Author: kannadanewsnow09

ಬೆಂಗಳೂರು : ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಮುಂಭಾಗ ಬುಧವಾರ ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, “ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ” ಎಂದರು. “ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕೆ ಎಸ್ ಆರ್ ಟಿ ಸಿ ಸಂಸ್ಥೆ ಹೆಸರು ಮಾಡಿದೆ. ಕಳೆದ ಒಂದು ವರ್ಷದಲ್ಲಿ 112 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಸಾಧನೆಗೆ ಸಂಸ್ಥೆಯ…

Read More

ಬೆಂಗಳೂರು: AWPO (Army Welfare Placement Organisation)  ಮತ್ತು The Maven Cohort  ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನಿವೃತ್ತಿಯಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್‌ಲೈನ್ ತರಬೇತಿಗಳನ್ನು ನ.06 ರಿಂದ ಆಯೋಜಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜಾಲತಾಣ https://me-qr.com/ZIoLV2HS ದಲ್ಲಿ ನೋಂದಾಯಿಸಿಕೊಳ್ಳುವುದರ ಮೂಲಕ ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ AWPO (Army Welfare Placement Organisation)  ನ ಜಾಲತಾಣ ವನ್ನು ಸಂಪರ್ಕಿಸಬಹುದಾಗಿದೆ. https://kannadanewsnow.com/kannada/fir-lodged-against-builders-for-creating-fake-maps-in-bengaluru/ https://kannadanewsnow.com/kannada/good-news-for-ksrtc-passengers-cm-siddaramaiah-launches-airavata-club-class-2-0-buses/

