Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾ.10 ಆಗಿರುತ್ತದೆ. ಶಾಲೆಗಳ ವಿವರ: ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ.9844040035. ಸಂಡೂರು ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.7353346069. ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಸಂಪರ್ಕ ವಿವರ: ಬಳ್ಳಾರಿ-8310321101, ಸಂಡೂರು-9036925966, 8660575061 ಮತ್ತು ಸಿರುಗುಪ್ಪ-9148889975. ಹೆಚ್ಚಿನ…
ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಕ್ಕೆ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಸಾಂಧರ್ಬಿಕ ಒಪ್ಪಂದದ ಮೇರೆಗೆ ವಿಶೇಷ ಬಸ್ಸುಗಳನ್ನು ಒದಗಿಸಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ಅವರು ತಿಳಿಸಿದ್ದಾರೆ. ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಂಪರ್ಕಿಸಬೇಕಾದ ಅಧಿಕಾರಿಗಳ ದೂ. ಸಂಖ್ಯೆ: ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರ ಮೊ.7760992163 ಬಳ್ಳಾರಿ-2ನೇ ಘಟಕದ ವ್ಯವಸ್ಥಾಪಕರ ಮೊ.7760992164 ಸಿರುಗುಪ್ಪ ಘಟಕದ ವ್ಯವಸ್ಥಾಪಕರ ಮೊ.7760992165 ಕುರುಗೋಡು ಘಟಕ ವ್ಯವಸ್ಥಾಪಕರ ಮೊ.9606483671 ಸಂಡೂರು ಘಟಕ ವ್ಯವಸ್ಥಾಪಕರ ಮೊ.7760992309 ಈ ವಿಶೇಷ ಬಸ್ಸುಗಳನ್ನು ಸಾಂಧರ್ಬಿಕ ಒಪ್ಪಂದದ ಮೇಲೆ ಮುಂಗಡವಾಗಿ ಕಾಯ್ದಿರಿಸಿ, ಭಕ್ತಾಧಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/budget-takes-utmost-care-of-farmers-union-minister-hd-kumaraswamy/…
ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿ ಆಗಿದೆ ಎಂದಿರುವ ಅವರು; ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ರೈತನ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರೈತರು ಸಶಕ್ತಗೊಂಡು ಉತ್ತಮ ಆದಾಯ ಗಳಿಸುವ, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಭವಿಷ್ಯದ ಸವಾಲುಗಳಿಗೆ ಭಾರತೀಯ ಕೃಷಿಯನ್ನು ಸಜ್ಜುಗೊಳಿಸುವ ಆಯವ್ಯಯ ಇದಾಗಿದೆ ಇಂದು…
ಬೆಂಗಳೂರು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆರು ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ ಆಡುಗೋಡಿಯ ಸಿಎಆರ್ ಮೈದಾನದಲ್ಲಿ ನಡೆದ ಬೆಂಗಳೂರು ನಗರ ಪೊಲೀಸ್ “ವಾರ್ಷಿಕ ಕ್ರೀಡಾಕೂಟ 2024” ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಈಗಾಗಲೇ ಮೂರು ಕೋಟಿ ರೂ. ಅನುದಾನ ನೀಡಲಾಗಿದೆ. ಬಜೆಟ್ನಲ್ಲಿ ಇನ್ನುಳಿದ ಅನುದಾನವನ್ನು ನೀಡಲಾಗುವುದು. ಸರ್ಕಾರವು ಮುಂದಿನ ದಿನಗಳಲ್ಲಿ ಪೊಲೀಸರಿಗೆ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸುತ್ತದೆ ಎಂದು ಹೇಳಿದರು. ದೇಶದ ಬೇರೆ ಮಹಾನಗರ ಪೊಲೀಸರಿಗಿಂತ ಬೆಂಗಳೂರು ನಗರ ಪೊಲೀಸ್ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಕರ್ನಾಟಕ ಪೊಲೀಸರು ಇನ್ನು ಹೆಚ್ಚಿನ ರೀತಿಯಲ್ಲಿ ಸಮರ್ಥವಾಗಿ ಕೆಲಸ ಮಾಡಬೇಕಿದೆ ಎಂದು ನನಗೆ ಅನ್ನಿಸುತ್ತದೆ. ದಕ್ಷತೆ ಮತ್ತು ಪ್ರಾಮಾಣಿಕತೆಯಲ್ಲಿ ಕರ್ನಾಟಕ ಪೊಲೀಸ್ ಎರಡನೇ ಸ್ಥಾನದಲ್ಲಿದೆ…
ಉಡುಪಿ: ಜಿಲ್ಲೆಯ ತೊಂಬಟ್ಟುವಿನ ಮತ್ತೋರ್ವ ನಕ್ಸಲ್ ಮಹಿಳೆಯು ಜಿಲ್ಲಾಡಳಿತದ ಮುಂದೆ ಶರಣಾಗುವ ಮುನ್ಸೂಚನೆಯಿದೆ ಎನ್ನಲಾಗುತ್ತಿದೆ. ಆ ಮೂಲಕ ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಮವಾಲ್ಯೆ ಬೈಲಿನ ತೊಂಬಟ್ಟು ಗ್ರಾಮದ ಲಕ್ಷ್ಮೀ ಅವರು ಆಂಧ್ರದಲ್ಲಿ ನಕ್ಸಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2006ರ ಮಾರ್ಚ್.6ರಿಂದ ಲಕ್ಷ್ಮೀ ತೊಂಬಟ್ಟು ನಾಪತ್ತೆಯಾಗಿದ್ದರು. ಕರ್ನಾಟಕದಿಂದ ನಾಪತ್ತೆಯಾಗಿದ್ದಂತ ಲಕ್ಷ್ಮೀ ತೊಂಬಟ್ಟು ಆಂಧ್ರಪ್ರದೇಶದಲ್ಲಿ ನಕ್ಸಲರಾಗಿ ಸಕ್ರೀಯರಾಗಿದ್ದರು. ಅವರು ಮಾಜಿ ನಕ್ಸಲ್ ಸಂಜೀವ್ ಅವರನ್ನು ಮದುವೆಯಾಗಿದ್ದರು. ಆ ಬಳಿಕ ನಕ್ಸಲ್ ತೊರೆದು, ಆಂಧ್ರದಲ್ಲಿ ಸಂಸಾರಿಕ ಜೀವನ ನಡೆಸುತ್ತಿದ್ದರು. ಸದ್ಯ ಸಂಜೀವ್ ಆಲಿಯಾಸ್ ಸಲೀಂ ನಕ್ಸಲ್ ತೊರೆದು, ಮುಖ್ಯವಾಹಿನಿಗೆ ಬಂದಿದ್ದಾರೆ. ಇವರನ್ನು ವಿವಾಹವಾಗಿ ಆಂಧ್ರದಲ್ಲಿ ಜೀವನ ನಡೆಸುತ್ತಿರುವಂತ ಲಕ್ಷ್ಮೀ ಕೂಡ ಶರಣಾಗತಿಯಾಗುವ ಮೂಲಕ ಮುಖ್ಯವಾಹಿನಿಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/big-shock-to-aap-ahead-of-delhi-polls-8-mlas-join-bjp/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/
ನವದೆಹಲಿ: ಫೆಬ್ರವರಿ 5ರಂದು ನಡೆಯಲಿರುವ ದಿಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ನಿರ್ಗಮಿಸುತ್ತಿರುವ ಎಂಟು ಎಎಪಿ ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಭ್ರಷ್ಟಾಚಾರ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ತನ್ನ ಸಿದ್ಧಾಂತದಿಂದ ವಿಮುಖವಾಗಿದೆ ಎಂಬ ಕಾರಣಗಳನ್ನು ಉಲ್ಲೇಖಿಸಿ ಎಲ್ಲಾ ಎಂಟು ಶಾಸಕರು ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಲ್ಲಾ ಎಂಟು ಶಾಸಕರಿಗೆ ಎಎಪಿ ಈ ಬಾರಿ ಚುನಾವಣಾ ಟಿಕೆಟ್ ನಿರಾಕರಿಸಿದೆ. ವಂದನಾ ಗೌರ್ (ಪಾಲಂ), ರೋಹಿತ್ ಮೆಹ್ರೌಲಿಯಾ (ತ್ರಿಲೋಕ್ಪುರಿ), ಗಿರೀಶ್ ಸೋನಿ (ಮದಿಪುರ), ಮದನ್ ಲಾಲ್ (ಕಸ್ತೂರ್ಬಾ ನಗರ), ರಾಜೇಶ್ ರಿಷಿ (ಉತ್ತಮ್ ನಗರ), ಬಿ.ಎಸ್.ಜೂನ್ (ಬಿಜ್ವಾಸನ್), ನರೇಶ್ ಯಾದವ್ (ಮೆಹ್ರೌಲಿ) ಮತ್ತು ಪವನ್ ಶರ್ಮಾ (ಆದರ್ಶ್ ನಗರ) ಅವರು ಬಿಜೆಪಿಗೆ ಸೇರ್ಪಡೆಯಾದರು. https://twitter.com/otvnews/status/1885669318366806121 ಎಎಪಿಗೆ ರಾಜೀನಾಮೆ ನೀಡಿದ ನಂತರ, ಅವರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್ ಗೆ ಕಳುಹಿಸಿದ್ದಾರೆ. ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ ಎಂದು ಅವರು…
