Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ…
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್.8ರ ನಾಳೆ ಮಧ್ಯಾಹ್ನ 1.30ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದೆ. https://kannadanewsnow.com/kannada/bengaluru-karnataka-state-womens-commission-writes-to-centre-seeking-report-on-youths-behaviour-by-touching-private-parts-of-girls/ https://kannadanewsnow.com/kannada/big-news-state-government-issues-important-announcement-on-grihalakshmi-scheme/
ಬೆಂಗಳೂರು: ನಗರದಲ್ಲಿ ಯುವತಿಯರ ಖಾಸಗಿ ಅಂಗ ಮುಟ್ಟಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಪರಾರಿಯಾದ ಘಟನೆ ಸಂಬಂಧ ಕೈಗೊಂಡ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗ ಪೊಲೀಸ್ ಇಲಾಖೆಗೆ ಪತ್ರ ಬರೆದಿದೆ. ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಡಿಸಿಪಿ ಸಾರಾ ಫಾತಿಮಾಗೆ ಪತ್ರ ಬರೆದಿದ್ದು, ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಯುವತಿಯರ ಖಾಸಗಿ ಅಂಗವನ್ನು ಮುಟ್ಟಿ ಯುವಕ ಅಸಭ್ಯವಾಗಿ ವರ್ತಿಸಿದಂತ ಘಟನೆ ಸಂಬಂಧ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಇನ್ನೂ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಯುವಕ ಪತ್ತೆ, ಬಂಧನ ಸಂಬಂಧ ತನಿಖಾ ವರದಿಯನ್ನು ಸಲ್ಲಿಸುವಂತೆ ಡಿಸಿಪಿಗೆ ರಾಜ್ಯ ಮಹಿಳಾ ಆಯೋಗವು ಪತ್ರದಲ್ಲಿ ತಿಳಿಸಿದೆ. ಅಂದಹಾಗೇ ಏಪ್ರಿಲ್.3ರಂದು ಮಧ್ಯರಾತ್ರಿ ಸುದ್ದಗುಂಟೆಪಾಳ್ಯದಲ್ಲಿ ಇಬ್ಬರು ಯುವತಿಯರ ಖಾಸಗಿ ಅಂಗಗಳನ್ನು ಮುಟ್ಟಿ ಯುವಕನೊಬ್ಬ ಅನುಚಿತ ವರ್ತನೆ ತೋರಿದ್ದನು. ಈ ಸಂಬಂಧ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/union-minister-pralhad-joshi-janakrosh-yatra-to-protest-against-anti-people-policies-of-congress-govt/ https://kannadanewsnow.com/kannada/big-news-state-government-issues-important-announcement-on-grihalakshmi-scheme/
ಮೈಸೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇನ್ನೊಂದೆಡೆ ಸರಕಾರವು ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲದೆ ಇದ್ದರೂ ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂದು ಟೀಕಿಸಿದರು. ಸರಕಾರವು ಸಂವಿಧಾನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧ ನಡೆದುಕೊಂಡಂತಾಗಿದೆ ಎಂದು ಅವರು ಆಕ್ಷೇಪಿಸಿದರು. ದಲಿತರಿಗೆ ಮೀಸಲಿಟ್ಟ ಎಸ್ಇಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಸರಕಾರವು ಹಾಗಿದ್ದರೆ ಕೇವಲ ದಲಿತರಿಗೆ ಮಾತ್ರ ಗ್ಯಾರಂಟಿಗಳನ್ನು ನೀಡುತ್ತಿದೆಯೇ ಎಂದು ಅವರು ಪ್ರಶ್ನಿಸಿದರು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದು ಯಾತ್ರೆ ನಡೆಸಲಾಗುತ್ತಿದೆ ಎಂದು ವಿವರಿಸಿದರು. ರಾಜ್ಯಾಧ್ಯಕ್ಷರು, ವಿಪಕ್ಷದ ಇಬ್ಬರು ನಾಯಕರ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ. ಧರ್ಮಾಧಾರಿತ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆಗೂ ಚರ್ಚಿಸಿದ್ದೇವೆ. ಅದನ್ನು ಕೋರ್ಟಿನಲ್ಲಿ ಪ್ರಶ್ನಿಸುತ್ತೇವೆ…
ಬೆಂಗಳೂರು: ರೈಲ್ವೆ ಮಂಡಳಿಯು ರೈಲು ಸಂಖ್ಯೆ 20661/20662 ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಾವೇರಿಯ ಶ್ರೀ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಎರಡು ನಿಮಿಷಗಳ ನಿಲುಗಡೆಗೆ ಅನುಮೋದನೆ ನೀಡಿದೆ. ಈ ಹೊಸ ನಿಲುಗಡೆಯು ಏಪ್ರಿಲ್ 11, 2025 ರಿಂದ ರೈಲು ಸಂಖ್ಯೆ 20662 ಧಾರವಾಡ-ಕೆಎಸ್ಆರ್ ಬೆಂಗಳೂರಿಗೆ ಮತ್ತು ಏಪ್ರಿಲ್ 12, 2025 ರಿಂದ ರೈಲು ಸಂಖ್ಯೆ 20661 ಕೆಎಸ್ಆರ್ ಬೆಂಗಳೂರು-ಧಾರವಾಡಕ್ಕೆ ಜಾರಿಗೆ ಬರಲಿದೆ. ಹಾವೇರಿಯಲ್ಲಿ ರೈಲುಗಳ ಆಗಮನ / ನಿರ್ಗಮನ ಸಮಯಗಳು ಈ ಕೆಳಗಿನಂತಿವೆ: • ಧಾರವಾಡದಿಂದ ಬೆಂಗಳೂರಿಗೆ ತೆರಳುವ 20662 ಸಂಖ್ಯೆಯ ರೈಲು ಎಸ್ಎಂಎಂ ಹಾವೇರಿ ನಿಲ್ದಾಣಕ್ಕೆ ಮಧ್ಯಾಹ್ನ 2:40ಕ್ಕೆ ಆಗಮಿಸಿ, 2:42ಕ್ಕೆ ಹೊರಡಲಿದೆ. • ಬೆಂಗಳೂರಿನಿಂದ ಧಾರವಾಡಕ್ಕೆ ತೆರಳುವ 20661 ಸಂಖ್ಯೆಯ ರೈಲು ಎಸ್ಎಂಎಂ ಹಾವೇರಿ ನಿಲ್ದಾಣಕ್ಕೆ ಬೆಳಗ್ಗೆ 10:10ಕ್ಕೆ ಆಗಮಿಸಿ, 10:12ಕ್ಕೆ ಹೊರಡಲಿದೆ. ನಿಟ್ಟೂರಿನಲ್ಲಿ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್ ಪ್ರೆಸ್’ಗೆ ಒಂದು ನಿಮಿಷ ನಿಲುಗಡೆ ರೈಲ್ವೆ ಮಂಡಳಿಯು ರೈಲು ಸಂಖ್ಯೆ 16239/16240 ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು…
ಚೆನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ. ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ ಪ್ರಕಾಶ್ ಎಂಬ ವ್ಯಕ್ತಿಯು ತನ್ನ ಎಡ ಭುಜದಲ್ಲಿ ಅತೀವಾ ನೋವು ಅನುಭವಿಸುತ್ತಿದ್ದರು. ನೋವು ನಿವಾರಿಸಿಕೊಳ್ಳಲು ಸಾಕಷ್ಟು ಪೇನ್ ಕಿಲ್ಲರ್ಗಳನ್ನು ಸತತ 10 ದಿನದವರೆಗೂ ದೂಡಿದ್ದಾರೆ. ಆದರೆ, ಅಸಾಧ್ಯವಾದ ನೋವು ಇದ್ದ ಕಾರಣ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಸಂಪೂರ್ಣ ತಪಾಸಣೆಯ ನಂತರ ಅವರ ಎಡ ಭುಜದ ಅಕ್ರೋಮಿಯೊಕ್ಲಾವಿಕ್ಯುಲರ್ (ಎಸಿ) ಕೀಲುಗಳಲ್ಲಿ ಮುರಿತವಾಗಿರುವುದು ಕಂಡು ಬಂತು. ಅಕ್ರೋಮಿಯೊಕ್ಲಾವಿಕ್ಯುಲರ್ ಎನ್ನುವುದು ಭುಜದಲ್ಲಿನ ಡಿಸ್ಲೊಕೇಷನ್ಗಳಲ್ಲಿ ಒಂದು. ಇಲ್ಲಿ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸೇವೆ ಪುನರಾರಂಭಗೊಳುತ್ತಿದೆ. ಏಪ್ರಿಲ್.12ರಿಂದ ಆರಂಭಗೊಳ್ಳಲಿದೆ. ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸೇವೆಯನ್ನು ಪುನರಾರಂಭಿಸಲಾಗಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 26, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 12, 2025 ರಿಂದ ಜೂನ್ 28, 2025 ರವರೆಗೆ ಪುನರಾರಂಭಿಸಲಾಗುತ್ತದೆ. ರೈಲು ಸಂಖ್ಯೆ 07356 ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 27, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 13, 2025 ರಿಂದ ಜೂನ್ 29, 2025 ರವರೆಗೆ ಪುನರಾರಂಭಿಸಲಾಗುತ್ತದೆ. https://kannadanewsnow.com/kannada/sc-community-applications-invited-for-15000-scholarship-along-with-vocational-training-course/ https://kannadanewsnow.com/kannada/big-news-state-government-issues-important-announcement-on-grihalakshmi-scheme/
