Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರು ಐದು ವರ್ಷ ಇರ್ತಾರೋ ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿರುವಂತ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಸೃಷ್ಠಿಸಿದೆ. ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹಲವು ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಈ ಬೆನ್ನಲ್ಲೇ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ನಿವಾಸ ಈಗ ಕೇಂದ್ರ ಬಿಂದುವಾಗಿದೆ. ಅವರನ್ನು ಕಾಂಗ್ರೆಸ್ ನ ಪ್ರಮುಖ ನಾಯಕರು ಭೇಟಿಯಾಗುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಸಚಿವ ಮಹದೇವಪ್ಪ, ಶಾಸಕ ಹರೀಶ್ ಗೌಡ, ರವಿ ಶಂಕರ್ ಸೇರಿದಂತೆ ಹಲವರು ಭೇಟಿ ಮಾಡಿದ್ದು, ತೀವ್ರ ಕುತೂಹಲವನ್ನೇ ಉಂಟು ಮಾಡಿದೆ. ಸಚಿವ ಜಾರಕಿಹೊಳಿ ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುತ್ತಲೇ, ಅವರು ಐದು ವರ್ಷ ಇರ್ತಾರೋ, ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲ ಸೃಷ್ಠಿಸಿದೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ ಮುಡಾ ಕೇಸಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದಾರಾ ಎಂಬ…
ಮಡಿಕೇರಿ :-ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್ನ ವಿದ್ಯುತ್ ಮಾರ್ಗದಲ್ಲಿ ಅಕ್ಟೋಬರ್, 09 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುಲಾ ಸಂಕ್ರಮಣ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ತ್ಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. https://kannadanewsnow.com/kannada/farmers-note-applications-invited-for-availing-various-benefits-under-krishi-bhagya-scheme/ https://kannadanewsnow.com/kannada/breaking-haryana-assembly-election-congress-candidate-vinesh-pogat-wins-big-vinesh-phogat/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/
ಧಾರವಾಡ ; 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bbmp-to-release-draft-selection-list-for-12692-pourakarmika-posts-tomorrow/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/
BREAKING: ನಾಳೆ BBMPಯಿಂದ ‘12,692 ಪೌರಕಾರ್ಮಿಕರ ಹುದ್ದೆ’ಗಳ ಕರಡು ಆಯ್ಕೆ ಪಟ್ಟಿ ಪ್ರಕಟ | BBMP Recruitment 2024
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪ್ರಕಟಗೊಳಿಸಲಾಗುತ್ತಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿರುತ್ತಾರೆ. ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ ಅಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ‘ಡಿ’ ವೃಂದದ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು 2 ಹಂತದಲ್ಲಿ ಮಾಡಲಾಗಿದ್ದು, ಮೊದಲ ಹಂತದಲ್ಲಿ 3673 ಹಾಗೂ ಎರಡನೇ ಹಂತದಲ್ಲಿ 11307 ಹುದ್ದೆಗಳು ಸೇರಿದಂತೆ ಒಟ್ಟು 14980 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬೇಕಾಗಿದ್ದು, ಇದರಲ್ಲಿ ನಿಯಮಾನುಸಾರ 12692 ಅರ್ಹ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ವಿಭಾಗದಲ್ಲಿ ನೇರ ಪಾವತಿಯಡಿ(ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಒಟ್ಟು 15,000ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು, ದೀರ್ಘಾವಧಿ ಸೇವೆ, ರೋಸ್ಟರ್ ಪದ್ದತಿ ಹಾಗೂ ವಿವಿಧ ಮಾನದಂಡಗಳ ಆಧಾರದ ಮೇಲೆ…
ಬೆಂಗಳೂರು: ಗ್ರೂಪ್ ʼಸಿʼ ಹುದ್ದೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸ್ಥಳೀಯ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ಮತ್ತು ಸ್ಥಳೀಯ ವೃತ್ತ ಪತ್ರಿಕೆಗಳಲ್ಲಿ ಪ್ರಕಟಣೆ ಮಾಡುವುದರ ಮೂಲಕ ತುಂಬಲಾಗುತ್ತಿದೆ ಎನ್ನುವ ಲಿಖಿತ ಮಾಹಿತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಎಚ್.ಎ.ಎಲ್.ನ ಹಿರಿಯ ಅಧಿಕಾರಿಗಳು ಈಗ ಸಂಸ್ಥೆಯ ನೇಮಕಾತಿಯಲ್ಲಿ ಈ ಎಲ್ಲ ಭರವಸೆಗಳನ್ನು ಗಾಳಿಗೆ ತೂರಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ನಿರಾಕರಿಸಿದ್ದಾರೆ. ಇದು ಸರ್ಕಾರವನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಇಂದು ಎಚ್.ಎ.ಎಲ್.ನ ಕೇಂದ್ರೀಯ ಕನ್ನಡ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಡಾ.ಬಿಳಿಮಲೆ, ಸಂಸ್ಥೆಯ ಆಡಳಿತದಲ್ಲಿ ಕನ್ನಡಕ್ಕೆ ಪ್ರಾತಿನಿಧ್ಯವನ್ನು ಕಲ್ಪಿಸುವ ಕುರಿತಂತೆ ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನೀಡಿರುವ ಸೂಚನೆಗೆ ಪ್ರತಿಕ್ರಿಯಿಸಿರುವ ಎಚ್.ಎ.ಎಲ್.ನ ಸಂಸ್ಥೆಯ ಅಪರ ಪ್ರಧಾನ ವ್ಯವಸ್ಥಾಪಕರು ಸಂಸ್ಥೆಯ ಗ್ರೂಪ್ ʼಸಿʼ ಮತ್ತು ʼಡಿʼ ವೃಂದದ ಹುದ್ದೆಗಳಲ್ಲಿ ಶೇ.90ಕ್ಕೂ ಹೆಚ್ಚಿನ ಉದ್ಯೋಗಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದು, ಈ ವೃಂದಗಳ ನೇಮಕಾತಿಗಳಲ್ಲಿ ಸ್ಥಳೀಯರಿಗೆ ಸಂಪೂರ್ಣ ಅವಕಾಶವನ್ನು…
ಕಲಬುರಗಿ : ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುವತ್ತ ದಾಪುಗಾಲು ಹಾಕುತ್ತಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಹರಿಯಾಣದಲ್ಲಿ ಬಿಜೆಪಿ ದೂಳೀಪಟ ಆಗುವುದಾಗಿ ವಿಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದವು. ಕಾಂಗ್ರೆಸ್ ಪಕ್ಷ ಅಧಿಕಾರ ಗಳಿಸುವ ಭ್ರಮೆಯಲ್ಲಿತ್ತು. ಎಲ್ಲ ಪಿತೂರಿಗಳ ನಡುವೆ ಅದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಮತ್ತೆ ಜಯಭೇರಿ ಸಂತಸದ ಸಂಗತಿ ಎಂದು ತಿಳಿಸಿದರು. ಜಮ್ಮು- ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ, ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದ ಬಳಿಕ ಚುನಾವಣೆ ನಡೆದಿದೆ. ಅಭಿವೃದ್ಧಿ ಕೆಲಸಗಳೂ ಆಗುತ್ತಿದ್ದು, ಬಿಜೆಪಿ ಉತ್ತಮವಾಗಿ ಪ್ರದರ್ಶನ ನೀಡುತ್ತಿದೆ ಎಂದರು. ಕಾಂಗ್ರೆಸ್ ಮುಖಂಡರ ವಿರೋಧದ ನಡುವೆ ಜಾತಿಗಣತಿ ಮಂಡನೆ ರಾಜ್ಯ ಸರಕಾರಕ್ಕೆ ಜಾತಿ ಗಣತಿ ಮಾಡಲು ಅವಕಾಶ ಇದೆಯೇ? ಎಂಬುದು ಮೊದಲ ಯಕ್ಷ ಪ್ರಶ್ನೆ. 