾದ ಕ್ವಾಂಟಮ್ ಚುಕ್ಕೆಗಳ ಬಗ್ಗೆ ಸಂಶೋಧನೆ ನಡೆಸಿದ ಮೂವರು ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ಪ್ರಶಸ್ತಿಯನ್ನು ನೀಡಲಾಯಿತು. ಈ ಕಣಗಳು ಅಸಾಧಾರಣವಾಗಿ ಪ್ರಕಾಶಮಾನವಾದ ಬಣ್ಣದ ಬೆಳಕನ್ನು ಹೊರಸೂಸುವ ಸಾಮರ್ಥ್ಯವನ್ನು ಹೊಂದಿವೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಇಮೇಜಿಂಗ್ ಸೇರಿದಂತೆ ದೈನಂದಿನ ಜೀವನದ ವಿವಿಧ ಅಂಶಗಳಲ್ಲಿ ಅನ್ವಯಗಳನ್ನು ಕಂಡುಕೊಂಡಿವೆ. ಅಮೆರಿಕದ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ ವೈದ್ಯಕೀಯ ಪ್ರಶಸ್ತಿ ನೀಡಿ ಗೌರವಿಸುವುದರೊಂದಿಗೆ ಆರು…
BREAKING: ರೈತ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹಾಗೂ ಆಪ್ತನ ವಿರುದ್ಧ ‘FIR’ ದಾಖಲು
ಬೆಂಗಳೂರು: ರೈತ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಅಡಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ವಿನಯ್ ಎಂಬುವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ತೆರಳಿದಂತ ಸಂತ್ರಸ್ತೆಯು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪದ ಅಡಿಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ಅವರ ಆಪ್ತ ಅರ್ಜುನ್ ವಿರುದ್ಧ ಬೆದರಿಕೆ ಆರೋಪದ ದೂರು ನೀಡಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ರೈತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದಂತ ಆರೋಪ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೇಳಿ ಬಂದಿತ್ತು. ಇಂದು ಸಂತ್ರಸ್ತ ಮಹಿಳೆ ದೂರು ಆಧರಿಸಿ, ಎಫ್ಐಆರ್ ಕೂಡ ದಾಖಲಾಗಿದೆ. https://kannadanewsnow.com/kannada/good-news-for-jewellery-lovers-gold-silver-prices-fall-in-india-after-repo-rate-remains-unchanged/ https://kannadanewsnow.com/kannada/udupi-lakhs-of-rupees-have-been-deposited-by-changing-atm-cards-cheating-case-registered/
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಪ್ರಮುಖ ಬಡ್ಡಿದರಗಳನ್ನು ಸತತ ಹತ್ತನೇ ಬಾರಿಗೆ ಬದಲಾಯಿಸದೆ ಇರಿಸಿದ್ದರಿಂದ ಭಾರತದಲ್ಲಿ ಚಿನ್ನದ ಬೆಲೆಗಳು ಹಲವಾರು ದಿನಗಳ ಏರಿಕೆ ಮತ್ತು ಅಲ್ಪ ಕುಸಿತದ ನಂತರ ಇಂದು ಗಮನಾರ್ಹ ಕುಸಿತಕ್ಕೆ ಸಾಕ್ಷಿಯಾದವು. ಏತನ್ಮಧ್ಯೆ, ಬಡ್ಡಿದರದ ಪಥದ ಬಗ್ಗೆ ಹೆಚ್ಚಿನ ಸೂಚನೆಗಳಿಗಾಗಿ ಹೂಡಿಕೆದಾರರು ಫೆಡರಲ್ ರಿಸರ್ವ್ನ ಇತ್ತೀಚಿನ ಸಭೆಯಿಂದ ನಿಮಿಷಗಳನ್ನು ಎದುರು ನೋಡುತ್ತಿರುವುದರಿಂದ ಯುಎಸ್ ಚಿನ್ನದ ಬೆಲೆಗಳು ಬುಧವಾರ ಸ್ಥಿರವಾಗಿ ಉಳಿದಿವೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆ ಕಂಡು 70,300ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 100 ರು ಇಳಿಕೆಯಾಗಿ 78,000ರು ನಷ್ಟಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆ ಕಂಡು 76,600ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 100 ರು ಇಳಿಕೆಯಾಗಿ 78,900ರು ನಷ್ಟಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆ ಕಂಡು 57,500ರು…
