Author: kannadanewsnow09

ಚಿತ್ರದುರ್ಗ : ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ವ್ಯಾಪಾರಿಗಳು ಪ್ರತ್ಯೇಕವಾಗಿ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಪುರಸಭೆಯಿಂದ ಅರ್ಜಿ ನಮೂನೆ ಪಡೆದು, ಅಗತ್ಯ ಮಾಹಿತಿಗಳೊಂದಿಗೆ, ಅರ್ಜಿ ಶುಲ್ಕ ರೂ.500/- ಆಗಿದ್ದು, 1 ವರ್ಷ ಚಾಲ್ತಿಯಲ್ಲಿರುತ್ತದೆ. ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬಾಡಿಗೆ ಕರಾರು ಪತ್ರ, ಉದ್ಯಮ ಪರವಾನಿಗೆ, ಉದ್ಯಮ ಫೋಟೋ ಹಾಗೂ ಮಾಲೀಕರ ಫೋಟೋ ದಾಖಲೆಗಳು ಬೇಕು. ಡಿ.15ರ ನಂತರ ಪ್ರತ್ಯೇಕ ಪರವಾನಿಗೆ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ದಂಡ ವಿಧಿಸುವುದಲ್ಲದೆ ಉದ್ದಿಮೆ ಪರವಾನಿಗೆಯನು ಸಹ ರದ್ದುಪಡಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/sc-youth-of-the-state-applications-invited-for-training-camp-on-folk-art-forms/ https://kannadanewsnow.com/kannada/breaking-lok-sabha-rajya-sabha-to-discuss-constitution-from-december-13-all-party-meeting-ends-logjam/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/

Read More

ಚಿತ್ರದುರ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಅನುಷ್ಠಾನಗೊಳಿಸಿರುವ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿ.08 ಅರ್ಜಿ ಸಲ್ಲಿಸಲು ಕೊನೆಯ ದಿನ. ಎಸ್‍ಎಸ್‍ಎಲ್‍ಸಿ ಪಾಸ್, ಫೇಲ್ ಆದ 16 ರಿಂದ 40 ವರ್ಷ ವಯೋಮಿತಿಯವರಿಗೆ ಡಿಸೆಂಬರ್ 10 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ನಡೆಯಲಿದೆ. ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿಯ ಯುವ ಜನರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಇದೇ ಡಿ.08ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ತರಬೇತಿ ಶಿಬಿರಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಈ ಶಿಬಿರದಲ್ಲಿ ಭಾಗಹಿಸುವವರಿಗೆ ಸಾಮಾನ್ಯ ವಸತಿ ವ್ಯವಸ್ಥೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635ಗೆ ಮತ್ತು ಸಹಾಯವಾಣಿ ಸಂಖ್ಯೆ 155265 ಹಾಗೂ ಮೊಬೈಲ್ 9731251411 ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ…

Read More

ಬೆಂಗಳೂರು : ಕುಣಿಗಲ್ ಶಾಸಕ ಡಾ. ಎಚ್ ಡಿ ರಂಗನಾಥ್ ಅವರ ತಂದೆ ಡಾ. ಎಚ್ ಆರ್ ದೊಡ್ಡಯ್ಯ ಅವರು ದೀರ್ಘಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೃತರಿಗೆ ಪತ್ನಿ ಲಕ್ಷ್ಮಮ್ಮ, ಪುತ್ರರಾದ ಶಾಸಕ ಡಾ. ಎಚ್ ಡಿ ರಂಗನಾಥ್, ಡಾ. ಎಚ್ ಡಿ ರಾಮಚಂದ್ರಪ್ರಭು, ಎಚ್ ಡಿ ಶ್ರೀನಿವಾಸ್, ಸೊಸೆಯಂದಿರು, ಮೊಮ್ಮಕ್ಕಳು ಇದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದ ಆಲ್ಕೆರೆ ಹೊಸಹಳ್ಳಿ ಗ್ರಾಮದ ಮೂಲದವರಾದ ಡಾ. ಎಚ್ ಆರ್ ದೊಡ್ಡಯ್ಯ ಅವರು ಅರೇಳು ತಿಂಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಇಂದು ಸಂಜೆ 7 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು. ದೊಡ್ಡಯ್ಯ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಕುಣಿಗಲ್ ನ ಸ್ವಗ್ರಾಮ ಆಲ್ಕೆರೆ ಹೊಸಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಸಿಎಂ, ಡಿಸಿಎಂ ಸಂತಾಪ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ…

