Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ದಿನಾಂಕ 31-03-2025ರಂದು ಸಾಗರ ತಾಲ್ಲೂಕು ಆರ್ಯ ಈಡಿಗರ ಸಂಘಕ್ಕೆ ಬೆಳ್ಳಿ ಹಬ್ಬ. ಈ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ನೂತನ ಈಡಿಗರ ಸಮುದಾಯ ಭವನ, ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅಧ್ಯಕ್ಷ ಬಿ.ಎಂ ಮಂಜಪ್ಪ ಮರಸ ಅವರು, ಸಾಗರ ಪ್ರಾಂತ ಆರ್ಯ ಈಡಿಗರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ನೂತನ ಸಮುದಾಯ ಭವನ, ವಾಣಿಜ್ಯ ಮಳಿಗೆ ಶಂಕುಸ್ಥಾಪನೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾರ್ಚ್.31ರಂದು ಹಮ್ಮಿಕೊಳ್ಳಲಾಗಿದೆ ಎಂದರು. ಮಾರ್ಚ್.31ರಂದು ಬೆಳಿಗ್ಗೆ 10.30ಕ್ಕೆ ವರದಹಳ್ಳಿ ರಸ್ತೆಯಲ್ಲಿ ಈಡಿಗರ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನ ಕಾರ್ಯವನ್ನು ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ವಾಣಿಜ್ಯ ಮಳಿಗೆ ಶಂಕುಸ್ಥಾಪನೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ನೆರವೇರಿಸಲಿದ್ದಾರೆ. ಆ ಬಳಿಕ ಸಭಾ ಕಾರ್ಯಕ್ರಮ ನೆಡೆಯಲಿದೆ ಎಂದು ಹೇಳಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿವೈ ರಾಘವೇಂದ್ರ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಶಿರಸಿ-ಸಿದ್ಧಾಪುರ ಶಾಸಕ…
ಬೆಂಗಳೂರು: ರಾಜ್ಯಾದ್ಯಂತ ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದ್ದರೂ ಈ ಕೆಲಸ ನಿರೀಕ್ಷಿತ ವೇಗ ಪಡೆದಿಲ್ಲ ಎಂದು ತಹಶೀಲ್ದಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿತ್ತು. https://youtu.be/IDxtmYXWGZM ನಿಯಮದಂತೆ ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ನಮೂನೆ 6-10 ಕೆಲಸಕ್ಕಾಗಿ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಸಂಖ್ಯೆ ಸಮಾಧಾನಕರವಾಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ಇದೇ ಸಂದರ್ಭದಲ್ಲಿ…
ಬೆಂಗಳೂರು: ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಶುಕ್ರವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ನಿಗದಿತ ಸಮಯದೊಳಗೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಇತ್ಯರ್ಥಗೊಳಿ ಪ್ರಗತಿಯನ್ನು ಕಾಯ್ದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. https://youtu.be/IDxtmYXWGZM ಈ ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದ ಅವರು “ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು…
