Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ದಿನಾಂಕ:16-10-2025ರ ಸಚಿವ ಸಂಪುಟದಲ್ಲಿ ಕೆಳಕಂಡಂತೆ ನಿರ್ಣಯ ಕೈಗೊಳ್ಳಲಾಗಿದೆ. 1) ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ಧಿಷ್ಟಪಡಿಸಲಾಗಿರುತ್ತದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿರುತ್ತದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿರುತ್ತದೆ. 2) ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪುಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು…
ಬೆಂಗಳೂರು : ‘ವೋಟ್ ಚೋರಿ’ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಬಾಣಸವಾಡಿಯಲ್ಲಿ ಪ್ರದೇಶ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ವೋಟ್ ಚೋರಿ’ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ” ನಮ್ಮ ನಾಯಕ ರಾಹುಲ್ ಗಾಂಧಿ ಅವರು ‘ವೋಟ್ ಚೋರಿ’ ಬಗ್ಗೆ ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದಾರೆ. ರಾಹುಲ್ ಗಾಂಧಿ ಅವರು ನೀಡಿರುವ ದಾಖಲೆಗಳಿಗೆ ಇದುವರೆಗೂ ಚುನಾವಣಾ ಆಯೋಗ ಗಂಭೀರವಾದ ಮತ್ತು ಸಮರ್ಪಕ ಉತ್ತರ ನೀಡಿಲ್ಲ,” ಎಂದು ಆರೋಪಿಸಿದರು. “ಚುನಾವಣಾ ಆಯೋಗ ಮತ್ತು ಬಿಜೆಪಿಯ ಈ ಮತಗಳ್ಳತನದ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲ. ಸಹಿ ಸಂಗ್ರಹ ಅಭಿಯಾನ ಮುಂದುವರಿಯಲಿದೆ. ಮನೆ ಮನೆಗೆ ಹೋಗಿ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಜನರಿಗೆ ತಿಳಿಸುತ್ತೇವೆ,” ಎಂದರು. “ಕಳೆದ ಲೋಕಸಭೆ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ…
ಹಾವೇರಿ: ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ 12,000 ಲಂಚದ ಹಣವನ್ನು ಪಡೆಯುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ಶಿರಸ್ತೇದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಬಂಧಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನವೀನ ಬಸವನಗೌಡ ಪಾಟೀಲ್ ಎಂಬುವರು ಪಹಣಿ ಪತ್ರ ಅಂದರೆ ಆರ್ ಟಿ ಸಿ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರರು, ಇಬ್ಬರು ಎಸ್ ಡಿ ಎ 12,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ನವೀನ ಬಸವನಗೌಡ ಪಾಟೀಲ್ ಎಂಬುವರು ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಂದು 12,000 ಲಂಚದ ಹಣ ಸ್ವೀಕರಿಸುತ್ತಿದ್ದಾಗ ಹಾವೇರಿ ತಹಶೀಲ್ದಾರರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ದೇಳಿಯ ಸಂದರ್ಭದಲ್ಲಿ 12,000 ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಹಾನಗಲ್ ತಹಶೀಲ್ದಾರರ ಕಚೇರಿಯಲ್ಲಿ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್ ಡಿಎ…
ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರದ ಫರ್ನೆಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದುವರಿದು, ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಚಿತಾಗಾರದ 2 ಫರ್ನೇಸ್ ಗಳನ್ನು ದಿನಾಂಕ: 23-10-2025 ರಿಂದ 31-10-2025 ರವರೆಗೆ 7 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿದ್ದಾರೆ. https://kannadanewsnow.com/kannada/challenging-narayanaswamy-protests-the-denial-of-permission-for-chittapurs-procession/ https://kannadanewsnow.com/kannada/another-good-news-for-the-rural-people-of-the-state-from-now-on-e-property-will-be-available-within-the-gram-panchayat-limits/
ಬೆಂಗಳೂರು: ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥ ಸಂಚಲನಕ್ಕೆ ಮತ್ತು ಬಂಟಿಂಗ್, ಬ್ಯಾನರ್ ಹಾಕಲು ಹಾಗೂ ಅನುಮತಿಗೆ ಸಂಬಂಧಿಸಿ ಸುಮಾರು 6 ಸಾವಿರ ಹಣ ಕಟ್ಟಿಸಿಕೊಂಡ ಬಳಿಕ ಅನುಮತಿ ನಿರಾಕರಿಸಿದ್ದು ಮತ್ತು ಬ್ಯಾನರ್, ಬಂಟಿಂಗ್ ತೆರವು ಮಾಡಿದ್ದು ಸರಿಯಲ್ಲ; ಇದು ಸ್ಥಳೀಯ ಆಡಳಿತದ ದುಂಡಾವರ್ತಿ ಕ್ರಮ ಮತ್ತು ಪ್ರಿಯಾಂಕ್ ಖರ್ಗೆಯವರ ದುರ್ನಡತೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಆರೆಸ್ಸೆಸ್ ಪಥ ಸಂಚಲನಕ್ಕೆ ಸಂಬಂಧಿಸಿ ಪಿಡಿಒ ಒಬ್ಬರ ಅಮಾನತಿನ ಕುರಿತು ಪ್ರಶ್ನಿಸಿದಾಗ, ಆರೆಸ್ಸೆಸ್ ಎಂಬುದು ಒಂದು ರಾಜಕೀಯ ಪಕ್ಷವಲ್ಲ; ಎಲ್ಲ ಸಾರ್ವಜನಿಕ ಸಂಘಟನೆಯಂತೆ ಆರೆಸ್ಸೆಸ್ ಒಂದು ಸಂಘಟನೆ. ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಕೇಂದ್ರ ಸರಕಾರದ ಆದೇಶವೂ ಇದೆ ಎಂದು ನುಡಿದರು. ಇಷ್ಟೆಲ್ಲ ಮಾತನಾಡುವ ಪ್ರಿಯಾಂಕ್ ಖರ್ಗೆ, ಬಿ.ಕೆ.ಹರಿಪ್ರಸಾದ್ ಅವರೇ, ಎಐಸಿಸಿಯಲ್ಲಿ ಅಲೆಮಾರಿ ಸಮುದಾಯಗಳ ಒಂದು ಘಟಕ ಇದೆ. ಈ ಘಟಕಕ್ಕೆ ಕರ್ನಾಟಕದಿಂದ ಡಾ.ಎ.ಎಸ್.…