ಬಳ್ಳಾರಿ : ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ತರಬೇತಿ ಜೊತೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಪಂಗಡದ ಇಂಜಿನಿಯರಿAಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ತರಬೇತಿ ನೀಡಲಾಗುತ್ತಿದ್ದು, ಒಟ್ಟು 200 ಇಂಜಿನೀಯರಿAಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ರೂ.15000/- ಗಳ ಶಿಷ್ಯವೇತನ ಮತ್ತು ತರಬೇತಿ ನೀಡಲಾಗುತ್ತದೆ. ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏ.11 ಕೊನೆಯ ದಿನ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.08395-200073 ಗೆ ಸಂಪರ್ಕಿಸಬಹುದು ಎಂದು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/provisional-selection-list-for-anganwadi-worker-helper-posts-released/ https://kannadanewsnow.com/kannada/big-news-state-government-issues-important-announcement-on-grihalakshmi-scheme/
ಬಳ್ಳಾರಿ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಹಾನಗರಪಾಲಿಕೆ, ನಗರ ಸಭೆ, ಪ.ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದಲ್ಲಿ ಏ.22 (ರಜೆ ದಿನಗಳನ್ನು ಹೊರತುಪಡಿಸಿ) ರಂದು ಮಧ್ಯಾಹ್ನ 1.30ರೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/harry-brook-appointed-englands-new-white-ball-captain/ https://kannadanewsnow.com/kannada/big-news-state-government-issues-important-announcement-on-grihalakshmi-scheme/
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಇಂಗ್ಲೆಂಡ್ ಪುರುಷರ ವೈಟ್-ಬಾಲ್ ತಂಡಗಳ ಹೊಸ ನಾಯಕರಾಗಿ ಸ್ಟಾರ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹ್ಯಾರಿ ಬ್ರೂಕ್ ಅವರನ್ನು ಸೋಮವಾರ (ಏಪ್ರಿಲ್ 7) ನೇಮಿಸಲಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಿಂದ ಇಂಗ್ಲೆಂಡ್ ತಂಡವು ಗ್ರೂಪ್ ಹಂತದಿಂದ ಹೊರನಡೆದ ನಂತರ ಕಳೆದ ತಿಂಗಳು ಈ ಹುದ್ದೆಯಿಂದ ಕೆಳಗಿಳಿದ ಜೋಸ್ ಬಟ್ಲರ್ ಅವರ ಸ್ಥಾನವನ್ನು 26 ವರ್ಷದ ಆಟಗಾರ ವಹಿಸಿಕೊಂಡಿದ್ದಾರೆ. ಜನವರಿ 26, 2022 ರಂದು ವೆಸ್ಟ್ ಇಂಡೀಸ್ ವಿರುದ್ಧ ಬ್ರಿಡ್ಜ್ಟೌನ್ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ನಂತರ ಬ್ರೂಕ್ ಇಲ್ಲಿಯವರೆಗೆ ಇಂಗ್ಲೆಂಡ್ ಪರ 26 ಏಕದಿನ ಮತ್ತು 44 ಟಿ20ಐಗಳನ್ನು ಆಡಿದ್ದಾರೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಹಂಚಿಕೊಂಡ ಬಿಡುಗಡೆಯ ಪ್ರಕಾರ, “ಜನವರಿ 2022 ರಲ್ಲಿ ಪಾದಾರ್ಪಣೆ ಮಾಡಿದಾಗಿನಿಂದ 26 ವರ್ಷದ ಆಟಗಾರ ಇಂಗ್ಲೆಂಡ್ನ ವೈಟ್-ಬಾಲ್ ಸೆಟಪ್ನಲ್ಲಿ ಪ್ರಮುಖ ಭಾಗವಾಗಿದ್ದಾರೆ. ಎಲ್ಲಾ ಸ್ವರೂಪಗಳಲ್ಲಿ ದೇಶದ ಅತ್ಯಂತ ಪ್ರತಿಭಾನ್ವಿತ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಪ್ರಸ್ತುತ ಟೆಸ್ಟ್…














