Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯನ್ನು ಸ್ಯಾಂಡಲ್ ವುಡ್ ನಟ ಶ್ರೀಮುರುಳಿ ಖಾರವಾಗೇ ಖಂಡಿಸಿದ್ದಾರೆ. ಅಲ್ಲದೇ ಉಗ್ರರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು ಅಂತ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಯಲ್ಲಿ ಮೃತರಾದಂತವರ ಬಗ್ಗೆ ಮಮ್ಮಲ ಮರುಗಿದರು. ಈ ವಿಷಯ ನೋವು ತಂದಿದೆ. ಇಂತಹ ಕೃತ್ಯ ಎಸಗಿದಂತವರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು ಅಂತ ತಿಳಿಸಿದರು. ಈಗಾಗಲೇ ಕೇಂದ್ರ ಸರ್ಕಾರ ಉಗ್ರರನ್ನು ಮಟ್ಟಹಾಕುವ ಕೆಲಸ ಮಾಡುತ್ತಿದೆ. ಒಬ್ಬ ನಾಗರೀಕನಾಗಿ ನಾನು ಹೇಳುವುದಾದರೇ ಉಗ್ರರ ದಾಳಿಯ ವಿಷಯ ಕೇಳಿ ಮೈಯಲ್ಲಿ ರಕ್ತವೇ ಕುದಿಯಿತು. ಭಯೋತ್ಪಾದಕರ ಸಂಹಾರ ಆಗೋವರೆಗೂ ನಮಗೆ ನೆಮ್ಮದಿಯೇ ಇಲ್ಲ. ಉಗ್ರರ ಅಂತ್ಯವಾಡಲೇ ಬೇಕು ಎಂದರು. ಅಂದಹಾಗೇ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಏಪ್ರಿಲ್.22ರಂದು ಉಗ್ರರು ಅಟ್ಟಹಾಸ ಮೆರೆದಿದ್ದರು. ಪಹಲ್ಗಾಮ್ ನಲ್ಲಿದ್ದಂತ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ 26 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಹಲವರು ಗಾಯಗೊಂಡಿದ್ದರು. https://kannadanewsnow.com/kannada/war-is-the-ultimate-choice-of-any-country-not-the-first-and-only-option-siddaramaiah/ https://kannadanewsnow.com/kannada/mann-ki-baat-episode-121-pm-modis-strong-message-against-terrorism-emphasis-on-unity/
ಬೆಂಗಳೂರು: ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ ಅಂತ ತಿಳಿಸಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ. ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಹಲ್ಗಾಮ್ ದಾಳಿಯ ನಂತ್ರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಬಗ್ಗೆ ಹೇಳಿಕೆ ನೀಡಿದ್ದು ವೈರಲ್ ಆಗಿತ್ತು. ಪಾಕಿಸ್ತಾನ ಮಾಧ್ಯಮಗಳಲ್ಲೂ ಇದು ಪ್ರಸಾರವಾಗಿ ಪರ ವಿರೋಧದ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿಕೆ ಬಿಡುಗಡೆ ಮಾಡಿದ್ದು, ಏನು ಹೇಳಿದ್ದಾರೆ ಅಂತ ಮುಂದೆ ಓದಿ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ…
