Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆ ಕೇಳುವಂತ ಹೆಚ್.ಡಿ ಕುಮಾರಸ್ವಾಮಿಗೆ ನಾಚಿಕೆ ಆಗಬೇಕು. ಡಾ.ರಾಜ್ ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ ಅಂತ ಸಾಗರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಾ.ರಾಜ್ ಕುಮಾರ್ ತೀರಿಕೊಂಡಾಗ ನಾನು ಕಂಠೀರವ ಸ್ಟೂಡಿಯೋದಲ್ಲಿದ್ದೆ. ಆಗ ಕುಮಾರಸ್ವಾಮಿ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು. ಆಗ ರಾಜೀನಾಮೆ ನೀಡಿದ್ರಾ ಎಂದು ಪ್ರಶ್ನಿಸಿದರು. ಅಲ್ಲದೇ ಹಾವೇರಿಯಲ್ಲಿ ರೈತರ ಮೇಲೆ ಬಿಎಸ್ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದ್ರು. ಆಗ ರಾಜೀನಾಮೆ ಕೊಟ್ರ? ಎಂದು ಕೇಳಿದರು. ಇನ್ನೂ ಪಹಲ್ಗಾಮ್ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು, ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಸಾವನ್ನಪ್ಪಿದ್ರು, ಆಗ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಿದ್ರ? ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಖಡಕ್ ತಿರುಗೇಟು ನೀಡಿದರು.…

Read More

ಇಸ್ಲಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಿ ಅಧಿಕಾರಿಗಳು ಏಪ್ರಿಲ್‌ನಿಂದ ಹಲವಾರು ಬಾರಿ ಭಾರತೀಯ ಸಹವರ್ತಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ದಯವಿಟ್ಟು ನೀರು ಬಿಡಿ ಅಂತ ಪಾಕಿಸ್ತಾನ ಭಾರತವನ್ನು ಅಲವತ್ತುಕೊಂಡಿದೆ. ಆರು ದಶಕಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಪಾಕಿಸ್ತಾನವು “ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ” ಸ್ಥಗಿತಗೊಳಿಸುವ ಭಾರತದ ನಿರ್ಧಾರವು ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯ ಒಂದು ದಿನದ ನಂತರ  ದಂಡನಾತ್ಮಕ ಕ್ರಮಗಳ ಭಾಗವಾಗಿ ನೀರು ಸ್ಥಗಿತಗೊಳಿಸಿತ್ತು. ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಅಂದಿನಿಂದ ಭಾರತದ ಜಲಶಕ್ತಿ ಸಚಿವಾಲಯಕ್ಕೆ ಒಟ್ಟು ನಾಲ್ಕು ಪತ್ರಗಳನ್ನು ಕಳುಹಿಸಿದ್ದಾರೆ. ಒಪ್ಪಂದವನ್ನು ಅಮಾನತುಗೊಳಿಸುವ ನಿರ್ಧಾರವನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಪತ್ರಗಳನ್ನು ಯಾವಾಗ ಕಳುಹಿಸಲಾಗಿದೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ, ಆದರೆ ಈ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬರು ಆಪರೇಷನ್ ಸಿಂಧೂರ್ ನಂತರ ಮೂರು ಪತ್ರಗಳನ್ನು ಬರೆಯಲಾಗಿದೆ…

Read More

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ. ಮೊದಲ ಸಿಎಂ, ಡಿಸಿಎಂ ವಿರುದ್ಧ ಕ್ರಮ ಆಗಬೇಕು ಎಂಬುದಾಗಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಗೆಲುವನ್ನು ಸಂಭ್ರಮಿಸುವ ವೇಳೆ ನಡೆದ ಕಾಲ್ತುಳಿತದಿಂದ 11 ಜನರತರಾಗಿರುವ ಹೃದಯವಿದ್ರಾವಕ ಘಟನೆ ನಾಡಿನ ಎಲ್ಲರ ಮನಸ್ಸನ್ನು ಘಾಸಿಗೊಳಿಸಿದೆ. ಪೊಲೀಸರು ಘಟನೆ ನಡೆದ ದಿನ ಸುರಕ್ಷತಾ ದೃಷ್ಟಿಯಿಂದ ಸಂಭ್ರಮಾಚರಣೆ ಬೇಡ ಎಂದರೂ ಪ್ರಚಾರದ ಗೀಳಿಗೆ ಬಿದ್ದ ಸರ್ಕಾರ ಸಂಭ್ರಮಾಚರಣೆ ನಡೆಸಿದ್ದು . ಇದು ಸರ್ಕಾರಿ ಪ್ರಾಯೋಗಿತ ಕೊಲೆಯಾಗಿದ್ದು, ಈಗ ಸರ್ಕಾರ ಅಧಿಕಾರಿಗಳ ತಲೆದಂಡ ಮಾಡುವುದರ ಮೂಲಕ ತನ್ನ ಜವಾಬ್ದಾರಿಯಿಂದ ನುಣಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಕಮಿಷನರ್ ದಯಾನಂದ್ ಬಹಳ ದಕ್ಷತೆಗೆ ಹೆಸರುವಾಸಿಯಾದವರು. ಡಿಸಿಪಿ ಶೇಖರ್ ಈ ಹಿಂದೆ…

Read More

ನಮ್ಮಲ್ಲಿ ಪ್ರತಿಯೊಬ್ಬರಿಗೂ ನಮ್ಮ ಕುಟುಂಬ ದೇವತೆ ಇದ್ದಾರೆ. ನಾವು ಆ ಕುಟುಂಬ ದೇವತೆಯನ್ನು ಪೂರ್ಣ ಹೃದಯದಿಂದ ಪೂಜಿಸಿದಾಗ, ನಮ್ಮ ಜೀವನದಲ್ಲಿ ಬರುವ ಎಲ್ಲಾ ರೀತಿಯ ಸಮಸ್ಯೆಗಳು ಪರಿಹಾರವಾಗುತ್ತವೆ. ಅದು ನಮ್ಮನ್ನು ಯಾವುದೇ ಅಡೆತಡೆಗಳು, ಅಡೆತಡೆಗಳು ಅಥವಾ ದುಃಖಗಳಿಂದ ರಕ್ಷಿಸುತ್ತದೆ ಎಂದು ನಾವು ಕೇಳಿದ್ದೇವೆ. ಈ ಪೋಸ್ಟ್‌ನಲ್ಲಿ, ಅಂತಹ ಕುಟುಂಬ ದೇವತೆ ಯಾವಾಗಲೂ ನಮ್ಮೊಂದಿಗೆ ಇರಬೇಕೆಂದು ಮತ್ತು ನಮ್ಮನ್ನು ರಕ್ಷಿಸಬೇಕೆಂದು ಬಯಸುವವರು, ನಮಗೆ ತಿಳಿದೋ ತಿಳಿಯದೆಯೋ, ಪಠಿಸಬೇಕಾದ ಮಂತ್ರವನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ…

Read More

ಮೈಸೂರು: ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡಲು ತಾವು ಸಚಿವರಾದ ಬಳಿಕ ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕೈಗಾರಿಕೆ ಇಲಾಖೆ ವ್ಯಾಪ್ತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ಸಾಂಸ್ಥಿಕ ಜವಾಬ್ದಾರಿ ನೆರವಿನಿಂದ ಮೈಸೂರು ವಿಭಾಗದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ತಡೆಯುವಲ್ಲಿ, ಕಾಡ್ಗಿಚ್ಚು ನಂದಿಸುವಲ್ಲಿ ಹಾಗೂ ವನ್ಯಜೀವಿಗಳ ಕಳ್ಳಬೇಟೆ ತಡೆಯುವಲ್ಲಿ ಮುಂಚೂಣಿ ಸಿಬ್ಬಂದಿ ಮಾಡುತ್ತಿರುವ ಕಾರ್ಯ ಶ್ಲಾಘನಾರ್ಹವಾದದ್ದು ಎಂದರು. ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಆರ್. ಹಿತೇಂದ್ರ, ಐಪಿಎಸ್ (ಕೆಎನ್ 1996) ಬೆಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಏಕಕಾಲದಲ್ಲಿ ವಹಿಸಲಾಗಿದೆ. ಎಸ್. ಮುರುಗನ್, ಐಪಿಎಸ್ (ಕೆಎನ್ 1997) ಬೆಂಗಳೂರಿನ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ನೇಮಕಾತಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಏಕಕಾಲದಲ್ಲಿ ವಹಿಸಲಾಗಿದೆ. ಕೆ.ವಿ. ಶರತ್ ಚಂದ್ರ, ಐಪಿಎಸ್ (ಕೆಎನ್ 1997) ನೇಮಕಾತಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಪಿಸಿಎಎಸ್)…

Read More

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿದ್ದಂತ ವೇಳೆಯಲ್ಲಿ ಗಾಯಗೊಂಡಿದ್ದಂತ ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆರ್ ಸಿ ಬಿ ಜಾಹೀರಾತು ನೋಡಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದೆ. ಆರ್ ಸಿ ಬಿ ವಿಜಯೋತ್ಸವ ವೀಕ್ಷಣೆಗೆ ಉಚಿತ ಟಿಕೆಟ್ ಎಂದು ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂ.6ರ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಬಲಗಾಲಿನ ಮೇಲೆ ಬ್ಯಾರಿಕೇಡ್ ಬಿದ್ದಿತ್ತು. ಹೀಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ವಿದ್ಯಾರ್ಥಿ ಸಿ ವೇಣು ನೀಡಿದಂತ ದೂರಿನ ಹಿನ್ನಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿ ಬಿ, ಕೆ ಎಸ್ ಸಿಎ, ಡಿಎನ್ ಎ ಕಂಪನಿಯ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/bmtc-bus-collides-with-metro-pillar-in-bengaluru-more-than-10-passengers-injured/ https://kannadanewsnow.com/kannada/bengaluru-land-corruption-disaster-case-cm-dc-demanded-resignation-from-union-minister-h-d-kumaraswamy/

Read More

ಬೆಂಗಳೂರು: ನಗರದಲ್ಲಿ ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ 10ಕ್ಕೂ ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ 607ಕ್ಕೆ ಬಸ್ ಡಿಕ್ಕಿಯಾಗಿ ಅಪಘಾತವಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/why-are-you-conspiring-against-me-it-is-known-what-anyone-is-doing-in-the-spotlight-deputy-chief-minister-dk-shivakumar/ https://kannadanewsnow.com/kannada/bengaluru-land-corruption-disaster-case-cm-dc-demanded-resignation-from-union-minister-h-d-kumaraswamy/

Read More

ಬೆಂಗಳೂರು: “ಬೇರೆಯವರು ಯಾವಾಗ ಕಣ್ಣೀರು ಹಾಕಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಹಾಕಿಸಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಒರೆಸಿದ್ದಾರೆ ಎಂದು ಅಧಿವೇಶನದಲ್ಲಿ ಚರ್ಚೆ ಮಾಡೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ನೆಹರೂ ತಾರಾಲಯ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಇಮೇಜ್ ಪಡೆಯಲು ಹೋಗಿ ಡ್ಯಾಮೇಜ್ ಮಾಡಿದ್ದಾರೆ” ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ನನಗೆ ಯಾವುದೇ ಇಮೇಜ್ ಅವಶ್ಯಕತೆ ಇಲ್ಲ. ಜನರು ಕೊಟ್ಟಿರುವ ಇಮೇಜ್ ನಮಗೆ ಬೇಕಾದಷ್ಟಿದೆ. ಆರ್ ಸಿಬಿ ಗೆದ್ದ ಖುಷಿಯಲ್ಲಿ ಯುವ ಅಭಿಮಾನಿಗಳು ಸಂಭ್ರಮಾಚರಣೆ ಮಾಡಲು ಬಯಸಿದ್ದರು. ಅದಕ್ಕೆ ಬಿಜೆಪಿ, ಜೆಡಿಎಸ್ ಏನೆಲ್ಲಾ ಟ್ವೀಟ್ ಮಾಡಿದ್ದರು, ಆಮೇಲೆ ಹೆಂಗೆ ಉಲ್ಟಾ ಹೊಡೆದರು ಎಂಬುದನ್ನು ಬಿಚ್ಚಿಡಲಿ. ಅವರು ಹೆಣದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ನಾವು ಅಂತ ಹೀನ ರಾಜಕಾರಣ ಮಾಡುವುದಿಲ್ಲ. ನಮಗೆ ಪ್ರಾಮಾಣಿಕತೆ ಇದೆ” ಎಂದು ತಿರುಗೇಟು ನೀಡಿದರು. “ನಾನು ಭಾವುಕನಾಗಿದ್ದಕ್ಕೆ ಕಣ್ಣಲ್ಲಿ ನೀರು ಬಂದಿತು. ಅದನ್ನು…

Read More

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.9ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಸಂಬಂಧ ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 09-06-2025 ರಿಂದ 20-06-2025 ರವರೆಗೆ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ -3 ಅನ್ನು (ಬೆಂಗಳೂರು ದಕ್ಷಿಣ-22 & ಬೆಂಗಳೂರು ಉತ್ತರ-12) ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪುದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕ್ರಮ ವಹಿಸಲು ಕೋರಲಾಗಿರುತ್ತದೆ ಎಂದಿದ್ದಾರೆ. ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025ನೇ…

Read More