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮ್ಮ ಬಜೆಟ್ ಭಾಷಣದಲ್ಲಿ ತೆಲುಗು ಕವಿ ಮತ್ತು ನಾಟಕಕಾರ ಗುರಜಾಡ ಅಪ್ಪರಾವ್ ಅವರನ್ನು ಉಲ್ಲೇಖಿಸಿ “ದೇಶಮಂತ ಮಟ್ಟಿ ಕಾಡೋಯಿ, ದೇಶಮಂತೆ ಮನುಶುಲೋಯಿ” ಎಂದು ಉಲ್ಲೇಖಿಸಿದ್ದಾರೆ. ಈ ಸಾಲುಗಳು ಸ್ಥೂಲವಾಗಿ “ಒಂದು ದೇಶವು ಕೇವಲ ಅದರ ಮಣ್ಣು ಮಾತ್ರವಲ್ಲ, ಒಂದು ದೇಶವು ಅದರ ಜನರು” ಎಂದು ಅನುವಾದವಾಗಿದೆ. https://twitter.com/TVG_BJP/status/1885573771651932393 ಇದಕ್ಕೆ ಅನುಗುಣವಾಗಿ, ನಮಗೆ ವಿಕ್ಷಿತ್ ಭಾರತ್ ಶೂನ್ಯ ಬಡತನ, ಶೇಕಡಾ 100 ರಷ್ಟು ಗುಣಮಟ್ಟ, ಉತ್ತಮ ಶಾಲಾ ಶಿಕ್ಷಣ, ಉತ್ತಮ ಗುಣಮಟ್ಟದ ಕೈಗೆಟುಕುವ ಮತ್ತು ಸಮಗ್ರ ಆರೋಗ್ಯ ರಕ್ಷಣೆಯ ಲಭ್ಯತೆ, ಅರ್ಥಪೂರ್ಣ ಉದ್ಯೋಗದೊಂದಿಗೆ ಶೇಕಡಾ 100 ರಷ್ಟು ನುರಿತ ಕಾರ್ಮಿಕರು, ಆರ್ಥಿಕ ಚಟುವಟಿಕೆಗಳಲ್ಲಿ ಶೇಕಡಾ 70 ರಷ್ಟು ಮಹಿಳೆಯರು ಮತ್ತು ರೈತರು ನಮ್ಮ ದೇಶವನ್ನು ವಿಶ್ವದ ಆಹಾರ ಬುಟ್ಟಿಯನ್ನಾಗಿ ಮಾಡುವುದನ್ನು ಒಳಗೊಂಡಿದೆ ಎಂದು ಅವರು ಹೇಳಿದರು. ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮತ್ತು ಮೋದಿ 3.0 ಬಜೆಟ್ ಅನ್ನು…
ಚಿಕ್ಕಮಗಳೂರು: ಇಂದು ಕರ್ನಾಟಕದ ಕೊನೆಯ ನಕ್ಸಲ್ ಎಂದೇ ಕರೆಯಲಾಗಿದ್ದಂತ ರವೀಂದ್ರ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು. ಅವರಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಜೆಎಂಎಫ್ ಸಿ ನ್ಯಾಯಾಲಯಕ್ಕಿ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರನ್ನು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಿದೆ. ಅಂದಹಾಗೇ ನಕ್ಸಲ್ ರವೀಂದ್ರ ಅವರ ವಿರುದ್ಧ ಕರ್ನಾಟಕದಲ್ಲಿ 17 ಪ್ರಕರಣಗಳು ದಾಖಲಾಗಿದ್ದವು. ಇಂತಹ ಅವರು ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು. https://kannadanewsnow.com/kannada/union-budget-2025-new-income-tax-slab-released-heres-all-you-need-to-know/ https://kannadanewsnow.com/kannada/good-news-for-bmtc-employees-govt-signs-mou-for-rs-1-50-crore-accident-insurance-compensation/
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ…
ಬೆಂಗಳೂರು: ರಾಜ್ಯ ಸರ್ಕಾರದಿಂದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯುವಂತ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿಗೊಂಡಿದ್ದಂತ ಯೋಜನೆಯನ್ನು ಮಾರ್ಚ್ ನಿಂದ ರಾಜ್ಯಾಧ್ಯಂತ ವಿಸ್ತರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಅವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. https://twitter.com/dineshgrao/status/1885628797543940175?s=08 ಏನಿದು ಗೃಹ ಆರೋಗ್ಯ ಯೋಜನೆ? ಗೃಹ ಆರೋಗ್ಯ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ…