Author: kannadanewsnow09

ಬೆಳಗಾವಿ: ರಾಜ್ಯದ ಮಹಿಳಾ ಹೋರಾಟಗಾರ್ತಿಯಾಗಿ ಗುರ್ತಿಸಿಕೊಂಡಿದ್ದು, ಅನೇಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಕೊಡಿಸಿದ್ದಂತ ಮಹಿಳೆಗೆ ಯೋಧನೊಬ್ಬ ಲವ್ ಸೆಕ್ಸ್ ದೋಖಾ ಮಾಡಿರೋದಾಗಿ ತಿಳಿದು ಬಂದಿದೆ. ಈ ಕಾರಣದಿಂದಲೇ ಹೋರಾಟಗಾರ್ತಿ, ಯೋಧನ ಮನೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಮಚ್ಚ ಗ್ರಾಮ ಪ್ರಮೋದಾ ಹಜಾರೆ ಅವರೇ ಲವ್, ಸೆಕ್ಸ್ ದೋಖಾಗೆ ಒಳಗಾದವರು. ಬೆಳಗಾವಿಯ ಬಿಜಿಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ಫೇಸ್ ಬುಕ್ ಮೂಲಕ ಪ್ರಮೋದಾಗೆ ಪರಿಚಯವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಪರಿಚಯವಾಗಿದ್ದಂತ ಇವರ ನಡುವೆ ಪ್ರೀತಿ ಬೆಳೆದಿತ್ತು. ತನಗಿಂತ 14 ವರ್ಷ ಹಿರಿಯ ಮಹಿಳೆಯನ್ನು ಅಕ್ಷಯ್ ಪ್ರೀತಿ ಮಾಡುವುದಾಗಿ ನಂಬಿಸಿದ್ದನು. ಇದಷ್ಟೇ ಅಲ್ಲದೇ ಮದುವೆಯಾಗುವುದಾಗಿ ಹೋರಾಟಗಾರ್ತಿ ಪ್ರಮೋದಾ ಹಜಾರೆಗೆ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದನಂತೆ. ಆ ಬಳಿಕ ಪ್ರಮೋದಾ ಹಜಾರೆಗೆ ಮನೆಗೆ ರಜೆಗೆ ಬಂದಿದ್ದಂತ ಅಕ್ಷಯ್ ಆಕೆಯ ಮನೆಯಲ್ಲಿನ ದೇವರ ಕೋಣೆಯಲ್ಲಿ ಮದುವೆಯಾಗಿದ್ದನಂತೆ. ರಜೆಗಾಗಿ ಕೆಲ ದಿನಗಳ ಹಿಂದೆ ಬಂದು 15 ದಿನಗಳ ಕಾಲ ಪ್ರಮೋದಾ…

Read More

ಬೆಂಗಳೂರು: ಬಿಡಿಎ ವಿಷಯದಲ್ಲಿ ಬಿ.ಎಸ್.ವೈ ಪ್ರಾಸಿಕ್ಯೂಶನ್‍ಗೆ ಕೇಳಿದ್ದೀರಿ. ನಿನ್ನೆ ಸಂಪುಟದಲ್ಲಿ ತೀರ್ಮಾನ ಮಾಡಿದ್ದೀರಿ. ಈ ಕೇಸು ಖುಲಾಸೆ ಆಗಿದೆ. ಆದರೂ ನೀವೇನು ಮಾಡಲು ಹೊರಟಿದ್ದೀರಿ? ಇದು ಬಿಜೆಪಿ ನಾಯಕರ ವಿರುದ್ಧದ ಷಡ್ಯಂತ್ರ ಮತ್ತು ಹಗೆತನದ ರಾಜಕೀಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 155 ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಸರಕಾರದ ಅಬಕಾರಿ ಸಚಿವರ ವಿರುದ್ಧ ಆರೋಪಗಳಿವೆ. ವಿಡಿಯೋಗಳು, ಆಡಿಯೋಗಳೂ ಬಂದಿವೆ. ನೀವೇನು ಮಾಡಿದ್ದೀರಿ? ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ಸಂಘಟನೆಗಳು 700 ಕೋಟಿ ಲಂಚ ಸಂಗ್ರಹ ಸಂಬಂಧ ಸಚಿವ ತಿಮ್ಮಾಪುರ ಅವರ ವಿರುದ್ಧ ಆಪಾದನೆ ಮಾಡಿವೆ. 700 ಕೋಟಿ ಲಂಚದ ಹಗರಣ ಇದ್ದರೂ ಕೂಡ ನೀವು ಅವರನ್ನು ರಕ್ಷಿಸುತ್ತೀರಿ. ಅಮಾನತಾದ ಅಧಿಕಾರಿಗಳು ಯಾರ ಏಜೆಂಟರು ಎಂದು ತಿಳಿಸಲು ಆಗ್ರಹಿಸಿದರು. ಅವರು ಸಚಿವರ ಏಜೆಂಟರೇ? ಅಥವಾ ಮುಖ್ಯಮಂತ್ರಿಗಳ ಏಜೆಂಟರಾಗಿದ್ದರೇ? ಅವರ ತಲೆದಂಡ ಮಾತ್ರ ಯಾಕೆ? ಸಚಿವರ ತಲೆದಂಡ ಯಾಕಾಗಬಾರದು ಎಂದು…

