Author: kannadanewsnow09

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಆಗಸ್ಟ್.31ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-03 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.31 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಎಸ್.ವಿ. ಬಡಾವಣೆ ಎ,ಬಿ.ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಎಂದಿದೆ. ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷಿö್ಮ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/bengaluru-new-bmtc-buses-to-ply-on-this-route/ https://kannadanewsnow.com/kannada/breaking-court-extends-actor-darshans-judicial-custody-till-september-9/

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ ಬಿಎಂಟಿಸಿ ಸಾರಿಗೆ ಬಸ್ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದ್ದು, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ  29.08.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ 251 ಕೃ.ರಾ. ಮಾರುಕಟ್ಟೆ ಶಿವಕೋಟೆ ಯಶವಂತಪುರ, ಜಾಲಹಳ್ಳಿ ಕ್ರಾಸ್‍, ಚಿಕ್ಕಬಾಣಾವರ, ಹೇಸರಘಟ್ಟ ಟಿ. ಬಿ. ಕ್ರಾಸ್‍, ಮುತ್ಕೂರು ಕ್ರಾಸ್. 1 ಬಸ್ಸು 08 ಸುತ್ತುವಳಿಗಳು ಸದರಿ ಮಾರ್ಗದ ವೇಳಾಪಟ್ಟಿ ವಿವರಗಳ ಈ ಕೆಳಗಿನಂತಿದೆ. ಕೃ.ರಾ. ಮಾರುಕಟ್ಟೆ/ಯಶವಂತಪುರ ಬಿಡುವ ವೇಳೆ 0600, 1410, 1710, 2030 ಶಿವಕೋಟೆ ಬಿಡುವ ವೇಳೆ 0425, 0740, 1555, 1850 https://kannadanewsnow.com/kannada/union-minister-hd-kumaraswamy-has-levelled-serious-allegations-against-mla-ganiga-ravi/…

Read More

ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು. ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು. ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ…

Read More

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಡಿಸ್ನಿಯ ಭಾರತೀಯ ಮಾಧ್ಯಮ ಸ್ವತ್ತುಗಳ ವಿಲೀನಕ್ಕೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಆಗಸ್ಟ್ 28 ರಂದು ಅನುಮೋದನೆ ನೀಡಿದೆ. “ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ವಯಾಕಾಮ್ 18 ಮೀಡಿಯಾ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ 18 ಮೀಡಿಯಾ ಲಿಮಿಟೆಡ್, ಸ್ಟಾರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಸ್ಟಾರ್ ಟೆಲಿವಿಷನ್ ಪ್ರೊಡಕ್ಷನ್ಸ್ ಲಿಮಿಟೆಡ್ ಒಳಗೊಂಡ ಪ್ರಸ್ತಾವಿತ ಸಂಯೋಜನೆಯನ್ನು ಸಿ -2024 / 05 / 1155 ಆಯೋಗ ಅನುಮೋದಿಸಿದೆ, ಇದು ಸ್ವಯಂಪ್ರೇರಿತ ಮಾರ್ಪಾಡುಗಳ ಅನುಸರಣೆಗೆ ಒಳಪಟ್ಟಿರುತ್ತದೆ” ಎಂದು ಸಿಸಿಐ ಎಕ್ಸ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. ಆರ್ಐಎಲ್ನ 47 ನೇ ವಾರ್ಷಿಕ ಸಾಮಾನ್ಯ ಸಭೆಗೆ ಒಂದು ದಿನ ಮುಂಚಿತವಾಗಿ ಸಿಸಿಐ ಪ್ರಕಟಣೆ ಬಂದಿದೆ. ಫೆಬ್ರವರಿ 2024 ರಲ್ಲಿ, ಆರ್ಐಎಲ್ ಅಂಗಸಂಸ್ಥೆ ವಯಾಕಾಮ್ 18 ಮತ್ತು ಡಿಸ್ನಿಯ ಭಾರತೀಯ ಘಟಕವಾದ ಸ್ಟಾರ್ ಇಂಡಿಯಾ ತಮ್ಮ ವ್ಯವಹಾರಗಳನ್ನು ವಿಲೀನಗೊಳಿಸಿ ಭಾರತದ ಅತಿದೊಡ್ಡ ಟಿವಿ ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ಒಂದನ್ನು ರಚಿಸುವುದಾಗಿ ಘೋಷಿಸಿದವು. ಒಪ್ಪಂದದ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ-ಪ್ರತಿ ವಾದವನ್ನು ಆಲಿಸಿದಂತ ನ್ಯಾಯಾಲಯವು, ಅರ್ಜಿಯ ವಿಚಾರಣೆಯ ಬಳಿಕ ಆದೇಶವನ್ನು ಆಗಸ್ಟ್.31ಕ್ಕೆ ಕಾಯ್ದಿರಿಸಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ಆರೋಪಿ ಪವಿತ್ರಾ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿನ್ ವಾದಿಸಿದರು. ಮೊದಲಿಗೆ ಅಪರಿಚಿತ ಆರೋಪಿಗಳೆಂದು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು. ರೇಣುಕಾಸ್ವಾಮಿ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದರು. ಎ3 ಆರೋಪಿ ಪವನ್ ಬಳಿಯಲ್ಲಿ ಇರುವಂತ ಪೋನ್ ನಂಬರ್ ತನ್ನದೆಂದು ಸಂದೇಶ ಕಳುಹಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದಂತ ಪವಿತ್ರಾ ಗೌಡ, ವಾಟ್ಸ್ ಆಪ್ ಮಾಡುವಂತೆ ಸೂಚಿಸಿದ್ದರು. ಕರೆ ಮಾಡಿದಾಗ ಪವಿತ್ರಾ ಗೌಡ ಪವನ್ ಮೊಬೈಲ್ ಸಂಖ್ಯೆಯಿಂದಲೇ…

