Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ. ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಇವಿ ಚಾರ್ಚಿಂಗ್ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು. ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್ ಸ್ಟೇಷನ್ಗಳಿವೆ. 5,765 ಇವಿ ಚಾರ್ಜಿಂಗ್ ಸ್ಟೇಷನ್ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದಿಲ್ಲಿ- 1,941 ಚಾರ್ಜಿಂಗ್ ಸ್ಟೇಷನ್ ಗಳೊಂದಿಗೆ ನಂತರದ ಸ್ಥಾನದಲ್ಲಿವೆ. ದೇಶದ ಪ್ರಮುಖ ನಗರಗಳಲ್ಲಿ ಇವಿ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೂ, ರಾಜ್ಯ ಅದರಲ್ಲೂ…
ಬೆಂಗಳೂರು: ನಗರದ ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಪಶ್ಚಿಮ ವಲಯ ವ್ಯಾಪ್ತಿಯಲ್ಲಿಂದು ಗೋಡನ್ ಹಾಗೂ ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 5500 ಕೆ.ಜಿ(5.5 ಮೆ.ಟ) ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ಜಪ್ತಿ ಮಾಡಿ 45,000 ದಂಡ ವಿಧಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಇಂದು 3 ವಲಯಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಬೊಮ್ಮನಹಳ್ಳಿ ವಲಯ: ಬೊಮ್ಮನಹಳ್ಳಿ ವಲಯ ಬೆಂಗಳೂರು ದಕ್ಷಿಣ ಸಿಂಗಸಂದ್ರ ವ್ಯಾಪ್ತಿಯಲ್ಲಿ ಇಂದು ಗೋಡನ್ ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ 4,500 ಕೆ.ಜಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ವಶಕ್ಕೆ ಪಡೆದು, ಗೋಡನ್ ಮಾಲೀಕರಿಗೆ 25000 ರೂ. ದಂಡ ವಿಧಿಸಲಾಗಿದೆ. ಮತ್ತೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟೆಚ್ಚರಿಕೆ ನೀಡಲಾಗಿದೆ. ದಾಸರಹಳ್ಳಿ ವಲಯ: ದಾಸರಹಳ್ಳಿ ವಲಯ ರಾಜ್ ಗೋಪಾಲ್ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್…
ಹಾವೇರಿ: ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಮಾಡಿ ರಾಜಕೀಯವಾಗಿ ಬೆಳೆಸಿದ ದೇವೇಗೌಡರಿಗೆ ಕೈಕೊಟ್ಟು ನಿರಂತರ ವಿರೋಧಿಸಿರುವ ಕಾಂಗ್ರೆಸ್ ಜೋಡಿ ಕೈ ಜೋಡಿಸಿರುವ. ಸಿಎಂ ಸಿದ್ದರಾಮಯ್ಯ ನಿಜವಾದ ಶಕುನಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ದ ಮಾಡಿರುವ ಆರೋಪಕ್ಕೆ ಟ್ವಿಟ್ ಮೂಲಕ ತಿರುಗೇಟು ನೀಡಿರುವ ಅವರು, ಜೆಡಿಎಸ್ ನಿಂದ ಹೊರ ಬಂದಾಗ ಪ್ರಗತಿಪರ ಜನತಾದಳ ಪಕ್ಷದ ಅಡಿಯಲ್ಲಿ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ಮಾಡಿ ಅವರ ಅಸ್ತಿತ್ವ ಉಳಿಸಿದ್ದು ಇದೆ ಬಸವರಾಜ ಬೊಮ್ಮಾಯಿ ಎನ್ನುವುದನ್ನು ಮರೆತಿದ್ದಾರೆ. ಸಿದ್ದರಾಮಯ್ಯ ಅವರು ಅಹಿಂದ ಮಾಡಿದಾಗ ಅವರ ಜೊತೆಗೆ ಬಹಿರಂಗವಾಗಿ ಗಟ್ಟಿಯಾಗಿ ನಿಂತ ವೀರಶೈವ ಸಮುದಾಯದ ನಾಯಕ ನಾನೊಬ್ಬನೇ. ಅವರು 2006 ರಲ್ಲಿ ಜೆಡಿಎಸ್ ಗೆ ರಾಜಿನಾಮೆ ಕೊಟ್ಟು ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ನಾನು ಯಾವ ರೀತಿ ಸಹಾಯ ಮಾಡಿದ್ದೇನೆ ಎಂದು ನೆನಪಿಸಿಕೊಳ್ಳಲಿ ಎಂದು ಹೇಳಿದ್ದಾರೆ.…
ದಾವಣಗೆರೆ : ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 6ರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್-01 ಎಸ್.ವಿ.ಟಿ ಫೀಡರ್ ವ್ಯಾಪ್ತಿಯ ಮಾಮಾಸ್ ಜಾಯಿಂಟ್ ರಸ್ತೆ, ವೈದ್ಯಕೀಯ ಬಾಲಕರ ಹಾಸ್ಟೆಲ್ ರೋಡ್, ಈಜುಕೋಳ, ಆಂಜನೇಯ ಬಡಾವಣೆ, ಭವಾನಿ ಪ್ಲೋರ್ ಮಿಲ್, ಡೆಂಟಲ್ ಕಾಲೇಜು ರಸ್ತೆ, ಗುಂಡಿ ಶಾಲೆ ಎಫ್-02 ಎಮ್.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು. ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಬಿ.ಟಿ.…
ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸದಸ್ಯರ ಸ್ಥಾನಗಳಿಗೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಹೆಬ್ಬಗೋಡಿ ನಗರ ಸಭೆ ವಾರ್ಡ್ ಸಂಖ್ಯೆ -27, ಆನೇಕಲ್ ಪುರಸಭೆ ವಾರ್ಡ್ ಸಂಖ್ಯೆ -22 ಮತ್ತು ಚಂದಾಪುರ ಪುರಸಭೆ ವಾರ್ಡ್ ಸಂಖ್ಯೆ -21ರಲ್ಲಿ ಉಪ ಚುನಾವಣೆ ನಡೆಯಲಿದ್ದು, ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಜಗದೀಶ.ಜಿ ಅವರು ತಿಳಿಸಿದ್ದಾರೆ. ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿರುವ ಹೆಬ್ಬಗೋಡಿ ನಗರ ಸಭೆ ವಾರ್ಡ್ ಸಂಖ್ಯೆ -27 ರಲ್ಲಿ ಸಾಮಾನ್ಯ (ಮಹಿಳೆ) ಮೀಸಲಾತಿ, ಆನೇಕಲ್ ಪುರಸಭೆ ವಾರ್ಡ್ ಸಂಖ್ಯೆ -22ರಲ್ಲಿ ಸಾಮಾನ್ಯ ಹಾಗೂ ಚಂದಾಪುರ ಪುರಸಭೆ ವಾರ್ಡ್ ಸಂಖ್ಯೆ -21ರಲ್ಲಿ ಸಾಮಾನ್ಯ (ಮಹಿಳೆ) ರವರಿಗೆ ಮೀಸಲಾತಿ ನಿಗದಿಪಡಿಸಲಾಗಿದೆ. ನವೆಂಬರ್ 04 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಿದ್ದು, ಅಭ್ಯರ್ಥಿಗಳು ನಾಮಪತ್ರಗಳನ್ನು ನವೆಂಬರ್ 11 (ಸೋಮವಾರ) ರೊಳಗೆ ಸಲ್ಲಿಸಬಹುದು. ನವೆಂಬರ್ 12 ರಂದು (ಮಂಗಳವಾರ) ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ನವೆಂಬರ್ 14 (ಗುರುವಾರ)…
