Subscribe to Updates
Get the latest creative news from FooBar about art, design and business.
Author: kannadanewsnow09
ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ದಕ್ಷಿಣ ಕನ್ನಡ: ನೀವು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡೋ ಪ್ಲಾನ್ ಮಾಡಿದ್ದರೇ ಇಲ್ಲಿ ಕೇಳಿ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಮಂಜುನಾಥಸ್ವಾಮಿಯ ದೇವರ ದರ್ಶನದ ಸಮಯ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ನೀಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದಲ್ಲಿ ವಿಷು ಜಾತ್ರೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯುವುದರಿಂದ ದೇವರ ದರ್ಶನ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದಿದೆ. ದಿನಾಂಕ 18-04-2025ರಿಂದ 23-04-2025ರವರೆಗೆ ಬೆಳಗ್ಗೆ 6.30ರಿಂದ 8.30ರವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂಬುದಾಗಿ ಹೇಳಿದೆ. ಇನ್ನೂ ಬೆಳಗ್ಗೆ 8.30ರ ಬಳಿಕ ಎಂದಿನಂತೆ ದೇವರ ದರ್ಶನ ನಡೆಯಲಿದೆ. ಸಂಜೆ 5 ಗಂಟೆಯಿಂದ ರಾತ್ರಿ 8.30ರವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಿದೆ. ದಿನಾಂಕ 22-04-2025ರಂದು ಬೆಳಗ್ಗೆ 9 ಗಂಟೆಯ ಬಳಿಕ ದೇವರ ದರ್ಶನ ಪ್ರಾರಂಭವಾಗಲಿದೆ ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. https://kannadanewsnow.com/kannada/special-train-services-between-belagavi-and-bengaluru-during-summer-vacation/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/
ಬೆಂಗಳೂರು: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಬೆಳಗಾವಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಈ ರೈಲು ಸೇವೆಯ ವಿವರ ಈ ಕೆಳಗಿನಂತಿವೆ. ರೈಲು ಸಂಖ್ಯೆ 07385 ಬೆಳಗಾವಿ–ಎಸ್ಎಮ್ವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 20, 2025 ರಂದು ಬೆಳಗಾವಿಯಿಂದ ಸಂಜೆ 05:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 07386 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 21 ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 07:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 08:00 ಗಂಟೆಗೆ ಬೆಳಗಾವಿ ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಖಾನಾಪುರ, ಲೊಂಡಾ, ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಮಾಡಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು – ಹೊಸಪೇಟೆ – ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷದ ನಿಲುಗಡೆಯನ್ನು ಕಲ್ಪಿಸಲು ನಿರ್ಧರಿಸಿದೆ. ಈ ಸೌಲಭ್ಯವು ಪ್ರಾಯೋಗಿಕವಾಗಿ ಮೂರು ತಿಂಗಳ ಅವಧಿಗೆ ಅಂದರೆ 2025ರ ಏಪ್ರಿಲ್ 18 ರಿಂದ ಜುಲೈ 17 ರವರೆಗೆ ಲಭ್ಯವಿರುತ್ತದೆ. ಈ ರೈಲುಗಳ ಆಗಮನ/ನಿರ್ಗಮನ ಸಮಯವು ಈ ಕೆಳಗಿನಂತಿರುತ್ತದೆ: ರೈಲು ಸಂಖ್ಯೆ 56519 ಕೆಎಸ್ಆರ್ ಬೆಂಗಳೂರು – ಹೊಸಪೇಟೆ ದೈನಂದಿನ ಪ್ಯಾಸೆಂಜರ್ ರೈಲು ಹೊಳಲ್ಕೆರೆಗೆ ಬೆಳಿಗ್ಗೆ 09:57 ಗಂಟೆಗೆ ಆಗಮಿಸಿ 09:58 ಗಂಟೆಗೆ ನಿರ್ಗಮಿಸಲಿದೆ. ನಂತರ ಅಮೃತಾಪುರಕ್ಕೆ ಬೆಳಿಗ್ಗೆ 10:30 ಗಂಟೆಗೆ ಆಗಮಿಸಿ 10:31 ಗಂಟೆಗೆ ನಿರ್ಗಮಿಸಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 56520 ಹೊಸಪೇಟೆ –…
ಬೆಂಗಳೂರು: ಇಂದಿನ ಜಾತಿಗಣತಿ ವರದಿ ಸಂಬಂಧ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಎಲ್ಲಾ ಸಚಿವರು ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಇಂದಿನ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಾತಿಗಣತಿ ವರದಿಯ ಬಗ್ಗೆ ಸಚಿವರು ತಮ್ಮ ಅಭಿಪ್ರಾಯ ತಿಳಿಸುವಂತೆ ಸಿಎಂ ಸೂಚಿಸಿದ್ದಾರೆ. ಮೌಖಿಕವಾಗಿ ನೀಡಬಹುದು ಅಥವಾ ಲಿಖಿತವಾಗಿ ನೀಡಬಹುದಾಗಿದೆ. ಸಚಿವರು ಅಭಿಪ್ರಾಯವನ್ನು ಇಂದು ಅಥವಾ ನಾಳೆ ನೀಡಬಹುದು ಎಂದರು. ಇಂದಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯ ಬಗ್ಗೆ ಚರ್ಚೆಯಾಗಿದೆ. ಆದರೇ ಯಾವುದೇ ತೀರ್ಮಾನ ಆಗಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಏನಾಗುತ್ತೋ ಗೊತ್ತಿಲ್ಲ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/ https://kannadanewsnow.com/kannada/breaking-two-killed-two-others-seriously-injured-in-road-accident-in-dharwad/
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಮಹತ್ವದ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಯಾವುದೇ ತೀರ್ಮಾನ ಕೈಗೊಳ್ಳದೇ ಮುಂದಿನ ಸಭೆಯಲ್ಲಿ ಚರ್ಚೆಗೆ ಇರಿಸಿ ಅಂತ್ಯಗೊಂಡಿರೋದಾಗಿ ತಿಳಿದು ಬಂದಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಸಂಪುಟ ಸಭೆಯ ಮುಂದೆ 6 ಪುಟಗಳ ಟಿಪ್ಪಣಿಯನ್ನು ಆಯೋಗದ ಶಿಫಾರಸ್ಸುಗಳನ್ನು ಒಳಗೊಂಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಿತು. ಜಾತಿಗಣತಿ ವರದಿಯಲ್ಲಿರುವ ಶಿಫಾರಸ್ಸುಗಳ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು. ಈಗಿರುವ ಒಬಿಸಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು. ಒಬಿಸಿ ಮೀಸಲಾತಿ ಪ್ರಮಾಣ ಶೇ.32ರಿಂದ 51ಕ್ಕೆ ಹೆಚ್ಚಿಸಬೇಕು ಅಂತ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯಿಂದ ವಿಶೇಷ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಮಂಡನೆ ಮಾಡಲಾಯಿತು. ತಮಿಳುನಾಡಿನಲ್ಲಿ ಒಬಿಸಿ ಮೀಸಲಾತಿ ಶೇಕಡಾ 69ರಷ್ಟಿದೆ. ಜಾರ್ಖಂಡ್ ನಲ್ಲಿ ಹಿಂದುಳಿದ ವರ್ಗಕ್ಕೆ ಶೇ.77ರಷ್ಟು ಮೀಸಲಾತಿ ಇದೆ. ಆ ರಾಜ್ಯಗಳಂತೆ ನಮ್ಮ ರಾಜ್ಯದಲ್ಲೂ ಒಬಿಸಿ…
ಬೆಂಗಳೂರು: ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಮತ್ತು WQMS ಶಾಖೆ ಅಡಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಈ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರು, ಎಲ್ಲಾ ಜಿಲ್ಲಾಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿಯಲ್ಲಿ ಜಲ ಜೀವನ್ ಮಿಷನ್, ಸ್ವಚ್ಚ ಭಾರತ ಮಿಷನ್ (ಗ್ರಾ) ಯೋಜನೆಗಳಡಿ ಜಿಲ್ಲಾ ಮಟ್ಟದಲ್ಲಿ ಮತ್ತು WQMS ಶಾಖೆ ಅಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಯೋಗಾಲಯಗಳಲ್ಲಿ ಹಾಗೂ ಕೇಂದ್ರ ಕಛೇರಿಯಲ್ಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಸಮಾಲೋಚಕರುಗಳು/ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುತ್ತಾರೆ. ಸದರಿ ಸಿಬ್ಬಂದಿಗಳಿಗೆ ಕಳೆದ ಮೂರು ವರ್ಷಗಳಿಂದ ಮಾಸಿಕ ಸೇವಾ ಶುಲ್ಕ ಪಾವತಿ ಪರಿಷ್ಕರಣೆಯಾಗಿರುವುದಿಲ್ಲವೆಂದು, ಮಾಸಿಕ ಸೇವಾ ಶುಲ್ಕ ಪರಿಷ್ಕರಿಸಲು ಉಲ್ಲೇಖ- ರಂತೆ ಮನವಿ ಪತ್ರಗಳನ್ನು ಸಲ್ಲಿಸಿರುತ್ತಾರೆ.…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜಂಟಿ ಪ್ರವೇಶ ಪರೀಕ್ಷೆ (ಮುಖ್ಯ) – 2025 (ಸೆಷನ್ 2) ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಜೆಇಇ ಮೇನ್ 2025 ಸೆಷನ್ 2 ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಅಂತಿಮ ಕೀ ಉತ್ತರಗಳನ್ನು ಅಧಿಕೃತ ವೆಬ್ಸೈಟ್ jeemain.nta.ac.in ರಿಂದ ಡೌನ್ಲೋಡ್ ಮಾಡಬಹುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೆಇಇ ಮೇನ್ 2025 ಸೆಷನ್ 2 ಅನ್ನು ಏಪ್ರಿಲ್ 2, 3, 4, 7 ಮತ್ತು 8 ರಂದು ಪೇಪರ್ 1 ಬಿಇ / ಬಿಟೆಕ್ಗಾಗಿ ಮತ್ತು ಏಪ್ರಿಲ್ 9 ರಂದು ಪೇಪರ್ 2 ಎ: ಬಿಆರ್ಕ್ ಮತ್ತು ಪೇಪರ್ 2 ಬಿ: ಬಿ: ಬಿ.ಪ್ಲಾನಿಂಗ್ಗಾಗಿ ದೇಶಾದ್ಯಂತ 285 ನಗರಗಳಲ್ಲಿ ಮತ್ತು ಭಾರತದ ಹೊರಗಿನ 15 ನಗರಗಳಲ್ಲಿ 531 ಕೇಂದ್ರಗಳಲ್ಲಿ ನಡೆಸಿತು. ತಾತ್ಕಾಲಿಕ ಕೀ ಉತ್ತರಗಳನ್ನು ಏಪ್ರಿಲ್ 11 ರಂದು ಬಿಡುಗಡೆ ಮಾಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 13 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸ್ವೀಕರಿಸಿದ ಪ್ರಾತಿನಿಧ್ಯಗಳು /…
ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯ ನಂತ್ರ ಮುಖ್ಯ ಪರೀಕ್ಷೆಗೆ ಕೆಪಿಎಸ್ಸಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಹಾಗೂ ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗಿತ್ತು ಎಂದಿದೆ. ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಬಳಿಕ ಮುಖ್ಯಪರೀಕ್ಷೆಯನ್ನು ಮೇ.3, 5, 7 ಮತ್ತು 9ರಂದು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದೆ. ಇನ್ನೂ ಅರ್ಹತಾ ಪರೀಕ್ಷೆ ಕನ್ನಡ ಮೇ.3ರಂದು ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ ನಡೆಸಲಾಗುತ್ತದೆ. ಇಂಗ್ಲೀಷ್ ಪರೀಕ್ಷೆಯನ್ನು ಮೇ.3ರ ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ನಡೆಸಲಾಗುತ್ತಿದೆ ಎಂದಿದೆ. ಮೇ.5ರಂದು ಪತ್ರಿಕೆ-1ರ ಪ್ರಬಂಧ ವಿಷಯಕ್ಕೆ ಸಂಬಂಧಿಸಿದಂತ ಪರೀಕ್ಷೆಯು ಬೆಳಿಗ್ಗೆ 10ರಿಂದ 1 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ-2ರ ಸಾಮಾನ್ಯ ಅಧ್ಯಯನ-1ರ ಪರೀಕ್ಷೆಯೂ ಮೇ.7ರಂದು ಬೆಳಿಗ್ಗೆ 9ರಿಂದ 12ರವರೆಗೆ ನಡೆಯಲಿದೆ. ಪತ್ರಿಕೆ-3ರ ಸಾಮಾನ್ಯ ಅಧ್ಯಯನ-2 ಪರೀಕ್ಷೆಯು ಮೇ.7ರಂದು ಮಧ್ಯಾಹ್ನ 2ರಿಂದ 5ರವರೆಗೆ…
ರಾಂಚಿ: ಖ್ಯಾತ ಬರಹಗಾರ್ತಿ ಮತ್ತು ಬುಡಕಟ್ಟು ಹಕ್ಕುಗಳ ಕಾರ್ಯಕರ್ತೆ ರೋಸ್ ಕೆರ್ಕೆಟ್ಟಾ ಗುರುವಾರ ಇಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಸಾಂಕ್ರಾಮಿಕ ಹಂತದಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದ ನಂತರ 85 ವರ್ಷದ ಕೆರ್ಕೆಟ್ಟಾ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರು ಮಗ ಸೋನಾಲ್ ಪ್ರಭಂಜನ್ ಮತ್ತು ಮಗಳು ವಂದನಾ ಟೆಟೆ ಅವರನ್ನು ಅಗಲಿದ್ದಾರೆ. ನನ್ನ ತಾಯಿ ಬೆಳಿಗ್ಗೆ 10.30 ರ ಸುಮಾರಿಗೆ ನಿಧನರಾದರು. ಅವರು 2023 ರಿಂದ ಹಾಸಿಗೆ ಹಿಡಿದಿದ್ದರು ಮತ್ತು ಕಳೆದ 10 ದಿನಗಳಿಂದ ಆಹಾರ ಸೇವಿಸುವುದನ್ನು ಬಹುತೇಕ ನಿಲ್ಲಿಸಿದ್ದರು ಎಂದು ಟೆಟೆ ಪಿಟಿಐಗೆ ತಿಳಿಸಿದ್ದಾರೆ. ಕೆರ್ಕೆಟ್ಟಾ ಅವರ ಕಥಾಸಂಕಲನ ‘ಪಾಘಾ ಜೋರಿ-ಜೋರಿ ರೆ ಘಟೋ’ ಅವರ ಜನಪ್ರಿಯ ಸಾಹಿತ್ಯ ರಚನೆಗಳಲ್ಲಿ ಒಂದಾಗಿದೆ. ಹಿಂದಿ ಮತ್ತು ಖಾರಿಯಾ ಭಾಷೆಗಳನ್ನು ಶ್ರೀಮಂತಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕೆರ್ಕೆಟ್ಟಾ ಪ್ರೇಮ್ ಚಂದ್ ಅವರ ಕಥೆಗಳನ್ನು ಖರಿಯಾ ಭಾಷೆಗೆ ಅನುವಾದಿಸಿದರು. ಜಾರ್ಖಂಡ್ನ ಸಿಮ್ಡೆಗಾ ಜಿಲ್ಲೆಯಲ್ಲಿ ಜನಿಸಿದ ಕೆರ್ಕೆಟ್ಟಾ, ರಾಂಚಿಗೆ ಬರುವ ಮೊದಲು ಹಿಂದಿ…











