Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 27 ಪಿಐ, 7 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸ್ಥಳ ನಿರೀಕ್ಷೆಯಲ್ಲಿದ್ದಂತ ಡಿವೈಎಸ್ಪಿ ರಾಮಕೃಷ್ಣ ಕೆಜಿ ಅವರನ್ನು ಬಿಡಿಎಗೆ ವರ್ಗಾವಣೆ ಮಾಡಿದೆ. ಡಾ.ವೀರಯ್ಯ ಹಿರೇಮಠ ಅವರನ್ನು ಬೆಳಗಾವಿಯ ಬೈಲಹೊಂಗಲ ಉಪ ವಿಭಾಗಕ್ಕೆ, ಡಾ.ಸಂತೋಷ್ ಕೆ.ಎಂ ಅವರನ್ನು ಪೊಲೀಸ್ ಪ್ರಧಾನ ಕಚೇರಿಯ ಕಾನೂನು ಶಾಖೆಗೆ, ಚಂದ್ರಶೇಖರ್.ಪಿ ಅವರನ್ನು ಕೊಡಗಿನ ಸೋಮವಾರಪೇಟೆ ಉಪ ವಿಭಾಗಕ್ಕೆ, ಪ್ರಕಾಶ್ ಕೆ.ಸಿ ಅವರನ್ನು ಮಂಗಳೂರು ದಕ್ಷಿಣ ಉಪ ವಿಭಾಗಕ್ಕೆ, ವೆಂಕಟೇಶ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ಹಾಗೂ ಮಹಾನಂದ ಹೆಚ್.ಕೆ ಅವರನ್ನು ಬೆಂಗಳೂರು ನಗರದ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಇನ್ನೂ ಪೊಲೀಸ್ ಇನ್ಸ್ ಪೆಕ್ಟರ್ ಆಗಿರುವ ರಕ್ಷಿತ್ ಎ.ಕೆ ಅವರನ್ನು ಬೆಂಗಳೂರು ನಗರ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹಂಸವೇಣಿ ಎ ವಿ ಅವರನ್ನು ಬೆಂಗಳೂರಿನ ಉತ್ತರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ, ವಸೀಮುಲ್ಲಾ.ಎಸ್ ಅವರನ್ನು ಬೆಂಗಳೂರಿನ ಸಿಇಎನ್ ಪೊಲೀಸ್…
ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆ ಮಾರ್ಗಸೂಚಿಯಂತೆ ಪಿಡಿಓ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಅಂತ ತಿಳಿಸಿದೆ. ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2024-25ನೇ ಸಾಲಿನಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ- ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದೆಂದು ತಿಳಿಸಲಾಗಿದೆ. ಅದರಂತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (2) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ನ್ನು ರೂಪಿಸಿ ಅಧಿಸೂಚಿಸಲಾಗಿರುತ್ತದೆ ಎಂದು ಹೇಳಿದೆ.…
ವಿಜಯಪುರ: ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾದ ಬಳಿಕ ರಾಜ್ಯದಲ್ಲಿರುವ ಎಲ್ಲ ಹಿಂದುಳಿದ ಸಮುದಾಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಕಾಂಗ್ರೆಸ್ಸಿನವರು ಮತ್ತು ಸಿದ್ದರಾಮಯ್ಯನವರು ಹಿಂದುಳಿದ ಸಮುದಾಯಗಳನ್ನು ಮರೆತು ಕೇವಲ ಅಲ್ಪಸಂಖ್ಯಾತರ ಹಿಂದೆ ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು ಈಚೆಗೆ ಬಜೆಟ್ ಮಂಡಿಸಿದರು. ಈ ರಾಜ್ಯದಲ್ಲಿ ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ಕೊಡುವುದಾಗಿ ಹೇಳಿದ್ದಾರೆ. ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುವುದಾಗಿ ಹೇಳುತ್ತಾರೆ. ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ಧನಸಹಾಯ ನೀಡುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳೇ ಕೇವಲ ಮುಸಲ್ಮಾನರ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಹಿಂದೂ ಬಡ ಹುಡುಗಿಯರು ಇಲ್ಲವೇ? ಹಿಂದೂಗಳಲ್ಲಿ ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆದುಕೊಳ್ಳುವ ಅವಕಾಶ ಹಿಂದೂ ಬಡ ಯುವಕರಿಗೆ ಇಲ್ಲವೇ ಎಂದು ಕೇಳಿದರು. ಬಿಜೆಪಿ ಮುಸಲ್ಮಾನರ…
