Author: kannadanewsnow09

ರಾಜಸ್ಥಾನ: ಇಲ್ಲಿನ ದೌಸಾ ಜಿಲ್ಲೆಯಿಂದ ಒಂದು ದೊಡ್ಡ ಸುದ್ದಿ ಹೊರಬರುತ್ತಿದೆ. ನಂಗಲ್ ರಾಜ್ವತನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಿಖಡ್ ಗ್ರಾಮದಲ್ಲಿ ಐದು ವರ್ಷದ ಬಾಲಕ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದಾನೆ. ಮಗುವಿನ ರಕ್ಷಣೆಗಾಗಿ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳನ್ನು ಸಹ ಕರೆಯಲಾಗಿದೆ. ಉನ್ನತ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಬೋರ್ವೆಲ್ ಒಳಗೆ ಆಮ್ಲಜನಕ ಪೂರೈಕೆಯನ್ನು ಪ್ರಾರಂಭಿಸಲಾಗಿದೆ. ದೌಸಾ ಜಿಲ್ಲೆಯ ನಂಗಲ್ ರಾಜ್ವತನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಿಖಂಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಗ್ರಾಮದಲ್ಲಿ ವಾಸಿಸುವ ಐದು ವರ್ಷದ ಮಗು ಆರ್ಯನ್ ಕೊಳವೆಬಾವಿಗೆ ಬಿದ್ದಿದ್ದಾನೆ. ಮಗು ಕೊಳವೆಬಾವಿಗೆ ಬಿದ್ದ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆಯೇ ಗ್ರಾಮದಲ್ಲಿ ಕೋಲಾಹಲ ಉಂಟಾಯಿತು. ಕುಟುಂಬದ ಗೋಳಾಟ ಮುಗಿಲು ಮುಟ್ಟಿದೆ. ಎನ್ಡಿಆರ್ಎಫ್-ಎಸ್ಡಿಆರ್ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಏತನ್ಮಧ್ಯೆ, ಗ್ರಾಮದ ಜನರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಘಟನೆಯ…

Read More

ಬೆಂಗಳೂರು: :  ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಬೆಂಗಳೂರು ಸಹಕಾರ ತರಬೇತಿ ಸಂಸ್ಥೆ ವತಿಯಿಂದ ದಿನಾಂಕ: 01-01-2025 ರಿಂದ 6 ತಿಂಗಳ ಅವಧಿಯ “ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ತರಬೇತಿ ಪಡೆಯಲು ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಆಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತಿಯುಳ್ಳ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಅರ್ಜಿಗಳನ್ನು ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಮರ, ತುಮಕೂರು, ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್್, ಗ ಳಲ್ಲಿ ಹಾಗೂ ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ…

Read More

ಬೆಂಗಳೂರು:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 18 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ –ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರಿಗೆ ಗುಡ್ ನ್ಯೂಸ್ ಅನ್ನು ಸಚಿವ ಮಧು ಬಂಗಾರಪ್ಪ ನೀಡಿದ್ದಾರೆ. ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು. ಅತಿಥಿ ಶಿಕ್ಷಕರು / ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು. ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ 2025 ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಎಸ್.ಮಧು ಬಂಗಾರಪ್ಪ ಬೆಳಗಾವಿ ಸುವರ್ಣವಿಧಾನಸೌಧ : ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ,…

Read More

ಮಡಿಕೇರಿ : ಮೂರ್ನಾಡು 33/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್.ಎಸ್ ಹೊದ್ದೂರು ಮತ್ತು ಎಫ್2 ನಾಪೋಕ್ಲು ಫೀಡರ್‍ನಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಹೊದ್ದೂರು, ಕಬಡಗೇರಿ, ಕುಂಬಳದಾಳು, ಕಕ್ಕಬೆ, ಕೊಳಕೇರಿ, ಕುಂಜಿಲ, ಯುವಕಪಾಡಿ, ನಾಲಡಿ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ಕಿಯಲಕೇರಿ, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಬೇತು, ಚೆರಿಯಪರಂಬು, ಹಳೆತಾಲ್ಲೂಕು, ಚೋನೆಕೆರೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ನಾಳೆ ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಜನ ಸಂಪರ್ಕ ಸಭೆ ಮಡಿಕೇರಿ : ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಡಿಸೆಂಬರ್, 10 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ…

Read More

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್, ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್‍ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಮಕ್ಕಳಿಗೆ 3 ಹಾಗೂ ಸಫಾಯಿ ಕರ್ಮಚಾರಿ ಮಕ್ಕಳಿಗೆ 2 ಲ್ಯಾಪ್‍ಟಾಪ್ ವಿತರಿಸಲು ಅವಕಾಶವಿರುತ್ತದೆ. ಬಿ.ಕಾಂ, ಬಿ.ಎಸ್ಸಿ, ಎಂ.ಕಾಂ, ಎಂ.ಎಸ್ಸಿ, ಬಿ.ಇ, ಎಂ.ಟೆಕ್ ವಿದ್ಯಾಭ್ಯಾಸ ಮಾಡುತ್ತಿರಬೇಕು. ಅರ್ಜಿದಾರರು ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ನಂ.337/16ಎ-16, ಗಣೇಶ್ ಲೇಔಟ್ 1ನೇಕ್ರಾಸ್ ಪಿ.ಬಿ.ರಸ್ತೆ ದಾವಣಗೆರೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ. ಆಪ್ ತಂತ್ರಾಂಶದ ಮಾದರಿ ನೊಂದಣಿ ಸಮೀಕ್ಷೆ ವ್ಯವಸ್ಥೆಗೆ ತರಬೇತಿ ದಾವಣಗೆರೆ : ಕೇಂದ್ರ ಸರ್ಕಾರದ ಜನಗಣತಿ ಇಲಾಖೆಯಿಂದ ಆಪ್ ಮೂಲಕ ಜನನ ಮತ್ತು ಮರಣ ಅಂಕಿಅಂಶಗಳನ್ನು ಸಂಗ್ರಹಿಸಲು ಅಂಶಕಾಲಿಕೆ ಗಣತಿದಾರರಿಗೆ ಮಾದರಿ ನೊಂದಣಿ ಕುರಿತಂತೆ ತರಬೇತಿಯನ್ನು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು. ತರಬೇತಿ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಉದ್ಘಾಟಿಸಿ ಆಪ್ ಮೂಲಕ ಮಾದರಿ ನೊಂದಣಿ ಪದ್ದತಿಯ ಅವಶ್ಯಕತೆ ಮತ್ತು ಇದರ ಗುಣಮಟ್ಟದ ಕಾರ್ಯದ…

Read More

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ” ಗಾಂಧಿಭಾರತ” ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು. ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.ಮುಂಬರುವ 2025 ರ ಅಕ್ಟೋಬರ್ 2 ರವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಎಂಬ ಹಿರಿಮೆ ಇದೆ. ಈ ಸಂದರ್ಭದಲ್ಲಿ ಗಾಂಧೀಜಿಯವರ ಬದುಕು,ಹೋರಾಟ,ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ,ಸತ್ಯ,ಅಹಿಂಸೆ,ಆರ್ಥಿಕ ಚಿಂತನೆಗಳು,ಸ್ವರಾಜ್,ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,…

Read More

ಚಿತ್ರದುರ್ಗ : ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮೋ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಪೋಟೊಗಳೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/st-community-students-applications-invited-for-pre-matric-post-matric-scholarships/ https://kannadanewsnow.com/kannada/good-news-for-high-school-co-teachers-in-the-state-minister-madhu-bangarappa/

Read More

ಬಳ್ಳಾರಿ : ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟಿನ https://ssp.postmatric.karnataka.gov.in ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಏನಾದರೂ ತಾಂತ್ರಿಕ ತೊಂದರೆಗಳಾದಲ್ಲಿ ಎಸ್‌ಎಸ್‌ಪಿ ಸಹಾಯವಾಣಿ ಸಂಖ್ಯೆ 080-22261789 ಗೆ ಕರೆಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-high-school-co-teachers-in-the-state-minister-madhu-bangarappa/ https://kannadanewsnow.com/kannada/people-of-bengaluru-note-there-will-be-no-electricity-in-these-areas-tomorrow/

Read More

ಶಿವಮೊಗ್ಗ: ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಬೇರಾಗಿದ್ದು ಅವನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಸಲಹೆಯಿತ್ತರು. ಇಲ್ಲಿನ ಕುವೆಂಪು ವಿಶ್ವವಿದ್ಯಾಲಯ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ಸಹ್ಯಾದ್ರಿ ಉತ್ಸವ- 2024’ಅನ್ನು ಡಿ.09-11ರ ವರೆಗೆ ಆಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಸೋಮವಾರ ಸಂಜೆ 4.30ಗಂಟೆಗೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿ ಭಾಷಣದಲ್ಲಿ ಅವರು ಮಾತನಾಡಿದರು. ಜನಪದ ಸಾಹಿತ್ಯ, ಹಾಡನ್ನು ಸಿನಿಮಾದವರು ಬಳಸಿದ್ದಾರೆ, ಆದರೆ ಸಿನಿಮಾದಿಂದ ಜನಪದ ಏನನ್ನೂ ಪಡೆದಿಲ್ಲ. ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ ಎಂದರು. ಮತ್ತೋರ್ವ ಅತಿಥಿ ನಟಿ ಅದಿತಿ ಶೆಟ್ಟಿ ಮಾತನಾಡಿ, ಕಾಲೇಜು ದಿನಗಳಲ್ಲಿ ಕಲಿಯುವ ಕಲೆ, ಗಳಿಸಿದ ಜ್ಞಾನ, ರೂಪಿಸಿಕೊಂಡ ಮೌಲ್ಯಗಳು ಇಂದಿಗೂ ಸಿನಿಮಾರಂಗದಲ್ಲಿ ನಮಗೆ ಸಹಾಯಕವಾಗಿವೆ. ಹೀಗಾಗಿ ಶಿಕ್ಷಣ ಮತ್ತು ಶಿಕ್ಷಣದ ಸಂದರ್ಭದ ಹಲವು ಬಗೆಯ ಕಲಿಕೆ ಮುಖ್ಯ ಎಂದು ತಿಳಿಸಿದರು. ವಿವಿಯ ಕುಲಪತಿ ಪ್ರೊ ಶರತ್ ಅನಂತಮೂರ್ತಿ…

Read More