Read More

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದೆ. ದಿನೇಶ್ ಗುಂಡೂರಾವ್ ಅವರು ಆರೋಗ್ಯ ಸಚಿವರಾಗಲು ಯೋಗ್ಯರೇ? ಅವರೇನು ವೈದ್ಯರೇ? ಎಂಬಿಬಿಎಸ್ ಓದಿದವರೇ? ಪಿಎಚ್‍ಡಿ ಆಗಿದೆಯೇ? ಎಂದು ಕೇಳಿದರು. ದನಕರುಗಳಿಗೆ ಕೊಡುವ ಔಷಧಿಗಳು ಆಸ್ಪತ್ರೆಗೆ ಸರಬರಾಜಾದ ಬಗ್ಗೆ ಸದನದಲ್ಲಿ ಕೇಳಿದ್ದೆವು. ಅದು ಮುದ್ರಣದ ತಪ್ಪು ಎಂದಿದ್ದರು. ಬಳಿಕ ವರದಿ ಬಂದಾಗ ಅದಾಗಿದ್ದು ನಿಜ; ವಿಷಯ ತಿಳಿದು ವಾಪಸ್ ಕಳಿಸಿದ್ದಾಗಿ ಹೇಳಿದ್ದರು ಎಂದು ಛಲವಾದಿ ನಾರಾಯಣಸ್ವಾಮಿ ಅವರು ವಿವರಿಸಿದರು. ಯಾದಗಿರಿಯಲ್ಲಿ ವೆಟರ್ನರಿ ಔಷಧಿ ಆಸ್ಪತ್ರೆಗೆ ಸರಬರಾಜಾಗಿದೆ. ಬಾಣಂತಿಯರಿಗೆ ಕೊಟ್ಟ ಔಷಧಿ ಕಳಪೆ ಆಗಿದ್ದುದಲ್ಲದೇ, ಕೊಟ್ಟ ದ್ರಾವಣಗಳು ಕಳಪೆ ಎಂದು ವರದಿ ಬರುತ್ತಿದೆ. ಹೀಗಿದ್ದರೂ ಅವರನ್ನು ಬದಲಿಸಿಲ್ಲ; ಇದು ಜೀವಗಳ ಜೊತೆ ಆಟ. ದಿನೇಶ್ ಗುಂಡೂರಾವ್ ಅವರನ್ನು ತಕ್ಷಣ ವಜಾ ಮಾಡಬೇಕೆಂದು ಆಗ್ರಹಿಸಿದರು. https://kannadanewsnow.com/kannada/india-will-not-visit-pakistan-for-icc-champions-trophy-mea/ https://kannadanewsnow.com/kannada/big-news-bellary-district-hospital-death-case-explosive-element-revealed-in-investigation/

Read More

ನವದೆಹಲಿ: ಇಂದು ನಡೆಯಲಿರುವ ಪ್ರಮುಖ ಐಸಿಸಿ ಸಭೆಗೆ ಮುಂಚಿತವಾಗಿ ಭಾರತವು ಪಾಕಿಸ್ತಾನಕ್ಕೆ ಭೇಟಿ ನೀಡುವ ಸಾಧ್ಯತೆಯಿಲ್ಲ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ದೃಢಪಡಿಸಿದೆ. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಈ ಹಿಂದೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನಕ್ಕೆ ಭೇಟಿ ನೀಡದ ಭಾರತ ತಂಡವು ಭಯೋತ್ಪಾದನೆ ಮತ್ತು ಕ್ರೀಡೆ ಒಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂಬ ಇಸ್ಲಾಮಾಬಾದ್ ಬಗ್ಗೆ ನವದೆಹಲಿಯ ವಿದೇಶಾಂಗ ನೀತಿಗೆ ಅನುಗುಣವಾಗಿದೆ. ನವದೆಹಲಿ: ರಾಷ್ಟ್ರೀಯ ಜನತಾ ಪಕ್ಷ (ಆರ್ಜೆಡಿ) ತೇಜಸ್ವಿ ಯಾದವ್ ಅವರು ಪಾಕಿಸ್ತಾನದ ಬಗ್ಗೆ ವಿದೇಶಾಂಗ ನೀತಿಗೆ ಸಂಬಂಧಿಸಿದಂತೆ ದೇಶದ ನಿಲುವಿಗೆ ವಿರುದ್ಧವಾಗಿ ಹೋದರು ಮತ್ತು ಭಾರತೀಯ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಏಕೆ ಭೇಟಿ ನೀಡಬಾರದು ಎಂದು ಪ್ರಶ್ನಿಸಿದರು. “ಭಾರತ ಏಕೆ ಅಲ್ಲಿಗೆ (ಪಾಕಿಸ್ತಾನ) ಹೋಗಬಾರದು? ಆಕ್ಷೇಪಣೆ ಏನು? ಪ್ರಧಾನಿ ಬಿರಿಯಾನಿ ತಿನ್ನಲು ಅಲ್ಲಿಗೆ ಹೋಗಬಹುದಾದರೆ, ಭಾರತ ತಂಡ ಪ್ರಯಾಣಿಸಿದರೆ…

