Author: kannadanewsnow09

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಗೈರಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ನಗರದ ಡಾ || ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಮಹೇಶ್ ಜೋಶಿ ಪ್ರತಿಭಟನೆಗೆ ಬೆದರಿ ಗೈರಾದರ ಎಂಬ ಅನುಮಾನ ಮೂಡಿದೆ. ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಮುಗಿದು 8 ತಿಂಗಳಾದರೂ ಮಹೇಶ ಜೋಶಿ ಅವರು ಮಂಡ್ಯಕ್ಕೆ ಒಮ್ಮೆಯೂ ಕಾಲಿಟ್ಟಿಲ್ಲ. ಸಮ್ಮೇಳನಕ್ಕೆ ಬಿಡುಗಡೆಯಾದ 30 ಕೋಟಿ ಅನುದಾನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ 2.50 ಕೋಟಿ ನೀಡಲಾಗಿತ್ತು. ಇದರ ಖರ್ಚು-ವೆಚ್ಚದ ಲೆಕ್ಕವನ್ನು ಇದುವರೆಗೆ ಜೋಶಿಯವರು ಕೊಟಿಲ್ಲ. ಇನ್ನು ಏಪ್ರಿಲ್‌ನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಖರ್ಚು-ವೆಚ್ಚಗಳ ವಿವರ ನೀಡುವ ಸಚಿವರ ಪತ್ರಿಕಾಗೋಷ್ಠಿಗೂ ಅವರು ಬಂದಿರಲಿಲ್ಲ. ಹೀಗಾಗಿ ಸ್ಮರಣ ಸಂಚಿಕೆ ಕಾರ್ಯಕ್ರಮಕ್ಕೆ ಬಂದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಎಚ್ಚರಿಕೆ ನೀಡಿದ್ದರು. ಈ…

Read More

ಶಿವಮೊಗ್ಗ : ರಾಜ್ಯಕ್ಕೆ ಅತಿಹೆಚ್ಚು ವಿದ್ಯುತ್ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯ ತುಂಬಿರುವುದು ರಾಜ್ಯದಲ್ಲಿ ಮಳೆಬೆಳೆ ಸಮೃದ್ದವಾಗಿ ಆಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಲಿಂಗನಮಕ್ಕಿಗೆ ಜಲಾಶಯಕ್ಕೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದು ಅರ್ಥವಿಲ್ಲದ ಮಾತು. ಎಲ್ಲರೂ ಒಂದಲ್ಲ ಒಂದು ದಿನ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದ ಕ್ರೆಸ್ಟ್ಗೇಟ್ ತೆರೆದು, ಶರಾವತಿ ನದಿ ನೀರಿಗೆ ಪುಷ್ಪವೃಷ್ಟಿ ಮಾಡಿ ಮಾತನಾಡಿದಂತ ಅವರು, ಈ ಸ್ಥಳಕ್ಕೆ ಬಂದಾಗ ನಮ್ಮ ಪೂರ್ವಿಕರು ಇಂತಹದ್ದೊಂದು ಆಣೆಕಟ್ಟು ಕಟ್ಟಿದ್ದಾರಲ್ಲಾ ಎನ್ನುವುದು ನೆನಪಿಸಿಕೊಳ್ಳಬೇಕು. ಈತ ಇಂತಹ ನಿರ್ಮಾಣ ಕಷ್ಟಸಾಧ್ಯ. ಲಿಂಗನಮಕ್ಕಿ ಜಲಾಶಯದ ಮೇಲೆ ಎಲ್ಲರೂ ನಿಂತು ಸಂಭ್ರಮಿಸುವುದು ಶಾಶ್ವತವಾಗಿ ಇರಬೇಕು. ಬಂಗಾರಪ್ಪ ಅವರ ಆಶಯ ಸಹ ಅದೇ ಆಗಿತ್ತು. ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣ ಸಂದರ್ಭದಲ್ಲಿ ಹೆಚ್ಚು ಪರಿಸರ ನಾಶವಾಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ…