ನವದೆಹಲಿ: ಐಪಿಎಲ್ 2025 ರ ಋತುವಿನಲ್ಲಿ 33 ವರ್ಷದ ಧೋನಿ 400 ರನ್ಗಳ ಗಡಿಯನ್ನು ಸಮೀಪಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಮತ್ತೊಂದು ಕಾರಣಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ಅದೇ ಭಾರತವನ್ನು ತೊರೆದು ಲಂಡನ್ ಗೆ ತೆರಳುವ ನಿರ್ಧಾರಕ್ಕೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಂಪತಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 2024 ರಲ್ಲಿ ಅವರ ಎರಡನೇ ಮಗು ಅಕಾಯ್ ಜನಿಸಿದಾಗಿನಿಂದ, ಸೆಲೆಬ್ರಿಟಿ ದಂಪತಿಗಳು ಆಗಾಗ್ಗೆ ಲಂಡನ್ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಲಂಡನ್ಗೆ ತೆರಳುವ ಯೋಚನೆ ಹೊಂದಿದ್ದಾರೆ ಎಂದು ಅವರ ಬಾಲ್ಯದ ಕೋಚ್ ರಾಜ್ಕುಮಾರ್ ಶರ್ಮಾ ಹೇಳಿದ್ದಾರೆ. ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರ ಪತಿ ಡಾ.ಶ್ರೀರಾಮ್ ನೇನೆ ಅವರು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬಗ್ಗೆ ಪರಸ್ಪರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮ್ಮ ಮಕ್ಕಳನ್ನು ಸಾಮಾನ್ಯವಾಗಿ ಬೆಳೆಸಲು ಲಂಡನ್ ಗೆ ಹೋಗಲು ಬಯಸುವ ಬಗ್ಗೆ ಅನುಷ್ಕಾ ತನ್ನೊಂದಿಗೆ ಹೇಗೆ ಮಾತನಾಡಿದರು ಎಂಬುದನ್ನು ಅವರು ಬಹಿರಂಗಪಡಿಸಿದರು. ಅವರು ಲಂಡನ್ಗೆ ಹೋಗುವ…
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭಾನುವಾರ 45 ವರ್ಷದ ಸಾಮಾಜಿಕ ಕಾರ್ಯಕರ್ತನನ್ನು ಶಂಕಿತ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಗುಲಾಮ್ ರಸೂಲ್ ಮ್ಯಾಗ್ರೆ ಎಂದು ಗುರುತಿಸಲ್ಪಟ್ಟ ಕಾರ್ಯಕರ್ತನ ಮೇಲೆ ಶನಿವಾರ ತಡರಾತ್ರಿ ಕಂಡಿ ಖಾಸ್ ಪ್ರದೇಶದ ಅವರ ನಿವಾಸದಲ್ಲಿ ಗುಂಡಿಕ್ಕಿ ಗಾಯಗೊಳಿಸಲಾಗಿತ್ತು. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಗಮಿಸಿದಾಗ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಮಾರಣಾಂತಿಕ ಭಯೋತ್ಪಾದಕ ದಾಳಿಯ ನಂತರ ಕಣಿವೆಯಾದ್ಯಂತ ಭದ್ರತೆಯನ್ನು ಹೆಚ್ಚಿಸಿರುವ ಸಮಯದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಆ ಘಟನೆಯಲ್ಲಿ, ಪಹಲ್ಗಾಮ್ನ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಹುಲ್ಲುಗಾವಲುಗಳಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದಾಗ 26 ಜನರು ಸಾವನ್ನಪ್ಪಿದ್ದಾರೆ. 40 ಸಿಆರ್ಪಿಎಫ್ ಸಿಬ್ಬಂದಿಯನ್ನು ಬಲಿತೆಗೆದುಕೊಂಡ 2019 ರ ಪುಲ್ವಾಮಾ ಬಾಂಬ್ ದಾಳಿಯ ನಂತರ ಪಹಲ್ಗಾಮ್ ದಾಳಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿದೆ…
ನವದೆಹಲಿ: ಕ್ರಿಕೆಟಿ ಗೌತಮ್ ಗಂಭೀರ್ ಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದಂತ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ದೆಹಲಿ ಪೊಲೀಸರು, ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ವ್ಯಕ್ತಿಯನ್ನು ಗುಜರಾತ್ ಮೂಲದ 21 ವರ್ಷದ ಜಿಗ್ನೇಶ್ ಸಿಂಗ್ ಪರ್ಮಾರ್ ಎಂದು ಗುರುತಿಸಲಾಗಿದೆ. ಆತನನ್ನು