Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದರು. ಇವರೊಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ, ಬೇಡಿಕೆ ಈಡೇರಿಕೆಯ ಬಗ್ಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯ್ತಿ ನೌಕರರ ಮುಷ್ಕರ ವಾಪಾಸ್ ಪಡೆಯಲಾಗಿದ್ದು, ನಾಳೆಯಿಂದ ಕೆಲಸಕ್ಕೆ ಹಾಜರಾಗಲಿದ್ದಾರೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವೃಂದದ ಸಂಘಗಳ ಎಲ್ಲ ಪ್ರತಿಭಟನಾ ನಿರತರು ತಮ್ಮ ತಮ್ಮ ಜಿಲ್ಲೆಗಳಿಗೆ ಹಿಂದಿರುಗಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಾಳೆಯಿಂದ ತಮ್ಮ ಕರ್ತವ್ಯಗಳ ಮೇಲೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಈ ತಿಂಗಳ ಆಗಸ್ಟ್.10ರಂದು ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ಆನೆ ಸಂರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಶಿಬಿರ ಆರಂಭಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ…
ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ. ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು ಮತ್ತು ಸುತ್ತಲೂ ಬ್ಯಾರಿಕೇಡ್ ಅಳವಡಿಸಿ…
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಎರಡು ಕಂತಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು…
ಬೆಂಗಳೂರು: ಹಳದಿ ಹಾಗೂ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭಿಸಲಾಗಿದೆ. ಬೆಂಗಳೂರಿನ ಜನತೆಗೆ ಉತ್ತಮ ಸೇವೆಯನ್ನು ನಮ್ಮ ಮೆಟ್ರೋ ನೀಡುತ್ತಿದೆ. ಈ ಬೆನ್ನಲ್ಲೇ ಶೀಘ್ರದಲ್ಲೇ ಬೆಂಗಳೂರಿಗರಿಗೆ ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಳ್ಳಲಿದೆ. ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭದ ಬಗ್ಗೆ ಬಿಎಂಆಆರ್ ಸಿಎಲ್ ಬಿಗ್ ಅಪ್ ಡೇಟ್ ನೀಡಿದ್ದು, ನಮ್ಮ ಮೆಟ್ರೋ ರೀಚ್-5 (ಹಳದಿ ಮಾರ್ಗ) ಆರ್ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಪಗತಿಯ ಸ್ಥಿತಿ ಸಿವಿಲ್ / ಸಿಸ್ಟಂ ಕಾಮಗಾರಿಗಳು ಗಣನೀಯವಾಗಿ ಪೂರ್ಣಗೊಂಡಿವೆ ಎಂದಿದೆ. ಪ್ರಗತಿಯ ಯೋಜನೆ • ಪ್ರೋಟೋ-ಟೈಪ್ ರೈಲಿನ ಪರೀಕ್ಷೆ ಪ್ರಗತಿಯಲ್ಲಿದೆ. • ರೈಲ್ವೆ ಮಂಡಳಿಯು ಟ್ರಾಕ್ಷನ್ಗೆ ಸಂಬಂಧಿಸಿದಂತೆ ತಾಂತ್ರಿಕ ಮಂಜೂರಾತಿ ನೀಡಿದೆ. • ಸಿಗ್ನಲಿಂಗ್ ಸಿಸ್ಮಮ್ ಮತ್ತು ರೋಲಿಂಗ್ ಸ್ಟಾಕ್ ಪೂರ್ವಭಾವಿ ಹಂತದಲ್ಲಿದೆ. ರೋಲಿಂಗ್ ಸ್ಕ್ಯಾಕ್ ಲಭ್ಯತೆ • ನವೆಂಬರ್-ಡಿಸೆಂಬರ್ 2024ರ ವೇಳೆಗೆ 3 ರೈಲು ಸೆಟ್ಗಳು ಲಭ್ಯವಿರಲಿದೆ • ಜನವರಿ 2025 ರ ವೇಳೆಗೆ ಈ ಮಾರ್ಗದಲ್ಲಿ…
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಪಿಜಿನೀಟ್-2024ರ ವೈದ್ಯಕೀಯ ನೋಂದಣಿ ದಿನಾಂಕ ವಿಸ್ತರಣೆಯನ್ನು ಮಾಡಿ, ಕೆಇಎ ಆದೇಶಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಕರ್ನಾಟಕದಲ್ಲಿನ ಸಿಜಿ ವೈದ್ಯಕೀಯ, ಶೋರ್ಸುಗಳ ಪ್ರವೇಶಕ್ಕಾಗಿ ಪಿಜಿನೀಟ್-2014 1 ಪ್ರಾಧಿಕಾರದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಲು ದಿನಾಂಕವನ್ನು 07-10-2024 ರ ಮಧ್ಯಾಹ್ನ 2.00 ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಶಕ್ತಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳೂ ಸಹ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದಿದೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಶವನ್ನು ವಿಸ್ತರಿಸುವುದಿಲ್ಲ ಎಂಬುದಾಗಿ ತಿಳಿಸಿದೆ. ಸೂಚನೆ: ಎನ್ಎಮ್ಸಿ ಅವರ ಸೂಚನೆ ದಿನಾಂಕ 24-07-2023 ರ ಅನ್ವಯ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ಸುತ್ತಿನ ಸೀಟು ಹಂಚಿಕೆಯನ್ನು ಆನ್ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…
ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆ 2024ರಲ್ಲಿ ಆರಂಭಿಕ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಲಿದೆ ಎಂಬುದಾಗಿ ಹೇಳಿದ್ದಾವೆ. ಈ ಮೂಲಕ ಬಿಜೆಪಿಗೆ ಭಾರೀ ನಿರಾಶೆ ಎದುರಾಗೋ ಸಾಧ್ಯತೆ ಇದೆ. 2024 ರ ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನವು ಕೊನೆಗೊಳ್ಳುತ್ತಿದ್ದಂತೆ, ಎಲ್ಲರ ಕಣ್ಣುಗಳು ಈಗ ಎಕ್ಸಿಟ್ ಪೋಲ್ ಫಲಿತಾಂಶಗಳತ್ತ ನೆಟ್ಟಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆದಿದ್ದು, ಅಕ್ಟೋಬರ್ 1 ರಂದು ಮುಕ್ತಾಯಗೊಂಡಿದೆ. ಸಂಭಾವ್ಯ ವಿಜೇತರು ಯಾರು ಎಂಬುದರ ಚಿತ್ರವನ್ನು ನೀಡಲು ಎರಡೂ ರಾಜ್ಯಗಳ ಆರಂಭಿಕ ಭವಿಷ್ಯವಾಣಿ ಶೀಘ್ರದಲ್ಲೇ ಹೊರಬರಲಿದೆ. ಚುನಾವಣೋತ್ತರ ಸಮೀಕ್ಷೆಗಳು ಯಾವಾಗಲೂ ವಿಶ್ವಾಸಾರ್ಹವಲ್ಲದಿದ್ದರೂ (ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿರುವಂತೆ), ರಾಜ್ಯಗಳಲ್ಲಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಸಾಮಾನ್ಯ ಜನರು ಏನು ಯೋಚಿಸುತ್ತಾರೆ ಎಂಬುದರ ಚಿತ್ರವನ್ನು ಅವು ಇನ್ನೂ ಚಿತ್ರಿಸುತ್ತವೆ. ಹಾಗಾದ್ರೇ ಯಾವ ಸಮೀಕ್ಷೆಯಲ್ಲಿ ಯಾವ ಪಕ್ಷ ಮುನ್ನಡೆ ಸಾಧಿಸಲಿದೆ ಎನ್ನುವ ಬಗ್ಗೆ ಮುಂದಿದೆ ಮಾಹಿತಿ. ಹರಿಯಾಣದಲ್ಲಿ ಕಾಂಗ್ರೆಸ್ 44-54 ಸ್ಥಾನಗಳನ್ನು ಗೆಲ್ಲಲಿದೆ ಎಂದು ಡ್ಯಾನಿಕ್ ಭಾಸ್ಕರ್ ಭವಿಷ್ಯ ದನಿಕ್…