Read More

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೆ‌ ಸಾರ್ವಜನಿಕ ಭೇಟಿ ಮತ್ತು ‌ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು‌ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರಿಗೆ ವೈದ್ಯರು ತಿಳಿಸಿದ್ದು ಹೀಗಾಗಿ ಯಾರೂ ಸಹ ಅನ್ಯತಃ ಭಾವಿಸದೇ ಹಿರಿಯ ಮುತ್ಸುದ್ದಿಎಸ್.ಎಂ.ಕೃಷ್ಣ. ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ…

Read More

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ರೈಲ್ವೆ ಸಚಿವಾಲಯದ ಒಟ್ಟು ಅಂದಾಜು ವೆಚ್ಚ 6,456 ಕೋಟಿ ರೂ.ಗಳ (ಅಂದಾಜು) 3 (ಮೂರು) ಯೋಜನೆಗಳಿಗೆ ತನ್ನ ಅನುಮೋದನೆ ನೀಡಿದೆ. ಅನುಮೋದಿತ ಯೋಜನೆಗಳು ಸಂಪರ್ಕವಿಲ್ಲದ ಪ್ರದೇಶಗಳನ್ನು ಸಂಪರ್ಕಿಸುವ ಮೂಲಕ ವ್ಯವಸ್ಥಾಪನಾ ದಕ್ಷತೆಯನ್ನು ಸುಧಾರಿಸುತ್ತವೆ. ಅಸ್ತಿತ್ವದಲ್ಲಿರುವ ಲೈನ್ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ ಮತ್ತು ಸಾರಿಗೆ ಜಾಲಗಳನ್ನು ಹೆಚ್ಚಿಸುತ್ತವೆ. ಇದರ ಪರಿಣಾಮವಾಗಿ ಸುವ್ಯವಸ್ಥಿತ ಪೂರೈಕೆ ಸರಪಳಿಗಳು ಮತ್ತು ತ್ವರಿತ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಹೊಸ ಮಾರ್ಗದ ಪ್ರಸ್ತಾಪಗಳು ನೇರ ಸಂಪರ್ಕವನ್ನು ಒದಗಿಸುತ್ತವೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತವೆ. ಭಾರತೀಯ ರೈಲ್ವೆಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತವೆ. ಮಲ್ಟಿ-ಟ್ರ್ಯಾಕಿಂಗ್ ಪ್ರಸ್ತಾಪವು ಕಾರ್ಯಾಚರಣೆಯನ್ನು ಸರಾಗಗೊಳಿಸುತ್ತದೆ ಮತ್ತು ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಭಾರತೀಯ ರೈಲ್ವೆಯಾದ್ಯಂತ ಅತ್ಯಂತ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಯನ್ನು ಒದಗಿಸುತ್ತದೆ. ಈ ಯೋಜನೆಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನವ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿವೆ,…