ದಾಂಡೇಲಿ : ಭೂಮಿಗೆ ಕಾಡು ಭೂಷಣ, ಕಾಡಿಗೆ ವನ್ಯ ಜೀವಿ, ಸಸ್ಯ ಸಂಕುಲವೇ ಭೂಷಣ. ಇಂತಹ ವನ, ವನ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ದಾಂಡೇಲಿಯಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಆಸೆ ಇರಬೇಕು, ಆದರೆ ದುರಾಸೆ ಇರಬಾರದು. ಮಾನವನ ಬದುಕಿಗೆ ಆಧಾರವಾಗಿರುವ ಅರಣ್ಯ ನಾಶ, ಒತ್ತುವರಿ ಮಾಡಬಾರದು ಎಂದರು. ಇಡೀ ದೇಶದ ಹವಾಮಾನದ ಮೇಲೆ ಪರಿಣಾಮಬೀರಿ, ಮಳೆ ಉತ್ತಮವಾಗಿ ಬೀಳಲು ಪಶ್ಚಿಮಘಟ್ಟಗಳನ್ನು ಎಲ್ಲರೂ ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ನೀಡಬೇಕು ಎಂದರು. ಇಂದು ಬೆಳಗ್ಗೆ ತಾವು ದಾಂಡೇಲಿ ಸಮೀಪದ ಕೇಳಪಾನಿಗೆ ಭೇಟಿ ನೀಡಿದಾಗ ಆದ ಆನಂದ ಅಪರಿಮಿತ, ಇದು ಅತ್ಯಂತ ರಮಣೀಯ ತಾಣ, ಅತ್ಯದ್ಭುತ ತಾಣ. ಇದು ಪ್ರವಾಸಿಗರ ಸ್ವರ್ಗ ಎಂದು ಬಣ್ಣಿಸಿದರು. 7-8 ದಶಕಗಳ ಹಿಂದೆ ಕೆಲವರು ವನ್ಯ ಜೀವಿಗಳನ್ನು ಕೊಂದು, ಸತ್ತ ಪ್ರಾಣಿಯ ಜೊತೆ ಫೋಟೋ…
ಬೆಂಗಳೂರು : ಬೆಂಗಳೂರು -ಕರ್ನಾಟಕ ಸರ್ಕಾರವು ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆಕ್ಷನ್ ಲ್ಯಾಬ್ (J-PAL) ದಕ್ಷಿಣ ಏಷ್ಯಾ ದೊಂದಿಗೆ ಪಾಲುದಾರಿಕೆ ಹೊಂದಿದ್ದು, ವೈಜ್ಞಾನಿಕ ಸಂಶೋದನೆ ಮತ್ತು ದತ್ತಾಂಶದ ಮೂಲಕ ಶಾಲಾ ಶಿಕ್ಷಣದಲ್ಲಿನ ಕೆಲವು ಸವಾಲುಗಳನ್ನು ಪರಿಹರಿಸಲು “ಕಲಿಕೆ ಲ್ಯಾಬ್” ಅನ್ನು ಸ್ಥಾಪಿಸುತ್ತದೆ. “ಕಲಿಕೆ ಲ್ಯಾಬ್ ಗಳು” ಜಾಗತಿಕ ಸಂಶೋಧನಾ ಒಳನೋಟಗಳ ಮೂಲಕ ಕರ್ನಾಟಕದ ಶಾಲಾ ಶಿಕ್ಷಣದ ನೀತಿಗಳನ್ನು ರೂಪಿಸಲು ಸಹಕರಿಸುತ್ತದೆ ಹಾಗೂ ಯಾದೃಚ್ಛಿಕ ಮೌಲ್ಯಮಾಪನಗಳ ಮೂಲಕ ಹೊಸ ಮತ್ತು ಅಸ್ತಿತ್ವದಲ್ಲಿರುವ ಶಾಲಾ ಶಿಕ್ಷಣ ಕಾರ್ಯಕ್ರಮಗಳ ವೈಜ್ಞಾನಿಕ ಮೌಲ್ಯಮಾಪನಗಳಿಗೆ ಹೊಸ ಪ್ರಚೋದನೆಯನ್ನು ನೀಡುತ್ತದೆ. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, J-PALSouth Asia ರವರ ತಾಂತ್ರಿಕ ಪರಿಣತಿಯನ್ನು ಬಳಿಸಿಕೊಂಡು ವಿದ್ಯಾಥಿಗಳ ಮೂಲಭೂತ ಕಲಿಕೆಯನ್ನು ಬಲಪಡಿಸಲು ಮತ್ತು ಕಲಿಕೆಯ ಅಂತರವನ್ನು ಸುಧಾರಿಸಲು ಪರಿಣಾಮಕಾರಿಯಾದ ಶಾಲಾ ಶಿಕ್ಷಣದ ಮಧ್ಯವರ್ತನೆಗಳನ್ನು ಗುರುತಿಸಿ, ಅಳವಡಿಸಿಕೊಳ್ಳಲು ಕಾರ್ಯಗತಗೊಳಿಸುತ್ತದೆ. ಈ ಪ್ರಯತ್ನವು ಪೂರ್ವಪ್ರಾಥಮಿಕ ಹಂತದಿಂದ 12ನೇ ತರಗತಿ ಮಕ್ಕಳವರೆಗೂ ಪ್ರಯೋಜನವನ್ನು ನೀಡುತ್ತದೆ. ಮಧು ಬಂಗಾರಪ್ಪ, ಪ್ರಾಥಮಿಕ ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ವಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ವೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ…