Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ತೋಟಗಾರಿಕೆ ಬೆಳೆಗಳಿಗೆ ಸಿಂಪಡಿಸುವ ಕೀಟ ನಾಶಕಗಳಲ್ಲಿ ನಕಲಿ ಕಂಪನಿಗಳ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ ವಹಿಸಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1902339706983260520 ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://kannadanewsnow.com/kannada/good-news-for-rural-students-in-the-state-ai-training-to-boost-employment-opportunities/ https://kannadanewsnow.com/kannada/chalukya-utsav-celebrated-on-the-lines-of-konark-utsav/
ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲಾಗುವುದು. ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ. ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಡರಗಿ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1902338351753302045 ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಹೇಳಿದರು. ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು…
ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಮೂಲಕ ಕೌಶಲ್ಯ ಅಭಿವೃದ್ಧಿಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. GTTC ಕ್ಯಾಂಪಸ್ನಲ್ಲಿ NIELIT ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ನೊಂದಿಗೆ ತಿಳಿವಳಿಕಾ ಒಪ್ಪಂದಕ್ಕೆ (MoU) ಬುಧವಾರ, ಸಹಿ ಹಾಕಲಾಯಿತು. ಈ ಸಹಯೋಗವು ವಿದ್ಯಾರ್ಥಿಗಳಿಗೆ – ವಿಶೇಷವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದ ಅಂಚಿನಲ್ಲಿರುವ ಸಮುದಾಯಗಳವರಿಗೆ – ಕೃತಕ ಬುದ್ಧಿಮತ್ತೆ (AI), ಇಂಟರ್ನೆಟ್ ಆಫ್ ಥಿಂಗ್ಸ್ (IoT), ಡೇಟಾ ವಿಶ್ಲೇಷಣೆ ಮತ್ತು ಎಲೆಕ್ಟ್ರಾನಿಕ್ಸ್ನಲ್ಲಿ ಅತ್ಯಾಧುನಿಕ ತರಬೇತಿ ಒದಗಿಸಲು ನೆರವಾಗಲಿದೆ. ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ GTTC ವ್ಯವಸ್ಥಾಪಕ ನಿರ್ದೇಶಕ ವೈ.ಕೆ. ದಿನೇಶ್ ಕುಮಾರ್ ಮತ್ತು NIELIT ನಿರ್ದೇಶಕ ಎಸ್. ಪ್ರತಾಪ್ ಕುಮಾರ್ ಒಪ್ಪಂದವನ್ನು ವಿನಿಮಯ ಮಾಡಿಕೊಂಡರು. “ಈ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ಸ್,…
ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ತಿಳಿಸಿದರು. ಮಂಗಳವಾರದಂದು ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು ಕೆಲವು ವರ್ತಕರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಸರ್ಕಾರ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ವರ್ತಕರಿಗೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮಳಿಗೆ ಹಂಚಿಕೆ ಮಾಡಲಿದೆ ಎಂದು ತಿಳಿಸಿದರು. ಯಶವಂತಪುರ ಎಪಿಎಂಸಿಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಹಾಗೂ ರೈತರ ಹಿತದೃಷ್ಟಿಯಿಂದ ದಾಸನಪುರದಲ್ಲಿ 67.25 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಈ ಪ್ರದೇಶದಲ್ಲಿ ರೂ 306.50 ಕೋಟಿ…
ಇಂದಿನ ಕಾಲದಲ್ಲಿ ಹಿತ ಶತ್ರುಗಳು ಗುಪ್ತ ಶತ್ರುಗಳು ಕಣ್ಣಿಗೆ ಕಾಣದಂತೆ ಪ್ರಯೋಗಾದಿಗಳನ್ನು ಮಾಡುತ್ತಲೇ ಇರುತ್ತಾರೆ ಇದರಿಂದ ರಕ್ಷಣೆ ಹೇಗೆ ಎಂಬ ಸಂಶಯ ಪ್ರತಿಯೊಬ್ಬರಲ್ಲೂ ಬರುವುದು ಸಹಜ ಅದಕ್ಕಾಗಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ತಂತ್ರ ಈ ರೀತಿ ಇದೆ ಮನೆಯ ಮುಖ್ಯದ್ವಾರದ ಮುಂದೆ ಹಾಗೂ ಹಿಂದೆ ಶುದ್ಧವಾದ ಪೂಜೆ ಅರಿಶಿಣವನ್ನು ಹಾಗೂ ಗಂಗಾಜಲವನ್ನು ಸ್ವಲ್ಪ ಮಿಕ್ಸ್ ಮಾಡಿ ಪೇಸ್ಟ್ ರೀತಿ ಮಾಡಿಕೊಂಡು ನಿಮ್ಮ ಎರಡು ಕೈಗಳನ್ನು ಒತ್ತಿದಾಗ ಹಸ್ತದ ಅಚ್ಚನ್ನು ನಿಮ್ಮ ಮನೆಯ ಬಾಗಿಲ ಮುಂದೆ ಹಾಗೂ ಹಿಂದೆ ಮೂಡುವಂತೆ ಮಾಡಬೇಕು. ಈ ಒಂದು ಸಣ್ಣ ತಂತ್ರದಿಂದ ನಿಮ್ಮ ಮನೆಯಾಗಲಿ ಅಂಗಡಿಯಾಗಿರಬಹುದು ಫ್ಯಾಕ್ಟರಿ ಆಗಿರಬಹುದು ದೊಡ್ಡ ದೊಡ್ಡ ಕಾರ್ಖಾನೆ ಆಗಿರಬಹುದು ಆಫೀಸ್ ಗಳಾಗಿರಬಹುದು ಇವೆಲ್ಲವುದಕ್ಕೂ ಯಾರು ಏನೇ ಮಾಡಿದರು ತಾಗುವುದಿಲ್ಲ . ನಿಮ್ಮ ಮನೆ ಅಥವಾ ಫ್ಯಾಕ್ಟರಿ ಹೊಸದಿರಲಿ ಹಳೆಯದೇ ಇರಲಿ ಈ ತಂತ್ರವನ್ನು…
ದಾವಣಗೆರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಮಾರ್ಚ್ 31 ರೊಳಗೆ ಸಲ್ಲಿಸಲು ತಿಳಿಸಿದೆ. ಕಲಾವಿದರು ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27ರಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-234849 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ. https://kannadanewsnow.com/kannada/no-language-will-be-imposed-on-any-state-centre-tells-rs/ https://kannadanewsnow.com/kannada/bengaluru-miscreants-arrested-for-wheeling-in-bengaluru/
ಬೆಂಗಳೂರು: ನಗರದಲ್ಲಿ ಅಪಾಯಕಾರಿಯಾಗಿ ಬೈಕ್ ವೀಲ್ಹಿಂಗ್ ಮಾಡುತ್ತ, ಕೈಯಲ್ಲಿ ಲಾಂಗ್ ಹಿಡಿದು ಝಳಪಿಸುತ್ತಾ ಸಾರ್ವಜನಿಕರನ್ನು ಭಯ ಹುಟ್ಟಿಸಿದಂತ ಸವಾರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳು ಸಂಚಾರ ಪಶ್ಚಿಮ ವಿಭಾಗದ ಚೌಡೇಶ್ವರಿ ನಗರದ ಬಸ್ ನಿಲ್ದಾಣ, ಔಟರ್ ರಿಂಗ್ ರೋಡ್ ನಲ್ಲಿ ಸ್ಕೂಟರ್ ನಲ್ಲಿ ವೀಲ್ಹಿಂಗ್ ಮಾಡಿದ್ದರು. ಜೊತೆಗೆ ಕೈಯಲ್ಲಿ ಲಾಂಗ್ ಹಿಡಿದು ಝಳಪಿಸಿ, ಸಾರ್ವಜನಿಕರಿಗೆ ಭಯ ಹುಟ್ಟಿಸಿದ್ದರು. ಇದೀಗ ಇಬ್ಬರು ಬೈಕ್ ಸವಾರರನ್ನು ಖಚಿತ ಮಾಹಿತಿ ಮೇರೆ ದಾಳಿ ಮಾಡಿ, ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಇಂದ ವೀಲ್ಹಿಂಗ್ ಮಾಡುತ್ತಿದ್ದಂತ ಬೈಕ್, ಲಾಂಗ್ ವಶಕ್ಕೆ ಪಡೆಯಲಾಗಿದೆ. ಇದೀಗ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/no-language-will-be-imposed-on-any-state-centre-tells-rs/ https://kannadanewsnow.com/kannada/another-trouble-for-cm-siddaramaiah-private-complaint-filed-in-peoples-court/
