Author: kannadanewsnow09

ಬೆಂಗಳೂರು: ಬಿಎಡ್ ಕೋರ್ಸ್ ಗೆ ದಾಖಲಾತಿಗೆ ಸಂಬಂಧಿಸಿದಂತ ಈಗಾಗಲೇ ಮೊದಲ, ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಮೂರನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಈ ಕುರಿಕಂತೆ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಬಿಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ 3ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ 24-01-2024ರ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಚಲನ್ ಡೌನ್ ಲೋಡ್ ಮಾಡಿಕೊಂಡು, ದಾಖಲಾತಿ ಶುಲ್ಕವನ್ನು ಎಸ್ ಬಿಐ ಬ್ಯಾಂಕಿನಲ್ಲಿ ಪಾವತಿಸಿ, ದಿನಾಂಕ 30-01-2024ರ ಒಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಸೆಂಟರ್ ನಲ್ಲಿ ಸಲ್ಲಿಸಿ, ಪ್ರವೇಶ ಪತ್ರವನ್ನು ಪಡೆಯುವಂತೆ ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಪಡೆಯಬಹುದಾಗಿ ಎಂದಿದ್ದಾರೆ. https://kannadanewsnow.com/kannada/three-feared-dead-as-state-run-bus-collides-with-lorry-in-gadag/ https://kannadanewsnow.com/kannada/139-36-crore-girls-have-travelled-so-far-under-shakti-yojana-minister-laxmi-hebbalkar/

Read More

ರಾಮನಗರ: ಕೌಟುಂಬಿಕ ಕಲಹದಿಂದ ಬೇಸತ್ತಂತ ತಾಯಿಯೊಬ್ಬಳು ತನ್ನ ಮಗುವಿನ ಜೊತೆಗೆ ಲಕ್ಷ್ಮಣ ರೇಖೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮಗು ಸಾವನ್ನಪ್ಪಿದ್ರೇ, ತಾಯಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರಿನಲ್ಲಿ ಗಂಡ-ಹೆಂಡತಿ ಜಗಳವಾಡಿಕೊಂಡಿದ್ದರು. ಇದರಿಂದ ಬೇಸತ್ತಂತ ಪತ್ನಿ 3 ವರ್ಷದ ಮಗ ದೀಕ್ಷಿತ್ ಗೌಡಗೆ ಲಕ್ಷ್ಮಣ ರೇಖೆ ಕೀಟನಾಶಕ ಕುಡಿಸಿ, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದಂತ ತಾಯಿ-ಮಗನನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ತೀವ್ರ ವಾಂತಿ, ಬೇಧಿಯಿಂದ 3 ವರ್ಷದ ದೀಕ್ಷಿತ್ ಗೌಡ ಸಾವನ್ನಪ್ಪಿದ್ರೇ, ಚಿಕಿತ್ಸೆಯ ಬಳಿಕ ತಾಯಿ ಪೂರ್ಣಿಮಾ ಚೇತರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಘಟನೆಯ ಸಂಬಂಧ ಪೂರ್ಣಿಮಾ ವಿರುದ್ಧ ಪತಿ ಸೋಮಶೇಖರ್ ಹಾರೋಹಳ್ಳಿ ಠಾಣೆಗೆ ದೂರು ನೀಡಿದ್ರೇ, ಪತಿಯ ವಿರುದ್ಧ ಪೂರ್ಣಿಮಾ ಪೋಷಕರು ದೂರು ನೀಡಿದ್ದಾರೆ. ಈಗ ದೂರು, ಪ್ರತಿ ದೂರು ದಾಖಲಿಸಿಕೊಂಡಿರುವಂತ ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/we-are-devotees-of-lord-ram-says-siddaramaiah/ https://kannadanewsnow.com/kannada/three-feared-dead-as-state-run-bus-collides-with-lorry-in-gadag/

Read More

ಮೈಸೂರು: ನಾವು ಶ್ರೀರಾಮನ ಭಕ್ತರೇ. ಬಿಜೆಪಿಯವರ ಥರ ರಾಮನ ಹೆಸರಿನಲ್ಲಿ ರಾಜಕೀಯ ಮಾಡೋದಿಲ್ಲ ಎನ್ನುತ್ತಲೇ ಸಿಎಂ ಸಿದ್ಧರಾಮಯ್ಯ ಅವರು ಮತ್ತೆ ಜೈ ಶ್ರೀರಾಮ್ ಘೋಷಣೆಯನ್ನು ಕೂಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದರು. ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ‌. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿ ಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ ಎಂದು ಕರೆ ನೀಡಿದರು. ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ…

Read More

ಬೆಂಗಳೂರು: ಇಂದು ರಾಷ್ಟ್ರೀಯ ಹೆಣ್ಣು ಮಗು ದಿನವಾಗಿದೆ. ಎಲ್ಲ ಹೆಣ್ಣು ಮಕ್ಕಳಿಗೂ ಶುಭಾಶಯಗಳು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿ” ಇದು ರಾಷ್ಟ್ರಕವಿ ಕುವೆಂಪು ಅವರು ಹೇಳಿರುವ ಸಾಲುಗಳು. ಮಹಿಳೆಯರ ಶಕ್ತಿಯನ್ನು ಜಾಗೃತಗೊಳಿಸ, ಪ್ರೇರಣೆ ನೀಡುವ ಕಾರ್ಯವನ್ನು ನಮ್ಮ‌ಸರ್ಕಾರ ಕೈಗೊಂಡಿದೆ ಎಂದರು. ಒಂದು ಸಮಾಜ ಸದೃಢವಾಗಬೇಕಾದರೆ ಮೊದಲು ಹೆಣ್ಣು ಸ್ವಾವಲಂಬಿಯಾಗಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಎಲ್ಲದಕ್ಕೂ ಸ್ತ್ರೀ ಬಹಳ ಮುಖ್ಯ. ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳ ಅಭ್ಯುದಯಕ್ಕೆ ಸಾಕಷ್ಟು ಶ್ರಮಿಸುತ್ತಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಸಶಕ್ತೀಕರಣಕ್ಕೆ ಮುಂದಾಗಿದೆ ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು 2008 ರಿಂದ ಪ್ರತಿ ಜ.24 ರಂದು ರಾಷ್ಟ್ರೀಯ ಹೆಣ್ಣು ಮಗು ದಿನ ಆಚರಿಸುತ್ತಿದೆ. ಹೆಣ್ಣು ಮಕ್ಕಳ ರಕ್ಷಣೆ, ಅವರ…

Read More

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಬಿರುಸಿನ ಸಿದ್ಧತೆಗಳನ್ನು ಆರಂಭಿದ್ದು, ಅದಕ್ಕಾಗಿ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಸರಣಿ ಸಭೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಅವರು ಇಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಎಲ್ಲಾ ತಾಲೂಕುಗಳ ಮುಖಂಡರ ಪ್ರತ್ಯೇಕ ಸಭೆಗಳನ್ನು ನಡೆಸಿ ಮಹತ್ವದ ಸಮಾಲೋಚನೆ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಸಮಾಲೋಚನಾ ಸಭೆಗಳನ್ನು ನಡೆಸುತ್ತಿದ್ದು; ಪಕ್ಷವನ್ನು ಜಿಲ್ಲಾ, ತಾಲೂಕು ಹಾಗೂ ಅದಕ್ಕಿಂತ ತಳಮಟ್ಟದಲ್ಲಿ ಸಂಘಟನೆ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ಮುಖಂಡರಿಗೆ ಗುರಿ ನಿಗದಿ ಮಾಡುತ್ತಿದ್ದಾರೆ. ಸದ್ಯ ಜೆಡಿಎಸ್‌ ಪಕ್ಷವು ಎನ್‌ʼಡಿಎ ಒಕ್ಕೂಟವನ್ನು ಸೇರಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ ಜತೆ ಸೇರಿ ರಾಜ್ಯದಲ್ಲಿ ಕೆಲಸ ಮಾಡಬೇಕಿದೆ. ಅದರಲ್ಲೂ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟವು ರಾಜ್ಯದ ಎಲ್ಲಾ 28 ಲೋಕಸಭೆ ಕ್ಷತ್ರಗಳನ್ನು ಗೆಲ್ಲುವ ದಿಸೆಯಲ್ಲಿ ನಿಖಿಲ್‌ ಅವರು ಮುಖಂಡರ ಜತೆ ಗಂಭೀರ ಚರ್ಚೆ ನಡೆಸುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸ್ಥಾನ ಹಂಚಿಕೆ ಕುರಿತ…

Read More

ಮೈಸೂರು : “ನಮ್ಮ ರೈತರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಾಗ್ದಾನ ನೀಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಮುತ್ತಿನಮುಳುಸೋಗೆ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; “ಮೇಕೆದಾಟು ಬಗ್ಗೆ ಕಾಂಗ್ರೆಸ್ ಸರ್ಕಾರ ಚಿಂತನೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ದೇವೇಗೌಡರು ಹೇಳಿದ್ದಾರೆ. ದೇವೇಗೌಡರೇ ನೀವು ಮತ್ತು ಪ್ರಧಾನಿ ಮೋದಿ ಅವರು ಆತ್ಮೀಯರಿದ್ದೀರಿ, ಅವರ ಬಳಿ ಮಾತನಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ.” ಕಾವೇರಿ ನದಿ ನಮ್ಮ ತಾಯಿ, ಈ ತಾಯಿಯ ಕೃಪೆಯಿಂದ ನಾವೆಲ್ಲಾ ಬದುಕಿದ್ದೇವೆ. ಆದರೂ ಈ ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 26 ಜನ ಬಿಜೆಪಿ ಎಂಪಿಗಳು ರಾಜ್ಯದ ಪರವಾಗಿ ಮಾತನಾಡುತ್ತಿಲ್ಲ. ಪ್ರತಾಪ್ ಸಿಂಹ ಅವರು ಪ್ರಧಾನಿಗಳಿಗೆ ಹೇಳಿ ಅನುಮತಿ ಕೊಡಿಸಬಹುದಲ್ಲವೇ? ಆದರೂ ಯಾರೂ ದನಿ ಎತ್ತುತ್ತಿಲ್ಲ. ಕಾಂಗ್ರೆಸ್ ಪಕ್ಷ ಏನೂ ಕೆಲಸ ಮಾಡುತ್ತಿಲ್ಲ ಎಂದು ದೇವೇಗೌಡರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಮೇಕೆದಾಟು…

Read More

ಕಲಬುರಗಿ : ಆಡಳಿತದಲ್ಲಿ ಪಾರದರ್ಶಕತೆ ತರಲು ಇ-ಆಫೀಸ್ ಅನುಷ್ಟಾನಗೊಳಿಸಿದೆ. ಫೆಬ್ರವರಿ 1 ರಿಂದ ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಯಲ್ಲಿ ಇ-ಕಚೇರಿ ಮೂಲಕವೇ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಸ್ವೀಕೃತಿ ಸಂಖ್ಯೆ ನೀಡಬೇಕು. ಯಾವುದೇ ಕಾರಣಕ್ಕೂ ಭೌತಿಕ ಕಡತ ಪ್ರಕ್ರಿಯೆ ಇರಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಲದೆ ಫೆ.1 ರಿಂದ ಆವಕ ಸಿಬ್ಬಂದಿಗೆ ಸ್ಟ್ಯಾಂಪ್, ಸೀಲು ಸಹ ನೀಡಬಾರದು ಎಂದರು. ಜಿಲ್ಲೆಯ ಶಹಾಬಾದ, ಯಡ್ರಾಮಿ, ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಇ-ಕಚೇರಿ ಅನುಷ್ಟಾನ ಮಾಡದಿರುವುದಕ್ಕೆ ಸಿಡಿಮಿಡಿಗೊಂಡ ಅವರು, ಪಾರದರ್ಶಕ, ಸಮಯ ಉಳಿತಾಯ, ಅಕೌಂಟೇಬಿಲಿಟಿ ಇರಲೆಂದೇ ನೂತನ ಸಾಫ್ಟವೇರ್ ಅಭಿವೃದ್ಧಿಪಡಿಸಿದೆ. ಹೊಸ ವ್ಯವಸ್ಥೆಗೆ ಹೊಂದಿಕೊಂಡು ಕಡ್ಡಾಯವಾಗಿ ಅನುಷ್ಠನಾಗೊಳಿಸಬೇಕು ಎಂದು ತಹಶೀಲ್ದಾರ, ಕಂದಾಯ ಸಿಬ್ಬಂದಿಗಳಿಗೆ ತಾಕೀತು ಮಾಡಿದರು. ಯಡ್ರಾಮಿ ತಹಶೀಲ್ದಾರ ಕಚೇರಿಯಲ್ಲಿ ಕಳೆದ‌ 6 ತಿಂಗಳಲ್ಲಿ ಕೇವಲ 42 ಕಡತ…