Read More

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ಮಲ್ಲತಹಳ್ಳಿ ವ್ಯಾಪ್ತಿಯಲ್ಲಿ ಪಾಲಿಕೆ ನೀಡಿರುವ ಸಕ್ಷೆಗೆ ವ್ಯತಿರಿಕ್ತವಾಗಿ ಸಕಲಿ ನಕ್ಷೆ ಸಿದ್ದಪಡಿಸಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವರ ಮೇಲೆ ಎಫ್.ಐಆರ್ ದಾಖಲಿಸಲಾಗಿದೆ ಎಂದು ವಲಯ ಆಯುಕ್ತರಾದ ಬಿ‌.ಸಿ ಸತೀಶ್ ರವರು ತಿಳಿಸಿದರು. ರಾಜರಾಜೇಶ್ವರಿ ನಗರ ಮಲ್ಲತಹಳ್ಳಿ ಗ್ರಾಮ ಸಂ: 6 ಮತ್ತು 7 ರ ಮಾಲೀಕರಾದ ಜಿ. ಲಕ್ಷ್ಮಿ ಪ್ರಸಾದ್ ಜಿ.ಪಿ.ಎ ಹೋಲ್ಡರ್ ಆದ ಮೇ|| ಲ್ಯಾಕ್ವೆನ್ ಡೆವಲಪರ್ಸ್ ಪಾಲುದಾರರಾದ ಶ್ರೀ. ಡಿ. ಹರ್ದೀಪ್ ಮತ್ತು ಎ, ವಿಜಯಕುಮಾರ್ ರವರಿಗೆ ಮಂಜೂನಾತಿ ನಕ್ಷೆಯನ್ನು ಪಿ.ಆರ್.ಜೆ ನಂ-3384/23-24, ದಿನಾಂಕ: 03/11/2023 ರಂದು ನೀಡಿಲಾಗಿದೆ. ಪಾಲಿಕೆಯು S+GF+1st+2nd+3rd + Tereace floor, ಬಿಲ್ಟ್ ಅಪ್ ಏರಿಯಾ-1388.69 ಚ.ಮೀ ಇರುತ್ತದೆ. ಆರೋಪಿಗಳು ಕಟ್ಟುತ್ತಿರುವ ಕಟ್ಟಡವನ್ನು ಪರಿಶೀಲಿಸಲಾಗಿದ್ದು, ಪಾಲಿಕೆ ನೀಡಿರುವ ಮಂಜೂರಾತಿ ನಕ್ಷೆಯಂತೆ ಕಟ್ಟಡ ನಿರ್ಮಿಸದಂತೆ ನಕಲಿ ನಕ್ಷೆ ತಯಾರಿಸಿಕೊಂಡು ನಗರ ಯೋಜನೆಯ ಸಹಾಯಕ ನಿರ್ದೇಶಕರು ಹೆಸರು ತಾಳೆಯಾಗದಂತೆ ಸ್ವಯಾಚ್ಛಾನುಸಾರ ಕಟ್ಟಡವನ್ನು ನಿರ್ಮಿಸುತ್ತಿರುತ್ತಾರೆ. ನಕಲಿ ನಕ್ಷೆಯಲ್ಲಿ 6 ಅಂತಸ್ತುಗಳನ್ನು ನಿರ್ಮಿಸಿದ್ದು, ಒಂದು ಅಂತಸ್ತಿಗೆ 4…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ ಮೆಟ್ರೋ ಫೀಡರ್ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಯಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ 04.11.2024 ರಿಂದ ಪರಿಚಯಿಸಲಾಗುತ್ತಿದೆ. ವಿವರ ಕೆಳಕಂಡಂತಿದೆ: ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ/ಸುತ್ತುವಳಿ ಎಂಎಫ್-38 ರಾಜರಾಜೇಶ್ವರಿ ನಗರ ಮೆಟ್ರೋ ನಿಲ್ದಾಣ ರಾಜರಾಜೇಶ್ವರಿ ನಗರ ಮೆಟ್ರೋ ನಿಲ್ದಾಣ ಜವರೇಗೌಡನಗರ,          ವಿ ಲೆಗ್ಗೆಸಿ ಕನ್ವೆನ್ಷನ್ ಹಾಲ್ ರಸ್ತೆ, ಡಿಸೋಜನಗರ, ನಾಯಂಡನಹಳ್ಳಿ. 01 ಬಸ್ಸು ಸದರಿ ಮಾರ್ಗದ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿದೆ. ಮಾರ್ಗ ಸಂಖ್ಯೆ   ಎಂಎಫ್-38                             ರಾಜರಾಜೇಶ್ವರಿ ನಗರ ಮೆಟ್ರೋ ನಿಲ್ದಾಣ ಬಿಡುವ ವೇಳೆ 7:40, 8:10, 8:40, 9:10, 9:40, 10:30, 16:15, 17:00, 17:30, 18:00, 18:30, 19:00,…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೈದ್ಯಕೀಯ ಕೋರ್ಸ್ ಗೆ ದಾಖಲಾತಿ ನಡೆಯುತ್ತಿದೆ. ಇಂದು ವೈದ್ಯಕೀಯ ಕೋರ್ಸ್ ನ ಸ್ಟೇ ವೇಕೆನ್ಸಿ ಸುತ್ತಿನ ಸೀಟುಗಳ ಹಂಚಿಕೆಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿಕೆ ಕೆಇಎ ಮಾಹಿತಿ ಹಂಚಿಕೊಂಡಿದ್ದು, UGNEET-24 ವೈದ್ಯಕೀಯ ಕೋರ್ಸ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ಜು ಪ್ರಕಟಿಸಲಾಗಿದೆ ಎಂದು ತಿಳಿಸಿದೆ. ಯುಜಿ ನೀಟ್-2024ರ ಪರೀಕ್ಷೆ ಬರೆದಿದ್ದಂತವರು KEA ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದ್ದು ಆಕ್ಷೇಪಣೆಗಳು ಇದ್ದಲ್ಲಿ ಸಂಜೆ 4 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು ಎಂದಿದೆ. https://kannadanewsnow.com/kannada/not-nikhil-i-am-the-biggest-target-for-congress-hd-kumaraswamy/ https://kannadanewsnow.com/kannada/karnataka-rajyotsava-awardees-list-to-be-announced-at-4-pm-today/

