Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ನವದೆಹಲಿ:ಜಿಎಸ್ಟಿ ಕೌನ್ಸಿಲ್ ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್ಗಳನ್ನು ರದ್ದುಗೊಳಿಸಿದೆ ಪ್ರಮುಖ ತೆರಿಗೆ ಪರಿಷ್ಕರಣೆಯಲ್ಲಿ, ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರುವಂತೆ ಭಾರತದ ಸರಕು ಮತ್ತು ಸೇವಾ ತೆರಿಗೆ ಪದ್ಧತಿಯ ವ್ಯಾಪಕ ತರ್ಕಬದ್ಧಗೊಳಿಸುವಿಕೆಯನ್ನು ಜಿಎಸ್ಟಿ ಕೌನ್ಸಿಲ್ ಅನುಮೋದಿಸಿದೆ. ಕೌನ್ಸಿಲ್ ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್ಗಳನ್ನು ರದ್ದುಗೊಳಿಸಲು, ಅವುಗಳನ್ನು ಶೇ.5 ಮತ್ತು ಶೇ.18 ರ ಎರಡು-ದರ ರಚನೆಯೊಂದಿಗೆ ಬದಲಾಯಿಸಲು ಮತ್ತು ಪಾಪ ಮತ್ತು ಐಷಾರಾಮಿ ವಸ್ತುಗಳ ಮೇಲೆ ಶೇ.40 ರ ಜಿಎಸ್ಟಿ ವಿಧಿಸಲು ನಿರ್ಧರಿಸಿದೆ. ಜಿಎಸ್ಟಿ ಮಂಡಳಿಯ ಪ್ರಮುಖ ನಿರ್ಧಾರಗಳು ಎರಡು-ಸ್ಲ್ಯಾಬ್ ರಚನೆ: ಎಲ್ಲಾ ಸರಕು ಮತ್ತು ಸೇವೆಗಳು ಈಗ 5% ಅಥವಾ 18% ಜಿಎಸ್ಟಿ ಅಡಿಯಲ್ಲಿ ಬರುತ್ತವೆ, ಬಹು-ಸ್ಲ್ಯಾಬ್ ವ್ಯವಸ್ಥೆಯನ್ನು ಕೊನೆಗೊಳಿಸುತ್ತವೆ. 12% ಮತ್ತು 28% ತೆಗೆದುಹಾಕಲಾಗಿದೆ: ಈ ಸ್ಲ್ಯಾಬ್ಗಳ ಅಡಿಯಲ್ಲಿ ಹಿಂದೆ ಇದ್ದ ವಸ್ತುಗಳನ್ನು ಹೊಸ ಎರಡು-ಸ್ಲ್ಯಾಬ್ ರಚನೆಗೆ ಮರು ವರ್ಗೀಕರಿಸಲಾಗುತ್ತದೆ. 40% ನಲ್ಲಿ ಪಾಪ ಮತ್ತು ಐಷಾರಾಮಿ ಸರಕುಗಳು: ಸಿಗರೇಟ್, ಪ್ಯಾನ್ ಮಸಾಲಾ,…
ಬೆಂಗಳೂರು: ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಿರುವಪ ರಿಣಾಮವಾಗಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಪರಿಷ್ಕೃತ ನೇಮಕಾತಿ ಮಾಡಲು ಮೀಸಲಾತಿ ರೋಸ್ಮರನ್ನು ಸರ್ಕಾರ ಪ್ರಕಟಿಸಿದೆ. ಇಂದು ರಾಜ್ಯ ಸರ್ಕಾರ ನಡವಳಿಕೆಯನ್ನು ಹೊರಡಿಸಿದ್ದು, ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ನಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ 100 ಬಿಂದುಗಳ ಪರಿಷ್ಕೃತ ರೋಸ್ಮರನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ ಎಂದಿದೆ. ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ಮೀಸಲಾತಿಯನ್ನು, ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇಕಡ 6, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪವರ್ಗ-ಸಿ ರಲ್ಲಿನ…
