Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಪಿಡಿಒ ಜೇಷ್ಠಾತಾ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ತಯಾರಿಸುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಅಡ್ವೊಕೇಟ್‌ ಜನರಲ್‌ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ರಣ್‌ದೀಪ್‌ ಅವರೊಂದಿಗೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಚಾಲಕಿಯರಿಗೆ ವೇತನ ಪಾವತಿ ಮಾಡುವ ಸಂಬಂಧ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಪರಿಶೀಲಿಸಿದರು. ಇ-ಸ್ವತ್ತು ನಿಯಮಾವಳಿಗಳನ್ನು ಆದಷ್ಟು ಶೀಘ್ರದಲ್ಲಿ ಅಂತಿಮಗೊಳಿಸಲೂ ಸಚಿವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು. https://kannadanewsnow.com/kannada/on-the-occasion-of-mysore-dasara-ksrtc-has-arranged-special-bus-services-exceeding-2300/ https://kannadanewsnow.com/kannada/case-filed-against-a-19-year-old-woman-who-married-a-19-year-old-man/

Read More

ಶಿವಮೊಗ್ಗ: ಇಂದು ಸೊರಬ ತಾಲ್ಲೂಕಿನ ಉಳವಿಯಲ್ಲಿ ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿದ್ದಂತ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಈ ರಕ್ತದಾದನಲ್ಲಿ ಎಲ್ಲಾ ಸಮುದಾಯದವರು ಪಾಲ್ಗೊಂಡು ರಕ್ತದಾನ ಮಾಡಿ ಗಮನ ಸೆಳೆದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗದಲ್ಲಿರುವಂತ ಹಳ್ಳಿ ಸಂತೆಯಲ್ಲಿ ಉಳವಿಯ ಫಲಾಹುಲ್ ಮುಸ್ಲಿಂ ಕಮಿಟಿ ಆಶ್ರಯದಲ್ಲಿ ದೂಗೂರು, ಉಳವಿ ಗ್ರಾಮಪಂಚಾಯ್ತಿ ಹಾಗೂ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಪ್ರವಾದಿ ಮೊಹಮ್ಮದ್ ಅವರ 1500 ವರ್ಷದ ಜನ್ಮ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಬೃಹತ್ ರಕ್ತದಾನ ಶಿಬಿರವನ್ನು ಸೊರಬ ತಹಶೀಲ್ದಾರ್ ಮಂಜುಳಾ ಬಿ ಹೆಗಡಾಳ ಅವರು ಉದ್ಘಾಟಿಸಿದರು. ಈ ಬಳಿಕ ಮಾತನಾಡಿದಂತ ಅವರು, ರಕ್ತದಾನ ಮಹಾದಾನವಾಗಿದೆ. ಒಮ್ಮೆಯಾದರೂ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಹೀಗೆ ರಕ್ತದಾನ ಮಾಡುವುದರಿಂದ 4 ಜನರ ಪ್ರಾಣ ಉಳಿಸಿದಂತೆ ಆಗಲಿದೆ. ಆ ನಿಟ್ಟಿನಲ್ಲಿ ಇಂದು ಉಳವಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಿ, ಯಶಸ್ವಿಯಾಗಿ ನಡೆಸುತ್ತಿರುವುದು ನಿಜಕ್ಕೂ ಉತ್ತಮ…

Read More

ಬೆಂಗಳೂರು: ಕುರುಬರಿಗೆ ಎಸ್ ಟಿ ಮೀಸಲಾತಿ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದಾಖಲಾಗಿದ್ದಂತ ಪ್ರಕರಣದಲ್ಲಿ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ಸೇರಿದಂತೆ ಇತರರು ಜಾಮೀನು ಕೋರಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಂಬಂಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇನ್ನೂ ಪಿಪಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್.23ಕ್ಕೆ ಮುಂದೂಡಿದೆ. https://kannadanewsnow.com/kannada/case-filed-against-a-19-year-old-woman-who-married-a-19-year-old-man/ https://kannadanewsnow.com/kannada/even-if-your-phone-is-on-silent-or-lost-it-will-be-found-within-a-minute-how-do-you-know/

Read More

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ. ದಸರಾ ರಜೆಗಳ ಪ್ರಯುಕ್ತ ಕರಾರಸಾ…

Read More

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಇಂದು ಗದಗದ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಹೇಳಿದ್ದಾರೆ. ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ…