Read More

ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಟಾರ್ಗೆಟ್ ಅಲ್ಲ, ನಾನು ಟಾರ್ಗೆಟ್ ಆಗಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಉಪ ಚುನಾಣೆಯಲ್ಲಿ ನಿಖಿಲ್ ಸೋಲಿಸಲು ಕಾಂಗ್ರೆಸ್ ದೊಡ್ಡ ಕುತಂತ್ರ ರೂಪಿಸಿದೆ. ಅದರಿಂದ ನನ್ನ ಮುಂದಿನ ಬೆಳವಣಿಗೆ ಕುಗ್ಗಿಸಬಹುದು ಎಂದು ಅವರು ಲೆಕ್ಕಾಚಾರ ಮಾಡಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಬೇಕೆಂದು ಹೊರಟಿದ್ದಾರೆ. ನಾನು ಕೇಂದ್ರ ಮಂತ್ರಿಯಾಗಿರುವುದನ್ನು ಅವರು ಸಹಿಸುತ್ತಿಲ್ಲ. ಅವರಿಗೆ ನಿಖಿಲ್ ಗಿಂತ ನಾನೇ ದೊಡ್ಡ ಟಾರ್ಗೆಟ್ ಆಗಿದ್ದೇನೆ. ಅವರ ಯಾವುದೇ ಕುತಂತ್ರಗಳು ಚನ್ನಪಟ್ಟಣ ಜನತೆ ಮುಂದೆ ನಡೆಯಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಕಾಲದಿಂದಲೇ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಷಡ್ಯಂತ್ರ ಮಾಡಿ 19 ಸ್ಥಾನಕ್ಕೆ ಜೆಡಿಎಸ್ ಇಳಿಸಿದರು. ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಅಪಪ್ರಚಾರ ಮಾಡಿದರು. ಆದರೆ, ಯಾರೊಬ್ಬರನ್ನೂ ಅಲುಗಾಡಿಸಲು ಅವರಿಂದ ಆಗಲಿಲ್ಲ ಎಂದು ಕಿಡಿಕಾರಿದರು. ಮುಸ್ಲಿಮರು ಕಾಂಗ್ರೆಸ್ ಪಕ್ಷದ ಟಾರ್ಗೆಟ್; ಶಿಗ್ಗಾಂವಿ ಖಾದ್ರಿ ಕಿಡ್ನಾಪ್ ಮಾಡಿ ಗೃಹಬಂಧನ…

Read More

ಬೆಂಗಳೂರು : ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.‌ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಸಭೆಯಲ್ಲಿ ಈ ಸೂಚನೆ ನೀಡಿದರು. ಗಣಿ ಇಲಾಖೆ ಪ್ರಗತಿ ಯು ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 54ರಷ್ಟು ಇತ್ತು . ಪ್ರಸಕ್ತ ಸಾಲಿನಲ್ಲಿ ಶೇ 46 ರಾಜಸ್ವ ಸಂಗ್ರಹಣೆ ಆಗಿದೆ. ಅರಣ್ಯ ಇಲಾಖೆಯೊಂದಿಗಿನ ಇರುವ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಪ್ರಸಕ್ತ ಸಾಲಿಗೆ ರಾಜಸ್ವ ಸಂಗ್ರಹಣೆ ಗುರಿ ರೂ 9000ಕೋಟಿ, ಅಕ್ಟೋಬರ್ ವರೆಗಿನ ರಾಜಸ್ವ ಸಂಗ್ರಹಣೆ ರೂ. 4070.22 ಕೋಟಿ ರಾಜ್ಯದ ಅಭಿವೃದ್ಧಿಗೆ ಹಿತಾಸಕ್ತಿಗೆ ಪ್ರಾಮುಖ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ರಾಜ್ಯದ ಹಿತಾಸಕ್ತಿಗೆ, ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮ ಉಲ್ಲಂಘಿಸಿದೆ ಕ್ರಿಯಾಶೀಲತೆ ತೋರಿ ಎಂದು ಅರಣ್ಯ ಇಲಾಖೆ ಪಿಸಿಸಿಎಫ್ ಅವರಿಗೆ…