Read More

ಗದಗ: ಜಿಲ್ಲೆಯಲ್ಲಿ ಇಂದು ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಈ ಅಪಘಾತದಲ್ಲಿ ಲಾರಿ, ಸರ್ಕಾರಿ ಬಸ್ ನಜ್ಜುಗುಜ್ಜಾಗಿರೋದಾಗಿ ತಿಳಿದು ಬಂದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿಯಲ್ಲಿ ಇಂದು ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿರೋದಾಗಿ ಶಂಕೆ ವ್ಯಕ್ತವಾಗಿದೆ. ಇನ್ನೂ ಈ ಭೀಕರ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/bjp-jds-lack-leadership-and-self-confidence-dk-shivakumar/ https://kannadanewsnow.com/kannada/breaking-young-rajat-patidar-replaces-virat-kohli-for-first-2-tests-against-england/

Read More

ಪಿರಿಯಾಪಟ್ಟಣ : “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮೈಸೂರು ಪಿರಿಯಾಪಟ್ಟಣ ಬೈಲುಕುಪ್ಪೆ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ತಮ್ಮ ಪಕ್ಷಕ್ಕೆ ವಾಪಸ್ ಕರೆದೊಯ್ಯಲು ಬಿಜೆಪಿಯ ಅನೇಕ ನಾಯಕರು ಶೆಟ್ಟರ್ ಅವರಿಗೆ ದುಂಬಾಲು ಬೀಳುತ್ತಿದ್ದಾರೆ. ಅವರ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಅವರ ಬಳಿ ಅಭ್ಯರ್ಥಿಗಳಿಲ್ಲವೇ? ಅವರ ಪಕ್ಷ ಸಮರ್ಥವಾಗಿದ್ದರೆ ಚುನಾವಣೆ ಎದುರಿಸಲಿ ಎಂದರು. ನಾವು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಕುಮಾರಸ್ವಾಮಿ ಅವರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೂಂಡಾ ಕಾಯ್ದೆಯನ್ನು ಮಿಸ್ ಯೂಸ್ ಮಾಡಿಕೊಳ್ಳದೇ, ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳೋದಕ್ಕೆ ಮಹತ್ವದ ಸೂಚನೆ ಹೊರಡಿಸಿದೆ. ಈ ಸಂಬಂಧ ಗೂಂಡಾ ಕಾಯ್ದೆಯಡಿ ಪ್ರಕರಣಗಳನ್ನು ನಿರ್ವಹಿಸುವ ಬಗ್ಗೆ ಮಹತ್ವದ ಸೂಚನೆಯನ್ನು ಪೊಲೀಸ್ ಇಲಾಖೆಗೆ ತಿಳಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅವರು ಹೊರಡಿಸಿರುವಂತ ಸುತ್ತೋಲೆಯಲ್ಲಿ  ಕರ್ನಾಟಕ ಅಕ್ರಮ ಭಟ್ಟಿ ಸಾರಾಯಿ ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ ಅನೈತಿಕ ವ್ಯವಹಾರಗಳ ಅಪರಾಧ ಕೊಳಚೆ ಪ್ರದೇಶಗಳನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳುವ ವಿಡಿಯೋ ಅಥವಾ ಆಡಿಯೋ ಪ್ರೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ 1985ರ ಕಾಯ್ದೆಯ ಕಲಂ 3 ಉಪ ಕಲಂ (1) & (2) ರಡಿ ಜಿಲ್ಲಾಧಿಕಾರಿ/ ಪೊಲೀಸ್‌ ಆಯುಕ್ತರಿಗೆ ಬಂಧನ ಆದೇಶ ಹೊರಡಿಸಲು ಅವಕಾಶವಿರುತ್ತದೆ ಎಂದಿದೆ. ಇಂತಹ ಪ್ರಕರಣಗಳ ಸೂಕ್ತತೆಯನ್ನು ಸದರಿ ಕಾಯ್ದೆಯ ಕಲಂ-9 ರಡಿ ರಚಿತವಾದ ಮಾನ್ಯ ಉಚ್ಚ ನ್ಯಾಯಾಲಯದ ಮೂವರು ನ್ಯಾಯಾಧೀಶರುಗಳನ್ನೊಳಗೊಂಡ ಸಲಹಾ ಮಂಡಳಿಯು ಪರಿಶೀಲಿಸುತ್ತದೆ. ಇತ್ತೀಚೆಗೆ ಬಹಳಷ್ಟು ಪ್ರಕರಣಗಳಲ್ಲಿ ತಾಂತ್ರಿಕ…

Read More