ಬೆಂಗಳೂರು: ಕ್ಷೀರ ಭಾಗ್ಯ ಹಾಲಿನ ಪುಡಿ ಕಳ್ಳ ಸಾಗಣೆಗೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಕ್ಷೀರ ಭಾಗ್ಯ ಹಾಲಿನ ಪುಡಿ ಕಳ್ಳಸಾಗಣೆ: ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ” ರಾಜ್ಯದ ಮಕ್ಕಳ ಪೋಷಣೆಗೆ ಮೀಸಲಾಗಿದ್ದ 18.14 ಲಕ್ಷ ಮೌಲ್ಯದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಇದರಿಂದ ಸರ್ಕಾರದ ಮಕ್ಕಳ ಪೋಷಣಾ ಯೋಜನೆಗಳ ಸುರಕ್ಷತೆ ಪ್ರಕ್ರಿಯೆಯ ಮೇಲೆ ದೊಡ್ಡ ಪ್ರಶ್ನೆ ಹುಟ್ಟಿದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳದ ಸಿದ್ಧರಾಮಯ್ಯ ಅವರ ನಿರ್ದಿಷ್ಟ ದೃಷ್ಟಿಯ ಕಾರಣ ಇಂತಹ ಕಳ್ಳಸಾಗಣೆಗಳು ನಡೆಯುತ್ತಿವೆ. ರಾಜ್ಯದ ನೂತನ ಮಕ್ಕಳ ಪೋಷಣಾ ಯೋಜನೆಗಳನ್ನು ಈ ರೀತಿಯ ಕೃತ್ಯಗಳಿಂದ ಹಾಳುಮಾಡಲು ಅವಕಾಶ ಕೊಟ್ಟಿರುವುದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತಿದೆ ಎಂದಿದ್ದಾರೆ. ಮಾನ್ಯ ಸಿದ್ದರಾಮಯ್ಯರವರ ಆಡಳಿತದಲ್ಲಿ ಮಕ್ಕಳ ಪೋಷಣೆಗೆ ಮೀಸಲಾಗಿದ್ದ ಸಂಪತ್ತು…
ಅಷ್ಟ ಲಕ್ಷ್ಮೀ ಸ್ತೋತ್ರಮ್ ಆದಿಲಕ್ಷ್ಮಿ ಸುಮನಸ ವಂದಿತ ಸುಂದರಿ ಮಾಧವಿ, ಚಂದ್ರ ಸಹೊದರಿ ಹೇಮಮಯೇ ಮುನಿಗಣ ವಂದಿತ ಮೋಕ್ಷಪ್ರದಾಯನಿ, ಮಂಜುಲ ಭಾಷಿಣಿ ವೇದನುತೇ | ಪಂಕಜವಾಸಿನಿ ದೇವ ಸುಪೂಜಿತ, ಸದ್ಗುಣ ವರ್ಷಿಣಿ ಶಾಂತಿಯುತೇ ಜಯ ಜಯಹೇ ಮಧುಸೂದನ ಕಾಮಿನಿ, ಆದಿಲಕ್ಷ್ಮಿ ಪರಿಪಾಲಯ ಮಾಮ್ || 1 || ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳೋದಕ್ಕೆ ಅವಧಿಯನ್ನು ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಮಾರ್ಚ್ ಮಾಹೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಿನಾಂಕ 25-10-2024 ರವರೆಗೆ ದಂಡ ರಹಿತವಾಗಿ ಹಾಗೂ ದಿನಾಂಕ 30-09-2024 ರಿಂದ ದಿನಾಂಕ 26-10-2024 ರಿಂದ 09-11-2024 ರವರೆಗೆ ದಂಡ ಸಹಿತವಾಗಿ ಶುಲ್ಕವನ್ನು ಸಂಬಂಧಿಸಿದ ಕಾಲೇಜುಗಳಲ್ಲಿ ಪಾವತಿಸಲು ಅವಕಾಶವನ್ನು ಕಲ್ಪಿಸಿದೆ ಎಂದಿದೆ. ಈ ಸಂಬಂಧ ವಿದ್ಯಾರ್ಥಿಗಳು ಮಂಡಲಿಯ ಜಾಲತಾಣ https://kseab.karnataka.gov.in ರಲ್ಲಿ ಅಪ್ಲೋಡ್ ಮಾಡಿದ್ದು, ಹೆಚ್ಚಿನ ವಿವರಗಳಿಗೆ ವೀಕ್ಷಿಸಬಹುದಾಗಿದೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ. https://kannadanewsnow.com/kannada/higher-education-department-announces-academic-calendar-for-2025-26/ https://kannadanewsnow.com/kannada/pune-court-summons-rahul-gandhi-on-october-23-in-savarkar-defamation-case/