Read More

ಮಂಡ್ಯ : ದಲಿತ ಮಹಿಳೆ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿ ನಿಂದಿಸಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಶಾಸಕ ಸ್ಥಾನವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪದಾಧಿಕಾರಿಗಳು ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಶಾಸಕ ಯತ್ನಾಳ್ ಪ್ರತಿಕೃತಿಯನ್ನು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಹಿಸಲು ಮುಂದಾದ ವೇಳೆ ಇನ್ಸ್ಪೆಕ್ಟರ್ ವೆಂಕಟೇಗೌಡ ಅವರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರ ಮನವೊಲಿಸಿ ವಿಫಲಗೊಳಿಸಿದರು. ಬಳಿಕ ತಾಲೂಕು ಕಛೇರಿಗೆ ಆಗಮಿಸಿ ಘೋಷಣೆ ಕೂಗಿ ಕಿಡಿಕಾರಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮೈಸೂರು ವಿಭಾಗೀಯ ಸಂಚಾಲಕ ಮರಳಿಗ ಶಿವರಾಜ್ ಮಾತನಾಡಿ, ದಸರಾ ಕಾರ್ಯಕ್ರಮ ಉದ್ಘಾಟನೆ ವಿಷಯವಾಗಿ ಮಾಧ್ಯಮದ ಮುಂದೆ ಯತ್ನಾಳ್ ಮಾತನಾಡುವಾಗ ಅವಮಾನಕರ ಹೇಳಿಕೆ ನೀಡಿದ್ದಾರೆ. ಚಾಮುಂಡೇಶ್ವರಿ ದೇವಿಗೆ ಸನಾತನ ಧರ್ಮದ ಮಹಿಳೆಯರು ಮಾತ್ರ ಪೂಜೆ ಸಲ್ಲಿಸಬೇಕೆ ಹೊರತು ಸಾಮಾನ್ಯ ದಲಿತ ಮಹಿಳೆಗೂ…

Read More

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಹೇಳಿದರು. ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ…

Read More

ಬೆಂಗಳೂರು: ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಉಂಟಾಗಲಿದೆ. ಜೊತೆ ಜೊತೆಗೆ ದೀರ್ಘಕಾಲಿಕ ಸಮಸ್ಯೆಗಳು ಇದರಿಂದ ಉಂಟಾಗಲಿವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ಧರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ ಬರೆದಿದ್ದು, ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಮತ್ತು ದೀರ್ಘಾವಧಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಸಾಮಾಜಿಕ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಮರು ಪರಿಶೀಲಿಸುವಂತೆ ತಿಳಿಸಲಾಗಿದೆ. ಜಾತಿ ಪಟ್ಟಿಯಲ್ಲಿ ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಸೇರಿ ಹೊಸ ಜಾತಿ ಪಟ್ಟಿಗಳ ಸೇರ್ಪಡೆ ಹಿನ್ನಲೆಯಲ್ಲಿ  ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರದಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೇ ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯ ಬಗ್ಗೆ ಮರುಪರಿಶೀಲಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/a-significant-order-from-the-government-regarding-the-issuance-of-clearance-certificates-for-multi-storey-buildings-across-the-state/ https://kannadanewsnow.com/kannada/breaking-cyber-attack-flight-service-disruptions-in-london-brussels-other-european-countries/

