Author: kannadanewsnow09

ದೇವದುರ್ಗ : ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶದಲ್ಲಿ ಮಾತನಾಡಿದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿ ಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ…

Read More

ಕೂಡಲಸಂಗಮ : ರಾಜಕೀಯ ಉದ್ದೇಶದಿಂದ ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು ರಾಜ್ಯದ ಮುಖ್ಯಮಂತ್ರಿಗಳಿಗೆ ಅಶ್ಲೀಲ ಪದಗಳನ್ನು ಬಳಸಿದ್ದರೆ, ಆ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೂಡಲಸಂಗಮ ಹೆಲಿಪ್ಯಾಡ್ ನಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನವಿದ್ದರೂ ಮುಖ್ಯಮಂತ್ರಿಗಳು ತೆರಳುತ್ತಿಲ್ಲವೆಂದು ಏಕವಚನದಲ್ಲಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದ ಅನಂತ ಕುಮಾರ್ ಹೆಗ್ಡೆಯವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವಿಲ್ಲ. ಅವರ ಭಾಷೆ ಸುಸಂಸ್ಕೃತವಾಗಿಲ್ಲ. ಈ ಭಾಷೆ ಅವರ ಘನತೆಗೆ ಕುಂದು ಬರುತ್ತದೆ ಎಂದು ತಿಳಿಸಿದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದಂತವರ ವಿರುದ್ಧ ಕಾಂಗ್ರೆಸ್ ನಿಂದ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಪೋಸ್ಟ್ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಸಂಜಯ್ ಯಾದವ್ ಎಂಬುವರು ಸಿಎಂ ಸಿದ್ಧರಾಮಯ್ಯ ಹಾಗೂ ಪತ್ನಿ ವಿರುದ್ಧ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಾಂಗ್ರೆಸ್ ಮುಖಂಡ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಿಎಂ, ಅವರ ಪತ್ನಿ ವಿರುದ್ಧ ಪೋಸ್ಟ್ ಹಾಕಿದಂತ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಅವಹೇಳನಕಾರಿ ಪೋಸ್ಟ್ ಹಾಕಿದಂತ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. https://kannadanewsnow.com/kannada/ksrtc-class-03-technical-assistant-final-selection-list-released/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಕೆಎಸ್ಆರ್ ಟಿಸಿಯ ಆಯ್ಕೆ ಸಮಿತಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಅದಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 12-01-2023ರವರೆಗೆ ಅವಕಾಶ ನೀಡಲಾಗಿತ್ತು ಎಂದಿದ್ದಾರೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅರ್ಹ ಆಕ್ಷೇಪಣೆಗಳನ್ನು ಪರಿಗಣಿಸಿ, ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 13-01-2024ರಂದು ನಿಗಮದ ಕೇಂದ್ರ ಕಚೇರಿಯ ಸೂಚನಾ ಫಲಕ ಮತ್ತು ನಿಗಮದ ಅಧಿಕೃತ ವೆಬ್ ಸೈಟ್ www.ksrtcjobs.com ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/applications-invited-for-subsidy-loan-facility-up-to-rs-2-5-lakh-for-acid-affected-women/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆ್ಯಸಿಡ್ ಸಂತ್ರಸ್ತರಿಗೆ ನೆರವಾಗೋ ನಿಟ್ಟಿನಲ್ಲಿ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ 2.5 ಲಕ್ಷದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಆರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ವಾರ್ತಾ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಮಹಿಳೆಯರ ಮೇಲೆ ಆ್ಯಸಿಡ್‌ ದಾಳಿಯು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಎಷ್ಟೇ ಉಗ್ರ ಶಿಕ್ಷೆಗೆ ಗುರಿಮಾಡಿದರೂ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಟ್ಟಂತಾಗುವುದಿಲ್ಲ. ಆದರೆ ಸಂತ್ರಸ್ತೆಯ ನೋವಿಗೆ ಸ್ಪಂದಿಸುವ ಮೂಲಕ ಆಕೆಗೆ ವೈದ್ಯಕೀಯ ನೆರವು, ಆಪ್ತಸಮಾಲೋಚನೆ, ಕಾನೂನು ನೆರವು ಇತ್ಯಾದಿ ಸೌಲಭ್ಯಗಳ ಜೊತೆಗೆ ಆಕೆಗೆ ಪುನರ್‌ಜೀವನ ಕಟ್ಟಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಸಂತ್ರಸ್ತೆಯರಿಗೆ ರೂ. 5 ಲಕ್ಷದ ವರೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದೆ. ರಾಜ್ಯದ ಆಸಿಡ್ ಸಂತ್ರಸ್ತ ಮಹಿಳೆಯರಿಗೆ ಪುನರ್ ಜೀವನ ಕಲ್ಪಿಸೋದಕ್ಕಾಗಿ  2.5 ಲಕ್ಷ ಸಹಾಯಧನ, ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದಿದೆ. ಜನವರಿ 31ರ ಒಳಗಾಗಿ ಅರ್ಜಿಯನ್ನು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್,…

Read More

ಬೆಂಗಳೂರು: ನಗರದಲ್ಲಿ ಎಷ್ಟೇ ಸಂಚಾರ ನಿಯಮ ಮೀರದಂತೆ ಎಚ್ಚರಿಕೆ ವಹಿಸಿದ್ರೂ ಕೆಲವೊಮ್ಮೆ ಆ ನಿಯಮ ಮೀರಿ ಸಂಚಾರ ದಟ್ಟಣೆ ಉಂಟಾಗುವಂತ ಸನ್ನಿವೇಶ ನಿರ್ಮಾಣವಾಗುತ್ತೆ. ಇದೀಗ ಬೆಂಗಳೂರಲ್ಲಿ ಜನದಟ್ಟಣೆ ಮೇಲೆ ನಿಗಾಕ್ಕೆ ಮಹತ್ವದ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಳ್ಳಲಾಗಿದೆ. ಅದೇ ಅಶ್ವರೋಹಿ ಪೊಲೀಸ್ ಗಸ್ತು ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರು, ಜನದಟ್ಟಣೆ ನಡುವೆ ಅನುಚಿತ ವರ್ತನೆ ತೋರುವ ಹಾಗೂ ಅಪರಾಧ ಕೃತ್ಯಗಳನ್ನು ಎಸಗುವವರ ಮೇಲೆ ಹದ್ದಿನ ಕಣ್ಣಿಡಲು ಅಶ್ವಾರೋಹಿ ಪೊಲೀಸ್‌ ಗಸ್ತು ಬೆಂಗಳೂರು ನಗರಕ್ಕೂ ಆಗಮಿಸಿದ್ದು, ಹೊಯ್ಸಳ, ಚೀತಾದ ಜೊತೆಗೆ ಆಯ್ದ ಸ್ಥಳಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜನದಟ್ಟಣೆಯ ಸ್ಥಳಗಳಾದಂತ ಕಬ್ಬನ್ ಉದ್ಯಾನ, ವಿಧಾನಸೌಧ, ಮೆಜೆಸ್ಟಿಕ್, ಎಂ.ಜಿ ರಸ್ತೆ ಹಾಗೂ ಚರ್ಚ್ ರಸ್ತೆ ಸೇರಿದಂತೆ ವಿವಿಧೆಡೆ ಅಶ್ವಾರೋಹಿ ಪೊಲೀಸರು ಗಸ್ತು ತಿರುಗಲಿದ್ದಾರೆ. ಈ ಮೂಲಕ ನಗರದಲ್ಲಿ ಜನದಟ್ಟಣೆಗೆ ನಿಯಂತ್ರಣ ಕ್ರಮ ವಹಿಸಲಿದ್ದಾರೆ. https://twitter.com/KarnatakaVarthe/status/1745796978557264270 https://kannadanewsnow.com/kannada/woman-kidnapped-after-hanagal-gangrape-case/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/

Read More

ಹಾವೇರಿ: ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣದ ನಂತ್ರ, ಅದು ಗ್ಯಾಂಗ್ ರೇಪ್ ಆಗಿ ಮಾರ್ಪಟ್ಟಿತ್ತು. ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿ, ಬಂಧನ ಕೂಡ ಆಗಿದೆ. ಈ ಬೆನ್ನಲ್ಲೇ ಹಾನಗಲ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಇದೀಗ ಯುವತಿಯೊಬ್ಬಳನ್ನು ಕಿಡ್ನಾಪ್ ಮಾಡಿರೋ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಗ್ಯಾಂಗ್ ರೇಪ್ ಪ್ರಕರಣದ ಬಳಿಕ, ಈಗ ಅನ್ಯಕೋಮಿನ ಯುವಕರು, ಯುವತಿಯೊಬ್ಬಳನ್ನು ಅಪಹರಿಸಿದ್ದಾರೆಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಎಫ್ಐಆರ್ ಕೂಡ ದಾಖಲಾಗಿದೆ. ಹಾನಗಲ್ ಪಟ್ಟಣದ ನಿವಾಸಿ ಅಫ್ತಾಬ್ ವಿರುದ್ಧ ಯುವತಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಮಗಳನ್ನು ಅಪಹರಿಸಿರೋದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಅಫ್ತಾಬ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/ https://kannadanewsnow.com/kannada/congress-leader-mallikarjun-kharge-appointed-india-bloc-chief/

Read More

ನವದೆಹಲಿ: ಜನವರಿ.22ರಂದು ರಾಮಮಂದಿರ ಉದ್ಘಾಟನೆಯ ಜೊತೆಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಆಹ್ವಾನ ನೀಡಲಾಗಿದೆ. ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಆಹ್ವಾನಿಸಲಾಗಿದೆ. ಈಗಾಗಲೇ ರಾಮಮಂದಿರ ಉದ್ಘಾಟನೆಗೆ ಅನೇಕ ಮಠಾಧೀಶರು ಹೋಗೋದಕ್ಕೆ ನಿರಾಕರಿಸಿದ್ರೇ, ಮತ್ತೆ ಕೆಲವರು ಹೋಗೋದಾಗಿ ತಿಳಿಸಿದ್ದಾರೆ. ಆದ್ರೇ ಕಾಂಗ್ರೆಸ್ ಮಾತ್ರ ಅಪೂರ್ಣ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗೋದಿಲ್ಲ ಅಂತ ಹೇಳಿದೆ. ಈ ಮೂಲಕ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಸಿದೆ. ಇದೇ ಸಂದರ್ಭದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಅವರು ಹೋಗ್ತಾರಾ ಅಂದು ಎನ್ನೋ ಬಗ್ಗೆ ಕಾದು ನೋಡಬೇಕಿದೆ. https://twitter.com/ANI/status/1746100585722716161 https://kannadanewsnow.com/kannada/will-former-cm-hd-kumaraswamy-become-union-minister-do-you-know-what-dodda-gowda-said-about-this/ https://kannadanewsnow.com/kannada/congress-leader-mallikarjun-kharge-appointed-india-bloc-chief/

Read More

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ‌ ಅವರ‌ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿ‌ಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿ ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಯಾವುದೇ ಕಾರಣಕ್ಕೂ ನಾನು…

Read More

ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ. ಈ ಚುನಾವಣೆ ಮುಗಿದ ನಂತರ ಮತ್ತೆ ಪ್ರಧಾನಿ ಆಗಲಿರುವ ಅವರು, ಈ ಜಲ ಸಂಕಷ್ಟಕ್ಕೆ ಪರಿಹಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ವರ್ಷ ತಮಿಳುನಾಡು ರಾಜ್ಯದವರು ಕಾವೇರಿ ಜಲ ನಿರ್ವಹಣಾ ಸಮಿತಿ ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದಿಂದ ನೀರು ಕೊಡಿಸಿ ಎಂದು ಅರ್ಜಿ ಹಾಕುತ್ತಾರೆ. ನಮ್ಮ ಬಳಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅಂತಾರೆ. ನಮ್ಮ ಅಧಿಕಾರಿಗಳು ಏನೇ ವಾದ ಮಾಡಿದರೂ ಪ್ರಯೋಜನ ಆಗಿಲ್ಲ. ಕಾವೇರಿ ಪ್ರಾಧಿಕಾರದವರು ಯಾವತ್ತು ಕೂಡ ನಮ್ಮ ರಾಜ್ಯಕ್ಕೆ ಬಂದು ನೀರು ಎಷ್ಟು ಇದೆ ಅಂತ ನೋಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.…

Read More