ನವದೆಹಲಿ: 2025-26ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಫಲಿತಾಂಶವನ್ನು ಪ್ರಕಟಿಸಲಾಗಿದೆ. ತೆರಿಗೆ ನಂತರದ ಏಕೀಕೃತ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ ಶೇ 15.9ರಷ್ಟು ಜಿಗಿತವನ್ನು ಕಂಡು, 22,146 ಕೋಟಿಗೆ ತಲುಪಿದೆ. ಕಾರ್ಯಾಚರಣೆಗಳಿಂದ ಬರುವ ಆದಾಯವು ₹283,548 ಕೋಟಿಗಳಷ್ಟಿದ್ದು, ವರ್ಷದ ಹಿಂದೆ ಇದೇ ಅವಧಿಯಲ್ಲಿ ದಾಖಲಾಗಿದ್ದ ರೂ. 258,027 ಕೋಟಿಗಿಂತ ಶೇ 9.9 ರಷ್ಟು ಹೆಚ್ಚಾಗಿದೆ. 2025ರ ಜೂನ್ ತ್ರೈಮಾಸಿಕದಲ್ಲಿ 273,252 ಕೋಟಿಗಳಷ್ಟು ಇದ್ದದ್ದು ತ್ರೈಮಾಸಿಕದಿಂದ ತ್ರೈಮಾಸಿಕದ ಆಧಾರದಲ್ಲೂ ಹೆಚ್ಚಾಗಿದೆ. ಜಿಯೋ ಪ್ಲಾಟ್ಫಾರ್ಮ್ಗಳು ರಿಲಯನ್ಸ್ ಜಿಯೋ ಆದಾಯವು ವರ್ಷದಿಂದ ವರ್ಷಕ್ಕೆ ಶೇ 14.6 ರಷ್ಟು ಹೆಚ್ಚಾಗಿ ರೂ. 36,332 ಕೋಟಿಗಳಿಗೆ ತಲುಪಿದೆ. ಇನ್ನು ತೆರಿಗೆ ನಂತರದ ಲಾಭ ವರ್ಷದಿಂದ ವರ್ಷಕ್ಕೆ ಶೇ 12.8ರಷ್ಟು ಏರಿಕೆಯಾಗಿ, ರೂ. 7,379 ಕೋಟಿಗಳಿಗೆ ತಲುಪಿದೆ. ಕಂಪನಿಯ ಬಹುನಿರೀಕ್ಷಿತ ಐಪಿಒಗಿಂತ ಮುಂಚಿತವಾಗಿ ಜಿಯೋದ ಎರಡನೇ ತ್ರೈಮಾಸಿಕದ ಎಆರ್ ಪಿಯು ರೂ. 211.4ಕ್ಕೆ ಏರಿದೆ, ಗ್ರಾಹಕರ ತೊಡಗಿಸಿಕೊಳ್ಳುವಿಕೆ ಹೆಚ್ಚಿದೆ, ಇದು ಸದ್ಯಕ್ಕೆ 5ಜಿ ಆಫರ್ ಗಳಿಂದ ಪ್ರಭಾವಿತವಾಗಿದೆ. ರಿಲಯನ್ಸ್ ರೀಟೇಲ್ ರಿಟೇಲ್…
ಕಾಶ್ಮೀರ : ಕಾಶ್ಮೀರದ ಬಂಡಿಪೋರಾದಲ್ಲಿ ಇರುವಂಥ ಗುರೆಜ್(Gurez) ದೂರದ ಪ್ರದೇಶದಲ್ಲಿ ರಿಲಯನ್ಸ್ ಜಿಯೋ ತನ್ನ ಸೇವೆ ಪ್ರಾರಂಭಿಸಿದೆ. ರಿಲಯನ್ಸ್ ಜಿಯೋ ಮತ್ತು ಭಾರತೀಯ ಸೇನೆ ಜಂಟಿಯಾಗಿ ಐದು ಹೊಸ ಟವರ್ ಗಳನ್ನು ಸ್ಥಾಪಿಸಲಾಗಿದೆ. ಕುಪ್ವಾರ ಸೆಂಟಿನೆಲ್ಸ್ ಸಾಮಾಜಿಕ ಮಾಧ್ಯಮ ವೇದಿಕೆಯು “X”ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಇದನ್ನು ಘೋಷಿಸಿದೆ. ಈ ಟವರ್ ಗಳು ಸರಾಸರಿ 13,000 ಅಡಿ ಎತ್ತರದಲ್ಲಿರುವ ಕಾರ್ಯತಂತ್ರದ ಪ್ರಮುಖ ಫಾರ್ವರ್ಡ್ ಪೋಸ್ಟ್ಗಳಿಗೆ ಸಂಪರ್ಕವನ್ನು ಒದಗಿಸುತ್ತವೆ. ಇದನ್ನು ಮಹತ್ವದ ಸಾಧನೆ ಎಂದು ಕರೆದ ಕುಪ್ವಾರ ಸೆಂಟಿನಲ್ಸ್, “ಭಾರತೀಯ ಸೇನೆ ಮತ್ತು ರಿಲಯನ್ಸ್ ಜಿಯೋ ಗುರೆಜ್ ಪ್ರದೇಶದಲ್ಲಿ ಐದು ಹೊಸ ಮೊಬೈಲ್ ಟವರ್ಗಳನ್ನು ಸ್ಥಾಪಿಸಿವೆ – ಸಂವಹನ ಮೂಲಸೌಕರ್ಯವನ್ನು ಸುಧಾರಿಸುವ ಮತ್ತು ಈ ಪ್ರದೇಶದಲ್ಲಿ ಡಿಜಿಟಲ್ ಸಂಪರ್ಕವನ್ನು ಹೆಚ್ಚಿಸುವತ್ತ ಒಂದು ಮಹತ್ವದ ಹೆಜ್ಜೆ,” ಎಂದು ತನ್ನ ಪೋಸ್ಟ್ನಲ್ಲಿ ಹೇಳಿದೆ. ಈ ಹಿಂದೆ ಜಿಯೋ 16,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಗ್ಲೇಸಿಯರ್ನಲ್ಲಿ ಸೇವೆಯನ್ನು ಒದಗಿಸುವ ಮೂಲಕ ಹೀಗೆ ಸೇವೆ ಒದಗಿಸಿದ ಮೊದಲ ಆಪರೇಟರ್ ಆಯಿತು.…