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಬಗ್ಗೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸಚಿವರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದತ್ತಾಂಶಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾದ ಚರ್ಚೆ ಮಾಡಿದ್ದೇವೆ. ಇನ್ನು ತಾಂತ್ರಿಕ ಅಂಶಗಳು ಅವಶ್ಯ ಎಂದು ಭಾವಿಸಿ, ಹಿರಿಯ ಅಧಿಕಾರಿಗಳಿಗೆ ತಾಂತ್ರಿಕ ದತ್ತಾಂಶ ಒದಗಿಸುವಂತೆ ಸೂಚಿಸಿದ್ದೇವೆ ಎಂದರು. ಚರ್ಚೆ ಅಪೂರ್ಣವಾಗಿದ್ದು, ಕೆಲವು ಸಚಿವರು ತಾಂತ್ರಿಕ ಮಾಹಿತಿಯನ್ನು ಕೇಳಿದ್ದಾರೆ. ಆ ಮಾಹಿತಿಯನ್ನು ಒದಗಿಸಲಾಗುವುದು. ಇಲಾಖೆ ಮಂತ್ರಿಯಾಗಿರುವ ಕಾರಣ ಆ ಮಾಹಿತಿಯನ್ನು ಒದಗಿಸುತ್ತೇನೆ. ಮುಂದಿನ ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಗೆ ವರದಿಯ ವಿಷಯ ಚರ್ಚೆಗೆ ಬರಲಿದ್ದು, ವಿಸ್ತೃತವಾದ ಚರ್ಚೆ ನಡೆಯಲಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಯಾರು ಕೂಡ ಏರು ಧ್ವನಿಯಲ್ಲಿ ಮಾತನಾಡಿಲ್ಲ, ಅದೆಲ್ಲವೂ ಕೇವಲ ಊಹಾಪೋಹಗಳು ಎಂದು ಪ್ರಶ್ನೆಯೊಂದಕ್ಕೆ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಯಾವುದೇ ನಿರ್ಧಾರವನ್ನು ಕೈಗೊಳ್ಳದೇ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದಿನ ವಿಶೇಷ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ಜಾತಿಗಣತಿ ವರದಿ ಸಂಬಂಧದ ವಿಶೇಷ ಸಂಪುಟ ಸಭೆಯ ನಂತ್ರ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ಚರ್ಚೆಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಇಂದಿನ ಸಂಪುಟ ಸಭೆ ಚರ್ಚೆ ಅಪೂರ್ಣವಾಗಿದೆ. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಚರ್ಚೆ ನಡೆಯಿತು. ಹಿಂದುಳಿದ ವರ್ಗಗಳ ಇಲಾಖೆ ಸಲ್ಲಿಸಿದ್ದ ವರದಿ ಬಗ್ಗೆ ಚರ್ಚೆ ನಡೆದಿದೆ. ಇಂದು ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ. ಇನ್ನೂ ಕೆಲ ಹೆಚ್ಚಿನ ಮಾಹಿತಿಗಳು ಬೇಕಿದೆ. ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯವಿದೆ. ಅದನ್ನ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂದಿನ ಚರ್ಚೆ ಅಪೂರ್ಣವಾಗಿದೆ ಎಂದರು. ಯಾವ ಪ್ಯಾರಾಮೀಟರ್ ತೆಗೆದುಕೊಂಡಿದ್ದಾರೆ. ಸಮೀಕ್ಷೆ ಮಾಡುವ ವೇಳೆ ತೆಗೆದುಕೊಂಡಿದ್ದಾರೆ. ಇದರ ಬಗ್ಗೆ…
ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ದಕ್ಷಿಣ ಕನ್ನಡ: ನೀವು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡೋ ಪ್ಲಾನ್ ಮಾಡಿದ್ದರೇ ಇಲ್ಲಿ ಕೇಳಿ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಮಂಜುನಾಥಸ್ವಾಮಿಯ ದೇವರ ದರ್ಶನದ ಸಮಯ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ನೀಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದಲ್ಲಿ ವಿಷು ಜಾತ್ರೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯುವುದರಿಂದ ದೇವರ ದರ್ಶನ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದಿದೆ. ದಿನಾಂಕ 18-04-2025ರಿಂದ 23-04-2025ರವರೆಗೆ ಬೆಳಗ್ಗೆ 6.30ರಿಂದ 8.30ರವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂಬುದಾಗಿ ಹೇಳಿದೆ. ಇನ್ನೂ ಬೆಳಗ್ಗೆ 8.30ರ ಬಳಿಕ ಎಂದಿನಂತೆ ದೇವರ ದರ್ಶನ ನಡೆಯಲಿದೆ. ಸಂಜೆ 5 ಗಂಟೆಯಿಂದ ರಾತ್ರಿ 8.30ರವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಿದೆ. ದಿನಾಂಕ 22-04-2025ರಂದು ಬೆಳಗ್ಗೆ 9 ಗಂಟೆಯ ಬಳಿಕ ದೇವರ ದರ್ಶನ ಪ್ರಾರಂಭವಾಗಲಿದೆ ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. https://kannadanewsnow.com/kannada/special-train-services-between-belagavi-and-bengaluru-during-summer-vacation/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/
ಬೆಂಗಳೂರು: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಬೆಳಗಾವಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಈ ರೈಲು ಸೇವೆಯ ವಿವರ ಈ ಕೆಳಗಿನಂತಿವೆ. ರೈಲು ಸಂಖ್ಯೆ 07385 ಬೆಳಗಾವಿ–ಎಸ್ಎಮ್ವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 20, 2025 ರಂದು ಬೆಳಗಾವಿಯಿಂದ ಸಂಜೆ 05:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 07386 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 21 ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 07:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 08:00 ಗಂಟೆಗೆ ಬೆಳಗಾವಿ ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಖಾನಾಪುರ, ಲೊಂಡಾ, ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಮಾಡಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು – ಹೊಸಪೇಟೆ – ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷದ ನಿಲುಗಡೆಯನ್ನು ಕಲ್ಪಿಸಲು ನಿರ್ಧರಿಸಿದೆ. ಈ ಸೌಲಭ್ಯವು ಪ್ರಾಯೋಗಿಕವಾಗಿ ಮೂರು ತಿಂಗಳ ಅವಧಿಗೆ ಅಂದರೆ 2025ರ ಏಪ್ರಿಲ್ 18 ರಿಂದ ಜುಲೈ 17 ರವರೆಗೆ ಲಭ್ಯವಿರುತ್ತದೆ. ಈ ರೈಲುಗಳ ಆಗಮನ/ನಿರ್ಗಮನ ಸಮಯವು ಈ ಕೆಳಗಿನಂತಿರುತ್ತದೆ: ರೈಲು ಸಂಖ್ಯೆ 56519 ಕೆಎಸ್ಆರ್ ಬೆಂಗಳೂರು – ಹೊಸಪೇಟೆ ದೈನಂದಿನ ಪ್ಯಾಸೆಂಜರ್ ರೈಲು ಹೊಳಲ್ಕೆರೆಗೆ ಬೆಳಿಗ್ಗೆ 09:57 ಗಂಟೆಗೆ ಆಗಮಿಸಿ 09:58 ಗಂಟೆಗೆ ನಿರ್ಗಮಿಸಲಿದೆ. ನಂತರ ಅಮೃತಾಪುರಕ್ಕೆ ಬೆಳಿಗ್ಗೆ 10:30 ಗಂಟೆಗೆ ಆಗಮಿಸಿ 10:31 ಗಂಟೆಗೆ ನಿರ್ಗಮಿಸಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 56520 ಹೊಸಪೇಟೆ –…