ಬೆಂಗಳೂರು: ಕೆಲ ದಿನಗಳ ಹಿಂದೆ ಕೋಠಿಮಠದ ಶ್ರೀಗಳು ಪ್ರಪಂಚದಲ್ಲಿ ಭೂಕಂಪನ ಉಂಟಾಗಲಿದೆ. ಸಾವು ನೋವು ಹೆಚ್ಚಾಗಲಿದೆ ಎಂಬುದಾಗಿ ಹೇಳಿದ್ದರು. ಈ ಭವಿಷ್ಯ ಇಂದು ನಿಜವಾಗಿದೆ. ಮ್ಯಾನ್ಮಾರ್ ಹಾಗೂ ಬ್ಯಾಂಕಾಕ್ ನಲ್ಲಿ 7.7 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಉಂಟಾಗಿದೆ. ಇದರಿಂದಾಗಿ ಹಲವರು ಸಾವನ್ನುಪ್ಪಿದ್ದಾರೆ. ಮಾರ್ಚ್.2, 2025ರಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದರು. ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ ಶ್ರೀ ಭವಿಷ್ಯವಾಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಭದ್ರ ಎಂಬುದಾಗಿಯೇ ತಿಳಿಸಿದ್ದರು. ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರೂ ಹಾಲು ಸಮಾಜ ಕೆಡದು. ಹಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ. ಸಿಎಂ ಕುರ್ಚಿಯಿಂದ ಬಿಡಿಸುವುದು ಕಷ್ಟ. ಅದು ಸುಲಭವೂ ಅಲ್ಲ. ಸಿಎಂ ಸಿದ್ಧರಾಮಯ್ಯ ಅವರು ಅವರಾಗೇ ಸಿಎಂ ಸ್ಥಾನ…
ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಮಧ್ಯ ರೈಲ್ವೆಯು ಗುಂಟೂರು ಮತ್ತು ಎಸ್.ಎಸ್.ಎಸ್. ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲಿನ ವಿವರ ಈ ಕೆಳಗಿನಂತಿವೆ: ರೈಲು ಸಂಖ್ಯೆ 07271 ಗುಂಟೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ಮಾರ್ಚ್ 31, 2025 ರಂದು ರಾತ್ರಿ 8:00 ಗಂಟೆಗೆ ಗುಂಟೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 9:20ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ. ರೈಲು ಸಂಖ್ಯೆ 07272 ಎಸ್ಎಸ್ಎಸ್ ಹುಬ್ಬಳ್ಳಿ-ಗುಂಟೂರು ವಿಶೇಷ ರೈಲು ಏಪ್ರಿಲ್ 1, 2025 ರಂದು ಬೆಳಿಗ್ಗೆ 11:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಗಿನ ಜಾವ 3:00 ಗಂಟೆಗೆ ಗುಂಟೂರು ತಲುಪಲಿದೆ. ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ನರಸರಾವ್ ಪೇಟೆ, ವಿನುಕೊಂಡ, ಮಾರ್ಕಾಪುರ ರೋಡ್, ಕುಂಬಂ, ಗಿಡ್ಡಲೂರು, ನಂದ್ಯಾಳ, ಧೋಣೆ, ಗುಂತಕಲ್, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಮುನಿರಾಬಾದ್, ಕೊಪ್ಪಳ, ಭಾನಾಪುರ, ಬನ್ನಿ ಕೊಪ್ಪ, ಗದಗ ಮತ್ತು ಅಣ್ಣಿಗೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.…