ತೆಲಂಗಾಣ: ತೆಲಂಗಾಣ ನಾಯಕಿ ಕೆ. ಕವಿತಾ ಅವರು ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಗೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ, ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ ಒಂದು ದಿನದ ನಂತರ ಈ ನಿರ್ಧಾರ ಕೈಗೊಂಡಿದ್ದಾರೆ. ಅವರು ತಮ್ಮ ಸಹೋದರ ಕೆ.ಟಿ. ರಾಮರಾವ್ ಅವರಿಗೆ ಸೋದರಸಂಬಂಧಿಗಳಾದ ಟಿ. ಹರೀಶ್ ರಾವ್ ಮತ್ತು ಜೆ. ಸಂತೋಷ್ ರಾವ್ ವಿರುದ್ಧ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಶಿಸ್ತಿನ ಆಧಾರದ ಮೇಲೆ ಮತ್ತು “ಪಕ್ಷ ವಿರೋಧಿ” ಚಟುವಟಿಕೆಗಳ ಮೇಲೆ ಕೆ. ಕವಿತಾ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕವಿತಾ ಅವರು ಕೆ.ಟಿ.ಆರ್ ಅವರ ಸೋದರಸಂಬಂಧಿಗಳನ್ನು “ನಂಬಬೇಡಿ” ಎಂದು ಒತ್ತಾಯಿಸಿದರು ಮತ್ತು ಸೋದರಸಂಬಂಧಿಗಳ ಭ್ರಷ್ಟಾಚಾರದಿಂದಾಗಿ ಕೇಂದ್ರ ತನಿಖಾ ದಳ (ಸಿಬಿಐ) ತನ್ನ ತಂದೆ ಕೆ. ಚಂದ್ರಶೇಖರ್ ಅವರನ್ನು ತನಿಖೆ ಮಾಡುತ್ತಿದೆ ಎಂದು ಆರೋಪಿಸಿದರು. ಸೋದರಸಂಬಂಧಿಗಳು ಕುಟುಂಬವನ್ನು “ನಾಶಮಾಡಲು ಯೋಜಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದರು ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಮತ್ತು ಸಹೋದರ…
ಬೆಂಗಳೂರು: ರೀಥಿಂಕ್ ಇಂಡಿಯಾ ಪಾಡ್ಕ್ಯಾಸ್ಟ್ನ ಹೊಸ ಸಂಚಿಕೆಯಲ್ಲಿ, ಫುಡ್ ಫಾರ್ಮರ್ ಸೂಪರ್ಹೆಲ್ತ್ ಆಸ್ಪತ್ರೆಯ ಸಿಇಒ ಮತ್ತು ಓಲಾ ಎಲೆಕ್ಟ್ರಿಕ್ನ ಮಾಜಿ ಸಿಎಮ್ಒ ಮತ್ತು ಅಪೋಲೋ ಆಸ್ಪತ್ರೆಗಳ ಮುಖ್ಯ ಕಂದಾಯ ಅಧಿಕಾರಿ ವರುಣ್ ದುಬೆ ಅವರೊಂದಿಗೆ ಭಾರತದ ಆರೋಗ್ಯ ವ್ಯವಸ್ಥೆಯನ್ನು ಕಾಡುತ್ತಿರುವ ಆಳವಾಗಿ ಬೇರೂರಿರುವ ಅಸಮರ್ಥತೆ ಮತ್ತು ಬೆಲೆ ವಿವಾದಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರಮುಖ ಚರ್ಚೆ: • ಮುರಿದ ಬಿಲ್ಲಿಂಗ್ ಮತ್ತು ಗುಪ್ತ ವೆಚ್ಚಗಳು: ಒಂದೇ ರೀತಿಯ ಸೇವೆಗಳಿಗೆ (ಎದೆ vs. ಕಾಲು ಎಕ್ಸ್-ರೇಗಳು, ಅಥವಾ ಕೊಠಡಿ ವರ್ಗ-ಆಧಾರಿತ ವೆಚ್ಚ ವ್ಯತ್ಯಾಸಗಳು) ವಿವರಿಸಲಾಗದ ವ್ಯತ್ಯಾಸಗಳು ಮತ್ತು ರೋಗಿಯ ನಂಬಿಕೆಯನ್ನು ದುರ್ಬಲಗೊಳಿಸುವ ಗುಪ್ತ ವೆಚ್ಚಗಳು ಸೇರಿದಂತೆ – ಅನಿಯಂತ್ರಿತ ಬಿಲ್ಲಿಂಗ್ ಮೂಲಕ ಭಾರತೀಯ ಆಸ್ಪತ್ರೆಗಳು ಹೇಗೆ ರೋಗಿಗಳಿಗೆ ನಿಯಮಿತವಾಗಿ ಹೆಚ್ಚಿನ ಶುಲ್ಕ ವಿಧಿಸುತ್ತವೆ ಎಂಬುದರ ಕುರಿತು ಸಂಭಾಷಣೆ ಬೆಳಕು ಚೆಲ್ಲುತ್ತದೆ. • ವೈದ್ಯರ ಪರಿಹಾರ ಬಿಕ್ಕಟ್ಟು: ದುಬೆ ಅವರು ದೋಷಪೂರಿತ ವ್ಯವಸ್ಥೆಯನ್ನು ಚರ್ಚಿಸುತ್ತಾರೆ, ಅಲ್ಲಿ ವೈದ್ಯರು ತಮ್ಮ ಉದ್ಯೋಗದಾತರೊಂದಿಗೆ ವಹಿವಾಟು, ಮಾರಾಟದಂತಹ ಸಂಬಂಧಗಳಿಗೆ…
ಮಂಗಳೂರು: ಪ್ರಯಾಣಿಕರೊಬ್ಬರ ಬ್ಯಾಗ್ ನಿಂದ ಚಿನ್ನಾಭರಣ ಕದ್ದಂತ ಆರೋಪದಡಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಇಂಡಿಯಾ ಸಿಬ್ಬಂದಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಸ್ಟ್.30ರಂದು ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರು ಪ್ರಯಾಣಿಸಿದ್ದರು. ತಮ್ಮ ಲಗೇಜ್ ಬ್ಯಾಗ್ ಅನ್ನು ಚೆಕ್-ಇನ್ ಗೆ ಹಾಕಿದ್ದರು. ಅದರಲ್ಲಿ ಸುಮಾರು 4.5 ಲಕ್ಷ ಮೌಲ್ಯದ 56 ಗ್ರಾಂ ಆಭರಣಗಳನ್ನು ಇರಿಸಲಾಗಿತ್ತು. ಇವು ಕಾಣೆಯಾಗಿದ್ದಾವೆ ಎಂಬುದಾಗಿ ಬಜ್ಪೆ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆಯನ್ನು ಬಜ್ಪೆ ಠಾಣೆಯ ಪೊಲೀಸರು ಕೈಗೊಂಡಿದ್ದರು. ತನಿಖೆಯ ವೇಳೆ ಅನುಮಾನ ಬಂದ ಹಿನ್ನಲೆಯಲ್ಲಿ ಕಂದವಾರ ನಿವಾಸಿ ನಿತಿನ್, ಮೂಡಪೆರಾರ ನಿವಾಸಿಯಾಗಿದ್ದಂತ ಸದಾನಂದ, ರಾಜೇಶ್ ಹಾಗೂ ಬಜ್ಪೆ ನಿವಾಸಿ ಪ್ರವೀಣ್ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಪೊಲೀಸರ ವರಸೆಯಲ್ಲಿ ವಿಚಾರಣೆ ನಡೆಸಿದಂತ ವೇಳೆಯಲ್ಲಿ ಏರ್ ಇಂಡಿಯಾ SATS ನಲ್ಲಿ ಲೋಡರ್ ಗಳಾಗಿ ಕೆಲಸ ಮಾಡುತ್ತಿದ್ದಂತ ನಾಲ್ವರು ಮಹಿಳೆಯ ಬ್ಯಾಗ್ ನಿಂದ ಚಿನ್ನಾಭರಣ ಕದ್ದಿರೋದನ್ನು ತಪ್ಪೊಪ್ಪಿಕೊಂಡಿದ್ದರು. ಅಲ್ಲದೇ…
ಬೆಂಗಳೂರು: ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಈ ಪಾಲಿಕೆಗಳನ್ನು ಬೆಂಗಳೂರಿನ ಹೆಸರಿನೊಂದಿಗೆ ರಚಿಸಲು ಕಾನೂನಿನಲ್ಲೇ ತಿಳಿಸಿದ್ದೇವೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 26-08-2025ರಂದು ಗ್ರೇಟರ್ ಬೆಂಗಳೂರು ಆಡಳಿತ ಪ್ರಾಧಿಕಾರ ಸಮಿತಿ ರಚನೆಯಾಗಿದೆ. ಇದರಲ್ಲಿ 75 ಸದಸ್ಯರನ್ನು ನೇಮಕ ಮಾಡಲಾಗಿದೆ” ಎಂದು ಹೇಳಿದರು. ಅಧಿಕಾರಿಗಳ ನೇಮಕ ಮಾಡಲಾಗಿದೆ “ಎಲ್ಲಾ ವಲಯಗಳಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳನ್ನು ನೇಮಕ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಯಾವಾಗ ನಡೆಯಲಿದೆ ಎಂದು ಕೇಳಿದಾದ ಸುದ್ದಿಗಾರರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಾವು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ ಅದನ್ನು ಒಪ್ಪಿದೆ. 1-11-2025 ವಾರ್ಡ್ ಪುನರ್ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. 30-11-2025ರಂದು ವಾರ್ಡ್ ಗಳ ಮೀಸಲಾತಿ ಅಧಿಸೂಚನೆ ಹೊರಡಿಸಲಾಗುವುದು. ಇದಾದ ಬಳಿಕ ಚುನಾವಣೆ ನಡೆಸಲಿದೆ. ಅವರು ಒಂದು ವಾರ, ಹದಿನೈದು ದಿನಗಳಲ್ಲಿ ಮಾಡಬಹುದು. ಈಗಾಗಲೇ ಚುನಾವಣೆ ನಡೆಸಲು ಪೂರ್ವಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಅವರೂ ಕೂಡ ಅತಿ ಶೀಘ್ರದಲ್ಲಿ ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ. ಸ್ವಾಯತ್ತ ಸಂಸ್ಥೆಯಾಗಿ ಚುನಾವಣಾ ಆಯೋಗ ಚುನಾವಣೆ ಮಾಡಲಿದೆ ಎಂದು ತಿಳಿಸಿದರು. ಪಾಲಿಕೆಗಳ ಮೇಲೆ ಜಿಬಿಎ ಇರುವುದರಿಂದ 74ನೇ ತಿದ್ದುಪಡಿಗೆ ತೊಂದರೆಯಾಗುವುದಿಲ್ಲವೇ, ನಾಳೆ ಯಾರೂ ನ್ಯಾಯಾಲಯದ ಮೊರೆ ಹೋಗುವುದಿಲ್ಲವೇ ಎಂದು ಕೇಳಿದಾಗ, “ಎಲ್ಲಾ ನ್ಯಾಯಾಲಯಗಳಲ್ಲಿ ಅರ್ಜಿ ಹಾಕಿ, ಅವೆಲ್ಲವೂ ತಿರಸ್ಕಾರವಾಗಿವೆ. ಸುಪ್ರೀಂ ಕೋರ್ಟ್ ನಮ್ಮ ಅಫಿಡವಿಟ್ ಒಪ್ಪಿದೆ. ವಾರ್ಡ್ ಪುನರ್…
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರ ಡೀಲ್ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಕೇಳಿರುವಂತ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಗರಂ ಆಗಿದ್ದಾರೆ. ಅಲ್ಲದೇ ವೀಡಿಯೋ ವೈರಲ್ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಹೋಗ್ತಾ ಇರುವ ಎಂಬುದಾಗಿ ವಾರ್ನಿಂಗ್ ಮಾಡಿರುವುದಾಗಿ ಹೇಳಲಾಗುತ್ತಿದೆ. ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಡೀಲ್ ಗಾಗಿ ನಡೆಸಿದಂತ ವೀಡಿಯೋ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ವೈರಲ್ ವೀಡಿಯೋಗೆ ವಿವರಣೆ ಕೊಡೋದಕ್ಕೆ ಸಿಎಂ ಸಿದ್ಧರಾಮಯ್ಯ ಅವರಿಗೆ ರವಿಕುಮಾರ್ ಮುಂದಾಗಿದ್ದರು. ಆದರೇ ಅವರ ವಿವರಣೆ ಕೇಳದೇ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟು ಹೋಗುವ ಎಂಬುದಾಗಿ ಸೂಚಿಸಿದ್ದಾರೆ ಎನ್ನಲಾಗಿದೆ. ಅಂದಹಾಗೇ ಭೋವಿ ಸಮುದಾಯದ ಮುಖಂಡ ವೆಂಕಟೇಶ್ ಸುದ್ದಿಗೋಷ್ಠಿ ನಡೆಸಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಡೀಲ್ ವೀಡಿಯೋ ಬಿಡುಗಡೆ ಮಾಡಿದ್ದರು. ಬಿಡುಗಡೆಯಾದಂತ ವೀಡಿಯೋದಲ್ಲಿ ಫಲಾನುಭವಿಗಳಿಂದ ಪರ್ಸೆಂಟೇಜ್ ಗಾಗಿ ಡಿಮ್ಯಾಂಡ್ ಅನ್ನು ಅಧ್ಯಕ್ಷ ರವಿಕುಮಾರ್ ಮಾಡಿದ್ದು…
ಚಿತ್ರದುರ್ಗ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಇಂದು ಮತ್ತೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವಂತ ವೀರೇಂದ್ರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಕಾರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಖಾಸಗಿ ಬ್ಯಾಂಕ್ ಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ 7 ಗಂಟೆಯವರೆಗೆ ಶೋಧ ಕಾರ್ಯಾಚರಣೆಯನ್ನು ಇಡಿ ಅಧಿಕಾರಿಳು ನಡೆಸಿದರು. ಆ ಬಳಿಕ ಶಾಸಕ ವೀರೇಂದ್ರ ಪಪ್ಪಿ ಅವರ ನಿವಾಸದ ಮೇಲಿನ ದಾಳಿಯನ್ನು ಅಂತ್ಯಗೊಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/afghanistan-hit-by-another-5-5-magnitude-quake-a-dya-after-deadly-tremor-kills-1400/ https://kannadanewsnow.com/kannada/shivamogga-protest-and-petition-demanding-control-over-the-stray-dog-menace-in-sagara/
ಶಿವಮೊಗ್ಗ : ಜಿಲ್ಲೆಯ ಸಾಗರದಲ್ಲಿ ನಿನ್ನೆ ಬೀದಿ ನಾಯಿ ದಾಳಿಯಿಂದಾಗಿ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದನು. ಅಲ್ಲದೇ ಮಹಿಳೆಯ ಮೇಲೂ ದಾಳಿಯನ್ನು ನಡೆಸಲಾಗಿತ್ತು. ಇಂತಹ ಬೀದಿ ನಾಯಿಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿ ನಿಯಂತ್ರಿಸಬೇಕು ಹಾಗೂ ಬೀದಿನಾಯಿ ಕಚ್ಚಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭೆಯಿಂದ ಪರಿಹಾರ ನೀಡುವಂತೆ ಒತ್ತಾಯಿಸಿ ಇಂದು ಸಾಗರ ನಾಗರೀಕರ ಒಕ್ಕೂಟ, ಸಾಗರ ಹೆಲ್ಪ್ಲೈನ್, ಪೇಶೆಂಟ್ ರಿಲೀಫ್ ಫೌಂಡೇಶನ್ ಇನ್ನಿತರೆ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆ ವೇಳೆ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್, ನಗರಸಭೆಯವರು ಪ್ರತಿಭಟನೆ ಇನ್ನಿತರೆಗಳಿಗೆ 30 ಸಾವಿರಕ್ಕೂ ಹೆಚ್ಚಿನ ಹಣದ ನೆರವು ನೀಡುತ್ತಾರೆ. ಆದರೆ ಬೀದಿನಾಯಿ ಕಚ್ಚಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಯಾಪೈಸೆ ಆರ್ಥಿಕ ಸಹಕಾರ ನೀಡುತ್ತಿಲ್ಲ. ಕಾನೂನು ನಿಯಮಾವಳಿಯನ್ನು ಪಾಲಿಸಿ ಬೀದಿನಾಯಿ ನಿಯಂತ್ರಣ ಮಾಡಲು ಅವಕಾಶ ಇದೆ. ನಾಯಿಕಾಟ ತಪ್ಪಿಸಿ ಎಂದು ನಗರಸಭೆ ಎದುರು ಸಾರ್ವಜನಿಕರು…













