Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2025-26ನೇ ಸಾಲಿನ ಉನ್ನತ ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಏಪ್ರಿಲ್ 18 ಮತ್ತು 19ರಂದು ಸಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಮೇ.28, 2025ಕ್ಕೆ ಸಿಇಟಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಲಾಗಿದೆ. ಆ ಬಗ್ಗೆ ಮುಂದೆ ಸಂಪೂರ್ಣ ಮಾಹಿತಿ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ತಮ್ಮ ಇಲಾಖೆಯಡಿ ಬರುವ ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿನ ಸಂಯೋಜನೆ ಹಾಗೂ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಸಂಯೋಜನೆ ಪ್ರಕ್ರಿಯೆ ಹಾಗೂ ಶೈಕ್ಷಣಿಕ ವೇಳಾಪಟ್ಟಿಯನ್ನು ಅಗತ್ಯ ಕಾಲಾವಕಾಶ ಮತ್ತು ಸ್ಪಷ್ಟವಾಗಿ ಪ್ರಕಟಿಸುವಂತೆ ಸರ್ಕಾರದಲ್ಲಿ ವಿವಿಧ ಮನವಿಗಳು ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಸುಗಮವಾಗಿ ಜಾರಿಗೊಳಿಸಲು ಅನುವಾಗುವಂತೆ ಉನ್ನತ ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ…
ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಡೆಸಿತು. ದರ್ಶನ್ ಪರ ವಕೀಲರ ವಾದವನ್ನು ಆಲಿಸಿದಂತ ನ್ಯಾಯಾಲಯವು ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್.8ಕ್ಕೆ ಮುಂದೂಡಿದೆ. ಹೀಗಾಗಿ ನಟ ದರ್ಶನ್ ಗೆ ಇಂದು ಕೂಡ ರಿಲೀಫ್ ಸಿಕ್ಕಿಲ್ಲ. ಜೈಲೇ ಗತಿ ಎನ್ನುವಂತೆ ಆಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವಂತ ಅವರು ತಮ್ಮ ಪರ ವಕೀಲರ ಮೂಲಕ ಪ್ರಕರಣದಲ್ಲಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದ ಮಾಡಿಸುತ್ತಾ, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಭಾಗಿಯಾಗಿರುವ ಬಗ್ಗೆ ಸಿಸಿಟಿವಿಯ ಯಾವುದೇ ದೃಶ್ಯಗಳಿಲ್ಲ. ಕೇವಲ ನಟ ಅವರ ಮನೆಗೆ ತೆರಳುತ್ತಿರುವಂತ ಒಂದೇ ಒಂದು ದೃಶ್ಯ ಮಾತ್ರವೇ ಇರೋದು. ನಟ ಚಿಕ್ಕಣ್ಣ…
ಉಡುಪಿ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯಕ್ಕೆ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಉಪ್ಪಂದ ಗ್ರಾಮದ ಮಡಿಕಲ್ ಮತ್ತು ಕರ್ಕಿಕಳಿಯಲ್ಲಿ ಕಳೆದ ಒಂದು ವಾರದಿಂದ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯದಿಂದಾಗಿ ಕಲುಷಿತ ನೀರು ಸೇವಿಸಿ ಕರ್ಕಿಕಳಿ ಮತ್ತು ಕಾಸನಾಡಿ ಪ್ರದೇಶದ ವಾರ್ಡ್ ನಂ.6, 7ರಲ್ಲಿ 500ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯಲ್ಲಿನ ಎರಡು ಮೂರು ಮಂದಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/pune-court-summons-rahul-gandhi-on-october-23-in-savarkar-defamation-case/ https://kannadanewsnow.com/kannada/breaking-good-news-for-farmers-of-the-country-prime-minister-modi-released-the-18th-installment-of-pm-kisan-yojana/