ಬೆಂಗಳೂರು: ರಾಜ್ಯಾಧ್ಯಂತ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಇಲಾಖೆ ಆದೇಶಿಸಿದೆ. ಒಂದು ವೇಳೆ ಕಾನೂನು ಮೀರಿದ್ರೇ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯದ ಆಯಾ ಜಿಲ್ಲೆಯ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂಬುದಾಗಿ ಎಚ್ಚರಿಸಿದ್ದಾರೆ. https://kannadanewsnow.com/kannada/open-rice-and-ragi-purchase-centers-throughout-the-year-maddur-farmers-association-urges-mandya-district-administration/ https://kannadanewsnow.com/kannada/2588-64-crore-expenditure-for-panch-guarantees-in-chitradurga-district-state-vice-president-dinesh-gooligowda/
ಚಿತ್ರದುರ್ಗ : ರಾಜ್ಯದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಿಂದ ಕರ್ನಾಟಕ ರಾಜ್ಯದ ತಲಾ ಆದಾಯ ಹೆಚ್ಚಳವಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ನೀಡಿರುವ ವರದಿಗಳಿಂದಲೇ ತಿಳಿದುಬಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾಡಿನ ಜನರಿಗೆ ನೀಡಿದ್ದ ಭರವಸೆಯಂತೆ, ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೂಡಲೆ ಜಾರಿಗೊಳಿಸಿ, ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ಜಾರಿಗೊಳಿಸಿರುವ ಪ್ರತಿಯೊಂದು ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಸಬಲೀಕರಣ ದೃಷ್ಟಿಯಿಂದ ಮಹತ್ವದ್ದಾಗಿವೆ. ಯೋಜನೆಗಳ ಸವಲತ್ತು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ ಎಂದರು. ಪಂಚಗ್ಯಾರಂಟಿ ಯೋಜನೆಗಳಿಂದ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ.…
ಮಂಡ್ಯ : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಮದ್ದೂರು ನಗರದ ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ತಾಲೂಕು ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಶಂಕರೇಗೌಡ ಮಾತನಾಡಿ, 2022-23 ನೇ ಸಾಲಿನಲ್ಲಿ ಕಬ್ಬು ಅರೆದಿರುವ ಹಂಗಾಮಿನಲ್ಲಿ ಅಂದಿನ ರಾಜ್ಯ ಸರ್ಕಾರ ಟನ್ ಕಬ್ಬಿಗೆ 150 ರೂ.ಗಳನ್ನು ಕಬ್ಬು ಬೆಳೆಗಳಿಗೆ ಪಾವತಿಸಲಾಗುವುದು ಎಂದು ಘೋಷಣೆ ಮಾಡಿತ್ತು. ಆದರೆ, ಇಲ್ಲಿಯವರೆಗೂ ಬಿಡುಗಡೆ ಮಾಡಿಲ್ಲ. ಈ ಕೂಡಲೇ ರಾಜ್ಯ ಸರ್ಕಾರ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಆಗ್ರಹಿಸಿದರು. ಇನ್ನೊಂದು ತಿಂಗಳಲ್ಲಿ ಭತ್ತದ ಬೆಳೆ ಕಟಾವಿಗೆ ಬರುತ್ತಿದ್ದು, ಭತ್ತಕ್ಕೆ ಕ್ವಿಂಟಾಲ್ಗೆ ಕನಿಷ್ಟ 3500 ರೂ. ಬೆಲೆ ನಿಗದಿಗೊಳಿಸಬೇಕು ಹಾಗೂ ನವಂಬರ್ ತಿಂಗಳಲ್ಲೇ ಖರೀದಿ ಕೇಂದ್ರ ತೆರೆದು ರಾಗಿ, ಭತ್ತ ಖರೀಸಬೇಕು ಮತ್ತು ಶಾಶ್ವತವಾಗಿ ಖರೀದಿ ಕೇಂದ್ರಗಳನ್ನು ವರ್ಷ ಪೂರ್ತಿ ತೆರೆಯಬೇಕು. ಕೇಂದ್ರ ಸರ್ಕಾರ ಡಾ.ಸ್ವಾಮಿನಾಥನ್ ವರದಿಯನ್ನು…














