Author: kannadanewsnow09

ಬೆಂಗಳೂರು: ಅಕ್ಟೋಬರ್‌ 31 ರಿಂದ ನವೆಂಬರ್‌ 2ರ ವರೆಗೆ ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ 10ರ ನಂತರ ಹಾಗೂ ಹಗಲು ಹೊತ್ತಿನಲ್ಲಿ ಪಟಾಕಿ ಸಿಡಿಸುವಂತಿಲ್ಲ. ಸುಪ್ರೀಂ ಕೋರ್ಟ್‌ ಅನುಮತಿ ನೀಡಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ. https://twitter.com/KarnatakaVarthe/status/1851258959048609910 ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ದಿನಾಂಕ: 31/10/2024 ರಿಂದ 02/11/2024ರವೆಗೆ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ…

Read More

ಬೆಂಗಳೂರು: ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್‌ ಎಸ್‌. ತಂಗಡಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿದ್ದೀರಿ ಎಂದರೆ ಶೇ.60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರುವ ನ್ಯಾಯಾಲಯದ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಬಣ್ಣಿಸಿದರು. ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕೆಂಬ ಪ್ರಶ್ನಿಸಿ ಕೆಲ ವಾಣಿಜ್ಯ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಆದರೆ ನ್ಯಾಯಾಲಯ ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ. ಕನ್ನಡ ಭಾಷೆ ನೆಲ ಜಲ, ಸಂಸ್ಕೃತಿ, ಆಚಾರ – ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ತಿಳಿಸಿದರು. https://twitter.com/KarnatakaVarthe/status/1851245987043668440 https://kannadanewsnow.com/kannada/manjunath-bhandari-the-government-should-take-strict-action-against-those-who-disturb-peace-and-spread-hatred-in-the-society/ https://kannadanewsnow.com/kannada/50-achievers-to-be-honoured-with-golden-jubilee-awards-on-kannada-rajyotsava-day-minister-shivaraj-tandaragi/

Read More

ಬೆಂಗಳೂರು: ನವೆಂಬರ್.1ರಂದು ರಾಜ್ಯೋತ್ಸವ ಪ್ರಶಸ್ತಿಯ ಜೊತೆ ಜೊತೆಗೆ 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ನೀಡಿ ಗೌರವಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಡರಗಿ ತಿಳಿಸಿದ್ದಾರೆ. ಇಂದಿನ ಸರ್ಕಾರದಲ್ಲಿ ಅಕಾಡೆಮಿಗಳು ಸಂಪೂರ್ಣ ನಿಷ್ಕ್ರಿಯವಾಗಿದ್ದವು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 14 ಅಕಾಡೆಮಿ ಮತ್ತು 4 ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನ ನೇಮಿಸುವ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಾಗಿದೆ ಎಂದರು. https://twitter.com/KarnatakaVarthe/status/1851257030801309894 ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷವಾದಂತಹ ಇಲಾಖೆ. ಇಲಾಖೆ ಅಧಿನದಲ್ಲಿರುವ ಪ್ರಾಧಿಕಾರ ಮತ್ತು ಅಕಾಡೆಮಿಗಳು ಇಲಾಖೆಯ ಆಧಾರ ಸ್ಥಂಭಗಳು ಎಂದರೆ ತಪ್ಪಾಗಲಾರದು. ಅಕಾಡೆಮಿ – ಪ್ರಾಧಿಕಾರಗಳು ನಿಜಕ್ಕೂ ಇಲಾಖೆಗೆ ಮೆರುಗು ತರುವ ಕೆಲಸವನ್ನು ಮಾಡುತ್ತಿವೆ. ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ತುಂಬಿರುವ ಈ ಸಂಭ್ರಮದಲ್ಲಿ ನಾನು ಇಲಾಖೆಯ ಸಚಿವನಾಗಿರುವುದು ನನ್ನ ಭಾಗ್ಯ. ಒಂದು ಕರ್ನಾಟಕ ಎಂದು ಹೆಸರಿಟ್ಟ ಸಂದರ್ಭದಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದರು. ಅಂದು ಕರ್ನಾಟಕದ ಹಂಪಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು…

Read More

ಬೆಂಗಳೂರು: ವಿಶ್ವ ಮಾನವ, ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂಬ ಸಂದೇಶವನ್ನು ಜಗಕ್ಕೆ ಸಾರಿದರು. ಆದರೀಗ ವಿರೋಧ ಪಕ್ಷದವರು ಶಾಂತಿಯುತ ನಾಡಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಮುಂದಾಗಿದ್ದಾರೆ. ಜನಾಂಗದ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂಬುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ್ ಭಂಡಾರಿ ಆಗ್ರಹಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಜಾತಿಜನಾಂಗದ ಹಿತ ಕಾಪಾಡುತ್ತಾ ಬಂದಿದೆ. ಸಾಮರಸ್ಯಕ್ಕೆ ಧಕ್ಕೆಯಾಗುವುದಕ್ಕೆ ಆಸ್ಪದ ಕೊಟ್ಟಿಲ್ಲ. ಆದರೆ ಮಹಾರಾಷ್ಟ್ರ ಚುನಾವಣೆ ಹಾಗೂ ರಾಜ್ಯದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಪ್ರತಿಪಕ್ಷದವರು ರಾಜ್ಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಕೋಮಸೌಹರ್ದತೆ ಕದಡುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪನೆಯಾಗಿದ್ದು ಜನರು ಶಾಂತಿ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇದನ್ನು ಸಹಿಸದ ಅವರು ಜಾತಿ,…