ಬೆಂಗಳೂರು: : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರ ಹುದ್ದೆಗೆ ಅರ್ಥಶಾಸ್ತ್ರ, ಬ್ಯಾಂಕಿಂಗ್ , ಇತರೆ ವಿಭಾಗಗಳಲ್ಲಿ ಪದವೀಧರರು, ಸ್ನಾತಕೋತ್ತರ ಪದವಿ ಹೊಂದಿದವರಿಗೆ ಅದ್ಯತೆ. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆ ಕಂಪ್ಯೂಟರ್/ಐಟಿ ಇತ್ಯಾದಿಗಳಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ,…
ರಾಮನಗರ: ತಮ್ಮ ಆರೋಗ್ಯ ಹಾಗೂ ನಿಖಿಲ್ ಅವರ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಕಟುಕರಿಗೆ ಕಣ್ಣೀರು ಬರುವುದಿಲ್ಲ, ಹೃದಯವಿರುವ ಭಾವುಕ ಜೀವಿಗಳಿಗೆ ಮಾತ್ರ ಕಣ್ಣೀರು ಬರುತ್ತದೆ ಎಂದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ವಿರೂಪಾಕ್ಷಪುರ, ಕೊಡಂಬಹಳ್ಳಿ ಗ್ರಾಮಗಳಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಅವರು; ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾನು ಆಂಬುಲೆನ್ಸ್ ನಲ್ಲಿ ಬಂದಿಲ್ಲ ನನ್ನ ಆರೋಗ್ಯ ಚೆನ್ನಾಗಿದೆ. ನಾನು ಆಂಬುಲೆನ್ಸ್ ನಲ್ಲಿ ಬಂದಿಲ್ಲ, ವ್ಹೀಲ್ ಚೇರ್ ಮೇಲೆ ಬಂದಿಲ್ಲ. ನಾನು ನಿಮ್ಮೆಲ್ಲರ ಆಶೀರ್ವಾದದಿಂದ ಚೆನ್ನಾಗಿದ್ದೇನೆ. ಆರೋಗ್ಯವಾಗಿದ್ದೇನೆ. ಅದನ್ನು ತೋರಿಸಲು ಇಲ್ಲಿಗೆ ಬಂದಿದ್ದೇನೆ. ನೀವೇ ನನ್ನನ್ನು ನೋಡುತ್ತಿದ್ದೀರಿ, ಹೇಗೆ ಇದ್ದೇನೆ ಎಂದು ಗಮನಿಸುತ್ತಿದ್ದೀರಿ ಅಲ್ಲವೇ? ಎಂದು ಮಾಜಿ ಪ್ರಧಾನಿಗಳು ಹೇಳಿದರು. ಕಾಂಗ್ರೆಸ್ ನಾಯಕರು ನನ್ನ ಹೊರಗಿನವರು ಎನ್ನುತ್ತಿದ್ದಾರೆ. ನಾನು ಅವರಿಗೆ ಹೊರಗಿನವನು ಎಂದು ಈಗ ಅನ್ನಿಸುತ್ತಿದೆ. ಆದರೆ, ನಾನು ಈ ತಾಲ್ಲೂಕಿಗೆ…
ಸಂಡೂರು: “ಬಿಜೆಪಿ ಸರ್ಕಾರ ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಲೂಟಿ ಮಾಡಿತ್ತು. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಇಡೀ ಬಳ್ಳಾರಿ ಜಿಲ್ಲೆ ಜನ ಭಯದಿಂದ ಜೀವನ ಮಾಡುತ್ತಿದ್ದರು. ಈಗ ಜಿಲ್ಲೆ ಜನ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪರ ಶಿವಕುಮಾರ ಅವರು ತಿಮಲಾಪುರ, ಎಳುಬೆಂಜಿಯಲ್ಲಿ ಮಂಗಳವಾರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಆಡಳಿತ ಹೇಗಿತ್ತು ಎಂದು ನೀವು ನೋಡಿದ್ದೀರಿ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಹೊಡೆದರು. ಕೋವಿಡ್ ಸಮಯದಲ್ಲಿ ಯಾವುದೇ ಸಮುದಾಯಕ್ಕೆ ಬಿಜೆಪಿ ಸರ್ಕಾರ ನೆರವು ನೀಡಲಿಲ್ಲ. ನಿರ್ಮಲಾ ಸೀತರಾಮನ್ ಅವರು 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದರು. ಅದರಲ್ಲಿ ನಿಮಗೆ ಯಾವುದಾದರೂ ಬಂತಾ? ಬಡವರಿಗೆ ಸಹಾಯ ಮಾಡದಿದ್ದರೆ ಅಂತಹ ಸರ್ಕಾರ ಯಾಕೆ ಬೇಕು. ಕೋವಿಡ್ ಅಕ್ರಮದ ವರದಿ ಬಂದಿದೆ.…