Read More

ಮದುವೆಗೆ ಅತ್ಯುತ್ತಮ ಸಲಹೆ… 1. ನೀವು ಒಬ್ಬರನ್ನೊಬ್ಬರು ಇಷ್ಟಪಡಲು ಕಷ್ಟಪಡುವ ಕ್ಷಣಗಳಲ್ಲಿಯೂ ಸಹ, ಪರಸ್ಪರ ಪ್ರೀತಿಸಲು ಆಯ್ಕೆಮಾಡಿ. ಪ್ರೀತಿ ಒಂದು ಬದ್ಧತೆ, ಭಾವನೆಯಲ್ಲ. 2. ನಿಮ್ಮ ಗಂಡ/ಹೆಂಡತಿ ಕರೆ ಮಾಡುವಾಗ ಯಾವಾಗಲೂ ಫೋನ್‌ಗೆ ಉತ್ತರಿಸಿ. ಸಾಧ್ಯವಾದಾಗಲೆಲ್ಲಾ, ನೀವು ನಿಮ್ಮ ಸಂಗಾತಿಯೊಂದಿಗೆ ಒಟ್ಟಿಗೆ ಇರುವಾಗ ನಿಮ್ಮ ಫೋನ್ ಅನ್ನು ಆಫ್ ಮಾಡಲು ಪ್ರಯತ್ನಿಸಿ. 3. ಒಟ್ಟಿಗೆ ಸಮಯವನ್ನು ಆದ್ಯತೆಯನ್ನಾಗಿ ಮಾಡಿ. ಸ್ಥಿರವಾದ ಡೇಟ್ ನೈಟ್‌ಗಾಗಿ ಬಜೆಟ್. ಸಮಯವು “ಸಂಬಂಧಗಳ ಕರೆನ್ಸಿ”, ಆದ್ದರಿಂದ ನಿಮ್ಮ ಮದುವೆಯಲ್ಲಿ ನಿರಂತರವಾಗಿ ಸಮಯವನ್ನು ಹೂಡಿಕೆ ಮಾಡಿ. 4. ನಿಮ್ಮ ಮದುವೆಯನ್ನು ಬಲಪಡಿಸುವ ಸ್ನೇಹಿತರೊಂದಿಗೆ ನಿಮ್ಮನ್ನು ಸುತ್ತುವರೆದಿರಿ. ನಿಮ್ಮ ಪಾತ್ರವನ್ನು ರಾಜಿ ಮಾಡಿಕೊಳ್ಳಲು ನಿಮ್ಮನ್ನು ಪ್ರಚೋದಿಸುವ ಜನರಿಂದ ನಿಮ್ಮನ್ನು ದೂರವಿರಿಸಿ. 5. ನಗುವನ್ನು ನಿಮ್ಮ ಮದುವೆಯ ಧ್ವನಿಪಥವನ್ನಾಗಿ ಮಾಡಿ. ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಿ. ಮತ್ತು ಕಷ್ಟದ ಸಮಯಗಳಲ್ಲಿಯೂ ಸಹ, ನಗಲು ಕಾರಣಗಳನ್ನು ಹುಡುಕಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ…

Read More

ಬೆಂಗಳೂರು: ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡಲು ಉಪ-ನಿರ್ದೇಶಕರು ಅವರುಗಳನ್ನು ಪರಿವೀಕ್ಷಣೆಗೆ ನಿಯೋಜಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ಸಮಾದೇಷ್ಟರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡುವ ಸಲುವಾಗಿ ಪರಿವೀಕ್ಷಣೆ ಮಾಡಲು Round-robin ಪದ್ಧತಿಯಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿಯವರುಗಳನ್ನು ಹೊರತುಪಡಿಸಿ ಉಪ ನಿರ್ದೇಶಕರು ರವರುಗಳನ್ನು ಮಾತ್ರ ನಿಯೋಜಿಸಲು ಸೂಚಿಸಲಾಗಿತ್ತು. ಸದರಿ ಉಲ್ಲೇಖಿತ ಸುತ್ತೋಲೆಯನ್ವಯ ಉಪ ನಿರ್ದೇಶಕರುಗಳು, ಬಹುಮಹಡಿ ಕಟ್ಟಡಗಳನ್ನು ಪರಿವೀಕ್ಷಿಸುವ ಸಲುವಾಗಿ ಕೇಂದ್ರಸ್ಥಾನವನ್ನು ಬಿಟ್ಟು ತೆರಳುತ್ತಿರುವುದರಿಂದ, ಕೇಂದ್ರ ಕಛೇರಿಯ ದೈನಂದಿನ ಕೆಲಸಗಳಿಗೆ ಅಡಚಣೆಯಾಗುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ. ಆದುದರಿಂದ, ಆಡಳಿತಾತ್ಮಕ ದೃಷ್ಟಿಯಿಂದ ಈ ಮುಂಚೆ ಚಾಲ್ತಿಯಲ್ಲಿದ್ದಂತೆ ಮಂಗಳೂರು, ಮೈಸೂರು, ಹುಬ್ಬಳ್ಳಿ ಹಾಗೂ ಕಲಬುರಗಿ ಪ್ರಾಂತ್ಯದಲ್ಲಿ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರವನ್ನು ನೀಡುವ ಸಲುವಾಗಿ ಪರಿವೀಕ್ಷಣೆಗೆ ಆಯಾ ಮುಖ್ಯ ಅಗ್ನಿಶಾಮಕ ಅಧಿಕಾರಿಗಳನ್ನು ನಿಯೋಜಿಸುವುದು ಮತ್ತು ಬೆಂಗಳೂರು ನಗರದ ಬಹುಮಹಡಿ ಕಟ್ಟಡಗಳನ್ನು ಮಾತ್ರ Round-robin…

Read More