Read More

ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘ ಹಾಗೂ ವಕೀಲರ ಬಳಗದ ಸಂಯುಕ್ತಾಶ್ರಯದಲ್ಲಿ ದಿನಾಂಕ 31-10-2024ರಂದು ನ್ಯಾಯಾಲಯದ ಮುಂಭಾಗದಲ್ಲಿ ರಾಜ ವೀರ ಮದಕರಿ ನಾಯಕ ಎನ್ನುವಂತ ನಾಯಕವನ್ನು ಪ್ರದರ್ಶ ಮಾಡಲಾಗುತ್ತದೆ ಎಂಬುದಾಗಿ ಮಾಜಿ ಅಧ್ಯಕ್ಷ ಸಿ.ಶಿವು ಯಾದವ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಈ ಹಿಂದೆ ದಿನಾಂಕ:13-10-2024ರಂದು ನಾಟಕ ಪದರ್ಶನ ಮಾಡಲಾಗುವುದೆಂದು ತಮ್ಮ ಮೂಲಕ ತಿಳಿಸಲಾಗಿತ್ತು. ಆದರೆ ಹವಮಾನ ವೈಪರಿತ್ಯದ ಕಾರಣ ನಾಟಕವನ್ನು ಪ್ರದರ್ಶನ ಮಾಡಲಾಗದೆ ದಿನಾಂಕ:31-10-2024ರಂದು ನಿಗದಿಪಡಿಸಲಾಗಿತ್ತು. ಈ ನಾಟಕವನ್ನು ನೋಡಲು ಸುಮಾರು 10 ಸಾವಿರ ಜನ ಬರುವ ನಿರೀಕ್ಷೆ ಇರುತ್ತದೆ. ಜಿಲ್ಲಾ ವಕೀಲರಿಂದ ಈಗಾಗಲೇ ಯಶಸ್ವಿಯಾಗಿ 2 ಬಾರಿ ಕುರುಕ್ಷೇತ್ರ ಪೌರಾಣಿಕ ನಾಟಕ ಮತ್ತು 1 ಬಾರಿ ಸಾಮಾಜಿಕ ನಾಟಕವು ಪದರ್ಶನ ಮಾಡಿ ಜನ ಮನ್ನಣೆಯನ್ನು ಗಳಿಸಿರುತ್ತಾರೆ. ಸದರಿ ನಾಟಕವನ್ನು ನೋಡಲು ಎಲ್ಲಾ ತಾಲ್ಲೂಕುಗಳಿಂದ ಮತ್ತು ಹಳ್ಳಿ ಹಳ್ಳಿಗಳಿಂದಲೂ ಜನ ಸಾಗರವು ಹರಿ ಬಂದಿದ್ದನ್ನು ತಾವು ಈ ಹಿಂದೆ ಗಮನಿಸಿರುತ್ತೀರಿ ಎಂದಿದ್ದಾರೆ. ರಾಜ ವೀರ ಮದಕರಿ ನಾಯಕ…

Read More

ಹಾವೇರಿ : ರಾಜ್ಯ ಕಾಂಗ್ರೆಸ್ ಸರ್ಕಾರ ಶಿಗ್ಗಾವಿಗೆ ನೂರು ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ ಎಂದು ಹಸಿ ಸುಳ್ಳು ಹೇಳಿ ಜನರಿಗೆ ಮೋಸ ಮಾಡಿದೆ. ನೂರು ಕೋಟಿ ರೂ. ಬಿಡುಗಡೆ ಮಾಡಿರುವ ದಾಖಲೆ ಇದ್ದರೆ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಶಿಗ್ಗಾವಿ ತಾಲೂಕಿನ ಹೋತನಹಳ್ಳಿ, ಚಂದಾಪುರ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಸಣ್ಣ ಪುಟ್ಟ ವಿಷಯಗಳಿಗೂ ಜನರ ಮೇಲೆ ಕೇಸ್ ಹಾಕಿ ಪೊಲಿಸ್ ಸ್ಟೇಷನ್ ಗೆ ಅಲೆದಾಡುವಂತೆ ಮಾಡುತ್ತಿದ್ದಾರೆ. ಪಿಎಸ್ ಐ ಗಳು ಕೊಬ್ಬಿದ್ದಾರೆ. ದಬ್ಬಾಳಿಕೆ ಮಾಡುವ ಸರ್ಕಾರದ ವಿರುದ್ದ ಎಲ್ಲರೂ ನಿಲ್ಲಬೇಕು. ನಾನು ಸದಾ ನಿಮ್ಮ ಜೊತೆಗೆ ಇರುತ್ತೇನೆ. ನಿಮ್ಮ ಕೂದಲಿಗೆ ಕೊಂಕಾಗದ ಹಾಗೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಶಿಗ್ಗಾವಿ ಕ್ಷೇತ್ರದಲ್ಲಿ ಯಾವುದೇ ರೀತಿಯ ಗಲಭೆಗಳು ಆಗಿರಲಿಲ್ಲ. ನಮ್ಮ ನಮ್ಮ ನಡುವೆಯೇ…

