Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳು ಸಕ್ರೀಯವಾಗಿರುವ ಪ್ರಸ್ತುತ ದಿನಗಳಲ್ಲಿ, ವಿಶ್ವಾಸಾರ್ಹಕ್ಕೆ ಪಾತ್ರವಾಗಿರುವ ಪತ್ರಿಕೋದ್ಯಮವು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ವತಿಯಿಂದ ಪತ್ರಿಕೋದ್ಯಮ ಸೇವೆಗಾಗಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಹಿರಿಮೆಗೆ ಪಾತ್ರರಾದ ’ಪ್ರಜಾಪ್ರಗತಿ’ ದಿನಪತ್ರಿಕೆಯ ಸಂಪಾದಕ ಎಸ್.ನಾಗಣ್ಣ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಿಕೋದ್ಯಮದಿಂದ ಸಮಾಜ ಬದಲಾವಣೆ ಸಾಧ್ಯವಿದೆ. ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕಾಯಕವನ್ನು ಪತ್ರಿಕೆಗಳು ಉತ್ತಮ ಸೇವೆ ಸಲ್ಲಿಸಿಕೊಂಡು ಬಂದಿವೆ. ಮುದ್ರಣ ಮಾಧ್ಯಮಕ್ಕೀಗ ಭಾರೀ ಸವಾಲಿನ ದಿನಗಳು ಎದುರಾಗಿವೆ ಎಂದರು. ಹಿರಿಯ ಪತ್ರಕರ್ತ ಎಸ್.ನಾಗಣ್ಣ ಅವರಿಗೆ ಸಂದಿರುವ ಈ ಗೌರವವು ಕನ್ನಡ ಪತ್ರಿಕೋದ್ಯಮಕ್ಕೆ ಸಂದ ಹಿರಿಮೆ ಎಂದೂ ಅವರು ವಿಶ್ಲೇಷಿಸಿದರು. ನಾಗಣ್ಣ ಸೇವೆ ಅನನ್ಯ: ಮದನಗೌಡ ಅಭಿನಂದನಾ ಮಾತುಗಳನ್ನಾಡಿದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎಚ್.ಬಿ. ಮದನಗೌಡ ಮಾತನಾಡಿ, ಪತ್ರಿಕೋದ್ಯಮವು ಇಂದು ಸಮಾಜ ಸೇವಾ ಮನೋಭಾವದಿಂದ…

Read More

ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ನಿಮ್ಮ ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸುತ್ತಿದ್ದರೆ. ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನಾವು ಸೋತಿದ್ದೇವೆ…

Read More

ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ವೇಳಾಪಟ್ಟಿ ಸುಳ್ಳು ಎಂಬುದಾಗಿ ಕರ್ನಾಟಕ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ. ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದಿದೆ. ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ. ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣಾ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗೆ ಕಿವಿಗೊಡಬಾರದು ಎಂಬುದಾಗಿ ಮನವಿ ಮಾಡಿದೆ. https://kannadanewsnow.com/kannada/appointment-of-senior-officials-as-commissioners-of-five-corporations-deputy-chief-minister-d-k-shivakumar/ https://kannadanewsnow.com/kannada/the-dharmasthala-case-is-a-conspiracy-of-the-bjp-deputy-chief-minister-d-k-shivakumar/

Read More

ಬೆಂಗಳೂರು: “ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು. ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆಯ ಬಗ್ಗೆ ಕೇಳಿದಾಗ, “ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದರು. ಬೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ,…

Read More

ಬೆಂಗಳೂರು: “ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು. https://kannadanewsnow.com/kannada/the-bangara-dham-in-soraba-of-shivamogga-district-is-now-a-historical-tourist-spot/ https://kannadanewsnow.com/kannada/ramanagara-district-hospital-radiologist-dr-shashi-suspended-for-conducting-gender-identification-test-in-government-hospital/