ಬೆಂಗಳೂರು: ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ದಕ್ಷಿಣ ಮಧ್ಯ ರೈಲ್ವೆಯು ನರಸಾಪುರ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ 8 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07201 ನರಸಾಪುರ-ಅರಸೀಕೆರೆ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 6, 13, 20, 27 ಮತ್ತು ಮೇ 4, 11, 18, 25, 2025 (ಭಾನುವಾರ) ರಂದು ಮಧ್ಯಾಹ್ನ 2:20 ಕ್ಕೆ ನರಸಾಪುರದಿಂದ ಹೊರಟು, ಮರುದಿನ (ಸೋಮವಾರ) ಮಧ್ಯಾಹ್ನ 12:45ಕ್ಕೆ ಅರಸೀಕೆರೆಯನ್ನು ತಲುಪಲಿದೆ. ರೈಲು ಸಂಖ್ಯೆ 07202 ಅರಸೀಕೆರೆ-ನರಸಾಪುರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 7, 14, 21, 28, ಮೇ 5, 12, 19, 26, 2025 (ಸೋಮವಾರ) ರಂದು ಮಧ್ಯಾಹ್ನ 2:00 ಗಂಟೆಗೆ ಅರಸೀಕೆರೆಯಿಂದ ಹೊರಟು, ಮರುದಿನ (ಮಂಗಳವಾರ) ಮಧ್ಯಾಹ್ನ 1:00 ಗಂಟೆಗೆ ನರಸಾಪುರವನ್ನು ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಪಾಲಕೊಲ್ಲು, ಭೀಮಾವರಂ ಟೌನ್, ಅಕಿವೀಡು, ಕೈಕಾಲೂರು, ಗುಡಿವಾಡ, ವಿಜಯವಾಡ, ಗುಂಟೂರು,…
ಕತ್ತಲೆ ಆವರಿಸಿದಾಗ ದುಷ್ಟ ಶಕ್ತಿಗಳು ಹೆಚ್ಚು ಸಕ್ರಿಯವಾಗಿರುತ್ತವೆ ಎಂದು ಹೇಳಲಾಗುತ್ತದೆ. ಕತ್ತಲೆ ನಮ್ಮನ್ನು ಆವರಿಸುವ ಅಮಾವಾಸ್ಯೆಯ ದಿನದಂದು ದುಷ್ಟ ಶಕ್ತಿಗಳ ಪ್ರಭಾವವೂ ಹೆಚ್ಚಾಗಿರುತ್ತದೆ. ಈ ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಅಮಾವಾಸ್ಯೆಯಂದು ಪಿತೃ ಪೂಜೆ ಮತ್ತು ಕುಲದೇವತೆಗಳ ಪೂಜೆಯನ್ನು ಮಾಡಬೇಕೆಂದು ನಮ್ಮ ಪೂರ್ವಜರು ಹೇಳಿದ್ದಾರೆ. ಇದರ ಆಧಾರದ ಮೇಲೆ, ನಿಮ್ಮ ಮನೆಯಲ್ಲಿ ದುಷ್ಟಶಕ್ತಿಗಳಿಂದ ಯಾವುದೇ ಸಮಸ್ಯೆಗಳಿದ್ದರೆ, ಅಥವಾ ನಿಮ್ಮ ಮನೆಯಲ್ಲಿರುವ ಜನರು ದುಷ್ಟಶಕ್ತಿಗಳಿಂದ ಪ್ರಭಾವಿತರಾಗಿದ್ದರೆ, ಮುಂಬರುವ ಅಮಾವಾಸ್ಯೆಯಂದು ಹನುಮಂತನ ಈ ಶಕ್ತಿಶಾಲಿ ಮಂತ್ರವನ್ನು ಪಠಿಸಿ. ನಿಮ್ಮ ದುಃಖವು ಶೀಘ್ರದಲ್ಲೇ ನಿಮ್ಮನ್ನು ಬಿಟ್ಟು ಹೋಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ ಡಾ. ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ಅನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಈ ಘೋಷಣೆ ಮಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, “ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದವರು, ನಮ್ಮ ಗೌರವಾನ್ವಿತ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ದಿನಾಚರಣೆಯಂದು ಈಗ ಸಾರ್ವಜನಿಕ ರಜಾದಿನವನ್ನು ಆಚರಿಸಲಾಗುವುದು” ಎಂದು ಹೇಳಿದ್ದಾರೆ. https://twitter.com/gssjodhpur/status/1905594963775373803 “ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ, ಬಾಬಾ ಸಾಹೇಬ್ ಅವರ ನಿಷ್ಠಾವಂತ ಅನುಯಾಯಿ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ” ಎಂದು ಶೇಖಾವತ್ ಹೇಳಿದರು. ಡಾ. ಭೀಮರಾವ್ ಅಂಬೇಡ್ಕರ್ ಯಾರು? ಬಾಬಾಸಾಹೇಬ್ ಅಂಬೇಡ್ಕರ್ ಎಂದು ವ್ಯಾಪಕವಾಗಿ ಕರೆಯಲ್ಪಡುವ ಡಾ. ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರು ಏಪ್ರಿಲ್ 14, 1891 ರಂದು ಮಧ್ಯಪ್ರದೇಶದ ಮಾವ್ನಲ್ಲಿ ಜನಿಸಿದರು. ಅವರು ಆಧುನಿಕ ಭಾರತವನ್ನು…