ಮಾನ್ವಿ : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಅಲ್ಲದೇ ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಎಂದು ಕೇಳಿದರು. ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು. BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ…
ಬೆಂಗಳೂರು : “ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸ ಹಾಗೂ ವಿ.ಆರ್ ಸುದರ್ಶನ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ವರದಿ ಸ್ವೀಕರಿಸಿದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ಕೆಲ ನಾಯಕರ ದೆಹಲಿ ಭೇಟಿಯಿಂದ ಸಿಎಂ ಬದಲಾವಣೆ ವದಂತಿ ಮೂಡುತ್ತಿರುವ ಬಗ್ಗೆ ಕೇಳಿದಾಗ, “ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಮ್ಮ ರಾಜ್ಯದವರು ಎಐಸಿಸಿ ಅಧ್ಯಕ್ಷರಾಗಿದ್ದು, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ” ಎಂದು ಪುನಃರುಚ್ಚರಿಸಿದರು. ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆಯೇ ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ” ಎಂದು ತಿಳಿಸಿದರು. ನೀವು ದೆಹಲಿಗೆ ಭೇಟಿ ನೀಡುತ್ತೀರಾ ಎಂದು ಕೇಳಿದಾಗ, “ಸಧ್ಯಕ್ಕೆ ನಾನು ದೆಹಲಿಗೆ ಹೋಗುವ…
ಬೆಂಗಳೂರು : “ಬಗರ್ ಹುಕುಂ” ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದರು. ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, “ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು. “ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ…
ಇಸ್ರೇಲ್: ಹತ್ಯೆಗೀಡಾದ ನಾಯಕ ಹಸನ್ ನಸ್ರಲ್ಲಾ ಅವರ ಉತ್ತರಾಧಿಕಾರಿ ಮತ್ತು ಮುಂದಿನ ಹಿಜ್ಬುಲ್ಲಾ ಮುಖ್ಯಸ್ಥ ಹಶೀಮ್ ಸಫಿಯುದ್ದೀನ್ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೈರುತ್ನಲ್ಲಿ ಶುಕ್ರವಾರ ನಡೆದ ವೈಮಾನಿಕ ದಾಳಿಯಲ್ಲಿ ಸಫಿಯುದ್ದೀನ್ ಸಾವನ್ನಪ್ಪಿರುವುದನ್ನು ಇಸ್ರೇಲ್ ದೃಢಪಡಿಸಿದೆ ಎಂದು ಸೌದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಶುಕ್ರವಾರದಿಂದ ಸಫಿಯುದ್ದೀನ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಮೂಲವೊಂದು ರಾಯಿಟರ್ಸ್ಗೆ ತಿಳಿಸಿದೆ. ಬೈರುತ್ನಲ್ಲಿರುವ ಹಿಜ್ಬುಲ್ಲಾದ ಗುಪ್ತಚರ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿ ಸಫಿಯುದ್ದೀನ್ ಅವರನ್ನು ಗುರಿಯಾಗಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ಶುಕ್ರವಾರ ತಿಳಿಸಿದೆ. ಸಫಿಯುದ್ದೀನ್ ನಸ್ರಲ್ಲಾನ ಉತ್ತರಾಧಿಕಾರಿ ಎಂದು ವ್ಯಾಪಕವಾಗಿ ನಂಬಲಾಗಿತ್ತು. ದಾಳಿ ನಡೆದಾಗ ಭೂಗತ ಸಂಕೀರ್ಣದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ನಾಯಕರಲ್ಲಿ ಅವರು ಒಬ್ಬರಾಗಿದ್ದರು ಎಂದು ವರದಿಯಾಗಿದೆ. ಜೆರುಸಲೇಮ್ ಪೋಸ್ಟ್ ವರದಿಯ ಪ್ರಕಾರ, ಸಭೆಯ ಭಾಗವಾಗಿದ್ದ ಯಾರಾದರೂ ಜೀವಂತವಾಗಿ ಹೊರಬರುವ ಸಾಧ್ಯತೆಯಿಲ್ಲ. ಆಕ್ಸಿಯೋಸ್ನ ವರದಿಗಾರ ಬರಾಕ್ ರಾವಿದ್, ಸಫಿಯುದ್ದೀನ್ ಅವರನ್ನು ಇಸ್ರೇಲ್ ಗುರಿಯಾಗಿಸಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ,…
ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದರು ಅವರು. ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ಹೆದರಿಸೋಕೆ ಯಾರಿಂದಲೂ ಆಗಲ್ಲ. ನಾನು ಯಾರಿಗೂ ಹೆದರಲ್ಲ. ಹೆದರೋದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ ಬೆಳೆಸಿರುವ ನಾಡಿನ ಜನಕ್ಕೆ. ಇಂತಹ ಸಿದ್ದರಾಮಯ್ಯಗೆ ನಾನು ಹೆದರುತ್ತೀನಾ? ಎಂದು ಸಚಿವರು ತಿರುಗೇಟು ನೀಡಿದರು. ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಇಂದು ಮೂವರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಅಕ್ಟೋಬರ್.8ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದಂತ ಎ.3 ಪವನ್, ಎ4 ರಾಘವೇಂದ್ರ ಹಾಗೂ ಎ7 ಅನುಕುಮಾರ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ನಡೆಸಿತು. ಈ ವೇಳೆ ಎ.7 ಆರೋಪಿ ಅನುಕುಮಾರ್ ಪರ ವಾದಿಸಿದಂತ ವಕೀಲ ರಾಮ್ ಸಿಂಗ್ ಅವರು, ರೇಣುಕಾಸ್ವಾಮಿ ಕೊಲೆಗೆ ತಮ್ಮ ಕಕ್ಷಿದಾರ ಕಾರಣನಲ್ಲ. ಇತರೆ ಆರೋಪಿಗಳೊಂದಿಗೆ ಸಂಪರ್ಕದಲ್ಲಿ ಇದ್ದ ಮಾತ್ರಕ್ಕೆ ಆರೋಪಿಯಾಗಿ ಮಾಡಲಾಗಿದೆ. ಕಾಲ್ ರೆಕಾರ್ಡಿಂಗ್ ನಲ್ಲಿ ಕೊಲೆಗೆ ಪೂರಕ ಸಾಕ್ಷ್ಯಗಳಲಿಲ್ಲ. ಬಲವಂತವಾಗಿ ಕಿಡ್ನಾಪ್ ಮಾಡಿದ ಬಗ್ಗೆ ಹಾಗೂ ಕೊಲೆ ಸಂಚಿನ ಬಗ್ಗೆಯೂ ಸಾಕ್ಷಿಯಿಲ್ಲ ಎಂದು ವಾದಿಸಿದರು. ರೇಣುಕಾಸ್ವಾಮಿ ಜೊತೆಯಲ್ಲೇ ಡಾಬಾದಲ್ಲಿ ಊಟ ಮಾಡಿದ್ದಾರೆ. ಕೊಲೆಯಲ್ಲಿ ಅನುಕುಮಾರ್ ಪಾತ್ರವಿಲ್ಲ. ಎ.7 ಅನುಕುಮಾರ್ ರೇಣುಕಾಸ್ವಾಮಿ ಕೊಲೆಗೆ ಕಾರಣನಲ್ಲ. ಪ್ರಕರಣದಲ್ಲಿ ಅನುಕುಮಾರ್ ಅವರನ್ನು ಬಲಿಪಶು ಮಾಡಲಾಗಿದೆ ಎಂಬುದಾಗಿ ವಾದಿಸಿ, ಜಾಮೀನು ಕೋರಿದರು.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಸಿಎಂ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಬಿ.ಬಿ ಕಾವೇರಿ ಅವರನ್ನು ನೇಮಕ ಮಾಡಲಾಗಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಕೆ.ವಿ., ಐಎಎಸ್ (ಕೆ.ಎನ್: 2007) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಶಾಲಾ ಶಿಕ್ಷಣ ಆಯುಕ್ತರಾಗಿ ನೇಮಿಸಲಾಗಿದೆ. ಬೆಂಗಳೂರಿನ ಶಾಲಾ ಶಿಕ್ಷಣ ಆಯುಕ್ತರಾದ ಕಾವೇರಿ ಬಿ.ಬಿ., ಐಎಎಸ್ (ಕೆ.ಎನ್: 2008) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಕಾವೇರಿ ಬಿ.ಬಿ., ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. https://kannadanewsnow.com/kannada/shimoga-people-power-outages-in-these-areas-of-the-district-tomorrow-tomorrow/ https://kannadanewsnow.com/kannada/pune-court-summons-rahul-gandhi-on-october-23-in-savarkar-defamation-case/