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ‘ಬಂಗಾರ ಧಾಮ’ವನ್ನು ರಾಜ್ಯ ಸರ್ಕಾರ ಐತಿಹಾಸಿಕ ಪ್ರವಾಸಿ ತಾಣವಾಗಿ ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ‘ಬಂಗಾರ ಧಾಮ’ ವನ್ನು ಮಧು ಬಂಗಾರಪ್ಪ ಅವರ ನೇತೃತ್ವದ ಎಸ್. ಬಂಗಾರಪ್ಪ ಫೌಂಡೇಶನ್ ನಿರ್ವಹಿಸುತ್ತಿದೆ. ಮಧು ಬಂಗಾರಪ್ಪ ಅವರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವುದಲ್ಲದೇ ಬಂಗಾರ ಧಾಮವನ್ನು ಬಂಗಾರಪ್ಪ ನವರ ಚಿಂತನೆ, ಅಭಿರುಚಿ, ಜನಸಮೂಹದೊಂದಿಗೆ ಅವರಿಗಿದ್ದ ಬಾಂಧವ್ಯಕ್ಕೆ ತಕ್ಕಂತೆ ನಿರ್ಮಾಣವಾಗಿರುವುದು ವಿಶೇಷ. ಗೃಹ ಸಚಿವರಾದ ಡಾ. ಜಿ. ಪರಮೇಶ್ವರ, ಕಾನೂನು, ಸಂಸತ್ತೀಯ ವ್ಯವಹಾರಗಳ ಸಚಿವರಾದ ಎಚ್. ಕೆ. ಪಾಟೀಲ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್. ಬೋಸರಾಜು, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ಶಾಸಕರು,…

Read More

ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಹೊರಬಂದಿದ್ದು, ನಂತರ ಅವರು ದಕ್ಷಿಣ ದೆಹಲಿಯ ಚತ್ತರ್‌ಪುರ ಎನ್‌ಕ್ಲೇವ್‌ನಲ್ಲಿರುವ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಮುಖ್ಯಸ್ಥ ಅಭಯ್ ಸಿಂಗ್ ಚೌತಾಲ ಅವರ ತೋಟದ ಮನೆಗೆ ಸ್ಥಳಾಂತರಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. https://twitter.com/ANI/status/1962491546726797603 https://kannadanewsnow.com/kannada/ramanagara-district-hospital-radiologist-dr-shashi-suspended-for-conducting-gender-identification-test-in-government-hospital/ https://kannadanewsnow.com/kannada/india-provides-aid-to-earthquake-affected-afghan-refugees-1000-family-tents-dispatched-to-afghanistan/

Read More

ಬೆಂಗಳೂರು: ಗರ್ಭಿಣಿ ಮಹಿಳೆಯರಿಗೆ ಲಿಂಗ ಪತ್ತೆ ಪರೀಕ್ಷೆ ಎಲ್ಲೆಡೆ ನಿಷೇಧವಿದೆ. ಹೀಗಿದ್ದರೂ ರಾಮನಗರ ಜಿಲ್ಲಾಸ್ಪತ್ರೆಯಲ್ಲೇ ಗರ್ಭಿಣಿ ಮಹಿಳೆಯೊಬ್ಬರಿಗೆ ಲಿಂಗಪತ್ತೆ ಪರೀಕ್ಷೆ ನಡೆಸಿ, ಆಕೆ ಹೆಣ್ಣು ಭ್ರೂಣ ಹತ್ಯೆಗೆ ಕಾರಣವಾದಂತ ರೇಡಿಯಾಲಜಿಸ್ಟ್ ಡಾ.ಶಶಿ ಎಸ್.ಎಲ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಇಂದು ಈ ಕುರಿತು ಆರೋಗ್ಯ ಮತ್ತು ಕುಟುಂಬ ಸೇವೆಗಳ ಶಿಸ್ತು ಪ್ರಾಧಿಕಾರ ಹಾಗೂ ಆಯುಕ್ತರಾದಂತ ಶಿವಕುಮಾರ್.ಕೆಪಿ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಹರ್ಷಿತಾ w/o ಚನ್ನಕೇಶವ, ವಯಸ್ಸು 26 ವರ್ಷಗಳು ತೀವ್ರವಾದ ರಕ್ತಸ್ರಾವದಿಂದ ವಾಣಿ ವಿಲಾಸ ಆಸ್ಪತ್ರೆಯಲ್ಲಿ OBG unit D ನಲ್ಲಿ ದಾಖಲಾಗಿರುತ್ತಾರೆ. ಸದರಿ ಪ್ರಕರಣದ ಕುರಿತು ಅನುಮಾನ ಉಂಟಾಗಿ, ಗುಪ್ತ ಮಾಹಿತಿಯೊಂದಿಗೆ ವಿಚಾರಣೆಯ ಸಲುವಾಗಿ ದಿನಾಂಕ: 23-08-2025 ರಂದು ಮಧ್ಯಾಹ್ನ 3.00 ಗಂಟೆಗೆ ಉಪನಿರ್ದೇಶಕರು, ಪಿ.ಸಿ & ಪಿ.ಎನ್.ಡಿ.ಟಿ. ಹಾಗೂ ತಂಡ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಸಕ್ಷಮ ಪ್ರಾಧಿಕಾರದ ಪರವಾಗಿ ಡಾ. ರವೀಂದ್ರನಾಥ ಮೇಟಿ, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಡಾ. ಸಿರಾಜುವುದ್ದೀನ್ ಮದನಿ,…