ನವದೆಹಲಿ: ಮೇ 1 ರಿಂದ ಉಚಿತ ಮಾಸಿಕ ಮಿತಿಯನ್ನು ಮೀರಿ ಎಟಿಎಂ ವಿತ್ ಡ್ರಾ ಶುಲ್ಕವನ್ನು 2 ರೂ.ಗೆ ಹೆಚ್ಚಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಘೋಷಿಸಿದೆ. ಇದರರ್ಥ ಉಚಿತ ಮಿತಿಯನ್ನು ಮೀರುವ ಪ್ರತಿ ವಹಿವಾಟಿಗೆ ಗ್ರಾಹಕರಿಗೆ ಈಗ 23 ರೂ.ವರೆಗೆ ಶುಲ್ಕ ವಿಧಿಸಲಾಗುತ್ತದೆ. ಇದು ಎಟಿಎಂ ವಿತ್ ಡ್ರಾ ಶುಲ್ಕದ ಹೆಚ್ಚಳವನ್ನು ಸೂಚಿಸುತ್ತದೆ. ಈ ಹಿಂದೆ ಪ್ರತಿ ವಹಿವಾಟಿಗೆ 21 ರೂ.ಶುಲ್ಕ ನಿಗದಿಪಡಿಸಲಾಗಿತ್ತು. ಗ್ರಾಹಕರು ತಮ್ಮ ಸ್ವಂತ ಬ್ಯಾಂಕಿನ ಎಟಿಎಂಗಳಲ್ಲಿ ತಿಂಗಳಿಗೆ ಐದು ಉಚಿತ ವಹಿವಾಟುಗಳನ್ನು (ಹಣಕಾಸು ಮತ್ತು ಹಣಕಾಸುೇತರ ಎರಡೂ) ಇನ್ನೂ ಅನುಮತಿಸಲಾಗುವುದು ಎಂದು ಕೇಂದ್ರ ಬ್ಯಾಂಕ್ ಸ್ಪಷ್ಟಪಡಿಸಿದೆ. ಹೆಚ್ಚುವರಿಯಾಗಿ, ಅವರು ಇತರ ಬ್ಯಾಂಕುಗಳ ಎಟಿಎಂಗಳಲ್ಲಿ ಉಚಿತ ವಹಿವಾಟುಗಳನ್ನು ಮಾಡಬಹುದು. ಮೆಟ್ರೋ ನಗರಗಳಲ್ಲಿ ಮೂರು ಮತ್ತು ಮೆಟ್ರೋ ಅಲ್ಲದ ಪ್ರದೇಶಗಳಲ್ಲಿ ಐದು. ಬುಧವಾರ ಬಿಡುಗಡೆಯಾದ ದಿ ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಆರ್ಬಿಐ ಮತ್ತು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ನಗದು…
ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ ಅವ್ರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರೀ? ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ. ಸದಾ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಮರಿಗೆ ರಂಜಾನ್ ಕಿಟ್ ಕೊಟ್ಟಿರುವುದಕ್ಕೆ ಸ್ವಾಗತ. ಅದೇ ರೀತಿ ದೇಶದಲ್ಲಿರುವ ಎಲ್ಲ ಹಿಂದೂಗಳು ಯುಗಾದಿ ಕಿಟ್ ನಿರೀಕ್ಷೆಯಲ್ಲಿದ್ದಾರೆ. ನೀವು ಆದಷ್ಟು ಬೇಗ ಯುಗಾದಿ ಕಿಟ್ ಘೋಷಣೆ ಮಾಡಿ ಬಹುಸಂಖ್ಯಾತ ಹಿಂದೂಗಳ ಹಬ್ಬದ ಸಂಭ್ರಮವನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ. ಧರ್ಮದ ಆಧಾರದಲ್ಲಿ ಚುನಾವಣೆ ಎದುರಿಸುತ್ತಾ ಮುಸ್ಲಿಂ ದ್ವೇಷ ಕಾರುವ ಬಿಜೆಪಿ, ಈಗ ಕಿಟ್ ಕೊಟ್ಟು ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ಅದೇ ರಾಜ್ಯದಲ್ಲಿ ಬಿಜೆಪಿ ನಾಯಕರು ರಾಜ್ಯ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ಟೀಕೆ ಮಾಡ್ತಾರೆ. ಇಂತಹ ಡಬಲ್ ಸ್ಟಾಂಡರ್ಡ್ ಮನಸ್ಥಿತಿಯನ್ನು ಬಿಜೆಪಿ ನಾಯಕರು ಬಿಟ್ಟರೆ ಒಳ್ಳೆಯದು ಎಂದಿದ್ದಾರೆ. ನಮ್ಮ ಸರಕಾರ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರು…