Read More

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಸಾಗರ ನಗರದ ಉಪ ವಿಭಾಗೀಯ ಅಧಿಕಾರಿ ಕಚೇರಿಯ ಮುಂದೆ ಕೆಲ ದಿನಗಳ ಕಾಲ ರೈತರು ಪ್ರತಿಭಟನೆ, ಅನಿರ್ಧಿಷ್ಟಾವಧಿ ಮುಷ್ಕರ ನಡೆಸಿದ್ದರು. ಅಲ್ಲದೇ ಲಿಂಗನಮಕ್ಕಿ ಚಲೋ ಕೂಡ ನಡೆಸಿದ್ದರು. ಈ ಬೆನ್ನಲ್ಲೇ ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಎಂ.ಕಿಶೋರ್ ಕುಮಾರ್ ಅವರು ಸಭಾ ಸೂಚನ ಪತ್ರವನ್ನು ಹೊರಡಿಸಿದ್ದಾರೆ. ಅದರಲ್ಲಿ ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು ಹಾಗೂ ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಹಾಗೂ ಸಮಸ್ಯೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ ಇವರ ಉಪಸ್ಥಿತಿಯಲ್ಲಿ ದಿನಾಂಕ 30-10-2024ರಂದು ಸಂಜೆ 4 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 313ರಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲಾ…

Read More

ನಮಸ್ಕಾರ ಸ್ನೇಹಿತರೆ ಈ ದಿನ ನಾವು ತುಂಬಾ ಮುಖ್ಯ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಮನುಷ್ಯನ ಜೀವನದಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ಪ್ರತಿನಿತ್ಯ ಎದುರಾಗುತ್ತಲೇ ಇರುತ್ತವೆ ಒಂದು ಸಮಸ್ಯೆಗೆ ಪರಿಹಾರವನ್ನು ಪಡೆದುಕೊಳ್ಳುತ್ತಿದ್ದಂತೆ ಮತ್ತೊಂದು ಸಮಸ್ಯೆ ಹುಟ್ಟಿಕೊಳ್ಳುವುದು ಮನುಷ್ಯನ ಜೀವನದಲ್ಲಿ ಸಾಮಾನ್ಯವಾಗಿರುತ್ತದೆ ಆದರೆ ಸ್ನೇಹಿತರೇ ಸಮಸ್ಯೆಗಳು ಬರುತ್ತಿವೆ ಎಂದು ಹೆದರಿ ನಡೆದಷ್ಟು ಸಮಸ್ಯೆಗಳು ಹೆಚ್ಚಾಗುತ್ತ ಹೋಗುತ್ತವೆ ಸಮಸ್ಯೆಗಳನ್ನು ಎದುರಿಸಿ ನಡೆದರೆ ಖಂಡಿತವಾಗಿಯೂ ಉತ್ತಮ ಜೀವನವನ್ನು ಪಡೆದುಕೊಳ್ಳಬಹುದು ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…

Read More

ಬೆಂಗಳೂರು: ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಇಂದು ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು,ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ ಮೀಸಲು ಅರಣ್ಯ ಎಂದು ಗೆಜೆಟ್ ಅಧಿಸೂಚನೆ ಆಗಿದ್ದು, ಇದನ್ನು 1960ರ ದಶಕದಲ್ಲಿ ಡಿನೋಟಿಫಿಕೇಷನ್ ಮಾಡದೆ ಕಾನೂನು ಬಾಹಿರವಾಗಿ ಎಚ್.ಎಂ.ಟಿ. ಸಂಸ್ಥೆಗೆ ದಾನ, ಮಂಜೂರು ಹೆಸರಲ್ಲಿ ಹಸ್ತಾಂತರಿಸಲಾಗಿರುತ್ತದೆ. ಸುಪ್ರೀಂಕೋರ್ಟ್ ‘Once a forest is always a forest unless de-notified’ ಎಂದು ಹೇಳಿದ್ದು, ಡಿ ನೋಟಿಫಿಕೇಷನ್ ಆಗದ ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯವೇ ಆಗಿರುತ್ತದ. ಜೊತೆಗೆ ತನ್ನ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಎಚ್.ಎಂ.ಟಿ. ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಮತ್ತು…

Read More

ಶಿವಮೊಗ್ಗ ; 2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ನಿಗದಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ನ.15ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. https://kannadanewsnow.com/kannada/good-news-for-passengers-special-train-service-between-bengaluru-and-barauni/ https://kannadanewsnow.com/kannada/bengaluru-minister-ishwar-khandre-orders-legal-action-against-those-who-felled-trees-on-hmt-forest-land/

Read More