Read More

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಹೊಸನಗರ ತಾಲ್ಲೂಕಿನ ತ್ರೈಮಾಸಿಕ ಕೆಡಿಪಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾಗೇಂದ್ರ ಜೋಗಿ ಅವರನ್ನು ನೇಮಕ ಮಾಡಿ ಆದೇಶಿಸಿತ್ತು. ಇಂತಹ ನಾಗೇಂದ್ರ ಜೋಗಿ ಅವರಿಗೆ ನಿಟ್ಟೂರು ಗ್ರಾಮಸ್ಥರಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು. ಇಂದು ನಿಟ್ಟೂರಿನಲ್ಲಿ ನೂತನವಾಗಿ ಹೊಸನಗರ ತಾಲೂಕು ತ್ರೈಮಾಸಿಕ ಕೆ ಡಿ ಪಿ ಸದಸ್ಯರಾಗಿ ನಾಮನಿರ್ದೇಶನಗೊಂಡ ನಮ್ಮ ನಿಟ್ಟೂರು ಕಾಂಗ್ರೆಸ್ ಘಟಕದ ಅಧ್ಯಕ್ಷರು ನಮ್ಮ ಆತ್ಮೀಯರು ಆಗಿರುವ ನಾಗೇಂದ್ರ ಜೋಗಿ ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಾಮನಿರ್ದೇಶನ ಮಾಡಿದ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೂ ನಿಟ್ಟೂರು ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದರು. ಇದೇ ವೇಳೆ ನಾಮನಿರ್ದೇಶನಕ್ಕೆ ಸಹಕರಿಸಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾಗಿರುವ ಬಿಜಿ ಚಂದ್ರಮೌಳಿ ಗೌಡ ಹಾಗೂ ನಗರ ಹೋಬಳಿಯ ಯುವ ಮುಖಂಡರು ನಮ್ಮ ನಾಯಕರು ಆಗಿರುವ ಮಾಸ್ತಿಕಟ್ಟೆ ಸುಬ್ರಮಣ್ಯ ಇವರಿಗೆ ನಿಟ್ಟೂರು ಘಟಕದ ಪರವಾಗಿ ಧನ್ಯವಾದಗಳು ತಿಳಿಸಲಾಯಿತು. ಈ ವೇಳೆ ಮಾತನಾಡಿದಂತ ನಿಟ್ಟೂರು ಗ್ರಾಮ ಪಂಚಾಯ್ತಿ…

Read More

ಮುಂಬೈ : ಪ್ಯಾರಿಸ್ ಒಲಿಂಪಿಕ್-2024ರ ಐತಿಹಾಸಿಕ ವೀಕ್ಷಣೆ ದಾಖಲೆ ಪ್ರಸ್ತುತಿಯ ನಂತರದಲ್ಲಿ ಜಿಯೋಸಿನಿಮಾದಲ್ಲಿ ಪ್ಯಾರಾಲಿಂಪಿಕ್ ಗೇಮ್ಸ್ ಪ್ಯಾರಿಸ್-2024ರ ನೇರಪ್ರಸಾರದ ಘೋಷಣೆಯನ್ನು ವಯಾಕಾಮ್18 ಮಾಡುತ್ತಿದೆ. ಫ್ರೆಂಚ್ ರಾಜಧಾನಿಯಲ್ಲಿ ಆಗಸ್ಟ್ 28ರಿಂದ ಸೆಪ್ಟೆಂಬರ್ 8ರವರೆಗೆ ಪ್ಯಾರಾಲಿಂಪಿಕ್ ನಡೆಯಲಿದೆ. ಜಿಯೋಸಿನಿಮಾದಲ್ಲಿ 12 ದಿನಗಳ ಕ್ರೀಡಾಕೂಟದ ನೇರಪ್ರಸಾರ ನೀಡುವ ಜೊತೆಗೆ ಸ್ಪೋರ್ಟ್ಸ್18 ಟಿವಿ ನೆಟ್‌ವರ್ಕ್‌ನಲ್ಲಿ ಸ್ಪರ್ಧೆಗಳ ದೈನಂದಿನ ಮುಖ್ಯಾಂಶಗಳನ್ನು ಸಹ ನೀಡಲಾಗುತ್ತದೆ. ಜಿಯೋಸಿನಿಮಾ ಎರಡು ಏಕಕಾಲೀನ ಫೀಡ್‌ಗಳಲ್ಲಿ ವೀಕ್ಷಕರಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ ಗೇಮ್ಸ್-2024ರ ಅತ್ಯುತ್ತಮ ಕ್ರೀಡಾಸ್ಪರ್ಧೆಗಳ ಸಮಗ್ರ ಪ್ರಸ್ತುತಿಯನ್ನು ನೀಡಲಿದೆ. ವೀಕ್ಷಕರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್-2024ರ ಉದ್ಘಾಟನಾ ಸಮಾರಂಭವನ್ನು ಇಂದು (ಬುಧವಾರ) ರಾತ್ರಿ 11:30 (ಭಾರತೀಯ ಕಾಲಮಾನ)ರಿಂದ ವೀಕ್ಷಿಸಲು ಸಾಧ್ಯವಾಗುತ್ತದೆ . ಆಗಸ್ಟ್ 29ರಿಂದ(ಗುರುವಾರ)ಪ್ರತಿದಿನ ಮಧ್ಯಾಹ್ನ 12ರಿಂದ ಕ್ರೀಡಾಸ್ಪರ್ಧೆಗಳ ನೇರಪ್ರಸಾರವನ್ನು ಕಾಣಬಹುದಾಗಿರುತ್ತದೆ. ಪ್ಯಾರಿಸ್ ಒಲಿಂಪಿಕ್ಸ್ ಪ್ರಸ್ತುತಿಯು ಭಾರತದಲ್ಲಿ 17 ಕೋಟಿಗೂ ಅಧಿಕ ವೀಕ್ಷಕರು, 1,500 ಕೋಟಿ ನಿಮಿಷಗಳ ವೀಕ್ಷಣೆಯ ಅಭೂತಪೂರ್ವ ದಾಖಲೆಯನ್ನು ನಿರ್ಮಿಸಿದ ಬಗ್ಗೆ ವಯಾಕಾಮ್18 ಘೋಷಣೆ ಮಾಡಿದ ಬೆನ್ನಲ್ಲೇ ಪ್ಯಾರಿಸ್ ಪ್ಯಾರಾಲಿಂಪಿಕ್ ಗೇಮ್ಸ್-2024ರ ನೇರಪ್ರಸಾರದ ಬಗ್ಗೆಯೂ ಅಧಿಕೃತ…

Read More

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯವರ ಟ್ರಸ್ಟ್‍ಗೆ ನಿಯಮ ಮೀರಿ ತರಾತುರಿಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತರಾತುರಿಯಲ್ಲಿ ನೀಡಿರುವುದರ ಹಿಂದಿನ ಉದ್ದೇಶ ಏನು? ಒಂದೇ ದಿನದಲ್ಲಿ ಜಾಗ ಮಂಜೂರು ಮಾಡಿದ್ದಾರೆ. ಮರುದಿನವೇ (6ರಿಂದ) ಮಂಜೂರಾತಿ ಪತ್ರವೂ ಕೊಟ್ಟಿದ್ದಾರೆ ಎಂದು ತಿಳಿಸಿದರು. ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಎಂಡ್ ಡಿ) ಕೇಂದ್ರ, ಇನೊವೇಶನ್, ಎಕ್ಸಲೆನ್ಸ್ ಟೆಕ್ನಿಕಲ್ ಇನ್‍ಸ್ಟಿಟ್ಯೂಟ್, ಎಜುಕೇಶನಲ್ ಇನ್‍ಸ್ಟಿಟ್ಯೂಟ್, ಬ್ಯಾಂಕ್ ಮೊದಲಾದವುಗಳಿಗೆ ಸೌಲಭ್ಯ ನೀಡುವ ನಿವೇಶನ ಎಂದು ತಿಳಿಸಿದ್ದಾರೆ. ಇದೇ ಕೆಐಎಡಿಬಿ 14-2-2023ರಂದು ಒಂದು ಅಧಿಕೃತ ಜ್ಞಾಪಕ ಪತ್ರ ಬಿಡುಗಡೆ ಮಾಡಿತ್ತು. ಜನವರಿ 12ರ ಸಭೆಯ ನಿರ್ಧಾರ ಅದಾಗಿತ್ತು. ಕೈಗಾರಿಕಾ ಪ್ರದೇಶದಲ್ಲಿ ಲಭ್ಯ ವಾಣಿಜ್ಯ ಉದ್ದೇಶದ ನಿವೇಶನಗಳನ್ನು 10 ವರ್ಷಗಳ ಲೀಸ್- ಸೇಲ್ ಡೀಡ್ ಮೂಲಕ ಏಲಂನಲ್ಲಿ ನಿಗದಿತ…

Read More