Read More

ಬೆಂಗಳೂರು: 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆಯಾದ ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಜನಾಕರ್ಷಣೆಯ ಕೇಂದ್ರವಾಗುವಂತೆ ಸಮಗ್ರ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದ ಕಚೇರಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಪಿಲಿಕುಳ ನಿಸರ್ಗಧಾಮ ಸಮಗ್ರ ಅಭಿವೃದ್ದಿಗೆ ಚಿಂತನೆ: 2018 ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಉದ್ಘಾಟನೆಯಾದ ಮಂಗಳೂರಿನ ಪಿಲಿಕುಳ ನಿಸರ್ಗಧಾಮ ವನ್ನು ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ದಿಗೊಳಿಸಲು ಅವಕಾಶಗಳಿವೆ. ಇಲ್ಲಿ ವಿಫುಲ ಜಾಗವಿದ್ದು ಅಂತರಾಷ್ಟ್ರೀಯ ಮಟ್ಟದ ಜನಾಕರ್ಷಣೆಯ ಕೇಂದ್ರವಾಗಿ ಅಭಿವೃದ್ದಿ ಪಡಿಸಬಹುದಾಗಿದೆ. 2018 ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಮಿತಿಗೆ ಅನುಮೋದನೆ ನೀಡಿದ್ದಾರೆ. ಪ್ರಾಧಿಕಾರದ ಮುಂದಿನ ಮೊದಲ ಸಭೆಯಲ್ಲಿ ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ದಿಗೆ ಅಗತ್ಯವಿರುವ ನೀಲಿ ನಕ್ಷೆಯ ಬಗ್ಗೆ ಚರ್ಚಿಸಲಾಗುವುದು.…

Read More

ನವದೆಹಲಿ: ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ. ಸಚಿವ ಸಂಪುಟ ವಿಸ್ತರಣೆ, ಪುಮಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು. ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು. ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ. ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ.…

Read More

ನವದೆಹಲಿ: ಇತ್ತೀಚಿನ ಪ್ರಕರಣವೊಂದರಲ್ಲಿ, ನೋಟಿಸ್ ಆಹ್ವಾನಿಸುವ ಟೆಂಡರ್ (Notice Inviting Tender -NIT) ನಲ್ಲಿ ಅತಿ ಹೆಚ್ಚು ಬಿಡ್ದಾರನು ತನ್ನ ಪರವಾಗಿ ಹರಾಜನ್ನು ಮುಕ್ತಾಯಗೊಳಿಸುವ ಪಟ್ಟಭದ್ರ ಹಕ್ಕನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. ಒಪ್ಪಂದವನ್ನು ಕಾರ್ಯಗತಗೊಳಿಸಲು, ಯಶಸ್ವಿ ಬಿಡ್ಡರ್ ಪರವಾಗಿ ಹಂಚಿಕೆ ಪತ್ರವನ್ನು ನೀಡಬೇಕು ಎಂದು ನ್ಯಾಯಾಲಯ ಹೇಳಿದೆ. ಎನ್ಐಟಿ ಹರಾಜು ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಬಿಡ್ ಮಾಡಿದ ಕಾರಣ ಪ್ರತಿವಾದಿ ಸಂಖ್ಯೆ 1 ರ ಪರವಾಗಿ ಗುತ್ತಿಗೆ ನೀಡುವಂತೆ ಹೈಕೋರ್ಟ್ನ ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ಇಂದೋರ್ ಅಭಿವೃದ್ಧಿ ಪ್ರಾಧಿಕಾರ (“ಮೇಲ್ಮನವಿದಾರ”) ಸಲ್ಲಿಸಿದ್ದ ಸಿವಿಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿತು. ಅತ್ಯಧಿಕ ಬಿಡ್ ಮಾಡುವುದು ಪ್ರತಿವಾದಿ ಸಂಖ್ಯೆ 1 ರ ಪರವಾಗಿ ಒಪ್ಪಂದವನ್ನು ನೀಡುವ ಖಾತರಿಯನ್ನು ನೀಡುವುದಿಲ್ಲ, ಬದಲಿಗೆ ಟೆಂಡರ್ ಪ್ರಾಧಿಕಾರ ಅಂದರೆ ಮೇಲ್ಮನವಿದಾರನು ಮಾನ್ಯ ಆಧಾರದ ಮೇಲೆ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸುವ ಅಥವಾ…

Read More

ಆಗ್ನೇಯ ರೈಲ್ವೆ (ಎಸ್ಇಆರ್) ವಿವಿಧ ಟ್ರೇಡ್ಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು rrcser.co.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 27, 2024. ಈ ನೇಮಕಾತಿ ಡ್ರೈವ್ ಸಂಸ್ಥೆಯಲ್ಲಿ ಒಟ್ಟು 1785 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಅಭ್ಯರ್ಥಿಗಳನ್ನು ಅವರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ, ಇದನ್ನು ಮೆಟ್ರಿಕ್ಯುಲೇಷನ್ನಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಕನಿಷ್ಠ 50% (ಒಟ್ಟು) ಅಂಕಗಳೊಂದಿಗೆ ಸಿದ್ಧಪಡಿಸಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಗಳು, ವಯಸ್ಸಿನ ಮಿತಿ ಮತ್ತು ನೇಮಕಾತಿಯ ಬಗ್ಗೆ ಇತರ ವಿವರಗಳನ್ನು ಕೆಳಗೆ ಪರಿಶೀಲಿಸಬಹುದು. ಪ್ರಮುಖ ದಿನಾಂಕಗಳು ಅಧಿಸೂಚನೆ ದಿನಾಂಕ: ನವೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 12 ಅರ್ಹತಾ ಮಾನದಂಡಗಳು ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) 10 ನೇ ತರಗತಿಯಲ್ಲಿ…

Read More

ಪುಣೆ: ಮಹಾರಾಷ್ಟ್ರದ ಗೊಂಡಿಯಾದಲ್ಲಿ ರಾಜ್ಯ ಸಾರಿಗೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವತ್ತು ಜನರು ಗಾಯಗೊಂಡಿದ್ದಾರೆ ಎಂದು ಗೊಂಡಿಯಾ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಮಹಾರಾಷ್ಟ್ರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ರಸ್ತೆ ಸಾರಿಗೆ ಬಸ್ ಒಂದು ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ 7 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. https://twitter.com/ANI/status/1862417879230292246 ಬಸ್ ಪಲ್ಟಿಯಾದಂತ ವಿಷಯ ತಿಳಿದಂತ ಸ್ಥಳೀಯರು, ಗಾಯಾಳುಗಳನ್ನು ರಕ್ಷಿಸಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆಯಾಗಿ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಬಿಂದ್ರವನ ತೋಲಾ ಗ್ರಾಮದ ಬಳಿ ರಾಜ್ಯ ಸಾರಿಗೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈವರೆಗೆ 7 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 30 ಜನರು ಗಾಯಗೊಂಡಿದ್ದಾರೆ ಮತ್ತು ಗಾಯಗೊಂಡವರನ್ನು ಗೊಂಡಿಯಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು…

Read More

ಬೆಂಗಳೂರು: ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಬೆಸ್ಕಾಂ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನಿರ್ದೇಶನದಂತೆ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗುವುದು. ಇಂಧನ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಮೇಳ ನಡೆಯಲಿದೆ” ಎಂದರು. “ಇವಿ ದ್ವಿಚಕ್ರ ವಾಹನ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಇವಿ ವಾಹನಗಳ ಬಳಕೆಯ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಜತೆಗೆ ಸರ್ಕಾರಿ ನೌಕರರು, ವಿಶೇಷವಾಗಿ ಸಚಿವಾಲಯ ನೌಕರರಿಗೆ ಮಾರಾಟಗಾರರಿಂದ ರಿಯಾಯ್ತಿ ದರದಲ್ಲಿ ಇವಿ ದ್ವಿಚಕ್ರ ವಾಹನಗಳನ್ನು ಒದಗಿಸುವುದು ಈ ಮೇಳದ ಉದ್ದೇಶವಾಗಿದೆ. ಪ್ರದರ್ಶನ ಸ್ಥಳದಲ್ಲೇ ಪ್ರಾಯೋಗಿಕವಾಗಿ ವಾಹನ ಓಡಿಸಲು ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು. “ಏರುತ್ತಿರುವ ವಾಹನಗಳ…

Read More