ನವದೆಹಲಿ: ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ತಿಳಿಸಿದೆ. ಡಾ. ಸುಕಾಂತ ಮಜುಂದಾರ್ ಅವರು ಲಿಖಿತ ಉತ್ತರದಲ್ಲಿ, 2020 ರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ), ಇತರ ವಿಷಯಗಳ ಜೊತೆಗೆ, ಪ್ಯಾರಾ 4.13 ರಲ್ಲಿ, ಸಾಂವಿಧಾನಿಕ ನಿಬಂಧನೆಗಳು, ಜನರು, ಪ್ರದೇಶಗಳು, ಒಕ್ಕೂಟದ ಆಕಾಂಕ್ಷೆಗಳು ಮತ್ತು ಬಹುಭಾಷಾವಾದ ಮತ್ತು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ತ್ರಿಭಾಷಾ ಸೂತ್ರವನ್ನು ಜಾರಿಗೆ ತರುವುದನ್ನು ಮುಂದುವರಿಸಲಾಗುವುದು ಎಂದು ಹೇಳಿದರು. “ಆದಾಗ್ಯೂ, ತ್ರಿಭಾಷಾ ಸೂತ್ರದಲ್ಲಿ ಹೆಚ್ಚಿನ ನಮ್ಯತೆ ಇರುತ್ತದೆ ಮತ್ತು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರಲಾಗುವುದಿಲ್ಲ” ಎಂದು ಅವರು ಹೇಳಿದರು. “ಮೂರು ಭಾಷೆಗಳಲ್ಲಿ ಕನಿಷ್ಠ ಎರಡು ಭಾರತಕ್ಕೆ ಸ್ಥಳೀಯವಾಗಿದ್ದರೆ, ಮಕ್ಕಳು ಕಲಿಯುವ ಮೂರು ಭಾಷೆಗಳು ರಾಜ್ಯಗಳು, ಪ್ರದೇಶಗಳು ಮತ್ತು ಸಹಜವಾಗಿ ವಿದ್ಯಾರ್ಥಿಗಳ ಆಯ್ಕೆಯಾಗಿರುತ್ತವೆ” ಎಂದು ಸಚಿವರು ಸಿಪಿಐ (ಎಂ) ನಾಯಕ ಡಾ. ಜಾನ್ ಬ್ರಿಟ್ಟಾಸ್ ಅವರ ಪ್ರಶ್ನೆಗೆ ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ…
ಬೆಂಗಳೂರು: ಮುಡಾ ಹಗರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ, ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ. ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ. ಕಿರಣ್ ಎಸ್ ಎಂಬುವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 299, 352, 356 (2) ರಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. https://kannadanewsnow.com/kannada/government-adarsh-vidyalaya-admit-card-released-for-exam/ https://kannadanewsnow.com/kannada/steps-to-link-epic-with-aadhaar-soon-chief-election-commissioner-gyanesh-kumar/
ಬೆಂಗಳೂರು: ಅರ್ಹತೆ ಇರುವ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. ಮಂಗಳವಾರದಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ. 3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ. ರಾಜ್ಯದ 19 ಕೃಷಿ ವಲಯಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಪ್ರತಿ ಬೆಳೆಗೆ ನಿಗದಿಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಮಿತಿ, ರೈತರು ಹೊಂದಿರುವ…