Read More

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೆ ಆರ್ ಮಾರ್ಕೆಟ್ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ತಂದೆ ಜೊತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(10) ಸಾವನ್ನಪ್ಪಿದ್ದಾರೆ. ಜಿಎಂ ಪಾಳ್ಯದ ನಿವಾಸಿಯಾಗಿರುವ ಪೂಜಾರಿ ದಿಲೀಪ್ ಕುಮಾರ್ ಜೊತೆಗೆ ಪುತ್ರ ಶಬರೀಶ್ ತೆರಳುತ್ತಿದ್ದರು. ಮಗನ ಜೊತೆಗೆ ಕೆ ಆರ್ ಮಾರ್ಕೆಟ್ ಗೆ ದಿಲೀಪ್ ಕುಮಾರ್ ತೆರಳಿದ್ದರು. ಈ ವೇಳೆ ಬಸ್ಸಿಗೆ ಬಿಎಂಟಿಸಿ ಬಸ್ ಟಚ್ ಆಗಿದೆ. ಈ ಸಂದರ್ಭದಲ್ಲಿ ಪುತ್ರ ಶಬರೀಶ್ ಕೆಳಗೆ ಬಿದ್ದಿದ್ದಾನೆ. ಅವರ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://kannadanewsnow.com/kannada/dharmasthala-case-is-a-sponsored-attack-on-hindu-religious-beliefs-prahlad-joshi/ https://kannadanewsnow.com/kannada/good-news-for-farmers-application-invitation-for-dairy-farming-a-subsidy-of-1-25-lakh-will-be-available/

Read More

ಬೆಂಗಳೂರು: ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ ಈ ಧರ್ಮಸ್ಥಳ ಪ್ರಕರಣ ಎಂಬುದು ಈಗ ಬಹಿರಂಗಗೊಂಡಿದೆ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ಧಾರ್ಮಿಕತೆಯ ಮೇಲೆ ದಾಳಿ ನಡೆಸಿ, ಪುರಾತನವಾದ, ಪ್ರಸಿದ್ಧ ಹಿಂದೂ ದೇವಾಲಯದ ವಿರುದ್ಧ ಇಲ್ಲ-ಸಲ್ಲದ ಷಡ್ಯಂತ್ರದ ಟೂಲ್‌ಕಿಟ್ ಬಳಸಿಕೊಂಡಿತು ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಆತುರದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹಿನ್ನೆಲೆ ಪರಿಶೀಲನೆ ಮಾಡದೇ, ಏಕಾಏಕಿ ದೊಂಬರಾಟಕ್ಕೆ ದಾರಿ ಮಾಡಿಕೊಟ್ಟಿದ್ದು ಐತಿಹಾಸಿಕ ದುರಂತ. ಮುಖವಾಡ ಧರಿಸಿದ ವ್ಯಕ್ತಿಯಿಂದ ಹಿಡಿದು ಪ್ರಾಯೋಜಿತ ಯೂಟ್ಯೂಬರ್‌ಗಳವರೆಗೆ, ಯಾವುದೇ ಸತ್ಯಾಸತ್ಯತೆಗಳನ್ನು ಪರಿಶೀಲಿಸದೇ, ಧರ್ಮಸ್ಥಳದ ಪವಿತ್ರ್ಯವನ್ನು ಹಾಳುಗೆಡವಿ, 15 ದಿನಗಳ ಕಾಲ ಮಾಧ್ಯಮಗಳಿಗೆ ಸರ್ಕಸ್ ಆಗಿ ಬಿಂಬಿಸಲಾಗಿದೆ ಎಂದಿದ್ದಾರೆ. https://twitter.com/JoshiPralhad/status/1959606614979231954 ಧಾರ್ಮಿಕ ನಂಬಿಕೆ ಎಂದೆಂದಿಗೂ ವೈಯಕ್ತಿಕ, ಆದರೆ, ಆಡಳಿತದಲ್ಲಿ ಸಮತೋಲನ ಪ್ರಾಮುಖ್ಯ ವಹಿಸುತ್ತದೆ. ಅಸ್ಪಷ್ಟತೆಯ ಕಾಂಗ್ರೆಸ್ ಸರ್ಕಾರದಿಂದಲೇ ಇಷ್ಟು ರಾದ್ದಾಂತ ಸೃಷ್ಟಿಯಾಗಿದೆ. ಹೆಸರು ಹಾಳು ಮಾಡಿದ ಬಳಿಕ, ಆರೋಪಿಗಳನ್ನು ಬಂಧಿಸುವ…

Read More

ಬಿಹಾರ: “ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಬಿಹಾರದವರೆಗೆ ಧ್ವನಿ ಎತ್ತಿರುವ ವಿಚಾರದ ಬಗ್ಗೆ ಇಡೀ ದೇಶವೇ ಚರ್ಚಿಸುತ್ತಿದೆ. ರಾಹುಲ್ ಗಾಂಧಿ ಅವರು ತಮಗಾಗಿ ಈ ಹೋರಾಟ ಮಾಡುತ್ತಿಲ್ಲ. ಸಂವಿಧಾನದತ್ತವಾಗಿ ದೇಶದ ಜನಸಾಮಾನ್ಯರಿಗೆ ಸಿಕ್ಕಿರುವ ಹಕ್ಕಿನ ರಕ್ಷಣೆಗೆ ಹೋರಾಡುತ್ತಿದ್ದಾರೆ” ಎಂದು ತಿಳಿಸಿದರು. “ನಮ್ಮ ರಾಜ್ಯದಲ್ಲಿ ಏನಾಗಿದೆ ಎಂದು ನನಗೆ ಗೊತ್ತಿದೆ. ಮತದಾರರು ತಮ್ಮ ಹಕ್ಕನ್ನು ಪಡೆಯಲು ಅವಕಾಶ ಮಾಡಿಕೊಟ್ಟಿರುವ ಸುಪ್ರೀಂ ಕೋರ್ಟ್ ಬಗ್ಗೆ ನನಗೆ ಹೆಮ್ಮೆ ಇದೆ. ಬಿಹಾರದ ಜನ ಬದಲಾವಣೆ ಬಯಸಿದ್ದಾರೆ. ಮಹಾಘಟಬಂಧನ ಬಯಸಿದ್ದಾರೆ. ಇಲ್ಲಿನ ಯುವಕರು ಕೂಡ ಬೀದಿಗಿಳಿದು ಬೆಂಬಲ ನೀಡುತ್ತಿದ್ದಾರೆ. ಯುವಕರು ಬಹು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡುತ್ತಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು. “ನಮ್ಮ ಮಹಾಘಟಬಂಧನ ನೀಡಿರುವ ಗ್ಯಾರಂಟಿಗಳು ಜನರಿಗೆ…

Read More

ಪಶ್ಚಿಮ ಬಂಗಾಳ: ಇಲ್ಲಿನ ಉತ್ತರ 24 ಪರಗಣ ಜಿಲ್ಲೆಯಲ್ಲಿ ವಸತಿ ಪ್ರದೇಶದಲ್ಲಿ ಸಾರ್ವಜನಿಕವಾಗಿ ಮದ್ಯ ಸೇವಿಸುವುದನ್ನು ಆಕ್ಷೇಪಿಸಿದ ಶಿಕ್ಷಕನ ಮೇಲೆ ಜನರ ಗುಂಪೊಂದು ಕ್ರೂರವಾಗಿ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ. ನಿರುಪಮ್ ಪಾಲ್ ಎಂದು ಗುರುತಿಸಲಾದ ಕಲಾ ಶಿಕ್ಷಕ ಮದುವೆ ಸಮಾರಂಭದಿಂದ ಮೋಟಾರ್ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ಕೆಲವು ಯುವಕರು ಮದ್ಯ ಸೇವಿಸುತ್ತಿರುವುದನ್ನು ಗಮನಿಸಿದ್ದಾರೆ. ಇದನ್ನು ಶಿಕ್ಷಕ ಆಕ್ಷೇಪಿಸಿದ್ದಾರೆ. ಈ ವೇಳೆ ಯುವಕರು ರಸ್ತೆಯಲ್ಲಿಯೇ ಆತನನ್ನು ಥಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ, ಕುಡಿದ ಮತ್ತಿನಲ್ಲಿ ಕಾಣಿಸಿಕೊಂಡು, ಯಾರಿಗಾದರೂ ಕರೆ ಮಾಡಲು ಮುಂದಾದಾಗ, ಆತನ ಮುಖಕ್ಕೆ ಕಪಾಳಮೋಕ್ಷ ಮಾಡಿ, ತನ್ನ ಮೊಬೈಲ್ ಫೋನ್ ಅನ್ನು ಎಸೆದಿದ್ದಾನೆ. ಬಲಿಪಶು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದ ನಂತರ, ಒಬ್ಬ ಮಹಿಳೆ ಸೇರಿದಂತೆ ಇತರರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೀಡಿಯೋ ಸೋಷಿಯಲ್ ಮೀಡೀಯಾದಲ್ಲಿ ವೈರಲ್ ಆಗಿದೆ. https://twitter.com/keyakahe/status/1959266494728245592 ವೀಡಿಯೊದಲ್ಲಿ ಆರೋಪಿಗಳಲ್ಲಿ ಒಬ್ಬ ದಾಳಿಯನ್ನು ತಡೆಯಲು ಮಧ್ಯಪ್ರವೇಶಿಸುತ್ತಿರುವುದನ್ನು ತೋರಿಸಲಾಗಿದೆ. ಆದರೆ ಇತರರು ಅವನಿಗೆ ಹೊಡೆಯುತ್ತಲೇ ಇದ್ದರು. “ನನ್ನ…

Read More

ಮಾಸ್ಕೋ: ಕೈವ್‌ನ 34 ನೇ ಸ್ವಾತಂತ್ರ್ಯ ದಿನಾಚರಣೆಯೊಂದಿಗೆ ಪಶ್ಚಿಮ ಕುರ್ಸ್ಕ್ ಪ್ರದೇಶದ ಪರಮಾಣು ಸ್ಥಾವರದಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವಾದ ಡ್ರೋನ್ ದಾಳಿಯನ್ನು ಉಕ್ರೇನ್ ನಡೆಸಿದೆ ಎಂದು ರಷ್ಯಾ ಭಾನುವಾರ ಆರೋಪಿಸಿದೆ. ರಷ್ಯಾದ ಅಧಿಕಾರಿಗಳ ಪ್ರಕಾರ, ರಾತ್ರೋರಾತ್ರಿ ಹಲವಾರು ವಿದ್ಯುತ್ ಮತ್ತು ಇಂಧನ ಸೌಲಭ್ಯಗಳನ್ನು ಗುರಿಯಾಗಿಸಲಾಯಿತು. ಪರಮಾಣು ಸ್ಥಾವರದಲ್ಲಿನ ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಯಿತು ಮತ್ತು ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ದಾಳಿಯಲ್ಲಿ ಟ್ರಾನ್ಸ್‌ಫಾರ್ಮರ್ ಹಾನಿಗೊಳಗಾಗಿದೆ ಎಂದು ಸ್ಥಾವರದ ಪತ್ರಿಕಾ ಸೇವೆ ತಿಳಿಸಿದೆ, ಆದರೆ ವಿಕಿರಣ ಮಟ್ಟಗಳು ಸಾಮಾನ್ಯ ಮಿತಿಯೊಳಗೆ ಉಳಿದಿವೆ. “ಮಿಲಿಟರಿ ಚಟುವಟಿಕೆಯಿಂದಾಗಿ” ಸ್ಥಾವರಗಳಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಧ್ಯಮ ವರದಿಗಳ ಬಗ್ಗೆ ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ತಿಳಿಸಿದೆ, ಆದರೆ ಸ್ವತಂತ್ರ ದೃಢೀಕರಣವನ್ನು ಪಡೆದಿಲ್ಲ. ಅದರ ಮಹಾನಿರ್ದೇಶಕ ರಾಫೆಲ್ ಮರಿಯಾನೋ ಗ್ರೋಸಿ “ಪ್ರತಿಯೊಂದು ಪರಮಾಣು ಸೌಲಭ್ಯವನ್ನು ಯಾವಾಗಲೂ ರಕ್ಷಿಸಬೇಕು” ಎಂದು ಹೇಳಿದರು. ಆಪಾದಿತ ದಾಳಿಯ ಬಗ್ಗೆ ಉಕ್ರೇನ್ ತಕ್ಷಣ ಪ್ರತಿಕ್ರಿಯಿಸಲಿಲ್ಲ. ಪ್ರಮುಖ ಇಂಧನ ರಫ್ತು ಟರ್ಮಿನಲ್‌ ಇರುವ ರಷ್ಯಾದ ಲೆನಿನ್‌ಗ್ರಾಡ್…

Read More

ತುಮಕೂರು: ಇಂದು ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಮತ್ತೆ ಕೆ.ಎನ್ ರಾಜಣ್ಣ ಟೀಂ ಭರ್ಜರಿ ಗೆಲುವು ಸಾಧಿಸಿದೆ. ಇಂದು ನಡೆದಂತ 6 ತಾಲ್ಲೂಕಿನ ಚುನಾವಣೆಯಲ್ಲೂ ಕೆ.ಎನ್ ರಾಜಣ್ಣ ಬೆಂಬಲಿಗರೇ ಗೆಲುವು ಸಾಧಿಸಿದ್ದಾರೆ. ಇಂದು ನಡೆದಂತ ತುಮಕೂರು ಡಿಸಿಸಿ ಬ್ಯಾಂಕಿನ 6 ತಾಲ್ಲೂಕುಗಳ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಎಲ್ಲಾ ಆರು ಕಡೆಯಲ್ಲಿ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು ವಿಜಯ ಸಾಧಿಸಿದ್ದಾರೆ. ಹೀಗಾಗಿ ಬರೋಬ್ಬರಿ ಐದು ಬಾರಿಗೆ ಕೆ.ಎನ್ ರಾಜಣ್ಣ ಅವರು ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಪಟ್ಟಕ್ಕೇರಲಿದ್ದಾರೆ. ಅಂದಹಾಗೇ ಈಗಾಗಲೇ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಐದು ಬಾರಿ ಸತತ 25 ವರ್ಷಗಳ ಕಾಲ ಹಿಡಿತ ಹೊಂದಿದ್ದರು. ಇದೀಗ 6 ತಾಲ್ಲೂಕಿನ ಚುನಾವಣೆಯಲ್ಲಿ ಎಲ್ಲಾ ಕಡೆಯಲ್ಲೂ ಕೆ.ಎನ್ ರಾಜಣ್ಣ ಬೆಂಬಲಿಗರೇ ಗೆಲುವು ಸಾಧಿಸಿದ್ದರಿಂದ, ಆರನೇ ಬಾರಿಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎನ್ ರಾಜಣ್ಣ ಗದ್ದುಗೆ ಏರಲಿದ್ದಾರೆ. ಅಂದಹಾಗೇ ಎ ವರ್ಗದಿಂದ ತುಮಕೂರು ತಾಲ್ಲೂಕು ಚುನಾವಣೆಗೆ ಕೆ.ಎನ್…

Read More

ಧರ್ಮಸ್ಥಳ: ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಅವರನ್ನು ಸತತ ಐದು ಗಂಟೆಗಳ ಕಾಲ ವಿಚಾರಣೆಯನ್ನು ಪೊಲೀಸರು ನಡೆಸಿದರು. ಇಂದಿನ ವಿಚಾರಣೆ ಅಂತ್ಯಗೊಂಡಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಇಂದು ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರನ್ನು ವಿಚಾರಣೆ ನಡೆಸಲಾಯಿತು. ಬೆಳ್ತಂಗಡಿ ಪಿಎಸ್ಐ ಸುಬ್ಬಾಪುರ್ ಮಠ್ ಅವರಿಂದ ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಬಳಿಕ, ಬೆನಕ ಆಸ್ಪತ್ರೆಯಲ್ಲಿ ಗಲಾಟೆ ಕೇಸ್ ಸಂಬಂಧ ವಿಚಾರಣೆ ನಡೆಸಿದ್ದಾಗಿ ತಿಳಿದು ಬಂದಿದೆ. ಅಲ್ಲದೇ ಖಾಸಗಿ ವಾಹಿನಿ ವರದಿಗಾರರ ಮೇಲೆ ಹಲ್ಲೆ ಕೇಸ್ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ. ಇದಕ್ಕೆ ಕಾರಣ ದೂರಿನಲ್ಲಿ ಸಮೀರ್ ಆಸ್ಪತ್ರೆಗೆ ಬಂದಿದ್ದ ಬಗ್ಗೆ ಉಲ್ಲೇಖಿಸಲಾಗಿದೆ. ಇಂದು ಎಐ ವೀಡಿಯೋ ಕೇಸ್, ವರದಿಗಾರನ ಮೇಲಿನ ಹಲ್ಲೆ ಕೇಸ್,…

Read More

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷಾ ಪೂರ್ವ ವಸತಿಯುತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Sub-Inspector ಪರೀಕ್ಷಾ ಪೂರ್ವ ವಸತಿಯುತ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12.09.2025 ಸಂಜೆ 6:00 ಆಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಸಮುದಾಯದ ಅಭ್ಯರ್ಥಿಗಳು https://swdservices.karnataka.gov.in/petccoaching/PSIHome.aspx ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸುವಂತೆ ಮನವಿ ಮಾಡಿದೆ. https://twitter.com/SWDGoK/status/1959521979440255418 https://kannadanewsnow.com/kannada/drdo-successfully-tests-home-grown-air-defence-system/ https://kannadanewsnow.com/kannada/big-news-when-the-time-comes-deputy-chief-minister-dk-shivakumar-will-become-cm-minister-chaluvarayaswamys-statement/

Read More