ಕೇಂದ್ರ ಜಿಲ್ಲಾ ಪೊಲೀಸ್ ತಂಡ ಬಂಧಿಸಿ ವಿವರವಾಗಿ ವಿಚಾರಣೆ ನಡೆಸಿದೆ ಅವರು ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಅವರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅವರ ಕುಟುಂಬ ಹೇಳಿಕೊಂಡಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. https://twitter.com/ANI/status/1916165028044280141 https://kannadanewsnow.com/kannada/shivanand-tagadur-state-president-of-working-journalists-association-unveils-7-bean-team-website/ https://kannadanewsnow.com/kannada/breaking-pakistans-military-exercise-backfires-plane-catches-fire-as-it-lands-watch-video/
ಬೆಂಗಳೂರು: ಬೆಂಗಳೂರು ಅರಮನೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಭಾರತೀಯ ಅಂತಾರಾಷ್ಟ್ರೀಯ ಕಾಫಿ ಹಬ್ಬ ದಲ್ಲಿ 7ಬೀನ್ ಟೀಮ್ ಅಭಿವೃದ್ಧಿಪಡಿಸಿರುವ ವೆಬ್ಸೈಟ್ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರೆಜಿಲ್ ಮತ್ತು ವಿಯೆಟ್ನಾಂಗಿಂತಲೂ ನಮ್ಮ ರಾಜ್ಯದ ಮಲೆನಾಡಿನ ಕಾಫಿ ಸೊಗಡು ಬೇರೆಯೇ ಇದೆ. ಇದನ್ನು ಸರಿಯಾದ ರೀತಿಯಲ್ಲಿ ಮಾರುಕಟ್ಟೆ ಮಾಡುವ ವ್ಯವಸ್ಥೆ ಸಂಘಟಿತವಾಗಿ ನಡೆಯಬೇಕಾಗಿದೆ ಎಂದರು. ಕಾಫಿ ಕೃಷಿ ಮತ್ತು ಅದರ ಇಳುವರಿ ಉತ್ತಮಪಡಿಸುವ ನಿಟ್ಟಿನಲ್ಲಿ 7ಬೀನ್ ಟೀಮ್ ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ. ಪ್ರಗತಿದಾಯಕ ಚಟುವಟಿಕೆಗಳ ಕಡೆಗೆ ಎಲ್ಲಾ ಬೆಳೆಗಾರರು ಗಮನ ನೀಡಿದರೆ ಗುರಿ ಸಾಧನೆ ಮಾಡಲು ಸಾಧ್ಯವಿದೆ ಎಂದರು. ಪ್ರತಿ ವರ್ಷವೂ ಕಾಫಿ ಮೇಳವನ್ನು ನಡೆಸುವ ಮೂಲಕ ಕಾಫಿಯ ವಿಭಿನ್ನ ಬಳಕೆಯ ಬಗ್ಗೆ ಮತ್ತು ಉಪಕರಣಗಳ ಬಳಕೆಯ ಬಗ್ಗೆ ಮಾಹಿತಿ ಜ್ಞಾನವನ್ನು ನೀಡುವಂತಾದರೆ, ಅದು ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತಾರ ಮಾಡಲು ಸಾಧ್ಯವಾಗುತ್ತದೆ. ಕಾಫಿ ಬಳಕೆದಾರರ ಸಮೂಹವೂ ವೃದ್ಧಿಯಾಗಲಿದೆ…
ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. 26 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ಕುಪ್ಪಾರದಲ್ಲಿರುವ ಉಗ್ರ ಫಾರೂಕ್ ಮನೆ ಧ್ವಂಸ ಮಾಡಲಾಗಿದೆ. ಈ ಮೂಲಕ ಮತ್ತೊಬ್ಬ ಉಗ್ರನ ಮನೆ ಧ್ವಂಸ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ದಾಳಿಯ ಪ್ರತೀಕವಾಗಿ ಮತ್ತೊಬ್ಬ ಉಗ್ರನ ಮನೆಯಲ್ಲಿ ಧ್ವಂಸ ಮಾಡಲಾಗಿದೆ. ಐಇಡಿ ಸ್ಪೋಟಿಸಿ ಕುಪ್ವಾರದಲ್ಲಿರುವ ಉಗ್ರ ಫಾರೂಕ್ ಮನೆ ಧ್ವಂಸ ಮಾಡಲಾಗಿದೆ. ಲಷ್ಕರ್ -ಎ-ತೊಯ್ಬಾ ಉಗ್ರ ಫಾರೂಕ್ ತೇಡ್ವಾ ಎಂಬಾತ ಉಗ್ರನ ಮನೆಯನ್ನು ಉಡೀಸ್ ಮಾಡಲಾಗಿದೆ. ಆದರೇ ಸದ್ಯ ಪಾಕಿಸ್ತಾನದಲ್ಲಿ ಭಯೋತ್ಪಾದಕ ಫಾರೂಕ್ ತಲೆಮರೆಸಿಕೊಂಡಿದ್ದಾನೆ. https://kannadanewsnow.com/kannada/breaking-pakistans-military-exercise-backfires-plane-catches-fire-as-it-lands-watch-video/ https://kannadanewsnow.com/kannada/pf-account-transfer-allowed-without-employers-permission/