ಶಿವಮೊಗ್ಗ: ಜಿಲ್ಲೆಯಲ್ಲಿ ಅರಣ್ಯ ಸಂಚಾರಿ ದಳದಿಂದ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಅಕ್ರಮವಾಗಿ ಚಿರತೆ ಉಗುರು, ಹಲ್ಲು ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಮಾಲು ಸಹಿತ ಬಂಧಿಸಲಾಗಿದೆ. ಮಡಿಕೇರಿಯ ಸಿಐಡಿ ಅರಣ್ಯ ಘಟಕದ ಪೊಲೀಸ್ ವರಿಷ್ಠಾಧಿಕಾರಿ ಎಸ್ ಎಸ್ ಕಾಶಿ ಅವರಿಗೆ ಚಿರತೆ ಹಲ್ಲು, ಉಗುರು ಸಾಗಿಸುತ್ತಿದ್ದಂತ ಖಚಿತ ಮಾಹಿತಿ ದೊರೆತಿತ್ತು. ಈ ಮಾಹಿತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಇನ್ಸ್ ಪೆಕ್ಟರ್ ವಿನಾಯಕ್ ಅವರಿಗೆ ನೀಡಿದ್ದರು. ಅವರ ಮಾರ್ಗದರ್ಶನದಲ್ಲಿ ವಿನಾಯಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದರು. ಸೋಮವಾರದಂದು ಚಿರತೆ ಉಗುರು, ಹಲ್ಲು ಸಾಗಿಸುತ್ತಿದ್ದಂತ ವ್ಯಕ್ತಿಯನ್ನು ಪತ್ತೆ ಹಚ್ಚಿ ಆನಂದಪುರದ ದಾಸನಕೊಪ್ಪ ಸರ್ಕಲ್ ನ ಪೆಟ್ರೋಲ್ ಬಂಕ್ ಬಳಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲ್ಲೂಕಿನ ಹಾರೊಗೊಪ್ಪದ ಲೋಕೇಶ್ ಎಂಬುದಾಗಿ ಗುರುತಿಸಲಾಗಿದೆ. ಆರೋಪಿಯಿಂದ 16 ಚಿರತೆಯ ಉಗುರು, 3 ಹಲ್ಲುಗಳನ್ನು ಜಪ್ತಿ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಇನ್ಸ್ ಪೆಕ್ಟರ್…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರೇ ನಿಮ್ಮ ಸಚಿವರ ಪಿಎ ಹೆಸರು ಡೆತ್ ನೋಟ್ ನಲ್ಲಿ ಬರೆದಿಟ್ಟು ಬೆಳಗಾವಿಯ ತಹಶೀಲ್ದಾರ್ ಕಚೇರಿ ಎಸ್ ಡಿಎ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು, ಸುಳ್ಳು ಗ್ಯಾರಂಟಿಗಳ ನೆಪದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ಅಘೋಷಿತ “ಸಾವು ಗ್ಯಾರೆಂಟಿ” ಯೋಜನೆ ಎಂಬುದಾಗಿ ಗುಡುಗಿದ್ದಾರೆ. ಬೆಳಗಾವಿಯ ಎಫ್.ಡಿ.ಎ ರುದ್ರಣ್ಣ ಯಡವಣ್ಣನವರ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ಸೋಮು ಹಾಗೂ ತಹಶೀಲ್ದಾರ್ ಬಸವರಾಜ್ ನಾಗರಾಳ್ ಅವರೆ ತಮ್ಮ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿದ್ದಾರೆ. ಮಾನ್ಯ ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು..?? ರಾಜ್ಯ ಸರ್ಕಾರ ವಕ್ಫ್ ಹೆಸರಲ್ಲಿ ರೈತರ, ದಲಿತರ…