Read More

ಬೆಂಗಳೂರು: ತಮ್ಮನ್ನು ಬ್ಲ್ಯಾಕ್ಮೇಲರ್ ಎಂದು ಕರೆದಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ವಕೀಲ ಟಿ.ಜೆ.ಅಬ್ರಹಾಂ ಬುಧವಾರ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದ ಅರ್ಜಿದಾರರಲ್ಲಿ ಅವರು ಕೂಡ ಒಬ್ಬರು. “ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಕೆಲವು ಸಾರ್ವಜನಿಕ ಹೇಳಿಕೆಗಳನ್ನು ನೀಡಿದ್ದಾರೆ. ಅವರು ನನ್ನನ್ನು ಬ್ಲ್ಯಾಕ್ಮೇಲರ್ ಮತ್ತು ಕೆಟ್ಟ ಹಿನ್ನೆಲೆ ಹೊಂದಿರುವ ವ್ಯಕ್ತಿ ಎಂದು ಕರೆದರು” ಎಂದು ಅಬ್ರಹಾಂ ಪಿಟಿಐಗೆ ತಿಳಿಸಿದ್ದಾರೆ. “ನೀವು (ಸಿದ್ದರಾಮಯ್ಯ) ನಕಲಿ ಮತ್ತು ಕಾನೂನುಬಾಹಿರ ಹಕ್ಕು ಸೃಷ್ಟಿಸಿ 14 ಸೈಟ್ಗಳನ್ನು ತೆಗೆದುಕೊಂಡಿದ್ದೀರಿ ಮತ್ತು ನೀವು ನನ್ನನ್ನು ಬ್ಲ್ಯಾಕ್ಮೇಲರ್ ಎಂದು ಕರೆಯುತ್ತೀರಿ! ನಾನು ನಿಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ನೀವು ಹೇಗೆ ತಪ್ಪಿಸಿಕೊಳ್ಳುತ್ತೀರಿ ಎಂದು ನಾವು ನೋಡುತ್ತೇವೆ” ಎಂದು ಅವರು ಹೇಳಿದರು. ಮುಡಾ ಪ್ರಕರಣದಲ್ಲಿ, ಮುಡಾ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಸ್ಥಳಕ್ಕೆ…

Read More

ಬೆಂಗಳೂರು : “ಮುಖ್ಯಮಂತ್ರಿಯಾಗಿ ಅಧಿಕಾರ ಇದ್ದಾಗಲೇ ತಾನು ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರದ ಜನರಿಗೆ ಕುಮಾರಣ್ಣ ಏನೂ ಮಾಡಲಿಲ್ಲ. ಈಗ ಈ ಕ್ಷೇತ್ರದ ಶಾಸಕ ಸ್ಥಾನವೂ ಇಲ್ಲದಿರುವಾಗ ಅವರು ಏನು ತಾನೇ ಮಾಡಲು ಸಾಧ್ಯ? ಇದು ಕ್ಷೇತ್ರದ ಜನರಿಗೂ ಚನ್ನಾಗಿ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಳಿದಾಗ, “ನಾವು ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಕೆಲಸ ಮಾಡುತ್ತಿಲ್ಲ. ಅಲ್ಲಿ ಶಾಸಕ ಸ್ಥಾನ ತೆರವಾದಾಗಿನಿಂದಲೂ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು. “ಆ ಕ್ಷೇತ್ರದ ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಿ ಅವರ ಕಷ್ಟಗಳನ್ನು ಆಲಿಸಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಕೇಳಲು ಕಾರ್ಯಕ್ರಮ ಮಾಡಿದಾಗ ಸುಮಾರು 22 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ” ಎಂದರು. “ತಮಗೆ ಮನೆ, ನಿವೇಶನ ನೀಡಿಲ್ಲ, ಬಗರ್ ಹುಕ್ಕುಂ ಸಾಗುವಳಿ ಸಭೆ ಮಾಡಿಲ್ಲ, ರಸ್ತೆ ಇಲ್ಲ. ನಮ್ಮ ಕಷ್ಟ…

Read More

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು…

Read More