5 ವರ್ಷಗಳ ಕಾಲ ತಾವು ಮುಖ್ಯಮಂತ್ರಿ ಆಗಿ ಇದ್ದಿರಿ. ನಿಮ್ಮ ಅವಧಿಯಲ್ಲಿ 165 ಕೋಟಿ ಖರ್ಚು…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ರಾಜ್ಯಾಧ್ಯಂತ ಇ-ಖಾತಾ ತಂತ್ರಾಂಶ ಜಾರಿಗೊಂಡಿದೆ. ಇ-ಖಾತಾ ಜಾರಿಗೊಂಡ ನಂತ್ರ ಕೆಲ ಸಮಸ್ಯೆಗಳು ಉಂಟಾಗಿರೋದು ಕಂಡು ಬಂದಿದೆ. ಇಂತಹ ಗೊಂದಲಕ್ಕೆ ವಾರದೊಳಗೆ ಪರಿಹಾರ ನೀಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗಧಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ. ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ” ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದರು. https://twitter.com/KarnatakaVarthe/status/1843602858551234773 https://kannadanewsnow.com/kannada/breaking-haryana-assembly-election-congress-candidate-vinesh-pogat-wins-big-vinesh-phogat/ https://kannadanewsnow.com/kannada/good-news-for-silicon-city-people-another-botanical-garden-to-be-built-in-bengaluru/ https://kannadanewsnow.com/kannada/karnataka-to-implement-caste-census-report-soon-siddaramaiah/
ಬೆಂಗಳೂರು: ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿ ಸೋಮವಾರದಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, 153 ಎಕರೆ ಅರಣ್ಯ ಭೂಮಿಯನ್ನು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಗುತ್ತಿಗೆ ನೀಡಲಾಗಿತ್ತು. ಈಗ ಗುತ್ತಿಗೆ ಅವಧಿ ಮುಗಿದಿದ್ದು, ಸಾಮಾಜಿಕ ಜವಾಬ್ದಾರಿ- ಇಲಾಖೆ ಮತ್ತು ಸಿ.ಎಸ್.ಆರ್ ನಿಧಿಯ ನೆರವಿನೊಂದಿಗೆ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಒಂದು ಸಸ್ಯೋದ್ಯಾನ ಮಾಡಲಾಗುವುದು ಎಂದರು. ಯಲಹಂಕ ಸುತ್ತುಮುತ್ತ ಬೆಂಗಳೂರು ವ್ಯಾಪಕವಾಗಿ ಬೆಳೆದಿದೆ. ಈ ಹಿನ್ನೆಯಲ್ಲಿ ಜನರಿಗೆ ಅನುಕೂಲವಾಗುವಂತೆ ಇಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಸ್ಥಾಪಿಸಿದಲ್ಲಿ ಅದು ಅತ್ಯಂತ ಆಕರ್ಷಣೀಯ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಇಂದು ಜಾಮೀನಿನ ನಿರೀಕ್ಷೆಯಲ್ಲಿದ್ದಂತ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ 11 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್ ಮುಂದೆ ಎಸ್ ಪಿಪಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದರು. ಕೊಲೆಯಾದಂತ ರೇಣುಕಾಸ್ವಾಮಿ ಗೌತಮ್ ಎಂಬ ಹೆಸರಿನ ಇನ್ಸ್ ಸ್ಟಾಗ್ರಾಂನಿಂದ ಪವಿತ್ರಾ ಗೌಡ ಅವರಿಗೆ ಫೆಬ್ರವರಿ 27, 2024ರಂದು ಮೆಸೇಜ್ ಮಾಡಿದ್ದಾನೆ. ಹೀಗೆ ಕಳುಹಿಸಿದ್ದಂತ ಸಂದೇಶಕ್ಕೆ ಪವೀತ್ರಾ ಗೌಡ ಅವರು ಜೂನ್ ನಲ್ಲಿ ರೇಣುಕಾಸ್ವಾಮಿ ಟ್ರ್ಯಾಪ್ ಮಾಡುವಂತ ಅವಶ್ಯಕತೆ ಏನಿತ್ತು? ಪವಿತ್ರಾ ಗೌಡ ಅವರು ಪೊಲೀಸರಿಗೆ ದೂರು ನೀಡಬಹುದಿತ್ತು. ಇಲ್ಲವೇ ರೇಣುಕಾಸ್ವಾಮಿ ಸಂದೇಶ ಕಳುಹಿಸಿದ್ದಂತ ಗೌತಮ್ ಹೆಸರಿನ ಇನ್ಸ್ ಸ್ಟಾಗ್ರಾಂ ಅಕೌಂಟ್ ಬ್ಲಾಕ್ ಮಾಡಬಹುದಾಗಿತ್ತು ಎಂದರು.…