Read More

ನವದೆಹಲಿ: ಇಂದು 6.3ರ ತೀವ್ರತೆಯಲ್ಲಿ ಪ್ರಬಲ ಭೂಕಂಪನ ಅಫ್ಘಾನಿಸ್ತಾನದಲ್ಲಿ ಉಂಟಾಗಿತ್ತು. ಈ ಭೂಕಂಪದಿಂದಾಗಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಇಂತಹ ಅಫ್ಘಾನ್ ಜನತೆಯ ನೆರವಿಗೆ ಭಾರತ ದಾವಿಸಿದ್ದು, 1000 ಫ್ಯಾಮಿಲಿ ಟೆಂಟ್ ಗಳನ್ನು ರವಾನಿಸಿದೆ. ಈ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ರವಿಶಂಕರ್ ಮಾಹಿತಿ ಹಂಚಿಕೊಂಡಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಸಚಿವರ ಜೊತೆಗೆ ಚರ್ಚೆ ನಡೆಸಲಾಗಿದೆ. ಪ್ರಧಾನಿ ಮೋದಿಯವರ ಸೂಚನೆಯಂತೆ ಅಫ್ಘಾನಿಸ್ತಾನಕ್ಕೆ ಭಾರತ ಎಲ್ಲಾ ರೀತಿಯ ನೆರವಾಗುವುದಾಗಿ ಹೇಳಿದರು. ಇಂದು ಭಾರತದಿಂದ 1000 ಫ್ಯಾಮಿಲಿ ಟೆಂಟ್ ಗಳನ್ನು ಅಫ್ಘಾನಿಸ್ತಾನಕ್ಕೆ ರವಾನಿಸಲಾಗಿದೆ. 15 ಟನ್ ಆಹಾರ ಸಾಮಗ್ರಿ ಕೂಡ ಕಳುಹಿಸುತ್ತಿದ್ದೇವೆ. ನಾಳೆ ಕೂಡ ಎಲ್ಲಾ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಡುತ್ತೇವೆ. ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ತಿಳಿಸಿದರು. https://kannadanewsnow.com/kannada/clash-during-ganesh-idol-immersion-procession-in-shivamogga/ https://kannadanewsnow.com/kannada/in-the-speech-at-the-dharmasthala-bjp-meeting-the-state-president-prahlad-joshi-said-according-to-ashok-edavatt/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆಯಲ್ಲಿ ಗಲಾಟೆಯಾಗಿದೆ. ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಗಲಾಟೆಯಾಗಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹಿಂದೂಗಳ ಗುಂಪುಗಳ ನಡುವೆ ಗಲಾಟೆಯಾಗಿದೆ. ಇದನ್ನು ಬಿಜೆಪಿ ಕಾರ್ಯಕರ್ತ ಶಂಕರ್ ಹಿಂದೂ-ಮುಸ್ಲಿಂ ಗಲಾಟೆ ಎಂಬುದಾಗಿ ಬಿಂಬಿಸಲು ಯತ್ನಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೋವಿಂದಪುರ ಬಡಾವಣೆಯ ನಿವಾಸಿಗಳು ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ. https://kannadanewsnow.com/kannada/in-the-speech-at-the-dharmasthala-bjp-meeting-the-state-president-prahlad-joshi-said-according-to-ashok-edavatt/ https://kannadanewsnow.com/kannada/rs-3105-78-crore-released-for-guarantee-schemes-in-hassan-district-state-vice-president-dinesh-gooligauda/

Read More