Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಶನಿವಾರದಂದು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ. 500 ಸೀಟಿಂಗ್ ಸಾಮರ್ಥ್ಯ, ಊಟದ ಹಾಲ್ ಸೇರಿದಂತೆ ಸುಸಜ್ಜಿತವಾಗಿ ಭವನವನ್ನು ನಿರ್ಮಿಸಲಾಗಿದೆ. ನಂತರ ಡಿಎಆರ್ ಸಭಾಂಗಣದಲ್ಲಿ ಗೃಹ ಸಚಿವರು ಪೂರ್ವ ವಯಲದ ಉಪ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವಿಮರ್ಶನಾ ಸಭೆಯನ್ನು ನಡೆಸಿದರು. ಡಿಎಆರ್ ಪೊಲೀಸ್ ಭವನದ ಉದ್ಘಾಟನೆ ವೇಳೆ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಬಿ.ಕೆ ಸಂಗಮೇಶ್ವರ್, ಗೋಪಾಲ ಕೃಷ್ಣ ಬೇಳೂರು, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಮಂಜುನಾಥ ಭಂಡಾರಿ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು. https://kannadanewsnow.com/kannada/big-news-these-documents-are-mandatory-to-apply-for-compassionate-ground-recruitment/ https://kannadanewsnow.com/kannada/bengaluru-power-outages-in-these-areas-to-be-observed-tomorrow-on-october-27/
ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರದಲ್ಲಿ ಕರೆಂಟ್ ಇರೋದಿಲ್ಲ. ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ…
ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದು ಮತ್ತಷ್ಟು ಸರಳಗೊಳಿಸಲಾಗಿದೆ. ಮನೆಯಿಂದಲೇ, ಕುಳಿತಲ್ಲಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹಾಗಾದ್ರೇ ಅದೇಗೆ.? ಮಾನದಂಡಗಳೇನು ಎಂಬುದು ಸೇರಿದಂತೆ ಇತರೆ ಮಾಹಿತಿ ಮುಂದಿದೆ ಓದಿ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 2024ನೇ ಸಾಲಿನ ಪಡಿತರ ಚೀಟಿಗಾಗಿ ಆನ್ ಲೈನ್ ಅರ್ಜಿಗಳನ್ನು www.ahara.kar.nic.in ರಂದು ಆರಂಭಿಸಿದೆ. ಕರ್ನಾಟಕದ ನಿವಾಸಿಗಳು ಈಗ ಆನ್ಲೈನ್ನಲ್ಲಿ ಹೊಸ ಪಡಿತರ ಚೀಟಿಗಾಗಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಮತ್ತು ಪಿಡಿಎಫ್ ರೂಪದಲ್ಲಿ ಸಂಪೂರ್ಣ ಅರ್ಜಿ ಪ್ರಕ್ರಿಯೆಯನ್ನು ಪ್ರವೇಶಿಸಬಹುದು. 2024 ರ ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಪಟ್ಟಿ ಮಾಡದ ವ್ಯಕ್ತಿಗಳು ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಅರ್ಜಿದಾರರು ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ತಮ್ಮ ಸೇರ್ಪಡೆ ವಿನಂತಿಯ ಸ್ಥಿತಿಯನ್ನು ಆನ್ ಲೈನ್ ನಲ್ಲಿ ಟ್ರ್ಯಾಕ್ ಮಾಡಬಹುದು. ಕರ್ನಾಟಕದಲ್ಲಿ ಆನ್ ಲೈನ್…
ಬೆಂಗಳೂರು: ಕೆಪಿಟಿಸಿಎಲ್ 66/11ಕೆ.ವಿ ‘ಸಿ’ ಸ್ಟೇಷನ್ ಹಾಗೂ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ದಿನಾಂಕ 27-10-2024ರ ಭಾನುವಾರದ ನಾಳೆ, ಬೆಂಗಳೂರಿನ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಾಗಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಿ ಸ್ಟೇಷನ್ : “ಬ್ರಾಡ್ ವೇ ರಸ್ತೆ, ಕಾಕರ್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ರ್ಸ್ ರಸ್ತೆ, ಸ್ಲಾಟರ್ ಹೌಸ್, ಕನ್ನಿಂಗ್ಹಾö್ಯಮ್ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಪಾರ್ಕ್ ರಸ್ತೆ, ನಳ ರಸ್ತೆ, ನೋಹ ಸ್ಟ್ರೀಟ್, ಚಾಂದನಿ ಚೌಕ್, ಮಿಲ್ಲರ್ ಟ್ಯಾಂಕ್ಬಂಡ್ ರಸ್ತೆ, ಜಸ್ಮಾಭವನ ರಸ್ತೆ, ಸುಲ್ತಾನ್ಜಿಗುಂಟ ರಸ್ತೆ, ಹೇನ್ಸ್ ರಸ್ತೆ, ಬಂಬೂಬಜಾರ್, ಧನಕೋಟಿ ಲೇನ್ ಮತ್ತು ಸುತ್ತಲಿನ ಪ್ರದೇಶ. ನೆಹರುಪುರಂ, ಮುತ್ಯಾಲಮ್ಮ ಕೋಯಿಲ್ ಸ್ಟ್ರೀಟ್,…
ಎಡುಲಪುರಂ: ಗುಸ್ಸಾಡಿ ನೃತ್ಯಗಾರ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕನಕರಾಜು ಸೋಮವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದ ನಂತರ ಅವರು ಕುಮುರಂಭೀಮ್ ಜಿಲ್ಲೆಯ ಜೈನೂರ್ ಮಂಡಲದ ಮಾರ್ಲವಾಯಿಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಗುಸ್ಸಾಡಿ ನೃತ್ಯಕ್ಕೆ ರಾಷ್ಟ್ರೀಯ ಮಾನ್ಯತೆ ತಂದುಕೊಟ್ಟಿದ್ದಕ್ಕಾಗಿ 2021 ರಲ್ಲಿ ಕೇಂದ್ರ ಸರ್ಕಾರವು ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿತು. ಕನಕರಾಜು ಅವರ ಅಂತ್ಯಕ್ರಿಯೆ ಶನಿವಾರ ಮಾರ್ಲವಾಯಿಯಲ್ಲಿ ಆದಿವಾಸಿ ಸಂಪ್ರದಾಯದಂತೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿನ ಪತಂಜಲಿ ಸೇರಿದಂತೆ ಬರೋಬ್ಬರಿ 230 ತುಪ್ಪದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವುಗಳಲ್ಲಿ ಯಾವುದರಲ್ಲೂ ದನದ ಕೊಬ್ಬಿನ ಅಂಶ ಪತ್ತೆಯಾಗಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಆಹಾರ ಗುಣಮಟ್ಟದ ವಿಚಾರದಲ್ಲಿ ಇತ್ತಿಚೆಗೆ ಹಲವು ಬಿಗಿ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಆಹಾರ ತಯಾರಕರಿಗೆ ತೊಂದರೆ ಕೊಡುವ ಉದ್ದೇಶದಿಂದಲ್ಲ. ಬದಲಿಗೆ ನಮ್ಮ ಜನರಲ್ಲಿ ಅರಿವು ಮೂಡಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ. ಶುದ್ಧವಾದ ಆಹಾರ ಸೇವನೆಯಿಂದ ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಹೀಗಾಗಿ ಆಹಾರ ಕಲಬೆರಕೆಯ ನಿರ್ಮೂಲನೆಗಾಗಿ ಕೈ ಜೋಡಿಸುವಂತೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಿರುಪತಿ ಲಡ್ಡುವಿನ ಪ್ರಕರಣದ ಹಿನ್ನೆಲೆಯಲ್ಲಿ ತುಪ್ಪದ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನಗಳು ತಲೆದೂರಿದ್ದವು. ದನ ಮಾಂಸದ ಕೊಬ್ನಿನಾಂಶ ಬಳಸುತ್ತಿದ್ದಾರೆ ಎಂಬುದು ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಪತಂಜಲಿ ಸೇರಿದಂತೆ 230 ಬಗೆಯ ತುಪ್ಪಗಳನ್ನ ಪರೀಕ್ಷಿಸಲಾಗಿದ್ದು, ಯಾವುದೇ ತುಪ್ಪವು ಅನ್ ಸೇಫ್ ಎಂದು…
ಕಿತ್ತೂರು : ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 200ನೇ ವರ್ಷದ ಚನ್ನಮ್ಮನ ಕಿತ್ತೂರು ಉತ್ಸವವನ್ನು ವರ್ಣರಂಜಿತ ವೇದಿಕೆಯಲ್ಲಿ ಉದ್ಘಾಟಿಸಿದರು. ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದ್ದು ನಮ್ಮ ಸರ್ಕಾರ. ಇವತ್ತಿನ ಪೀಳಿಗೆಗೆ ಚನ್ನಮ್ಮನ ಇತಿಹಾಸ ಗೊತ್ತಾಗಬೇಕು ಎನ್ನುವ ಕಾರಣದಿಂದ ನಾವು ಈ ನಿರ್ಧಾರ ಮಾಡಿದೆವು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ನಿರ್ಮಿಸಲಾಗದು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿದರು. ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಮುಂತಾದವರ ಹೋರಾಟ ಮತ್ತು ಆಶಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಹೋರಾಟಗಾರರಿಂದ ದೇಶದ ಜನರನ್ನು ಪ್ರೀತಿಸುವುದನ್ನು ನಾವು ಕಲಿಯಬೇಕು. ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಎಸ್ಎಂವಿಟಿ ಬೆಂಗಳೂರಿನಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು, ನೈಋತ್ಯ ರೈಲ್ವೆ ಅಕ್ಟೋಬರ್ 26 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ದಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 06288) ಓಡಿಸಲಿದೆ. ಈ ರೈಲು ಅಕ್ಟೋಬರ್ 26 ರಂದು ಎಸ್ಎಂವಿಟಿ ಬೆಂಗಳೂರಿನಿಂದ 21:15 ಗಂಟೆಗೆ ಹೊರಟು, ಹೌರಾ ನಿಲ್ದಾಣವನ್ನು ಅಕ್ಟೋಬರ್ 28 ರಂದು 07:30 ಗಂಟೆಗೆ ತಲುಪಲಿದೆ. ಇದು ಧರ್ಮಾವರಂ ಜಂ, ಡೋನ್ ಜಂ, ನಂದ್ಯಾಲ್ ಜಂ, ದಿಗುವಮೆಟ್ಟ, ಗುಂಟೂರು ಜಂ, ವಿಜಯವಾಡ ಜಂ, ರಾಜಮಂಡ್ರಿ, ಕೊಟ್ಟವಲಸ, ವಿಜಯನಗರಂ ಜಂ, ಖುರ್ದಾ ರೋಡ್ ಜಂ, ಭುವನೇಶ್ವರ, ಕಟಕ್, ಭದ್ರಾಕ್ ಮತ್ತು ಖರಗ್ಪುರ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು 22 ಬೋಗಿಗಳನ್ನು ಹೊಂದಿರುತ್ತದೆ. ಡಾನಾ ಚಂಡಮಾರುತದ ಎಫೆಕ್ಟ್: ಡುರೊಂಟೊ ಎಕ್ಸ್ಪ್ರೆಸ್ ರೈಲು…
ಶಿವಮೊಗ್ಗ: ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪದ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದಾರೆ. ಇಲಾಖೆಯ ಅಧಿಕಾರಿ, ನೌಕರರು ಮತ ನೀಡುವಂತೆ ಈ ಮೂಲಕ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಹಿರಿಯ, ಕಿರಿಯ ನೌಕರ ಮಿತ್ರರೇ ಕರ್ನಾಟಕ ರಾಜ್ಯದ ಅತ್ಯಂತ ಪ್ರತಿಷ್ಠಿತ ಸಂಘಟನೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 2024-29 ನೇ ಅವಧಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ 28.10.2024ರಂದು ನಡೆಯುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಚುನಾವಣಾ ಅಧಿಸೂಚನೆಯಂತೆ ಸಾಗರ ತಾಲೂಕು ಶಾಖೆಗೂ ಚುನಾವಣೆ ನಡೆಯಲಿದ್ದು, ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಎನ್ ಆದ ನಾನು ಸ್ಪರ್ಧಿಸಿದ್ದೇನೆ. ದಯವಿಟ್ಟು ತಮಗೆ ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಸದುದ್ದೇಶಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧೆ NPS, TO, OPS ಹೋರಾಟಗಳಲ್ಲಿ ಇಲಾಖೆ ನೌಕರರ…
ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಸಾಲು ಸಾಲು ರಜೆಯ ಕಾರಣದಿಂದಾಗಿ ಖಾಸಗಿ ಬಸ್ ಗಳು ದುಬಾರಿ ದರವನ್ನು ಏರಿಕೆ ಮಾಡಿ, ಪ್ರಯಾಣಿಕರಿಗೆ ಬರೆ ಎಳೆಯೋದು ಸರ್ವೇ ಸಾಮಾನ್ಯ. ಇದಕ್ಕೂ ಮುಚ್ಚೆಯೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ಇಲಾಖೆಯು, ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ಗಳು ದರ ಹೆಚ್ಚಿಸುವಂತಿಲ್ಲ. ನಿಯಮ ಮೀರಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಸ್ಸಿನ ಲೈಸೆನ್ಸ್ ಕೂಡ ರದ್ದುಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ಸಂಬಂಧ ಪತ್ರಿಕಾ ಸಾರಿಗೆ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ಪ್ರಯಾಣದ ದರವನ್ನು ಹೆಚ್ಚಿಸುವಂತಿಲ್ಲ. ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಗಳ ಬುಕ್ಕಿಂಗ್ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ. ಖಾಸಗಿ ಬಸ್ ನಿಲ್ದಾಣಗಳಲ್ಲೂ ಸಾರಿಗೆ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗಲಿದ್ದಾವೆ ಎಂಬುದಾಗಿ ತಿಳಿಸಿದೆ. ಖಾಸಗಿ ಬಸ್ ಮಾಲೀಕರು ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದರೇ ದಂಡದ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಖಾಸಗಿ ಬಸ್ ರಹದಾರಿ ಸೇರಿದಂತೆ ಲೈಸೆನ್ಸ್…