Read More

ಹಾಸನ: “ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಪ್ರಚಾರ ಮಾಡಲು ಹಾಸನದಲ್ಲಿ ಕೆಪಿಸಿಸಿ ಹಾಗೂ ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಜನಕಲ್ಯಾಣ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹಾಸನದಲ್ಲಿ ಡಿಸೆಂಬರ್ 5 ರಂದು ಸಮಾವೇಶ ನಡೆಯಲಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಈ ಸಮಾವೇಶ ಕೆಪಿಸಿಸಿ ನೇತೃತ್ವದಲ್ಲಿ ನಡೆಯುತ್ತಿದೆ. ಪಕ್ಷಕ್ಕೆ ಬೆಂಬಲವಾಗಿ ನಿಂತಿರುವ ಸ್ನೇಹಿತರು, ಸ್ವಾಭಿಮಾನಿಗಳ ಒಕ್ಕೂಟಗಳು ಕೂಡ ಮುಖ್ಯಮಂತ್ರಿಗಳು ಹಾಗೂ ಸರ್ಕಾರ ಮಾಡುತ್ತಿರುವ ಕೆಲಸಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ನಿರ್ಧರಿಸಿದ್ದು, ನಮ್ಮ ಜತೆ ಕೈ ಜೋಡಿಸಿರುವ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರ ಬದುಕು ಬದಲಾವಣೆ ಹಾಗೂ ಕಲ್ಯಾಣಕ್ಕೆ ಈ ಸಮಾವೇಶ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ವಿರೋಧ ಪಕ್ಷಗಳ ಟೀಕೆಗಳು ಸತ್ತಿವೆ, ಜನರೇ ಉತ್ತರ ಕೊಟ್ಟಿದ್ದಾರೆ: “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಾ…

Read More

ಮಂಡ್ಯ: ಮೂರನೇ ಬಾರಿಗೆ ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.‌ ನಿರ್ಮಲಾನಂದನಾಥ ಸ್ವಾಮೀಜಿ ಕರೆಕೊಟ್ಟರು. ಡಿಸೆಂಬರ್ ೨೦,೨೧,೨೨ರಂದು ಮೂರು ದಿನಗಳ ಕಾಲ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕುರಿತಂತೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸ್ವಾಗತ ಸಮಿತಿ ಸಭೆಯ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಮಂಡ್ಯ ಜಿಲ್ಲೆಯ ಆಚಾರ ವಿಚಾರ, ಇಲ್ಲಿನ ಪ್ರೇಕ್ಷಣೀಯ, ಐತಿಹಾಸಿಕ ಸ್ಥಳಗಳ ಮಹತ್ವ, ಐತಿಹ್ಯವನ್ನು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾರುವ ಅವಕಾಶ ಇದೆ. ಇದಕ್ಕಾಗಿ ಒಂದು ಕ್ರಿಯಾಯೋಜನೆ ರೂಪಿಸಿ ಮಂಡ್ಯಕ್ಕೆ ತನ್ನದೇ ಆದ ಐಡೆಂಟಿಟಿ ಸಿಗುವಂತ ಕೆಲಸವಾಗಬೇಕು ಎಂದು ಸ್ವಾಮೀಜಿಗಳು ಸಲಹೆ ನೀಡಿದರು. ಸಮ್ಮೇಳನದ ಪೂರ್ವ ಸಿದ್ಧತೆಗಳ ಮಾಹಿತಿ ಪಡೆದ ಸ್ವಾಮೀಜಿಗಳು, ಇದು ನಮ್ಮ ಹಬ್ಬ. ಮನೆಯ ಹಬ್ಬದಂತೆ ಆಚರಣೆ ಮಾಡಬೇಕು. ಜಿಲ್ಲೆಯ…