ಪಿರಿಯಾಪಟ್ಟಣ: “ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಬಿಜೆಪಿ ಹಾಗೂ ದಳದವರು ಮಾತೆತ್ತಿದರೆ ಅಭಿವೃದ್ಧಿ ಇಲ್ಲ ಎನ್ನುತ್ತಿದ್ದಾರೆ. ನಮ್ಮ ಸರ್ಕಾರ ನಿಮ್ಮ ಒಂದೇ ತಾಲೂಕಿಗೆ ಸುಮಾರು ₹500 ಕೋಟಿ ಮೊತ್ತದ ಯೋಜನೆಗಳನ್ನು ನೀಡಿದೆ. ಇಂದು ನಡೆಯುತ್ತಿರುವ ಉದ್ಘಾಟನೆ ಅಭಿವೃದ್ಧಿಯಲ್ಲವೇ? ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಜಿಲ್ಲೆಗಳಿಗೆ ₹3500 ಕೋಟಿಯಷ್ಟು ಯೋಜನೆಗಳಿಗೆ ಅನುಮೊದನೆ ನೀಡಲಾಗಿದೆ. ಇದು ಅಭಿವೃದ್ಧಿಯಲ್ಲವೇ? ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಮಂಡನೆ ಮಾಡಿದ್ದು ಅಭಿವೃದ್ಧಿಯಲ್ಲವೇ? ಬಡ ಕುಟುಂಬಗಳಿಗೆ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಆರೋಗ್ಯಕರ ಆಹಾರದ ವಿಷಯಕ್ಕೆ ಬಂದಾಗ, ತರಕಾರಿಗಳನ್ನು ಸಾಮಾನ್ಯವಾಗಿ ಅತ್ಯುತ್ತಮ ಆಯ್ಕೆಯೆಂದು ಪರಿಗಣಿಸಲಾಗುತ್ತದೆ. ಎಲ್ಲಾ ನಂತರ, ಅವು ಜೀವಸತ್ವಗಳು, ಫೈಬರ್ ಮತ್ತು ಖನಿಜಗಳಿಂದ ತುಂಬಿರುತ್ತವೆ. ಅನೇಕ ಜನರು ತಮ್ಮ ತಟ್ಟೆಗಳನ್ನು ತರಕಾರಿಗಳಿಂದ ತುಂಬಿಸಿಕೊಳ್ಳುತ್ತಾರೆ. ಅವರು ತೂಕ ಇಳಿಸಿಕೊಳ್ಳಲು ಸಹಾಯ ಮಾಡುವ “ಸುರಕ್ಷಿತ” ಆಹಾರವನ್ನು ತಿನ್ನುತ್ತಿದ್ದಾರೆ ಎಂದು ಭಾವಿಸುತ್ತಾರೆ. ಆದರೆ ಆಶ್ಚರ್ಯಕರವಾದ ಸಂಗತಿ ಎಂದರೇ ಎಲ್ಲಾ ತರಕಾರಿಗಳು ಕಡಿಮೆ ಕ್ಯಾಲೋರಿಗಳು ಅಥವಾ ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುವುದಿಲ್ಲ. ಕೆಲವು ತರಕಾರಿಗಳನ್ನು ನೀವು ಅತಿಯಾಗಿ ಸೇವಿಸಿದರೆ ಅಥವಾ ಹೆಚ್ಚಿನ ಕ್ಯಾಲೋರಿ ಅಂಶವನ್ನು ಒಳಗೊಂಡಿರುವ ವಿಧಾನದಲ್ಲಿ ಅವುಗಳನ್ನು ತಯಾರಿಸಿದರೆ ಅವು ಅನಿರೀಕ್ಷಿತ ತೂಕ ಹೆಚ್ಚಾಗಲು ಕಾರಣವಾಗಬಹುದು. ಕೆಲವು ನಿರ್ದಿಷ್ಟ ರೀತಿಯಲ್ಲಿ ತಯಾರಿಸಿದಾಗ ನೈಸರ್ಗಿಕವಾಗಿ ಸಕ್ಕರೆ, ಪಿಷ್ಟ ಅಥವಾ ಕೊಬ್ಬಿನಿಂದ ಸಮೃದ್ಧವಾಗಿವೆ. ಸ್ವಾಭಾವಿಕವಾಗಿ, ನೀವು ಅವುಗಳನ್ನು ಸೇವಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸುತ್ತೀರಿ ಎಂದು ಇದರ ಅರ್ಥವಲ್ಲ. ಆದರೆ ಈ ರಹಸ್ಯ ಅಪಾಯಗಳನ್ನು ತಿಳಿದುಕೊಳ್ಳುವ ಮೂಲಕ ನೀವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು ಮತ್ತು ಪರಿಣಾಮವಾಗಿ, ಬುದ್ಧಿವಂತ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನಿಮಗೆ ತಿಳಿಯದೆಯೇ…