Read More

ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು…

Read More

ಮಂಡ್ಯ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಡಿಸೆಂಬರ್ 3 ರಂದು ಸಹ ನಿರಂತರ ಮಳೆ ಸುರಿಯುವುದಾಗಿ ಹಾಗೂ (yellow alert) ನ ಮುಂಜಾಗ್ರತಾ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆಯ ಹಿನ್ನಲೆಯಲ್ಲಿ “ಡಿಸೆಂಬರ್ 3 ರಂದು ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ)* ಜಿಲ್ಲಾಧಿಕಾರಿ ಡಾ: ಕುಮಾರ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ. ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿರುತ್ತಾರೆ. ವರದಿ: ಗಿರೀಶ್ ಗೌಡ, ಮಂಡ್ಯ https://kannadanewsnow.com/kannada/davanagere-the-election-slated-for-the-town-planning-and-reforms-standing-committee-elections-has-been-fixed/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/

Read More

ದಾವಣಗೆರೆ : ಮಹಾನಗರ ಪಾಲಿಕೆಯ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯಲ್ಲಿ ಖಾಲಿ ಇರುವ ಒಂದು ಸದಸ್ಯರ ಸ್ಥಾನಕ್ಕೆ ಸದಸ್ಯರನ್ನು ಚುನಾಯಿಸಲು ಡಿ.5 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಚುನಾವಣಾ ವೇಳಾ ಪಟ್ಟಿ: ಡಿ.5 ರಂದು ನಾಮಪತ್ರ ಸ್ವೀಕರಿಸುವ ದಿನ. ಪಾಲಿಕೆಯ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ಹಾಜರಾತಿ ಪಡೆದ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು. ಉಮೇದುವಾರರ ಪಟ್ಟಿ ಘೋಷಣೆ. ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ. ಚುನಾವಣೆ ಅಗತ್ಯವಿದ್ದಲ್ಲಿ ಮತಪತ್ರಗಳ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಗುವುದು. ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪಲಿಕೆಯ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ. https://kannadanewsnow.com/kannada/good-news-for-sugarcane-growers-in-the-state-rs-3151-per-metric-tonne-fixed/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/

Read More

ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ ವರದಿಗಳ ಪ್ರಕಾರ ಕಳೆದ ವರ್ಷ ನುರಿಸಲಾದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ ಆಧಾರದ ಮೇಲೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ರೂ.3151/- ಗಳ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ. ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಚುನಾವಣೆಯ ವೇಳಾಪಟ್ಟಿ ದಾವಣಗೆರೆ ಮಹಾನಗರ ಪಾಲಿಕೆಯ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯಲ್ಲಿ ಖಾಲಿ ಇರುವ ಒಂದು ಸದಸ್ಯರ ಸ್ಥಾನಕ್ಕೆ ಸದಸ್ಯರನ್ನು ಚುನಾಯಿಸಲು ಡಿ.5 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಚುನಾವಣಾ ವೇಳಾ ಪಟ್ಟಿ: ಡಿ.5 ರಂದು ನಾಮಪತ್ರ ಸ್ವೀಕರಿಸುವ ದಿನ. ಪಾಲಿಕೆಯ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ಹಾಜರಾತಿ ಪಡೆದ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ…

Read More

ಧಾರವಾಡ : ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಮತ್ತು ನರೇಂದ್ರ ಗ್ರಾಮಪಂಚಾಯಿತಿ ಕೇಂದ್ರ, ಅಳ್ನಾವರ ತಾಲೂಕಿನ ಅರವಟಗಿ ಗ್ರಾಮಪಂಚಾಯಿತಿ ಕೇಂದ್ರ, ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತ್ತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಗ್ರಾಮ ಒನ ಕೇಂದ್ರ ಸ್ಥಾಪಿಸಲು ಕನಿಷ್ಟ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್, ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆ ಇರಬೇಕು. ಇಲಾಖೆ ಕಾಲ ಕಾಲಕ್ಕೆ ಸೂಚಿಸುವ ಮಾನದಂಡಗಳಿಗೆ ಬದ್ಧರಾಗಿರುವವರು ಡಿಸೆಂಬರ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9019026687, 9019026697, 9019026690, 9019027696 ಗೆ ಸಂಪರ್ಕಿಸಬಹುದು ಎಂದು ಅಪರ…

Read More